Homeಕರ್ನಾಟಕ'ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ' ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

‘ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ’ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

- Advertisement -
- Advertisement -

ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ ಎಂದು ಜೀವ ಬೆದರಿಕೆ ಹಾಕಿರುವ ಮಣಿಕಂಠ ರಾಠೋಡರದ್ದು ಎನ್ನಲಾದ ಆಡಿಯೋ ಕುರಿತ ವಿಚಾರಣೆಗೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರನ್ನು ಜುಲೈ 15ರಂದು ಬಂಧಿಸಿ, ವಿಚಾರಣೆ ನಡೆಸಲಾಯಿತು. ಬಳಿಕ ಅವನನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸರು ಮತ್ತೆ ಬಂಧಿಸುವ ಭೀತಿ ರಾಠೋಡಗೆ ಎದುರಾಗಿದೆ.

ಮಣಿಕಂಠ ರಾಠೋಡ ವಿರುದ್ಧ ವಿವಿಧ ಪ್ರಕರಣಗಳು ಸೇರಿದಂತೆ ಖರ್ಗೆ ಕುಟುಂಬಕ್ಕೆ ಬೆದರಿಕೆ ಹಾಕಿರುವ ಪ್ರಕರಣವು ದಾಖಲಾಗಿದೆ. 2014ರಿಂದ ಇಲ್ಲಿಯವರೆಗೆ ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ, ಬೆಂಗಳೂರು ಹಾಗೂ ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣದಲ್ಲಿ ದಾಖಲಾದ ಒಟ್ಟು 46 ಪ್ರಕರಣಗಳನ್ನು ಉಲ್ಲೇಖಿಸಿ ಪಿಎಸ್‌ಐ ಚೇತನ್‌ ಅವರು ದಂಡಾಧಿಕಾರಿಗೆ ಸಲ್ಲಿಸಿದ್ದಾರೆ.

”46 ಪ್ರಕರಣಗಳು ದಾಖಲಾಗಿದ್ದರೂ ಮಣಿಕಂಠ ತನ್ನ ಪ್ರವೃತ್ತಿಯಲ್ಲಿ ಬದಲಾವಣೆ ತೋರದೆ ಪದೇ ಪದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಿ, ಶಾಂತಿ ಕದಡಲು ಯತ್ನಿಸುವ ಪ್ರವೃತ್ತಿಯವರಾಗಿದ್ದಾರೆ. ಮುಂದೆ ಚಿತ್ತಾಪುರದಲ್ಲಿ ಜಾತಿ- ಜಾತಿಗಳ ಮಧ್ಯ ವೈರತ್ವ ಬೆಳೆಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿ, ಸಮಾಜದ ಶಾಂತಿ ಕದಡುವ ಸಾಧ್ಯತೆ ಹೆಚ್ಚಾಗಿದೆ. ಅವರನ್ನು ಹಾಜರು ಪಡಿಸಿಕೊಂಡು ಸನ್ನಡತೆಗಾಗಿ ಅವರಿಂದ ಹೆಚ್ಚಿನ ಬಾಂಡ್ ಬರೆಸಿಕೊಳ್ಳಬೇಕು” ಎಂದು ಪಿಎಸ್‌ಐ ತಾಲ್ಲೂಕು ದಂಡಾಧಿಕಾರಿಗೆ ಮನವಿ ಮಾಡಿದ್ದಾರೆ.

ಜುಲೈ 15ರಂದು ಸಂಜೆ ರಾಠೋಡ ಅವರನ್ನು ಬಂಧಿಸಿದ್ದ ಚಿತ್ತಾಪುರ ಪೊಲೀಸರು ವಿಚಾರಣೆ ನಡೆಸಿ, ಧ್ವನಿ ಮಾದರಿ ಸಂಗ್ರಹಿಸಿಕೊಂಡು ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದರು. 16ರಂದು ಮತ್ತೆ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಕಳುಹಿಸಿದ್ದರು. ಆದರೆ, ಮಣಿಕಂಠ ವಿಚಾರಣೆಗೆ ಠಾಣೆಗೆ ಹಾಜರಾಗದೆ ಜಾಮೀನು ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ಮತ್ತೆ ನೋಟಿಸ್ ಜಾರಿ ಮಾಡಿ, ವಶಕ್ಕೆ ಪಡೆದು ತಾಲ್ಲೂಕು ದಂಡಾಧಿಕಾರಿ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

ಖರ್ಗೆ ಕುಟುಂಬದ ವಿರುದ್ಧ ಜೀವಬೆದರಿಕೆ ಪ್ರಕರಣ

ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್‌ ಅವರದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು. ಅದರಲ್ಲಿ ”ಖರ್ಗೆ ಮತ್ತು ಅವರ ಹೆಂಡ್ತಿನಾ, ಇಡೀ ಕುಟುಂಬವನ್ನು ಸಾಫ್ ಮಾಡ್ತೀನಿ” ಅನ್ನುವುದು ದಾಖಲಾಗಿದೆ.

ಈ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ ಮಾತನಾಡಿ, ”ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲು ಬಿಜೆಪಿ ನಾಯಕರು ಸಂಚು ರೂಪಿಸುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿ ಅವರ ನೀಲಿ ಕಣ್ಣಿನ ಹುಡುಗ ಚಿತ್ತಾಪುರದ ಬಿಜೆಪಿ ಅಭ್ಯರ್ಥಿಯ ರೆಕಾರ್ಡಿಂಗ್‌ನಿಂದ ಇದು ಈಗ ಸ್ಪಷ್ಟವಾಗಿದೆ” ಎಂದದು ಹೇಳಿದ್ದರು.

ರವಿ ಎಂಬ ಬಿಜೆಪಿ ಕಾರ್ಯಕರ್ತನೊಬ್ಬ ಮಣಿಕಂಠ ರಾಥೋಡ್‌ರವರಿಗೆ ಫೋನ್ ಮಾಡಿ ನಿಮ್ಮ ಮೇಲೆ 40  ಕೇಸುಗಳಿವೆ ಅನ್ನುತ್ತಾರೆ. ಈ ಕುರಿತು ಖರ್ಗೆಯವರನ್ನು ಪ್ರಶ್ನೆ ಮಾಡ್ತೀನಿ ಅವರ ನಂಬರ್ ಕೊಡಿ ಅಣ್ಣ ಎಂದು ಕೇಳುತ್ತಾನೆ. ಇದಕ್ಕೆ ಉತ್ತರಿಸುವ ಮಣಿಕಂಠ ರಾಥೋಡ್‌, ”ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರ ಹೆಂಡ್ರು ಮಕ್ಕಳು ಎಲ್ಲರನ್ನು ಸಾಫ್ ಮಾಡ್ತೀನಿ. ಅದಕ್ಕೆ ನನ್ನ ಬಳಿ ನಂಬರ್ ಇಲ್ಲ” ಎಂದು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ.

”ಯಾರ ಹೆಂಡ್ರ ಮಕ್ಕಳನ್ನು ಸಾಫ್ ಮಾಡ್ತೀರಿ?” ಎಂದು ರವಿ ಪ್ರಶ್ನಿಸಿದಾಗ, ಈಗ ನೀನು ಯಾರ ಹೆಸ್ರು ತಗೊಂಡೆ ಎಂದು ಕೇಳಿ ಆನಂತರ ”ಖರ್ಗೆಯವರ ನಂಬರ್ ಇದ್ರೆ ಅವರಿಗೆ ಬಾಯಿಗೆ ಬಂದಾಂಗೆ ಬೈಯ್ಯುತ್ತಿದ್ದೆ” ಎಂದು ಸಮಜಾಯಿಸಿ ಕೊಡುವುದು ಸಹ ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.

ಬಿಜೆಪಿ ಅಭ್ಯರ್ಥಿಯೊಬ್ಬ ಖರ್ಗೆ ಕುಟುಂಬವನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾರೆ. ಆತ ಬಿಜೆಪಿ ಪಕ್ಷದ ನೀಲಿ ಕಣ್ಣಿನ ಹುಡುಗನಾಗಿದ್ದಾನೆ. ಈ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸುವರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....