Homeಕರ್ನಾಟಕಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಿಜೆಪಿ ಮುಖಂಡ ರಮೇಶ್‌ ದೂರು; ಶಾಂತಾರಾಮ್ ಪ್ರತಿಕ್ರಿಯೆ

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಿಜೆಪಿ ಮುಖಂಡ ರಮೇಶ್‌ ದೂರು; ಶಾಂತಾರಾಮ್ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತಾರಾಮ್ ಅವರ ವಿರುದ್ಧ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ಎನ್‌.ಆರ್‌.ರಮೇಶ್ ಅವರು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕೆ (ಸಕ್ಕರೆ) ಇಲಾಖೆ ಅಧೀನ ಕಾರ್ಯದರ್ಶಿಯೂ ಆಗಿರುವ ಶಾಂತಾರಾಮ್‌, ಒಪಿಎಸ್‌ (ಹಳೆಯ ಪಿಂಚಣಿ ಯೋಜನೆ) ಜಾರಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ‘ವೋಟ್‌ ಫಾರ್‌ ಒಪಿಎಸ್‌’ ಅಭಿಯಾನದಲ್ಲಿ ಸಕ್ರಿಯವಾಗಿದ್ದಾರೆ.

“ನಿರ್ದಿಷ್ಟ ರಾಜಕೀಯ ಪಕ್ಷಗಳ ಪರವಾಗಿ ಮತದಾನ ಮಾಡುವಂತೆ ಪ್ರೇರೇಪಿಸುವ ಹೇಳಿಕೆ ನೀಡಿ, ಚುನಾವಣಾ ನೀತಿ ನಿಯಮಗಳನ್ನು ಉಲ್ಲಂಘಿಸಿರುವ ಶಾಂತಾರಾಮ್‌ ಅವರನ್ನು ಅಮಾನತುಗೊಳಿಸಿ ಶಿಸ್ತುಕ್ರಮ ಕೈಗೊಳ್ಳಬೇಕು” ಎಂದು ಎನ್‌.ಆರ್‌.ರಮೇಶ್ ಒತ್ತಾಯಿಸಿದ್ದಾರೆ.

“ಕರ್ನಾಟಕದಲ್ಲಿ ಪ್ರಸ್ತುತ ಚುನಾವಣಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ. ಚುನಾವಣಾ ನೀತಿ ನಿಯಮಗಳಿಗೆ ವಿರುದ್ಧವಾಗಿ ಶಾಂತರಾಮ್‌ ಅವರು ತಮ್ಮ ಲೆಟರ್‌ ಹೆಡ್‌ನಲ್ಲಿ ಹೇಳಿಕೆಗಳನ್ನು ದಾಖಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಶಾಸಕಾಂಗಕ್ಕೆ ಇರುವ ಸಾಂವಿಧಾನಿಕ ಹಕ್ಕುಗಳನ್ನು ಶಾಂತಾರಾಮ್ ಪ್ರಶ್ನಿಸುವ ಜೊತೆಗೆ ಸಹೋದ್ಯೋಗಿಗಳನ್ನು ಪ್ರೇರೇಪಿಸುತ್ತಿದ್ದಾರೆ. ನಿರ್ದಿಷ್ಟ ಪಕ್ಷದ ಪರ ಮತ ಚಲಾಯಿಸುವಂತೆ ಹೇಳಿಕೆ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಶಾಂತಾರಾಮ್ ಅವರ ನಡವಳಿಕೆಯು ಪ್ರಜಾಪ್ರತಿನಿಧ್ಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಸರ್ಕಾರಿ ನೌಕರರು ಮುಂಬರುವ ವಿಧಾನಸಭಾ ಚುನಾವಣೆಯ ಕರ್ತವ್ಯಕ್ಕೆ ನೇಮಕಗೊಳ್ಳಲಿದ್ದು, ಶಾಂತಾರಾಮ ಅವರ ಪ್ರಚೋದಿತ ಹೇಳಿಕೆಗಳಿಂದ ಚುನಾವಣಾ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಶಾಂತಾರಾಮ್ ಅವರನ್ನು ಕೂಡಲೇ ಅಮಾನತು ಮಾಡಿ ಶಿಸ್ತುಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

ಶಾಂತಾರಾಮ್ ಪ್ರತಿಕ್ರಿಯೆ

ಬಿಜೆಪಿ ಮುಖಂಡ ರಮೇಶ್ ಅವರು ನೀಡಿರುವ ದೂರಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಶಾಂತಾರಾಮ್‌, “ರಮೇಶ್ ಅವರ ಮೇಲೆ ಗೌರವವಿದೆ. ಭ್ರಷ್ಟಾಚಾರದ ವಿರುದ್ಧ ಜನಪರವಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಅವರಾಗಿದ್ದಾರೆ. ನೌಕರರಿಗೆ ಪಿಂಚಣಿ ಇಲ್ಲವಾದರೆ ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂಬುದನ್ನು ಅವರು ಗಮನಿಸಬೇಕಿದೆ. ಅವರು ನಡೆಸುತ್ತಿರುವ ಹೋರಾಟದ ಭಾಗವಾಗಿಯೇ ನಾವು ಕೂಡ ನಡೆಯುತ್ತಿದ್ದೇವೆ” ಎಂದರು.

“ಸರ್ಕಾರಿ ನೌಕರರ ವಿಷಯದ ಕುರಿತು ಇವರಿಗೆ ಯಾರೋ ತಪ್ಪು ಸಂದೇಶ ನೀಡಿದಂತಿದೆ. ಎನ್‌ಪಿಎಸ್‌ (ಹೊಸ ಪಿಂಚಣಿ ಯೋಜನೆ) ರದ್ದುಗೊಳಿಸಿ, ಒಪಿಎಸ್‌ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸಿ ಎಂದು ಕಳೆದ ಎಂಟು ವರ್ಷಗಳಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನಿವೃತ್ತಿಯಾದವರಿಗೆ ಒಂದು ಬದುಕು ಕಟ್ಟಿಕೊಡಿ ಎಂದು ಕೇಳುತ್ತಿದ್ದೇವೆ. ನಾವು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ. ಸರ್ಕಾರಿ ನೌಕರರಾದ ನಮಗೆ ನಮ್ಮ ಜವಾಬ್ದಾರಿಗಳು ತಿಳಿದಿವೆ” ಎಂದು ಸ್ಪಷ್ಟಪಡಿಸಿದರು.

“‘ವೋಟ್‌ ಫಾರ್‌ ಒಪಿಎಸ್‌’ ಎಂಬ ಅಭಿಯಾನವು ರಾಷ್ಟ್ರೀಯ ಕಾರ್ಯಕ್ರಮದ ಭಾಗವಾಗಿದೆ. ಅದನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿದ್ದೇವೆ. ಸರ್ಕಾರಿ ನೌಕರರಿಗೆ ರಮೇಶ್ ಅವರ ಮೇಲೆ ಗೌರವವಿದೆ. ಅದನ್ನು ಹಾಳು ಮಾಡಿಸಬೇಕೆಂದು ಅವರಿಂದ ಈ ರೀತಿ ದೂರನ್ನು ಯಾರೋ ಕೊಡಿಸಿದ್ದಾರೆ. ಯಾರೋ ಮಿಸ್‌‌ಲೀಡ್‌ ಮಾಡಿದ್ದಾರೆ” ಎಂದು ತಿಳಿಸಿದರು.

“ನಮ್ಮ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ವೋಟ್‌ ಫಾರ್‌ ಒಪಿಎಸ್‌ ಹೋರಾಟಕ್ಕೆ ರಮೇಶ್ ಸೇರಿದಂತೆ ಎಲ್ಲರ ಸಹಕಾರ ಬೇಕಿದೆ. ಎನ್‌ಪಿಎಸ್‌ ಹೋರಾಟದ ಹಿನ್ನೆಲೆಯೇನು ಎಂಬುದು ರಮೇಶ್‌ ಅವರಿಗೆ ತಿಳಿದಿಲ್ಲ ಅನಿಸುತ್ತಿದೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...