HomeಮುಖಪುಟJNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ರಾಜಕೀಯದ ನಿಲುವುಗಳು ಏನೇ ಇದ್ದರೂ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಅನ್ಯೋನ್ಯವಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ನಾವು ಈ ಚಿತ್ರದಲ್ಲಿ ನೀಡಿದ್ದೇವೆ- ಆರ್ಯದನ್ ಶೌಕತ್

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಆಧರಿಸಿದ ಮಲಯಾಳಂ ಚಿತ್ರ “ವರ್ತಮಾನಂ” ಸಿನಿಮಾಗೆ ಕೇಂದ್ರೀಯ ಸೆನ್ಸಾರ್ ಬೋರ್ಡ್ (CBFC) ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ. ಜೊತೆಗೆ ಚಿತ್ರತಂಡ ಮತ್ತು ನಿರ್ದೇಶಕರನ್ನು ದೇಶದ್ರೋಹಿಗಳು ಎಂದು ಸೆನ್ಸಾರ್ ಮಂಡಳಿಯ ಸದಸ್ಯರೂ ಆಗಿರುವ ಬಿಜೆಪಿ ಮುಖಂಡ ವಿ. ಸಂದೀಪ್‌ ಕುಮಾರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಇದನ್ನು ವಿರೋಧಿಸಿದ ಚಿತ್ರತಂಡವು, ಬಿಜೆಪಿ ಮುಖಂಡ ವಿ. ಸಂದೀಪ್‌ ಕುಮಾರ್‌ ಎಂಬುವವರನ್ನು ಸೆನ್ಸಾರ್ ಮಂಡಳಿಯಿಂದ ವಜಾಗೊಳಿಸುವಂತೆ ಒತ್ತಾಯಿಸುತ್ತಿದೆ.

ವಿ. ಸಂದೀಪ್‌ ಕುಮಾರ್‌ ಸಿನಿಮಾ ನೋಡಿದ ಬಳಿಕ ಟ್ವೀಟ್‌ ಮಾಡಿ, “ಈ ಚಿತ್ರದಲ್ಲಿ ರಾಷ್ಟ್ರ ವಿರೋಧಿ ಕಥಾವಸ್ತು ಇದೆ” ಎಂದು ಬರೆದುಕೊಂಡಿದ್ದರು. ನಂತರ ಆ ಟ್ವೀಟ್‌ ಅನ್ನು ಡಿಲೀಟ್‌ ಮಾಡಿದ್ದರು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಅದರ ಸ್ಕ್ರೀನ್‌ ಶಾಟ್‌ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ‘ಸಣ್ಣ ಪಿಕಾ-ಒಂದುವರೆ ರುಪಾಯಿ’ – ಅಧೀರ್ ಬಿಸ್ವಾಸ್ ಅವರ ನಿರಾಶ್ರಿತ ಆತ್ಮಕಥೆ

ಈ ವರ್ಷದ ಆರಂಭದಲ್ಲಿ JNU ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಒಳಗೊಂಡಿರುವ ಈ ಚಲನಚಿತ್ರವನ್ನು ಖ್ಯಾತ ಚಲನಚಿತ್ರ ನಿರ್ಮಾಪಕ ಸಿದ್ಧಾರ್ಥ್‌ ಶಿವ ನಿರ್ದೇಶಿಸಿದ್ದಾರೆ. ನಟಿ ಪಾರ್ವತಿ ತಿರುವೊತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವು ವಿದ್ಯಾಭ್ಯಾಸಕ್ಕಾಗಿ JNU ಗೆ ಹೋಗುವ ಕೇರಳದ ಯುವತಿಯ ಕಥೆಯನ್ನು ಒಳಗೊಂಡಿದೆ.

“ಚಿತ್ರವನ್ನು ಪರಿಷ್ಕರಣೆ ಸಮಿತಿಗೆ ಸಲ್ಲಿಸಬೇಕಾಗಿದೆ ಎಂದು ಇಲ್ಲಿನ ಸಿಬಿಎಫ್‌ಸಿ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಚಲನಚಿತ್ರಕ್ಕೆ ಪ್ರಮಾಣೀಕರಣವನ್ನು ಏಕೆ ನಿರಾಕರಿಸಲಾಗಿದೆ ಎಂದು ನಮಗೆ ಇನ್ನೂ ತಿಳಿದಿಲ್ಲ”  ಎಂದು ಹೇಳಿರುವ ಚಿತ್ರದ ನಿರ್ಮಾಪಕ ಮತ್ತು ಚಿತ್ರಕಥೆಗಾರ ಆರ್ಯದನ್ ಶೌಕತ್, ಸಂದೀಪ್ ಟ್ವೀಟ್ ಮಾಡಿರುವ ಸ್ಕ್ರೀನ್‌ಶಾಟ್‌ ಅನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸಂದೀಪ್ ಕುಮಾರ್ ಡಿಲೀಟ್ ಮಾಡಿರುವ ತಮ್ಮ ಟ್ವೀಟ್‌ನಲ್ಲಿ, ‘JNU ಪ್ರತಿಭಟನೆಯಲ್ಲಿ ಮುಸ್ಲಿಮರು ಮತ್ತು ದಲಿತರ ಕಿರುಕುಳ ನಡೆದಿದೆ’ ಎಂಬ ವಿಷಯದ ಪ್ರಸ್ತಾಪವಿರುವ ಕಾರಣಕ್ಕಾಗಿ ಈ ಚಲನಚಿತ್ರಕ್ಕೆ ‘ಅನುಮತಿ ನೀಡುವುದನ್ನು’ ವಿರೋಧಿಸಿದ್ದೇನೆ. ಆರ್ಯದನ್ ಶೌಕಾತ್ ಅದರ ಚಿತ್ರಕಥೆಗಾರ ಮತ್ತು ನಿರ್ಮಾಪಕರಾಗಿರುವುದರಿಂದ ಅನುಮತಿ ನಿರಾಕರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸೆನ್ಸಾರ್ ಮಂಡಳಿಯಲ್ಲಿ ಹಲವಾರು ರಾಜಕೀಯ ನೇಮಕಾತಿದಾರರಿದ್ದು, ಅವರಿಗೆ ಸಿನೆಮಾ ಬಗ್ಗೆ ಕನಿಷ್ಠ ಜ್ಞಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ಈ ಕುರಿತಂತೆ ಆರ್ಯದನ್ ಶೌಕತ್, “ದೆಹಲಿ ವಿವಿಯ ವಿದ್ಯಾರ್ಥಿಯೊಬ್ಬ ಪ್ರತಿಭಟನೆಯ ಬಗ್ಗೆ ಮಾತನಾಡಿದರೆ ಆತ ರಾಷ್ಟ್ರವಿರೋಧಿಯಾಗಲು ಹೇಗೆ ಸಾಧ್ಯ. ಸಂದೀಪ್ ಕುಮಾರ್ ಅವರ ಟ್ವೀಟ್‌ನಲ್ಲಿ ಎಲ್ಲವೂ ಇದೆ. JNU ನಲ್ಲಿನ ಘಟನೆಯು ದಲಿತ ಮತ್ತು ಮುಸ್ಲಿಂ ಚಿತ್ರಹಿಂಸೆಯ ವಿಷಯ ಎಂದು ಅವರೇ ಬಹಿರಂಗವಾಗಿ ಘೋಷಿಸಿದ್ದಾರೆ. ಜೊತೆಗೆ ಈ ಚಿತ್ರದ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವುದಕ್ಕೆ ಚಿತ್ರಕತೆ ಬರೆದಿರುವವರು ಮತ್ತು ಬಂಡವಾಳ ಹೂಡಿರುವ ಆರ್ಯದನ್ ಶೌಕತ್ ಅವರೇ ಕಾರಣ ಎಂದು ಒಪ್ಪಿಕೊಂಡಿದ್ದಾರೆ. ನಾವು ಭಾರತದಲ್ಲಿ ವಾಸಿಸುತ್ತಿದ್ದೇವೆ, ಇದು ಪ್ರಜಾಪ್ರಭುತ್ವ, ಜಾತ್ಯತೀತ ಮತ್ತು ಸಮಾಜವಾದಿ ದೇಶವಾಗಿದೆ. ಚಿತ್ರಕಥೆ ಬರೆಯುವವರ ಕುಲ ಮತ್ತು ಜನಾಂಗವನ್ನು ಆಧರಿಸಿ ಚಲನಚಿತ್ರವೊಂದನ್ನು ಪ್ರದರ್ಶಿಸಲು ಅನುಮತಿ ನೀಡಲಾಗುತ್ತಿದೆಯೇ? ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜಕೀಯದ ನಿಲುವುಗಳು ಏನೇ ಇದ್ದರೂ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಅನ್ಯೋನ್ಯವಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ನಾವು ಈ ಚಿತ್ರದಲ್ಲಿ ನೀಡಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

“ಹಾಗಾಗಿ ಈ ವಾರವೇ ‘ವರ್ತಮಾನಂ’ ಸಿನಿಮಾವನ್ನು ಮುಂಬೈನ ಪ್ರಮಾಣೀಕರಣ ಮಂಡಳಿಯ ಪರಿಷ್ಕರಣಾ ಸಮಿತಿಗೆ ಕಳುಹಿಸಲಾಗುವುದು” ಎಂದು ಆರ್ಯದನ್‌ ಶೌಕತ್‌ ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ JNU ಆವರಣದಲ್ಲಿ ಹಿಂಸಾತ್ಮಕ ಘರ್ಷಣೆಗಳು ನಡೆದವು. ಪ್ರವೇಶ ಶುಲ್ಕ ಹೆಚ್ಚಳವನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಶಸ್ತ್ರಸಜ್ಜಿತವಾದ ಗುಂಪೊಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿತ್ತು. ಈ ಸಂದರ್ಭದಲ್ಲಿ JNU ಕ್ಯಾಂಪಸ್‌ನಲ್ಲಿ ನಡೆದ ದೃಶ್ಯಗಳನ್ನು ಈ ಚಿತ್ರದಲ್ಲಿ ಅಳವಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಂಶೋಧಕಿಯ ಪಾತ್ರದಲ್ಲಿ ಪಾರ್ವತಿ ಕಾಣಿಸಿಕೊಂಡಿದ್ದು, ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಬಗ್ಗೆ ತಿಳಿದುಕೊಳ್ಳಲು ಜೆಎನ್‌ಯು ಕ್ಯಾಂಪಸ್‌ಗೆ ಅವರು ತೆರಳುವ ದೃಶ್ಯಗಳು ಇವೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...