Homeಮುಖಪುಟರೈಲಿನಲ್ಲಿ ಊರಿಗೆ ಕಳಿಸಲು ಮೂರು ಪಟ್ಟು ಹಣ ಪಡೆದು ವಂಚನೆ: ಬಿಜೆಪಿ ಮುಖಂಡನಿಗೆ ಕಾರ್ಮಿಕರಿಂದ ಹಲ್ಲೆ

ರೈಲಿನಲ್ಲಿ ಊರಿಗೆ ಕಳಿಸಲು ಮೂರು ಪಟ್ಟು ಹಣ ಪಡೆದು ವಂಚನೆ: ಬಿಜೆಪಿ ಮುಖಂಡನಿಗೆ ಕಾರ್ಮಿಕರಿಂದ ಹಲ್ಲೆ

- Advertisement -
- Advertisement -

ರೈಲಿನಲ್ಲಿ ಊರುಗಳಿಗೆ ಕಳಿಸುವುದಾಗಿ ವಲಸೆ ಕಾರ್ಮಿಕರಿಂದ ಮೂರುಪಟ್ಟು ಪ್ರಯಾಣ ದರ ಪಡೆದು ವಂಚಿಸಿದ ಬಿಜೆಪಿ ಮುಖಂಡನ ಮೇಲೆ ವಲಸೆ ಕಾರ್ಮಿಕರು ಹಲ್ಲೆ ನಡೆಸಿರುವ ಘಟನೆ ಗುಜರಾತ್ ರಾಜ್ಯದ ಸೂರತ್ ಜಿಲ್ಲೆಯ ಮೊರಾ ಗ್ರಾಮದಲ್ಲಿ ನಡೆದಿದೆ.

ಬಿಜೆಪಿ ಮುಖಂಡನ ವಂಚನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಲಸೆ ಕಾರ್ಮಿಕರು ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಅಶ್ರುವಾಯು ಸಿಡಿಸಿ ಪ್ರತಿಭಟನಾಕರರನ್ನು ಚದುರಿಸಿದ್ದಾರೆ.

ಬಿಜೆಪಿ ಮುಖಂಡ ರಾಜೇಶ್ ವರ್ಮಾ ವಲಸೆ ಕಾರ್ಮಿಕರನ್ನು ಅವರ ತವರು ಜಾರ್ಖಾಂಡ್ ಗೆ ಕಳಿಸಲು 100 ಕಾರ್ಮಿಕರಿಂದ ಪ್ರಯಾಣ ದರದ ಮೂರುಪಟ್ಟು ಹಣ ಪಡೆದಿದ್ದ ಎನ್ನಲಾಗಿದೆ. ಸೂರತ್ ನಿಂದ ಜಾರ್ಖಂಡ್ ಗೆ ಪ್ರತಿ ಪ್ರಯಾಣಿಕನಿಗೆ 750 ರೂ ದರ ಇದ್ದರೂ ಮೂರುಪಟ್ಟ ಹಣ ಪಡೆದಿದ್ದ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ರಾಜೇಶ್ ವರ್ಮಾನ ಕಚೇರಿಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮೇ 8ರ ಶುಕ್ರವಾರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ವರ್ಮಾ ಗಾಯಗೊಂಡಿರುವ ದೃಶ್ಯಗಳು ಕಂಡುಬಂದಿವೆ.

ಜಾರ್ಖಂಡ್ ಗೆ ಹೋಗಲು 100 ಜನರಿಂದ ಒಟ್ಟು 1.40 ಲಕ್ಷ ರೂಪಾಯಿ ವಸೂಲಿ ಮಾಡಿದ್ದನೆಂದು ಹೇಳಲಾಗಿದೆ. ಈ ಸಂಬಂಧ ಶನಿವಾರ ಬೆಳಗ್ಗೆ 40 ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಪಿಟಿಐ ವರದಿ ಮಾಡಿದೆ.

ಸೂರತ್ ಜಿಲ್ಲೆಯ ಹಜಿರಾ ನಗರದ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು ಈ ವೇಳೆ ಪೊಲೀಸ್ ವಾಹನಗಳ ಮೇಲೆ ಕಲ್ಲುತೂರಾಟ ನಡೆದಿದೆ ಎಂದು ವರದಿಗಳು ತಿಳಿಸಿವೆ. ಜಿಲ್ಲಾಡಳಿತವೇ ಪ್ರಯಾಣ ವ್ಯವಸ್ಥೆ ಮಾಡಬೇಕು ಎಂದು ಉತ್ತರಪ್ರದೇಶ, ಬಿಹಾರ, ಒಡಿಶಾ ಮತ್ತು ಇತರೆ ರಾಜ್ಯಗಳ ಕಾರ್ಮಿಕರು ಒತ್ತಾಯಿಸಿದ್ದಾರೆ.

ವಲಸೆ ಕಾರ್ಮಿಕರು ಹಜಿರಾ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು. ಇವರೆಲ್ಲರೂ ಮೊರಾ ಗ್ರಾಮದಲ್ಲಿ ನೆಲೆಸಿದ್ದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಪೊಲೀಸರು ಮತ್ತು ವಲಸೆ ಕಾರ್ಮಿಕರ ನಡುವೆ ಘರ್ಷಣೆ ನಡೆದಿದೆ. ತಮ್ಮ ಊರುಗಳಿಗೆ ಹಿಂದಿರುಗಲು ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಸೂರತ್ ನ ಇಂಡಸ್ಟ್ರಿಯಲ್ ಹಬ್ ನಲ್ಲಿ ವಾರದಿಂದಲೂ ಪ್ರತಿಭಟನೆಗಳು ನಡೆಯುತ್ತಲೇ ಇದ್ದು ಕಾರ್ಮಿಕರನ್ನು ಅವರ ಗ್ರಾಮಗಳಿಗೆ ತಲುಪಿಸಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...