Homeಮುಖಪುಟಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

- Advertisement -
- Advertisement -

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ ಕೈಗೊಂಡ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಈಕೆಯ ವರ್ತನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೂಕ್ತ ಕ್ರಮಕ್ಕೆ ಜನರು ಆಗ್ರಹಿಸಿದ್ದಾರೆ.

ಇತ್ತೀಚಿನ ಘಟನೆಯಲ್ಲಿ, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಅಲ್ಲಿನ ಮುಸ್ಲಿಂ ಸಿಬ್ಬಂದಿಯನ್ನು ಧಾರ್ಮಿಕ ಗುರುತಿನ ಮೇಲೆ ನಿಂದಿಸಿದ ವಿಡಿಯೋವನ್ನು ಸ್ವತಃ ನಾಝಿಯಾ ಸೋಮವಾರ (ಡಿ.22) ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ವಿಡಿಯೋ ಜೊತೆಗೆ, “ತುರ್ತು ಪ್ರಯಾಣ ನಿಮಿತ್ತ ಇಂಡಿಗೋ ಟಿಕೆಟ್ ಪಡೆದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶಿಸಿದಾಗ, ಇಂಡಿಗೋ ಕೌಂಟರ್‌ನಿಂದ ರನ್‌ವೇವರೆಗೆ ಮೂರು ಸಲ ಮಿನಿ ಜಿಹಾದಿಯನ್ನು ಎದುರಿಸಬೇಕಾದರೆ ಎನನಿಸಬೇಕು?” ಎಂದು ಬರೆದುಕೊಂಡಿದ್ದರು.

ಮುಂದುವರಿದು, “ಇಂಡಿಗೋ ಕೌಂಟರ್ ‘ಕೆ’ ನಲ್ಲಿ ರೆಹಾನ್, ಸ್ಟ್ರೆಚ್ ಕೌಂಟರ್‌ನಲ್ಲಿ ಮೊಯಿನುದ್ದೀನ್ ಮತ್ತು ರನ್‌ವೇ ಕೋಚ್‌ನಲ್ಲಿ ಚಾಲಕ ಅಬ್ದುಲ್ಲಾ ಖಾನ್. ನಿಮ್ಮ ಹೃದಯದಲ್ಲಿರುವ ದೇಶ ಭಕ್ತಿಯಿಂದ ನಿಮ್ಮನ್ನು ಗುರುತಿಸಿ, ನಂತರ ಅವರು ನಿಮಗೆ ಕಿರುಕುಳ ನೀಡಲು ಮತ್ತು ವಿವಿಧ ರೀತಿಯಲ್ಲಿ ಹಾನಿ ಮಾಡಲು ಪ್ರಯತ್ನಿಸುತ್ತಾರೆ. ಇಂದು ನನಗೆ ಇದೇ ಅನುಭವ ಆಯಿತು” ಎಂದಿದ್ದರು.

“ಒಂದು ವೇಳೆ ಇಂಡಿಗೋ ಏರ್‌ಲೈನ್ಸ್ ಮೂಲಕ ಭಯೋತ್ಪಾದಕರು ಮತ್ತು ಭಯೋತ್ಪಾದನೆ ಭುಗಿಲೆದ್ದರೆ, ಭಾರತ ದೇಶಕ್ಕೆ ಹಾನಿ ಮಾಡಲು ಪ್ರಯತ್ನಿಸಿದರೆ, ಆಗ ಇಂಡಿಗೋ ಏರ್‌ಲೈನ್ಸ್ ಮಾಲೀಕರು ಕೊಂಚವೂ ಆಘಾತಕ್ಕೊಳಗಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ಇಂಡಿಗೋ ಏರ್‌ಲೈನ್ಸ್ ಮಾಲೀಕರು ಉದಾರವಾದಿ ಹಿಂದೂವಾಗಿ ಪೂರೈಸುತ್ತಿರುವ ಜವಾಬ್ದಾರಿಯಿಂದ” ಎಂದು ಹೇಳಿದ್ದರು.

“ಹೆಚ್ಚಿನ ಸಂಖ್ಯೆಯಲ್ಲಿ ಉಮ್ಮ (ಮುಸ್ಲಿಮರು) ಜನರನ್ನು ನೇಮಿಸಿಕೊಳ್ಳುವ ಮೂಲಕ ಇದು ವ್ಯವಸ್ಥಿತ ಪಿತೂರಿಯೇ? ಅಥವಾ ಒಬ್ಬ ಉದಾರವಾದಿ ಹಿಂದೂವಿನ ಕರ್ತವ್ಯಗಳ ನೆರವೇರಿಕೆಯೇ? ಸರ್ಕಾರವು ಕೇವಲ ಕೈಜೋಡಿಸಿ ಪ್ರತಿ ಬಾರಿಯೂ ಕ್ಷಮೆಯಾಚಿಸಿದರೆ ಕ್ಷಮಿಸುವುದಿಲ್ಲ, ಹಾಗೆ ಆಗಬಾರದು” ಎಂದು ಬರೆದುಕೊಂಡಿದ್ದರು.

ತಾನು ಪೋಸ್ಟ್ ಮಾಡಿದ್ದ ವಿಡಿಯೋದಲ್ಲಿಯೂ ಆಕೆ, “Poora desh pareshan ho gaya hai tum Abdul aur Abdullah se” (ಅಬ್ದುಲ್ ಮತ್ತು ಅಬ್ದುಲ್ಲಾ, ನಿಮ್ಮಿಂದಾಗಿ ಇಡೀ ದೇಶ ತೊಂದರೆಗೀಡಾಗಿದೆ) ಎಂದು ಹೇಳುವುದು ಇದೆ.

ಈ ಮೂಲಕ ಮುಸ್ಲಿಮರ ಮೇಲಿನ ಮತೀಯ ದ್ವೇಷವನ್ನು ನಾಝಿಯಾ ಹೊರ ಹಾಕಿದ್ದರು. ತನ್ನ ಪೋಸ್ಟನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಂಡಿಗೋ ಸಂಸ್ಥೆಗೆ ಟ್ಯಾಗ್ ಮಾಡಿದ್ದರು.

ವಿಡಿಯೋ ಅಥವಾ ಪೋಸ್ಟ್‌ನಲ್ಲಿ ನಾಝಿಯಾ ಅವರು ಮುಂಬೈ ನಿಲ್ದಾಣದಲ್ಲಿ ಆಕೆಗೆ ಆಗಿರುವ ಸಮಸ್ಯೆ ಏನು? ಆಕೆ ಮುಸ್ಲಿಂ ಸಿಬ್ಬಂದಿಯನ್ನು ನಿಂದಿಸಲು ಕಾರಣವೇನು? ಎಂದು ಸ್ಪಷ್ಟಪಡಿಸಿಲ್ಲ.

ನಾಝಿಯಾ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕರು ಆಕೆ ದ್ವೇಷ ಹರಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯ ಜನರು ಏನಾದರು ಪೋಸ್ಟ್‌ ಹಾಕಿದಾಗ ತಕ್ಷಣ ಮನೆಗೆ ನುಗ್ಗಿ ಬಂದಿಸುವ ಪೊಲೀಸರು, ಈಕೆಯ ಮೇಲೆ ಇದುವರೆಗೆ ಕ್ರಮ ಕೈಗೊಂಡ ಬಗ್ಗೆ ವರದಿಯಾಗಿಲ್ಲ. ಎಕ್ಸ್‌ ಕೂಡ ಆಕೆಯ ದ್ವೇಷ ಹರಡುವ ವಿಡಿಯೋ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಎಕ್ಸ್‌ನ ಮಾನದಂಡಗಳನ್ನು ಉಲ್ಲಂಘಿಸಿದ ಬಗ್ಗೆ ಚಕಾರವೆತ್ತಿಲ್ಲ.

ತನ್ನ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ನಾಝಿಯಾ ಮತ್ತೊಂದು ಸೆಲ್ಪೀ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮುಸ್ಲಿಮರನ್ನು “ಜಿಹಾದಿ”, “ಕಟ್ಮುಲ್ಲಾ” “ಹಂದಿಗಳು” ಇತ್ಯಾದಿ ಪದಗಳನ್ನು ಉಪಯೋಗಿಸಿ ತುಚ್ಛವಾಗಿ ನಿಂದಿಸಿದ್ದಾರೆ.

ವಿಡಿಯೋ ಜೊತೆಗೆ, “ಇಂಡಿಗೋ ಮಾಲೀಕರು ಭಾರತ ಮತ್ತು ಪಾಕಿಸ್ತಾನದ ಮುಸ್ಲಿಂ ಬೆಂಬಲಿಗರ ಮಾತನ್ನು ಕೇಳಿ ನನ್ನನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಏಕೆಂದರೆ ನಾನು ಸುಮ್ಮನಿರುವುದಿಲ್ಲ. ಇಂಡಿಗೋದ ಉಮ್ಮಾ (ಮುಸ್ಲಿಂ) ನೌಕರರು ತಮ್ಮ ಜಿಹಾದಿ ಮನಸ್ಥಿತಿಯನ್ನು ನನಗೆ ತೋರಿಸಿದಾಗಲೆಲ್ಲಾ, ನಾನು ಅವರ ಹಿಜಾಬ್ ಕಳಚುತ್ತೇನೆ, ಇದು ಸವಾಲು” ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಂಡ ಬಗ್ಗೆ ವರದಿಯಾಗಿಲ್ಲ.

ಇದೇ ಘಟನೆಗೆ ಸಂಬಂಧಪಟ್ಟಂತೆ ಡಿಸೆಂಬರ್ 24ರಂದು ನಾಝಿಯಾ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ಜಮ್ಮು ಕಾಶ್ಮೀರಾದ ಪಿಡಿಪಿ ಪಕ್ಷದ ನಾಯಕಿ ಇಲ್ತಿಜಾ ಮುಫ್ತಿ ವಿಷಯ ಗೊತ್ತಿಲ್ಲದೆ ಹೇಳಿಕೆ ಕೊಡುವ ಮೂಲಕ ನನ್ನನ್ನು ಅವಮಾನಿಸಿದ್ದಾರೆ. ಅಲ್ಲದೆ, ಅವರ ಕಡೆಯವರು ನನಗೆ ಬೆದರಿಕೆ ಕರೆಗಳನ್ನು ಮಾಡುತ್ತಿದ್ದಾರೆ ಎಂದು ಕೆಲ ಫೋನ್‌ ನಂಬರ್‌ಗಳನ್ನು ಹಂಚಿಕೊಂಡಿದ್ದಾರೆ.

ನಾಝಿಯಾ ತಮ್ಮ ಎಕ್ಸ್‌ ಖಾತೆ ಬಯೋದಲ್ಲಿ, “ಕ್ಷಮೆಯಾಚಿಸದ ಭಾರತೀಯೆ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ, ರಾಜ್ಯ ಸಮಿತಿ ಸದಸ್ಯೆ ಕೈಮಗ್ಗ_ನೇಯ್ಗೆ ಕೋಶ, ರಾಷ್ಟ್ರೀಯ ವೀಕ್ಷಕಿ ಮಜ್ದೂರ್ ಕೋಶ, ಅಧ್ಯಕ್ಷೆ ಖಾನ್ ಲೀಗಲ್ ಸಾಲಿಸಿಟರ್ ಸಂಸ್ಥೆ” ಎಂದು ತನ್ನನ್ನು ತಾನು ಪರಿಚಯಿಸಿಕೊಂಡಿದ್ದಾರೆ.

ಇತರ ಮುಸ್ಲಿಂ ದ್ವೇಷ ಭಾಷಣಗಳು

1. ಆಗಸ್ಟ್ 2024ರಲ್ಲಿ ಸಂದರ್ಶನವೊಂದರಲ್ಲಿ ಪ್ರವಾದಿ ಮುಹಮ್ಮದರು, ಮದೀನಾ ನಗರ ಮತ್ತು ಮುಸ್ಲಿಂ ಮಹಿಳೆಯರನ್ನು ನಾಝಿಯಾ ಅವಹೇಳನ ಮಾಡಿದ್ದರು. ಇದರ ವಿರುದ್ದ ಕೋಲ್ಕತ್ತಾದ ಕ್ರಿಮಿನಲ್ ವಕೀಲರೊಬ್ಬರು ದೂರು ದಾಖಲಿಸಿದ್ದರು.

    2. ಜನವರಿ 2025ರಲ್ಲಿ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಹಿಂದುತ್ವ ಸಂಘಟನೆಯೊಂದು ಏರ್ಪಡಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಾಝಿಯಾ ಲವ್ ಜಿಹಾದ್, ಅತ್ಯಾಚಾರ, ಹಿಂಸಾಚಾರ, ಭಯೋತ್ಪಾದನೆ ಆರೋಪಗಳನ್ನು ಮಾಡಿ ಮುಸ್ಲಿಮರನ್ನು ನಿಂದಿಸಿದ್ದರು.

    ಈ ಸಂಬಂಧ ‘ಚುನಾವಣೆಗೆ ಮುನ್ನ ಕೋಮು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ’ ಮೇಲೆ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿತ್ತು. ಮಾದರಿ ನೀತಿ ಸಂಹಿತೆ (ಎಂಸಿಸಿ) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆ, 1951ರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿತ್ತು.

    3. ಜನವರಿ 2025ರಲ್ಲಿ ಕರ್ನಾಟಕದ ಬೆಳಗಾವಿಯ ಜಿಲ್ಲೆಯ ಸೂಳಿಬಾವಿ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ನಾಝಿಯಾ ಮುಸ್ಲಿಮರ ವಿರುದ್ದ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

    ಸಾಮಾಜಿಕ ಜಾಲತಾಣಗಳಲ್ಲಿ ಈಕೆ ಪದೇ ಪದೇ ಮುಸ್ಲಿಮರ ವಿರುದ್ದ ದ್ವೇಷ ಕಾರುತ್ತಿರುತ್ತಾರೆ.

    ಈ ಹಿಂದೆ ಮುಸ್ಲಿಮರ ವಿರುದ್ದ ಸುಳ್ಳು ಸುದ್ದಿ ಹರಡಿ ಸಿಕ್ಕಿಬಿದ್ದಿದ್ದರು ನಾಝಿಯಾ

    ಯಾವುದೇ ವಿಷಯಗಳ ಕುರಿತು ವಿಡಿಯೋ ಮಾಡುವಾಗ, ಪೋಸ್ಟ್‌ ಮಾಡುವಾಗ ಮುಸ್ಲಿಮರನ್ನು ನಿಂದಿಸುವುದನ್ನು ನಾಝಿಯಾ ಮರೆಯುವುದಿಲ್ಲ. ಆಕೆಯ ಬಹುತೇಕ ಪೋಸ್ಟ್‌ಗಳು ಕಟ್ಟರ್ ಹಿಂದುತ್ವದ ಪ್ರತಿಪಾದನೆ ಮತ್ತು ದ್ವೇಷ ಹರಡುವಂತದ್ದಾಗಿದೆ. ಇಂತಹ ನಾಝಿಯಾ ಈ ಹಿಂದೆ ಮುಸ್ಲಿಮರ ವಿರುದ್ದ ಅಪಘಾತದ ಕಟ್ಟು ಕಥೆ ಕಟ್ಟಿ ಸಿಕ್ಕಿಬಿದಿದ್ದರು.

    2025ರ ಫೆಬ್ರವರಿ 24ರಂದು, ಮಹಾಕುಂಭ ಮೇಳಕ್ಕೆ ತೆರಳುವಾಗ ಮುಸ್ಲಿಮರು ನಮ್ಮ ಕಾರನ್ನು ಹಿಂಬಾಲಿಸಿ ಅಪಘಾತವೆಸಗಿದ್ದಾರೆ ಎಂದು ನಾಝಿಯಾ ಆರೋಪಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣೀರು ಹಾಕಿ ವಿಡಿಯೋ ಪೋಸ್ಟ್ ಮಾಡಿದ್ದರು. ಆದರೆ, ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸಿ ಆಕೆಯ ಸುಳ್ಳಾರೋಪವನ್ನು ಬಯಲು ಮಾಡಿದ್ದರು.

    ಈ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ಫ್ಯಾಕ್ಟ್‌ಚೆಕ್ ವರದಿಯನ್ನು ಕೆಳಗಡೆ ನೋಡಬಹುದು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

    ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

    24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

    ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

    ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

    ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

    ‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

    ‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

    ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

    ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

    ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

    ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

    ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

    ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

    ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

    ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

    ‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

    ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

    ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

    ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...