HomeಮುಖಪುಟJNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ರಾಜಕೀಯದ ನಿಲುವುಗಳು ಏನೇ ಇದ್ದರೂ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಅನ್ಯೋನ್ಯವಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ನಾವು ಈ ಚಿತ್ರದಲ್ಲಿ ನೀಡಿದ್ದೇವೆ- ಆರ್ಯದನ್ ಶೌಕತ್

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಆಧರಿಸಿದ ಮಲಯಾಳಂ ಚಿತ್ರ “ವರ್ತಮಾನಂ” ಸಿನಿಮಾಗೆ ಕೇಂದ್ರೀಯ ಸೆನ್ಸಾರ್ ಬೋರ್ಡ್ (CBFC) ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ. ಜೊತೆಗೆ ಚಿತ್ರತಂಡ ಮತ್ತು ನಿರ್ದೇಶಕರನ್ನು ದೇಶದ್ರೋಹಿಗಳು ಎಂದು ಸೆನ್ಸಾರ್ ಮಂಡಳಿಯ ಸದಸ್ಯರೂ ಆಗಿರುವ ಬಿಜೆಪಿ ಮುಖಂಡ ವಿ. ಸಂದೀಪ್‌ ಕುಮಾರ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಇದನ್ನು ವಿರೋಧಿಸಿದ ಚಿತ್ರತಂಡವು, ಬಿಜೆಪಿ ಮುಖಂಡ ವಿ. ಸಂದೀಪ್‌ ಕುಮಾರ್‌ ಎಂಬುವವರನ್ನು ಸೆನ್ಸಾರ್ ಮಂಡಳಿಯಿಂದ ವಜಾಗೊಳಿಸುವಂತೆ ಒತ್ತಾಯಿಸುತ್ತಿದೆ.

ವಿ. ಸಂದೀಪ್‌ ಕುಮಾರ್‌ ಸಿನಿಮಾ ನೋಡಿದ ಬಳಿಕ ಟ್ವೀಟ್‌ ಮಾಡಿ, “ಈ ಚಿತ್ರದಲ್ಲಿ ರಾಷ್ಟ್ರ ವಿರೋಧಿ ಕಥಾವಸ್ತು ಇದೆ” ಎಂದು ಬರೆದುಕೊಂಡಿದ್ದರು. ನಂತರ ಆ ಟ್ವೀಟ್‌ ಅನ್ನು ಡಿಲೀಟ್‌ ಮಾಡಿದ್ದರು. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಅದರ ಸ್ಕ್ರೀನ್‌ ಶಾಟ್‌ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ‘ಸಣ್ಣ ಪಿಕಾ-ಒಂದುವರೆ ರುಪಾಯಿ’ – ಅಧೀರ್ ಬಿಸ್ವಾಸ್ ಅವರ ನಿರಾಶ್ರಿತ ಆತ್ಮಕಥೆ

ಈ ವರ್ಷದ ಆರಂಭದಲ್ಲಿ JNU ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಒಳಗೊಂಡಿರುವ ಈ ಚಲನಚಿತ್ರವನ್ನು ಖ್ಯಾತ ಚಲನಚಿತ್ರ ನಿರ್ಮಾಪಕ ಸಿದ್ಧಾರ್ಥ್‌ ಶಿವ ನಿರ್ದೇಶಿಸಿದ್ದಾರೆ. ನಟಿ ಪಾರ್ವತಿ ತಿರುವೊತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವು ವಿದ್ಯಾಭ್ಯಾಸಕ್ಕಾಗಿ JNU ಗೆ ಹೋಗುವ ಕೇರಳದ ಯುವತಿಯ ಕಥೆಯನ್ನು ಒಳಗೊಂಡಿದೆ.

“ಚಿತ್ರವನ್ನು ಪರಿಷ್ಕರಣೆ ಸಮಿತಿಗೆ ಸಲ್ಲಿಸಬೇಕಾಗಿದೆ ಎಂದು ಇಲ್ಲಿನ ಸಿಬಿಎಫ್‌ಸಿ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಚಲನಚಿತ್ರಕ್ಕೆ ಪ್ರಮಾಣೀಕರಣವನ್ನು ಏಕೆ ನಿರಾಕರಿಸಲಾಗಿದೆ ಎಂದು ನಮಗೆ ಇನ್ನೂ ತಿಳಿದಿಲ್ಲ”  ಎಂದು ಹೇಳಿರುವ ಚಿತ್ರದ ನಿರ್ಮಾಪಕ ಮತ್ತು ಚಿತ್ರಕಥೆಗಾರ ಆರ್ಯದನ್ ಶೌಕತ್, ಸಂದೀಪ್ ಟ್ವೀಟ್ ಮಾಡಿರುವ ಸ್ಕ್ರೀನ್‌ಶಾಟ್‌ ಅನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಸಂದೀಪ್ ಕುಮಾರ್ ಡಿಲೀಟ್ ಮಾಡಿರುವ ತಮ್ಮ ಟ್ವೀಟ್‌ನಲ್ಲಿ, ‘JNU ಪ್ರತಿಭಟನೆಯಲ್ಲಿ ಮುಸ್ಲಿಮರು ಮತ್ತು ದಲಿತರ ಕಿರುಕುಳ ನಡೆದಿದೆ’ ಎಂಬ ವಿಷಯದ ಪ್ರಸ್ತಾಪವಿರುವ ಕಾರಣಕ್ಕಾಗಿ ಈ ಚಲನಚಿತ್ರಕ್ಕೆ ‘ಅನುಮತಿ ನೀಡುವುದನ್ನು’ ವಿರೋಧಿಸಿದ್ದೇನೆ. ಆರ್ಯದನ್ ಶೌಕಾತ್ ಅದರ ಚಿತ್ರಕಥೆಗಾರ ಮತ್ತು ನಿರ್ಮಾಪಕರಾಗಿರುವುದರಿಂದ ಅನುಮತಿ ನಿರಾಕರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸೆನ್ಸಾರ್ ಮಂಡಳಿಯಲ್ಲಿ ಹಲವಾರು ರಾಜಕೀಯ ನೇಮಕಾತಿದಾರರಿದ್ದು, ಅವರಿಗೆ ಸಿನೆಮಾ ಬಗ್ಗೆ ಕನಿಷ್ಠ ಜ್ಞಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ಈ ಕುರಿತಂತೆ ಆರ್ಯದನ್ ಶೌಕತ್, “ದೆಹಲಿ ವಿವಿಯ ವಿದ್ಯಾರ್ಥಿಯೊಬ್ಬ ಪ್ರತಿಭಟನೆಯ ಬಗ್ಗೆ ಮಾತನಾಡಿದರೆ ಆತ ರಾಷ್ಟ್ರವಿರೋಧಿಯಾಗಲು ಹೇಗೆ ಸಾಧ್ಯ. ಸಂದೀಪ್ ಕುಮಾರ್ ಅವರ ಟ್ವೀಟ್‌ನಲ್ಲಿ ಎಲ್ಲವೂ ಇದೆ. JNU ನಲ್ಲಿನ ಘಟನೆಯು ದಲಿತ ಮತ್ತು ಮುಸ್ಲಿಂ ಚಿತ್ರಹಿಂಸೆಯ ವಿಷಯ ಎಂದು ಅವರೇ ಬಹಿರಂಗವಾಗಿ ಘೋಷಿಸಿದ್ದಾರೆ. ಜೊತೆಗೆ ಈ ಚಿತ್ರದ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವುದಕ್ಕೆ ಚಿತ್ರಕತೆ ಬರೆದಿರುವವರು ಮತ್ತು ಬಂಡವಾಳ ಹೂಡಿರುವ ಆರ್ಯದನ್ ಶೌಕತ್ ಅವರೇ ಕಾರಣ ಎಂದು ಒಪ್ಪಿಕೊಂಡಿದ್ದಾರೆ. ನಾವು ಭಾರತದಲ್ಲಿ ವಾಸಿಸುತ್ತಿದ್ದೇವೆ, ಇದು ಪ್ರಜಾಪ್ರಭುತ್ವ, ಜಾತ್ಯತೀತ ಮತ್ತು ಸಮಾಜವಾದಿ ದೇಶವಾಗಿದೆ. ಚಿತ್ರಕಥೆ ಬರೆಯುವವರ ಕುಲ ಮತ್ತು ಜನಾಂಗವನ್ನು ಆಧರಿಸಿ ಚಲನಚಿತ್ರವೊಂದನ್ನು ಪ್ರದರ್ಶಿಸಲು ಅನುಮತಿ ನೀಡಲಾಗುತ್ತಿದೆಯೇ? ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜಕೀಯದ ನಿಲುವುಗಳು ಏನೇ ಇದ್ದರೂ ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಅನ್ಯೋನ್ಯವಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ನಾವು ಈ ಚಿತ್ರದಲ್ಲಿ ನೀಡಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

“ಹಾಗಾಗಿ ಈ ವಾರವೇ ‘ವರ್ತಮಾನಂ’ ಸಿನಿಮಾವನ್ನು ಮುಂಬೈನ ಪ್ರಮಾಣೀಕರಣ ಮಂಡಳಿಯ ಪರಿಷ್ಕರಣಾ ಸಮಿತಿಗೆ ಕಳುಹಿಸಲಾಗುವುದು” ಎಂದು ಆರ್ಯದನ್‌ ಶೌಕತ್‌ ತಿಳಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ JNU ಆವರಣದಲ್ಲಿ ಹಿಂಸಾತ್ಮಕ ಘರ್ಷಣೆಗಳು ನಡೆದವು. ಪ್ರವೇಶ ಶುಲ್ಕ ಹೆಚ್ಚಳವನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಶಸ್ತ್ರಸಜ್ಜಿತವಾದ ಗುಂಪೊಂದು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿತ್ತು. ಈ ಸಂದರ್ಭದಲ್ಲಿ JNU ಕ್ಯಾಂಪಸ್‌ನಲ್ಲಿ ನಡೆದ ದೃಶ್ಯಗಳನ್ನು ಈ ಚಿತ್ರದಲ್ಲಿ ಅಳವಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಂಶೋಧಕಿಯ ಪಾತ್ರದಲ್ಲಿ ಪಾರ್ವತಿ ಕಾಣಿಸಿಕೊಂಡಿದ್ದು, ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಬಗ್ಗೆ ತಿಳಿದುಕೊಳ್ಳಲು ಜೆಎನ್‌ಯು ಕ್ಯಾಂಪಸ್‌ಗೆ ಅವರು ತೆರಳುವ ದೃಶ್ಯಗಳು ಇವೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...