Homeಮುಖಪುಟಅಲಿಗಡ ಕಳ್ಳಭಟ್ಟಿ ದುರಂತದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ರಿಷಿ ಶರ್ಮಾ ಬಂಧನ

ಅಲಿಗಡ ಕಳ್ಳಭಟ್ಟಿ ದುರಂತದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ರಿಷಿ ಶರ್ಮಾ ಬಂಧನ

- Advertisement -
- Advertisement -

100 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಅಲಿಗಡ ಕಳ್ಳಭಟ್ಟಿ ದುರಂತ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಮುಖಂಡ ರಿಷಿ ಶರ್ಮಾನನ್ನು ಪೊಲೀಸರು ಭಾನುವಾರ ಬೆಳಗ್ಗೆ ಬುಲಂದ್‌ಶಹರ್ ಗಡಿ ಬಳಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂತಹ ದುರಂತಕ್ಕೆ ಕಾರಣವಾಗಿದ್ದ ರಿಷಿ ಶರ್ಮಾ, ಸುಮಾರು 10 ದಿನಗಳ ಕಾಲ ತಲೆ ಮರೆಸಿಕೊಂಡಿದ್ದು, ಈತನನ್ನು ಪತ್ತೆ ಹಚ್ಚಿದವರಿಗೆ 1 ಲಕ್ಷ ಬಹುಮಾನವನ್ನೂ ಪೊಲೀಸರು ಘೋಷಿಸಿದ್ದರು. ಬಂಧಿತ ರಿಷಿ ಶರ್ಮಾ ಅವರ ಪತ್ನಿ ಮತ್ತು ಮಗನನ್ನು ಈ ಹಿಂದೆಯೇ ಬಂಧಿಸಲಾಗಿತ್ತು.

“ಕಳೆದ 10 ದಿನಗಳಿಂದ ಉತ್ತರಾಖಂಡ, ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಪೊಲೀಸರು ಸುಮಾರು 500 ದೂರವಾಣಿ ಕರೆ ವಿವರಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿತ್ತು, ಸುಮಾರು 100 ಮಾಹಿತಿದಾರರನ್ನು ಸಕ್ರಿಯಗೊಳಿಸಿ, ಆರು ಪೊಲೀಸ್ ತಂಡಗಳನ್ನು ರಿಷಿ ಶರ್ಮಾ ಅವರನ್ನು ಬಂಧಿಸಲು ರಚಿಸಲಾಗಿತ್ತು” ಎಂದು ಅಲಿಗಡದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಲಾನಿಧಿ ನೈಥಾನಿ ಹೇಳಿದ್ದಾರೆ.

ಇದನ್ನೂ ಓದಿ: ನಾಗರಿಕನ ಗುಂಡಿಕ್ಕಿ ಕೊಂದ ಅರೆಸೈನಿಕ ಪಡೆ; ಕ್ಯಾಂಪ್‌ಗೆ ಬೆಂಕಿಯಿಟ್ಟ ಆಕ್ರೋಶಿತರು

“ನಾವು ಈಗಾಗಲೇ ವಿಪಿನ್ ಯಾದವ್ ಅವರನ್ನು ಬಂಧಿಸಿದ್ದೇವೆ, ಆತನನ್ನು ಪತ್ತೆ ಹಚ್ಚಿದರೆ 50,000 ರೂಪಾಯಿ ಬಹುಮಾನ, ಅನಿಲ್ ಚೌಧರಿ ಮತ್ತು ಅವರ ಸೋದರ ಮಾವ ನೀರಜ್ ಚೌಧರಿ ಅವರನ್ನು ಪತ್ತೆ ಹಚ್ಚಿದರೆ 25,000 ರೂಪಾಯಿ ಬಹುಮಾನ, ಮುನಿಶ್ ಶರ್ಮಾ (ರಿಷಿ ಶರ್ಮಾ ಅವರ ಸಹೋದರ) ಮತ್ತು ಶಿವ ಕುಮಾರ್ ಪತ್ತೆ ಹಚ್ಚಿದರೆ 25,000 ರೂಪಾಯಿ ಬಹುಮಾನ ಘೋಷಿಸಲಾಗಿತ್ತು” ಎಂದ ಪೊಲೀಸರು ಹೇಳಿದ್ದಾರೆ.

ಇದು ಕಳ್ಳಭಟ್ಟಿ ಎಂದು ಅಧಿಕಾರಿಗಳು ಘೋಷಿಸಿದ ಬೆನ್ನಲ್ಲೇ ಮದ್ಯವನ್ನು ಮಾರುಕಟ್ಟೆಯಿಂದ ತೆಗೆದುಹಾಕಲಾಗಿದೆ. ಅಷ್ಟರಲ್ಲಿ ಅಲಿಗಡದಾದ್ಯಂತ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪೊಲೀಸರು ದಾಳಿ ಪ್ರಾರಂಭಿಸಿದ ನಂತರ ಮದ್ಯವನ್ನು ಕಾಲುವೆಗಳಲ್ಲಿ ಮತ್ತು ದೂರದ ಸ್ಥಳಗಳಲ್ಲಿ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ಮದ್ಯದ ಬಾಟಲಿಗಳನ್ನು ಹುಡುಕಲು ಗಂಗಾ ಕಾಲುವೆಯಲ್ಲಿ ನೀರಿನ ಹರಿವನ್ನು ನಿಲ್ಲಿಸುವಂತೆ ನೀರಾವರಿ ಇಲಾಖೆಗೆ ತಿಳಿಳಿ, ಹತ್ತಿರದ ಜಿಲ್ಲೆಗಳಾದ ಹತ್ರಾಸ್, ಮಥುರಾ ಮತ್ತು ಇಟಾಗಳ ಪೊಲೀಸರಿಗೂ ಮಾಹಿತಿ ನೀಡಲಾಯಿತು. ಕಳೆದ ಶನಿವಾರ ಹಥಾರಸ್ ಜಿಲ್ಲೆಯ ಕಾಲುವೆಯಿಂದ 530 ಕ್ವಾರ್ಟರ್ ಮದ್ಯ ಪತ್ತೆಯಾಗಿದೆ. ಈ ಸಂಬಂಧ ಕೆಲವು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಅಲಿಗಡ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ ಮತ್ತು 61 ಜನರನ್ನು ಬಂಧಿಸಲಾಗಿದೆ ಎಂದು ನೈಥಾನಿ ಹೇಳಿದರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಕೋಟಿ ಮೌಲ್ಯದ ಆಸ್ತಿಯನ್ನು ಅಲಿಗಡ ಆಡಳಿತವು ನೆಲಸಮಗೊಳಿಸಿದೆ. 100 ಕೋಟಿ ಮೌಲ್ಯದ ಹೆಚ್ಚಿನ ಆಸ್ತಿಗಳನ್ನು ಗುರುತಿಸಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...