Homeಕರ್ನಾಟಕಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಿಜೆಪಿ ಮುಖಂಡ ರಮೇಶ್‌ ದೂರು; ಶಾಂತಾರಾಮ್ ಪ್ರತಿಕ್ರಿಯೆ

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಿಜೆಪಿ ಮುಖಂಡ ರಮೇಶ್‌ ದೂರು; ಶಾಂತಾರಾಮ್ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತಾರಾಮ್ ಅವರ ವಿರುದ್ಧ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ಎನ್‌.ಆರ್‌.ರಮೇಶ್ ಅವರು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕೆ (ಸಕ್ಕರೆ) ಇಲಾಖೆ ಅಧೀನ ಕಾರ್ಯದರ್ಶಿಯೂ ಆಗಿರುವ ಶಾಂತಾರಾಮ್‌, ಒಪಿಎಸ್‌ (ಹಳೆಯ ಪಿಂಚಣಿ ಯೋಜನೆ) ಜಾರಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ‘ವೋಟ್‌ ಫಾರ್‌ ಒಪಿಎಸ್‌’ ಅಭಿಯಾನದಲ್ಲಿ ಸಕ್ರಿಯವಾಗಿದ್ದಾರೆ.

“ನಿರ್ದಿಷ್ಟ ರಾಜಕೀಯ ಪಕ್ಷಗಳ ಪರವಾಗಿ ಮತದಾನ ಮಾಡುವಂತೆ ಪ್ರೇರೇಪಿಸುವ ಹೇಳಿಕೆ ನೀಡಿ, ಚುನಾವಣಾ ನೀತಿ ನಿಯಮಗಳನ್ನು ಉಲ್ಲಂಘಿಸಿರುವ ಶಾಂತಾರಾಮ್‌ ಅವರನ್ನು ಅಮಾನತುಗೊಳಿಸಿ ಶಿಸ್ತುಕ್ರಮ ಕೈಗೊಳ್ಳಬೇಕು” ಎಂದು ಎನ್‌.ಆರ್‌.ರಮೇಶ್ ಒತ್ತಾಯಿಸಿದ್ದಾರೆ.

“ಕರ್ನಾಟಕದಲ್ಲಿ ಪ್ರಸ್ತುತ ಚುನಾವಣಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ. ಚುನಾವಣಾ ನೀತಿ ನಿಯಮಗಳಿಗೆ ವಿರುದ್ಧವಾಗಿ ಶಾಂತರಾಮ್‌ ಅವರು ತಮ್ಮ ಲೆಟರ್‌ ಹೆಡ್‌ನಲ್ಲಿ ಹೇಳಿಕೆಗಳನ್ನು ದಾಖಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಶಾಸಕಾಂಗಕ್ಕೆ ಇರುವ ಸಾಂವಿಧಾನಿಕ ಹಕ್ಕುಗಳನ್ನು ಶಾಂತಾರಾಮ್ ಪ್ರಶ್ನಿಸುವ ಜೊತೆಗೆ ಸಹೋದ್ಯೋಗಿಗಳನ್ನು ಪ್ರೇರೇಪಿಸುತ್ತಿದ್ದಾರೆ. ನಿರ್ದಿಷ್ಟ ಪಕ್ಷದ ಪರ ಮತ ಚಲಾಯಿಸುವಂತೆ ಹೇಳಿಕೆ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಶಾಂತಾರಾಮ್ ಅವರ ನಡವಳಿಕೆಯು ಪ್ರಜಾಪ್ರತಿನಿಧ್ಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಸರ್ಕಾರಿ ನೌಕರರು ಮುಂಬರುವ ವಿಧಾನಸಭಾ ಚುನಾವಣೆಯ ಕರ್ತವ್ಯಕ್ಕೆ ನೇಮಕಗೊಳ್ಳಲಿದ್ದು, ಶಾಂತಾರಾಮ ಅವರ ಪ್ರಚೋದಿತ ಹೇಳಿಕೆಗಳಿಂದ ಚುನಾವಣಾ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಶಾಂತಾರಾಮ್ ಅವರನ್ನು ಕೂಡಲೇ ಅಮಾನತು ಮಾಡಿ ಶಿಸ್ತುಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

ಶಾಂತಾರಾಮ್ ಪ್ರತಿಕ್ರಿಯೆ

ಬಿಜೆಪಿ ಮುಖಂಡ ರಮೇಶ್ ಅವರು ನೀಡಿರುವ ದೂರಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಶಾಂತಾರಾಮ್‌, “ರಮೇಶ್ ಅವರ ಮೇಲೆ ಗೌರವವಿದೆ. ಭ್ರಷ್ಟಾಚಾರದ ವಿರುದ್ಧ ಜನಪರವಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಅವರಾಗಿದ್ದಾರೆ. ನೌಕರರಿಗೆ ಪಿಂಚಣಿ ಇಲ್ಲವಾದರೆ ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂಬುದನ್ನು ಅವರು ಗಮನಿಸಬೇಕಿದೆ. ಅವರು ನಡೆಸುತ್ತಿರುವ ಹೋರಾಟದ ಭಾಗವಾಗಿಯೇ ನಾವು ಕೂಡ ನಡೆಯುತ್ತಿದ್ದೇವೆ” ಎಂದರು.

“ಸರ್ಕಾರಿ ನೌಕರರ ವಿಷಯದ ಕುರಿತು ಇವರಿಗೆ ಯಾರೋ ತಪ್ಪು ಸಂದೇಶ ನೀಡಿದಂತಿದೆ. ಎನ್‌ಪಿಎಸ್‌ (ಹೊಸ ಪಿಂಚಣಿ ಯೋಜನೆ) ರದ್ದುಗೊಳಿಸಿ, ಒಪಿಎಸ್‌ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸಿ ಎಂದು ಕಳೆದ ಎಂಟು ವರ್ಷಗಳಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನಿವೃತ್ತಿಯಾದವರಿಗೆ ಒಂದು ಬದುಕು ಕಟ್ಟಿಕೊಡಿ ಎಂದು ಕೇಳುತ್ತಿದ್ದೇವೆ. ನಾವು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ. ಸರ್ಕಾರಿ ನೌಕರರಾದ ನಮಗೆ ನಮ್ಮ ಜವಾಬ್ದಾರಿಗಳು ತಿಳಿದಿವೆ” ಎಂದು ಸ್ಪಷ್ಟಪಡಿಸಿದರು.

“‘ವೋಟ್‌ ಫಾರ್‌ ಒಪಿಎಸ್‌’ ಎಂಬ ಅಭಿಯಾನವು ರಾಷ್ಟ್ರೀಯ ಕಾರ್ಯಕ್ರಮದ ಭಾಗವಾಗಿದೆ. ಅದನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿದ್ದೇವೆ. ಸರ್ಕಾರಿ ನೌಕರರಿಗೆ ರಮೇಶ್ ಅವರ ಮೇಲೆ ಗೌರವವಿದೆ. ಅದನ್ನು ಹಾಳು ಮಾಡಿಸಬೇಕೆಂದು ಅವರಿಂದ ಈ ರೀತಿ ದೂರನ್ನು ಯಾರೋ ಕೊಡಿಸಿದ್ದಾರೆ. ಯಾರೋ ಮಿಸ್‌‌ಲೀಡ್‌ ಮಾಡಿದ್ದಾರೆ” ಎಂದು ತಿಳಿಸಿದರು.

“ನಮ್ಮ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ವೋಟ್‌ ಫಾರ್‌ ಒಪಿಎಸ್‌ ಹೋರಾಟಕ್ಕೆ ರಮೇಶ್ ಸೇರಿದಂತೆ ಎಲ್ಲರ ಸಹಕಾರ ಬೇಕಿದೆ. ಎನ್‌ಪಿಎಸ್‌ ಹೋರಾಟದ ಹಿನ್ನೆಲೆಯೇನು ಎಂಬುದು ರಮೇಶ್‌ ಅವರಿಗೆ ತಿಳಿದಿಲ್ಲ ಅನಿಸುತ್ತಿದೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...