Homeಕರ್ನಾಟಕ'ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ' ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

‘ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ’ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

- Advertisement -
- Advertisement -

ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ ಎಂದು ಜೀವ ಬೆದರಿಕೆ ಹಾಕಿರುವ ಮಣಿಕಂಠ ರಾಠೋಡರದ್ದು ಎನ್ನಲಾದ ಆಡಿಯೋ ಕುರಿತ ವಿಚಾರಣೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ಜುಲೈ 15ರಂದು ಬಂಧಿಸಿ, ವಿಚಾರಣೆ ನಡೆಸಲಾಯಿತು. ಬಳಿಕ ಅವನನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸರು ಮತ್ತೆ ಬಂಧಿಸುವ ಭೀತಿ ರಾಠೋಡಗೆ ಎದುರಾಗಿದೆ.

ಮಣಿಕಂಠ ರಾಠೋಡ ವಿರುದ್ಧ ವಿವಿಧ ಪ್ರಕರಣಗಳು ಸೇರಿದಂತೆ ಖರ್ಗೆ ಕುಟುಂಬಕ್ಕೆ ಬೆದರಿಕೆ ಹಾಕಿರುವ ಪ್ರಕರಣವು ದಾಖಲಾಗಿದೆ. 2014ರಿಂದ ಇಲ್ಲಿಯವರೆಗೆ ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ, ಬೆಂಗಳೂರು ಹಾಗೂ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣದಲ್ಲಿ ದಾಖಲಾದ ಒಟ್ಟು 46 ಪ್ರಕರಣಗಳನ್ನು ಉಲ್ಲೇಖಿಸಿ ಪಿಎಸ್‌ಐ ಚೇತನ್‌ ಅವರು ದಂಡಾಧಿಕಾರಿಗೆ ಸಲ್ಲಿಸಿದ್ದಾರೆ.

”46 ಪ್ರಕರಣಗಳು ದಾಖಲಾಗಿದ್ದರೂ ಮಣಿಕಂಠ ತನ್ನ ಪ್ರವೃತ್ತಿಯಲ್ಲಿ ಬದಲಾವಣೆ ತೋರದೆ ಪದೇ ಪದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಿ, ಶಾಂತಿ ಕದಡಲು ಯತ್ನಿಸುವ ಪ್ರವೃತ್ತಿಯವರಾಗಿದ್ದಾರೆ. ಮುಂದೆ ಚಿತ್ತಾಪುರದಲ್ಲಿ ಜಾತಿ- ಜಾತಿಗಳ ಮಧ್ಯ ವೈರತ್ವ ಬೆಳೆಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿ, ಸಮಾಜದ ಶಾಂತಿ ಕದಡುವ ಸಾಧ್ಯತೆ ಹೆಚ್ಚಾಗಿದೆ. ಅವರನ್ನು ಹಾಜರು ಪಡಿಸಿಕೊಂಡು ಸನ್ನಡತೆಗಾಗಿ ಅವರಿಂದ ಹೆಚ್ಚಿನ ಬಾಂಡ್ ಬರೆಸಿಕೊಳ್ಳಬೇಕು” ಎಂದು ಪಿಎಸ್‌ಐ ತಾಲ್ಲೂಕು ದಂಡಾಧಿಕಾರಿಗೆ ಮನವಿ ಮಾಡಿದ್ದಾರೆ.

ಜುಲೈ 15ರಂದು ಸಂಜೆ ರಾಠೋಡ ಅವರನ್ನು ಬಂಧಿಸಿದ್ದ ಚಿತ್ತಾಪುರ ಪೊಲೀಸರು ವಿಚಾರಣೆ ನಡೆಸಿ, ಧ್ವನಿ ಮಾದರಿ ಸಂಗ್ರಹಿಸಿಕೊಂಡು ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದರು. 16ರಂದು ಮತ್ತೆ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಕಳುಹಿಸಿದ್ದರು. ಆದರೆ, ಮಣಿಕಂಠ ವಿಚಾರಣೆಗೆ ಠಾಣೆಗೆ ಹಾಜರಾಗದೆ ಜಾಮೀನು ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ಮತ್ತೆ ನೋಟಿಸ್ ಜಾರಿ ಮಾಡಿ, ವಶಕ್ಕೆ ಪಡೆದು ತಾಲ್ಲೂಕು ದಂಡಾಧಿಕಾರಿ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

ಖರ್ಗೆ ಕುಟುಂಬದ ವಿರುದ್ಧ ಜೀವಬೆದರಿಕೆ ಪ್ರಕರಣ

ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್‌ ಅವರದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು. ಅದರಲ್ಲಿ ”ಖರ್ಗೆ ಮತ್ತು ಅವರ ಹೆಂಡ್ತಿನಾ, ಇಡೀ ಕುಟುಂಬವನ್ನು ಸಾಫ್ ಮಾಡ್ತೀನಿ” ಅನ್ನುವುದು ದಾಖಲಾಗಿದೆ.

ಈ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ ಮಾತನಾಡಿ, ”ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲು ಬಿಜೆಪಿ ನಾಯಕರು ಸಂಚು ರೂಪಿಸುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿ ಅವರ ನೀಲಿ ಕಣ್ಣಿನ ಹುಡುಗ ಚಿತ್ತಾಪುರದ ಬಿಜೆಪಿ ಅಭ್ಯರ್ಥಿಯ ರೆಕಾರ್ಡಿಂಗ್‌ನಿಂದ ಇದು ಈಗ ಸ್ಪಷ್ಟವಾಗಿದೆ” ಎಂದದು ಹೇಳಿದ್ದರು.

ರವಿ ಎಂಬ ಬಿಜೆಪಿ ಕಾರ್ಯಕರ್ತನೊಬ್ಬ ಮಣಿಕಂಠ ರಾಥೋಡ್‌ರವರಿಗೆ ಫೋನ್ ಮಾಡಿ ನಿಮ್ಮ ಮೇಲೆ 40  ಕೇಸುಗಳಿವೆ ಅನ್ನುತ್ತಾರೆ. ಈ ಕುರಿತು ಖರ್ಗೆಯವರನ್ನು ಪ್ರಶ್ನೆ ಮಾಡ್ತೀನಿ ಅವರ ನಂಬರ್ ಕೊಡಿ ಅಣ್ಣ ಎಂದು ಕೇಳುತ್ತಾನೆ. ಇದಕ್ಕೆ ಉತ್ತರಿಸುವ ಮಣಿಕಂಠ ರಾಥೋಡ್‌, ”ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರ ಹೆಂಡ್ರು ಮಕ್ಕಳು ಎಲ್ಲರನ್ನು ಸಾಫ್ ಮಾಡ್ತೀನಿ. ಅದಕ್ಕೆ ನನ್ನ ಬಳಿ ನಂಬರ್ ಇಲ್ಲ” ಎಂದು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ.

”ಯಾರ ಹೆಂಡ್ರ ಮಕ್ಕಳನ್ನು ಸಾಫ್ ಮಾಡ್ತೀರಿ?” ಎಂದು ರವಿ ಪ್ರಶ್ನಿಸಿದಾಗ, ಈಗ ನೀನು ಯಾರ ಹೆಸ್ರು ತಗೊಂಡೆ ಎಂದು ಕೇಳಿ ಆನಂತರ ”ಖರ್ಗೆಯವರ ನಂಬರ್ ಇದ್ರೆ ಅವರಿಗೆ ಬಾಯಿಗೆ ಬಂದಾಂಗೆ ಬೈಯ್ಯುತ್ತಿದ್ದೆ” ಎಂದು ಸಮಜಾಯಿಸಿ ಕೊಡುವುದು ಸಹ ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.

ಬಿಜೆಪಿ ಅಭ್ಯರ್ಥಿಯೊಬ್ಬ ಖರ್ಗೆ ಕುಟುಂಬವನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾರೆ. ಆತ ಬಿಜೆಪಿ ಪಕ್ಷದ ನೀಲಿ ಕಣ್ಣಿನ ಹುಡುಗನಾಗಿದ್ದಾನೆ. ಈ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸುವರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....