Homeಕರ್ನಾಟಕಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಿಜೆಪಿ ಮುಖಂಡ ರಮೇಶ್‌ ದೂರು; ಶಾಂತಾರಾಮ್ ಪ್ರತಿಕ್ರಿಯೆ

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಬಿಜೆಪಿ ಮುಖಂಡ ರಮೇಶ್‌ ದೂರು; ಶಾಂತಾರಾಮ್ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶಾಂತಾರಾಮ್ ಅವರ ವಿರುದ್ಧ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ಎನ್‌.ಆರ್‌.ರಮೇಶ್ ಅವರು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕೆ (ಸಕ್ಕರೆ) ಇಲಾಖೆ ಅಧೀನ ಕಾರ್ಯದರ್ಶಿಯೂ ಆಗಿರುವ ಶಾಂತಾರಾಮ್‌, ಒಪಿಎಸ್‌ (ಹಳೆಯ ಪಿಂಚಣಿ ಯೋಜನೆ) ಜಾರಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ‘ವೋಟ್‌ ಫಾರ್‌ ಒಪಿಎಸ್‌’ ಅಭಿಯಾನದಲ್ಲಿ ಸಕ್ರಿಯವಾಗಿದ್ದಾರೆ.

“ನಿರ್ದಿಷ್ಟ ರಾಜಕೀಯ ಪಕ್ಷಗಳ ಪರವಾಗಿ ಮತದಾನ ಮಾಡುವಂತೆ ಪ್ರೇರೇಪಿಸುವ ಹೇಳಿಕೆ ನೀಡಿ, ಚುನಾವಣಾ ನೀತಿ ನಿಯಮಗಳನ್ನು ಉಲ್ಲಂಘಿಸಿರುವ ಶಾಂತಾರಾಮ್‌ ಅವರನ್ನು ಅಮಾನತುಗೊಳಿಸಿ ಶಿಸ್ತುಕ್ರಮ ಕೈಗೊಳ್ಳಬೇಕು” ಎಂದು ಎನ್‌.ಆರ್‌.ರಮೇಶ್ ಒತ್ತಾಯಿಸಿದ್ದಾರೆ.

“ಕರ್ನಾಟಕದಲ್ಲಿ ಪ್ರಸ್ತುತ ಚುನಾವಣಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ. ಚುನಾವಣಾ ನೀತಿ ನಿಯಮಗಳಿಗೆ ವಿರುದ್ಧವಾಗಿ ಶಾಂತರಾಮ್‌ ಅವರು ತಮ್ಮ ಲೆಟರ್‌ ಹೆಡ್‌ನಲ್ಲಿ ಹೇಳಿಕೆಗಳನ್ನು ದಾಖಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಶಾಸಕಾಂಗಕ್ಕೆ ಇರುವ ಸಾಂವಿಧಾನಿಕ ಹಕ್ಕುಗಳನ್ನು ಶಾಂತಾರಾಮ್ ಪ್ರಶ್ನಿಸುವ ಜೊತೆಗೆ ಸಹೋದ್ಯೋಗಿಗಳನ್ನು ಪ್ರೇರೇಪಿಸುತ್ತಿದ್ದಾರೆ. ನಿರ್ದಿಷ್ಟ ಪಕ್ಷದ ಪರ ಮತ ಚಲಾಯಿಸುವಂತೆ ಹೇಳಿಕೆ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಶಾಂತಾರಾಮ್ ಅವರ ನಡವಳಿಕೆಯು ಪ್ರಜಾಪ್ರತಿನಿಧ್ಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಸರ್ಕಾರಿ ನೌಕರರು ಮುಂಬರುವ ವಿಧಾನಸಭಾ ಚುನಾವಣೆಯ ಕರ್ತವ್ಯಕ್ಕೆ ನೇಮಕಗೊಳ್ಳಲಿದ್ದು, ಶಾಂತಾರಾಮ ಅವರ ಪ್ರಚೋದಿತ ಹೇಳಿಕೆಗಳಿಂದ ಚುನಾವಣಾ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಶಾಂತಾರಾಮ್ ಅವರನ್ನು ಕೂಡಲೇ ಅಮಾನತು ಮಾಡಿ ಶಿಸ್ತುಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಕೋರಲಾಗಿದೆ.

ಶಾಂತಾರಾಮ್ ಪ್ರತಿಕ್ರಿಯೆ

ಬಿಜೆಪಿ ಮುಖಂಡ ರಮೇಶ್ ಅವರು ನೀಡಿರುವ ದೂರಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿರುವ ಶಾಂತಾರಾಮ್‌, “ರಮೇಶ್ ಅವರ ಮೇಲೆ ಗೌರವವಿದೆ. ಭ್ರಷ್ಟಾಚಾರದ ವಿರುದ್ಧ ಜನಪರವಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಅವರಾಗಿದ್ದಾರೆ. ನೌಕರರಿಗೆ ಪಿಂಚಣಿ ಇಲ್ಲವಾದರೆ ಭ್ರಷ್ಟಾಚಾರಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂಬುದನ್ನು ಅವರು ಗಮನಿಸಬೇಕಿದೆ. ಅವರು ನಡೆಸುತ್ತಿರುವ ಹೋರಾಟದ ಭಾಗವಾಗಿಯೇ ನಾವು ಕೂಡ ನಡೆಯುತ್ತಿದ್ದೇವೆ” ಎಂದರು.

“ಸರ್ಕಾರಿ ನೌಕರರ ವಿಷಯದ ಕುರಿತು ಇವರಿಗೆ ಯಾರೋ ತಪ್ಪು ಸಂದೇಶ ನೀಡಿದಂತಿದೆ. ಎನ್‌ಪಿಎಸ್‌ (ಹೊಸ ಪಿಂಚಣಿ ಯೋಜನೆ) ರದ್ದುಗೊಳಿಸಿ, ಒಪಿಎಸ್‌ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸಿ ಎಂದು ಕಳೆದ ಎಂಟು ವರ್ಷಗಳಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನಿವೃತ್ತಿಯಾದವರಿಗೆ ಒಂದು ಬದುಕು ಕಟ್ಟಿಕೊಡಿ ಎಂದು ಕೇಳುತ್ತಿದ್ದೇವೆ. ನಾವು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ. ಸರ್ಕಾರಿ ನೌಕರರಾದ ನಮಗೆ ನಮ್ಮ ಜವಾಬ್ದಾರಿಗಳು ತಿಳಿದಿವೆ” ಎಂದು ಸ್ಪಷ್ಟಪಡಿಸಿದರು.

“‘ವೋಟ್‌ ಫಾರ್‌ ಒಪಿಎಸ್‌’ ಎಂಬ ಅಭಿಯಾನವು ರಾಷ್ಟ್ರೀಯ ಕಾರ್ಯಕ್ರಮದ ಭಾಗವಾಗಿದೆ. ಅದನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿದ್ದೇವೆ. ಸರ್ಕಾರಿ ನೌಕರರಿಗೆ ರಮೇಶ್ ಅವರ ಮೇಲೆ ಗೌರವವಿದೆ. ಅದನ್ನು ಹಾಳು ಮಾಡಿಸಬೇಕೆಂದು ಅವರಿಂದ ಈ ರೀತಿ ದೂರನ್ನು ಯಾರೋ ಕೊಡಿಸಿದ್ದಾರೆ. ಯಾರೋ ಮಿಸ್‌‌ಲೀಡ್‌ ಮಾಡಿದ್ದಾರೆ” ಎಂದು ತಿಳಿಸಿದರು.

“ನಮ್ಮ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ವೋಟ್‌ ಫಾರ್‌ ಒಪಿಎಸ್‌ ಹೋರಾಟಕ್ಕೆ ರಮೇಶ್ ಸೇರಿದಂತೆ ಎಲ್ಲರ ಸಹಕಾರ ಬೇಕಿದೆ. ಎನ್‌ಪಿಎಸ್‌ ಹೋರಾಟದ ಹಿನ್ನೆಲೆಯೇನು ಎಂಬುದು ರಮೇಶ್‌ ಅವರಿಗೆ ತಿಳಿದಿಲ್ಲ ಅನಿಸುತ್ತಿದೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...