Homeಮುಖಪುಟಅಲಿಗಡ ಕಳ್ಳಭಟ್ಟಿ ದುರಂತದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ರಿಷಿ ಶರ್ಮಾ ಬಂಧನ

ಅಲಿಗಡ ಕಳ್ಳಭಟ್ಟಿ ದುರಂತದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ರಿಷಿ ಶರ್ಮಾ ಬಂಧನ

- Advertisement -
- Advertisement -

100 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಅಲಿಗಡ ಕಳ್ಳಭಟ್ಟಿ ದುರಂತ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಮುಖಂಡ ರಿಷಿ ಶರ್ಮಾನನ್ನು ಪೊಲೀಸರು ಭಾನುವಾರ ಬೆಳಗ್ಗೆ ಬುಲಂದ್‌ಶಹರ್ ಗಡಿ ಬಳಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂತಹ ದುರಂತಕ್ಕೆ ಕಾರಣವಾಗಿದ್ದ ರಿಷಿ ಶರ್ಮಾ, ಸುಮಾರು 10 ದಿನಗಳ ಕಾಲ ತಲೆ ಮರೆಸಿಕೊಂಡಿದ್ದು, ಈತನನ್ನು ಪತ್ತೆ ಹಚ್ಚಿದವರಿಗೆ 1 ಲಕ್ಷ ಬಹುಮಾನವನ್ನೂ ಪೊಲೀಸರು ಘೋಷಿಸಿದ್ದರು. ಬಂಧಿತ ರಿಷಿ ಶರ್ಮಾ ಅವರ ಪತ್ನಿ ಮತ್ತು ಮಗನನ್ನು ಈ ಹಿಂದೆಯೇ ಬಂಧಿಸಲಾಗಿತ್ತು.

“ಕಳೆದ 10 ದಿನಗಳಿಂದ ಉತ್ತರಾಖಂಡ, ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಪೊಲೀಸರು ಸುಮಾರು 500 ದೂರವಾಣಿ ಕರೆ ವಿವರಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿತ್ತು, ಸುಮಾರು 100 ಮಾಹಿತಿದಾರರನ್ನು ಸಕ್ರಿಯಗೊಳಿಸಿ, ಆರು ಪೊಲೀಸ್ ತಂಡಗಳನ್ನು ರಿಷಿ ಶರ್ಮಾ ಅವರನ್ನು ಬಂಧಿಸಲು ರಚಿಸಲಾಗಿತ್ತು” ಎಂದು ಅಲಿಗಡದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಲಾನಿಧಿ ನೈಥಾನಿ ಹೇಳಿದ್ದಾರೆ.

ಇದನ್ನೂ ಓದಿ: ನಾಗರಿಕನ ಗುಂಡಿಕ್ಕಿ ಕೊಂದ ಅರೆಸೈನಿಕ ಪಡೆ; ಕ್ಯಾಂಪ್‌ಗೆ ಬೆಂಕಿಯಿಟ್ಟ ಆಕ್ರೋಶಿತರು

“ನಾವು ಈಗಾಗಲೇ ವಿಪಿನ್ ಯಾದವ್ ಅವರನ್ನು ಬಂಧಿಸಿದ್ದೇವೆ, ಆತನನ್ನು ಪತ್ತೆ ಹಚ್ಚಿದರೆ 50,000 ರೂಪಾಯಿ ಬಹುಮಾನ, ಅನಿಲ್ ಚೌಧರಿ ಮತ್ತು ಅವರ ಸೋದರ ಮಾವ ನೀರಜ್ ಚೌಧರಿ ಅವರನ್ನು ಪತ್ತೆ ಹಚ್ಚಿದರೆ 25,000 ರೂಪಾಯಿ ಬಹುಮಾನ, ಮುನಿಶ್ ಶರ್ಮಾ (ರಿಷಿ ಶರ್ಮಾ ಅವರ ಸಹೋದರ) ಮತ್ತು ಶಿವ ಕುಮಾರ್ ಪತ್ತೆ ಹಚ್ಚಿದರೆ 25,000 ರೂಪಾಯಿ ಬಹುಮಾನ ಘೋಷಿಸಲಾಗಿತ್ತು” ಎಂದ ಪೊಲೀಸರು ಹೇಳಿದ್ದಾರೆ.

ಇದು ಕಳ್ಳಭಟ್ಟಿ ಎಂದು ಅಧಿಕಾರಿಗಳು ಘೋಷಿಸಿದ ಬೆನ್ನಲ್ಲೇ ಮದ್ಯವನ್ನು ಮಾರುಕಟ್ಟೆಯಿಂದ ತೆಗೆದುಹಾಕಲಾಗಿದೆ. ಅಷ್ಟರಲ್ಲಿ ಅಲಿಗಡದಾದ್ಯಂತ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪೊಲೀಸರು ದಾಳಿ ಪ್ರಾರಂಭಿಸಿದ ನಂತರ ಮದ್ಯವನ್ನು ಕಾಲುವೆಗಳಲ್ಲಿ ಮತ್ತು ದೂರದ ಸ್ಥಳಗಳಲ್ಲಿ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ಮದ್ಯದ ಬಾಟಲಿಗಳನ್ನು ಹುಡುಕಲು ಗಂಗಾ ಕಾಲುವೆಯಲ್ಲಿ ನೀರಿನ ಹರಿವನ್ನು ನಿಲ್ಲಿಸುವಂತೆ ನೀರಾವರಿ ಇಲಾಖೆಗೆ ತಿಳಿಳಿ, ಹತ್ತಿರದ ಜಿಲ್ಲೆಗಳಾದ ಹತ್ರಾಸ್, ಮಥುರಾ ಮತ್ತು ಇಟಾಗಳ ಪೊಲೀಸರಿಗೂ ಮಾಹಿತಿ ನೀಡಲಾಯಿತು. ಕಳೆದ ಶನಿವಾರ ಹಥಾರಸ್ ಜಿಲ್ಲೆಯ ಕಾಲುವೆಯಿಂದ 530 ಕ್ವಾರ್ಟರ್ ಮದ್ಯ ಪತ್ತೆಯಾಗಿದೆ. ಈ ಸಂಬಂಧ ಕೆಲವು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಅಲಿಗಡ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ ಮತ್ತು 61 ಜನರನ್ನು ಬಂಧಿಸಲಾಗಿದೆ ಎಂದು ನೈಥಾನಿ ಹೇಳಿದರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಕೋಟಿ ಮೌಲ್ಯದ ಆಸ್ತಿಯನ್ನು ಅಲಿಗಡ ಆಡಳಿತವು ನೆಲಸಮಗೊಳಿಸಿದೆ. 100 ಕೋಟಿ ಮೌಲ್ಯದ ಹೆಚ್ಚಿನ ಆಸ್ತಿಗಳನ್ನು ಗುರುತಿಸಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....