Homeಮುಖಪುಟಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

- Advertisement -
- Advertisement -

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ ಕೈಗೊಂಡ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಈಕೆಯ ವರ್ತನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೂಕ್ತ ಕ್ರಮಕ್ಕೆ ಜನರು ಆಗ್ರಹಿಸಿದ್ದಾರೆ.

ಇತ್ತೀಚಿನ ಘಟನೆಯಲ್ಲಿ, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಅಲ್ಲಿನ ಮುಸ್ಲಿಂ ಸಿಬ್ಬಂದಿಯನ್ನು ಧಾರ್ಮಿಕ ಗುರುತಿನ ಮೇಲೆ ನಿಂದಿಸಿದ ವಿಡಿಯೋವನ್ನು ಸ್ವತಃ ನಾಝಿಯಾ ಸೋಮವಾರ (ಡಿ.22) ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ವಿಡಿಯೋ ಜೊತೆಗೆ, “ತುರ್ತು ಪ್ರಯಾಣ ನಿಮಿತ್ತ ಇಂಡಿಗೋ ಟಿಕೆಟ್ ಪಡೆದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶಿಸಿದಾಗ, ಇಂಡಿಗೋ ಕೌಂಟರ್‌ನಿಂದ ರನ್‌ವೇವರೆಗೆ ಮೂರು ಸಲ ಮಿನಿ ಜಿಹಾದಿಯನ್ನು ಎದುರಿಸಬೇಕಾದರೆ ಎನನಿಸಬೇಕು?” ಎಂದು ಬರೆದುಕೊಂಡಿದ್ದರು.

ಮುಂದುವರಿದು, “ಇಂಡಿಗೋ ಕೌಂಟರ್ ‘ಕೆ’ ನಲ್ಲಿ ರೆಹಾನ್, ಸ್ಟ್ರೆಚ್ ಕೌಂಟರ್‌ನಲ್ಲಿ ಮೊಯಿನುದ್ದೀನ್ ಮತ್ತು ರನ್‌ವೇ ಕೋಚ್‌ನಲ್ಲಿ ಚಾಲಕ ಅಬ್ದುಲ್ಲಾ ಖಾನ್. ನಿಮ್ಮ ಹೃದಯದಲ್ಲಿರುವ ದೇಶ ಭಕ್ತಿಯಿಂದ ನಿಮ್ಮನ್ನು ಗುರುತಿಸಿ, ನಂತರ ಅವರು ನಿಮಗೆ ಕಿರುಕುಳ ನೀಡಲು ಮತ್ತು ವಿವಿಧ ರೀತಿಯಲ್ಲಿ ಹಾನಿ ಮಾಡಲು ಪ್ರಯತ್ನಿಸುತ್ತಾರೆ. ಇಂದು ನನಗೆ ಇದೇ ಅನುಭವ ಆಯಿತು” ಎಂದಿದ್ದರು.

“ಒಂದು ವೇಳೆ ಇಂಡಿಗೋ ಏರ್‌ಲೈನ್ಸ್ ಮೂಲಕ ಭಯೋತ್ಪಾದಕರು ಮತ್ತು ಭಯೋತ್ಪಾದನೆ ಭುಗಿಲೆದ್ದರೆ, ಭಾರತ ದೇಶಕ್ಕೆ ಹಾನಿ ಮಾಡಲು ಪ್ರಯತ್ನಿಸಿದರೆ, ಆಗ ಇಂಡಿಗೋ ಏರ್‌ಲೈನ್ಸ್ ಮಾಲೀಕರು ಕೊಂಚವೂ ಆಘಾತಕ್ಕೊಳಗಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಇಂಡಿಗೋ ಏರ್‌ಲೈನ್ಸ್ ಮಾಲೀಕರು ಉದಾರವಾದಿ ಹಿಂದೂವಾಗಿ ಪೂರೈಸುತ್ತಿರುವ ಜವಾಬ್ದಾರಿಯಿಂದ” ಎಂದು ಹೇಳಿದ್ದರು.

“ಹೆಚ್ಚಿನ ಸಂಖ್ಯೆಯಲ್ಲಿ ಉಮ್ಮ (ಮುಸ್ಲಿಮರು) ಜನರನ್ನು ನೇಮಿಸಿಕೊಳ್ಳುವ ಮೂಲಕ ಇದು ವ್ಯವಸ್ಥಿತ ಪಿತೂರಿಯೇ? ಅಥವಾ ಒಬ್ಬ ಉದಾರವಾದಿ ಹಿಂದೂವಿನ ಕರ್ತವ್ಯಗಳ ನೆರವೇರಿಕೆಯೇ? ಸರ್ಕಾರವು ಕೇವಲ ಕೈಜೋಡಿಸಿ ಪ್ರತಿ ಬಾರಿಯೂ ಕ್ಷಮೆಯಾಚಿಸಿದರೆ ಕ್ಷಮಿಸುವುದಿಲ್ಲ, ಹಾಗೆ ಆಗಬಾರದು” ಎಂದು ಬರೆದುಕೊಂಡಿದ್ದರು.

ತಾನು ಪೋಸ್ಟ್ ಮಾಡಿದ್ದ ವಿಡಿಯೋದಲ್ಲಿಯೂ ಆಕೆ, “Poora desh pareshan ho gaya hai tum Abdul aur Abdullah se” (ಅಬ್ದುಲ್ ಮತ್ತು ಅಬ್ದುಲ್ಲಾ, ನಿಮ್ಮಿಂದಾಗಿ ಇಡೀ ದೇಶ ತೊಂದರೆಗೀಡಾಗಿದೆ) ಎಂದು ಹೇಳುವುದು ಇದೆ.

ಈ ಮೂಲಕ ಮುಸ್ಲಿಮರ ಮೇಲಿನ ಮತೀಯ ದ್ವೇಷವನ್ನು ನಾಝಿಯಾ ಹೊರ ಹಾಕಿದ್ದರು. ತನ್ನ ಪೋಸ್ಟನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಂಡಿಗೋ ಸಂಸ್ಥೆಗೆ ಟ್ಯಾಗ್ ಮಾಡಿದ್ದರು.

ವಿಡಿಯೋ ಅಥವಾ ಪೋಸ್ಟ್‌ನಲ್ಲಿ ನಾಝಿಯಾ ಅವರು ಮುಂಬೈ ನಿಲ್ದಾಣದಲ್ಲಿ ಆಕೆಗೆ ಆಗಿರುವ ಸಮಸ್ಯೆ ಏನು? ಆಕೆ ಮುಸ್ಲಿಂ ಸಿಬ್ಬಂದಿಯನ್ನು ನಿಂದಿಸಲು ಕಾರಣವೇನು? ಎಂದು ಸ್ಪಷ್ಟಪಡಿಸಿಲ್ಲ.

ನಾಝಿಯಾ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕರು ಆಕೆ ದ್ವೇಷ ಹರಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯ ಜನರು ಏನಾದರು ಪೋಸ್ಟ್‌ ಹಾಕಿದಾಗ ತಕ್ಷಣ ಮನೆಗೆ ನುಗ್ಗಿ ಬಂದಿಸುವ ಪೊಲೀಸರು, ಈಕೆಯ ಮೇಲೆ ಇದುವರೆಗೆ ಕ್ರಮ ಕೈಗೊಂಡ ಬಗ್ಗೆ ವರದಿಯಾಗಿಲ್ಲ. ಎಕ್ಸ್‌ ಕೂಡ ಆಕೆಯ ದ್ವೇಷ ಹರಡುವ ವಿಡಿಯೋ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಎಕ್ಸ್‌ನ ಮಾನದಂಡಗಳನ್ನು ಉಲ್ಲಂಘಿಸಿದ ಬಗ್ಗೆ ಚಕಾರವೆತ್ತಿಲ್ಲ.

ತನ್ನ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ನಾಝಿಯಾ ಮತ್ತೊಂದು ಸೆಲ್ಪೀ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮುಸ್ಲಿಮರನ್ನು “ಜಿಹಾದಿ”, “ಕಟ್ಮುಲ್ಲಾ” “ಹಂದಿಗಳು” ಇತ್ಯಾದಿ ಪದಗಳನ್ನು ಉಪಯೋಗಿಸಿ ತುಚ್ಛವಾಗಿ ನಿಂದಿಸಿದ್ದಾರೆ.

ವಿಡಿಯೋ ಜೊತೆಗೆ, “ಇಂಡಿಗೋ ಮಾಲೀಕರು ಭಾರತ ಮತ್ತು ಪಾಕಿಸ್ತಾನದ ಮುಸ್ಲಿಂ ಬೆಂಬಲಿಗರ ಮಾತನ್ನು ಕೇಳಿ ನನ್ನನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಏಕೆಂದರೆ ನಾನು ಸುಮ್ಮನಿರುವುದಿಲ್ಲ. ಇಂಡಿಗೋದ ಉಮ್ಮಾ (ಮುಸ್ಲಿಂ) ನೌಕರರು ತಮ್ಮ ಜಿಹಾದಿ ಮನಸ್ಥಿತಿಯನ್ನು ನನಗೆ ತೋರಿಸಿದಾಗಲೆಲ್ಲಾ, ನಾನು ಅವರ ಹಿಜಾಬ್ ಕಳಚುತ್ತೇನೆ, ಇದು ಸವಾಲು” ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಂಡ ಬಗ್ಗೆ ವರದಿಯಾಗಿಲ್ಲ.

ಇದೇ ಘಟನೆಗೆ ಸಂಬಂಧಪಟ್ಟಂತೆ ಡಿಸೆಂಬರ್ 24ರಂದು ನಾಝಿಯಾ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ಜಮ್ಮು ಕಾಶ್ಮೀರಾದ ಪಿಡಿಪಿ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ವಿಷಯ ಗೊತ್ತಿಲ್ಲದೆ ಹೇಳಿಕೆ ಕೊಡುವ ಮೂಲಕ ನನ್ನನ್ನು ಅವಮಾನಿಸಿದ್ದಾರೆ. ಅಲ್ಲದೆ, ಅವರ ಕಡೆಯವರು ನನಗೆ ಬೆದರಿಕೆ ಕರೆಗಳನ್ನು ಮಾಡುತ್ತಿದ್ದಾರೆ ಎಂದು ಕೆಲ ಫೋನ್‌ ನಂಬರ್‌ಗಳನ್ನು ಹಂಚಿಕೊಂಡಿದ್ದಾರೆ.

ನಾಝಿಯಾ ತಮ್ಮ ಎಕ್ಸ್‌ ಖಾತೆ ಬಯೋದಲ್ಲಿ, “ಕ್ಷಮೆಯಾಚಿಸದ ಭಾರತೀಯೆ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ, ರಾಜ್ಯ ಸಮಿತಿ ಸದಸ್ಯೆ ಕೈಮಗ್ಗ_ನೇಯ್ಗೆ ಕೋಶ, ರಾಷ್ಟ್ರೀಯ ವೀಕ್ಷಕಿ ಮಜ್ದೂರ್ ಕೋಶ, ಅಧ್ಯಕ್ಷೆ ಖಾನ್ ಲೀಗಲ್ ಸಾಲಿಸಿಟರ್ ಸಂಸ್ಥೆ” ಎಂದು ತನ್ನನ್ನು ತಾನು ಪರಿಚಯಿಸಿಕೊಂಡಿದ್ದಾರೆ.

ಇತರ ಮುಸ್ಲಿಂ ದ್ವೇಷ ಭಾಷಣಗಳು

1. ಆಗಸ್ಟ್ 2024ರಲ್ಲಿ ಸಂದರ್ಶನವೊಂದರಲ್ಲಿ ಪ್ರವಾದಿ ಮುಹಮ್ಮದರು, ಮದೀನಾ ನಗರ ಮತ್ತು ಮುಸ್ಲಿಂ ಮಹಿಳೆಯರನ್ನು ನಾಝಿಯಾ ಅವಹೇಳನ ಮಾಡಿದ್ದರು. ಇದರ ವಿರುದ್ದ ಕೋಲ್ಕತ್ತಾದ ಕ್ರಿಮಿನಲ್ ವಕೀಲರೊಬ್ಬರು ದೂರು ದಾಖಲಿಸಿದ್ದರು.

    2. ಜನವರಿ 2025ರಲ್ಲಿ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಹಿಂದುತ್ವ ಸಂಘಟನೆಯೊಂದು ಏರ್ಪಡಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಾಝಿಯಾ ಲವ್ ಜಿಹಾದ್, ಅತ್ಯಾಚಾರ, ಹಿಂಸಾಚಾರ, ಭಯೋತ್ಪಾದನೆ ಆರೋಪಗಳನ್ನು ಮಾಡಿ ಮುಸ್ಲಿಮರನ್ನು ನಿಂದಿಸಿದ್ದರು.

    ಈ ಸಂಬಂಧ ‘ಚುನಾವಣೆಗೆ ಮುನ್ನ ಕೋಮು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ’ ಮೇಲೆ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿತ್ತು. ಮಾದರಿ ನೀತಿ ಸಂಹಿತೆ (ಎಂಸಿಸಿ) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿತ್ತು.

    3. ಜನವರಿ 2025ರಲ್ಲಿ ಕರ್ನಾಟಕದ ಬೆಳಗಾವಿಯ ಜಿಲ್ಲೆಯ ಸೂಳಿಬಾವಿ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ನಾಝಿಯಾ ಮುಸ್ಲಿಮರ ವಿರುದ್ದ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

    ಸಾಮಾಜಿಕ ಜಾಲತಾಣಗಳಲ್ಲಿ ಈಕೆ ಪದೇ ಪದೇ ಮುಸ್ಲಿಮರ ವಿರುದ್ದ ದ್ವೇಷ ಕಾರುತ್ತಿರುತ್ತಾರೆ.

    ಈ ಹಿಂದೆ ಮುಸ್ಲಿಮರ ವಿರುದ್ದ ಸುಳ್ಳು ಸುದ್ದಿ ಹರಡಿ ಸಿಕ್ಕಿಬಿದ್ದಿದ್ದರು ನಾಝಿಯಾ

    ಯಾವುದೇ ವಿಷಯಗಳ ಕುರಿತು ವಿಡಿಯೋ ಮಾಡುವಾಗ, ಪೋಸ್ಟ್‌ ಮಾಡುವಾಗ ಮುಸ್ಲಿಮರನ್ನು ನಿಂದಿಸುವುದನ್ನು ನಾಝಿಯಾ ಮರೆಯುವುದಿಲ್ಲ. ಆಕೆಯ ಬಹುತೇಕ ಪೋಸ್ಟ್‌ಗಳು ಕಟ್ಟರ್ ಹಿಂದುತ್ವದ ಪ್ರತಿಪಾದನೆ ಮತ್ತು ದ್ವೇಷ ಹರಡುವಂತದ್ದಾಗಿದೆ. ಇಂತಹ ನಾಝಿಯಾ ಈ ಹಿಂದೆ ಮುಸ್ಲಿಮರ ವಿರುದ್ದ ಅಪಘಾತದ ಕಟ್ಟು ಕಥೆ ಕಟ್ಟಿ ಸಿಕ್ಕಿಬಿದಿದ್ದರು.

    2025ರ ಫೆಬ್ರವರಿ 24ರಂದು, ಮಹಾಕುಂಭ ಮೇಳಕ್ಕೆ ತೆರಳುವಾಗ ಮುಸ್ಲಿಮರು ನಮ್ಮ ಕಾರನ್ನು ಹಿಂಬಾಲಿಸಿ ಅಪಘಾತವೆಸಗಿದ್ದಾರೆ ಎಂದು ನಾಝಿಯಾ ಆರೋಪಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣೀರು ಹಾಕಿ ವಿಡಿಯೋ ಪೋಸ್ಟ್ ಮಾಡಿದ್ದರು. ಆದರೆ, ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸಿ ಆಕೆಯ ಸುಳ್ಳಾರೋಪವನ್ನು ಬಯಲು ಮಾಡಿದ್ದರು.

    ಈ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ಫ್ಯಾಕ್ಟ್‌ಚೆಕ್ ವರದಿಯನ್ನು ಕೆಳಗಡೆ ನೋಡಬಹುದು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

    ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

    ‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

    ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

    ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

    ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

    ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

    ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

    ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

    ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

    ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

    ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

    ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

    ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

    ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

    ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

    ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

    ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

    ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

    ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...