Homeಮುಖಪುಟಅಲಿಗಡ ಕಳ್ಳಭಟ್ಟಿ ದುರಂತದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ರಿಷಿ ಶರ್ಮಾ ಬಂಧನ

ಅಲಿಗಡ ಕಳ್ಳಭಟ್ಟಿ ದುರಂತದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ರಿಷಿ ಶರ್ಮಾ ಬಂಧನ

- Advertisement -
- Advertisement -

100 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಅಲಿಗಡ ಕಳ್ಳಭಟ್ಟಿ ದುರಂತ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಮುಖಂಡ ರಿಷಿ ಶರ್ಮಾನನ್ನು ಪೊಲೀಸರು ಭಾನುವಾರ ಬೆಳಗ್ಗೆ ಬುಲಂದ್‌ಶಹರ್ ಗಡಿ ಬಳಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂತಹ ದುರಂತಕ್ಕೆ ಕಾರಣವಾಗಿದ್ದ ರಿಷಿ ಶರ್ಮಾ, ಸುಮಾರು 10 ದಿನಗಳ ಕಾಲ ತಲೆ ಮರೆಸಿಕೊಂಡಿದ್ದು, ಈತನನ್ನು ಪತ್ತೆ ಹಚ್ಚಿದವರಿಗೆ 1 ಲಕ್ಷ ಬಹುಮಾನವನ್ನೂ ಪೊಲೀಸರು ಘೋಷಿಸಿದ್ದರು. ಬಂಧಿತ ರಿಷಿ ಶರ್ಮಾ ಅವರ ಪತ್ನಿ ಮತ್ತು ಮಗನನ್ನು ಈ ಹಿಂದೆಯೇ ಬಂಧಿಸಲಾಗಿತ್ತು.

“ಕಳೆದ 10 ದಿನಗಳಿಂದ ಉತ್ತರಾಖಂಡ, ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಪೊಲೀಸರು ಸುಮಾರು 500 ದೂರವಾಣಿ ಕರೆ ವಿವರಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿತ್ತು, ಸುಮಾರು 100 ಮಾಹಿತಿದಾರರನ್ನು ಸಕ್ರಿಯಗೊಳಿಸಿ, ಆರು ಪೊಲೀಸ್ ತಂಡಗಳನ್ನು ರಿಷಿ ಶರ್ಮಾ ಅವರನ್ನು ಬಂಧಿಸಲು ರಚಿಸಲಾಗಿತ್ತು” ಎಂದು ಅಲಿಗಡದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಲಾನಿಧಿ ನೈಥಾನಿ ಹೇಳಿದ್ದಾರೆ.

ಇದನ್ನೂ ಓದಿ: ನಾಗರಿಕನ ಗುಂಡಿಕ್ಕಿ ಕೊಂದ ಅರೆಸೈನಿಕ ಪಡೆ; ಕ್ಯಾಂಪ್‌ಗೆ ಬೆಂಕಿಯಿಟ್ಟ ಆಕ್ರೋಶಿತರು

“ನಾವು ಈಗಾಗಲೇ ವಿಪಿನ್ ಯಾದವ್ ಅವರನ್ನು ಬಂಧಿಸಿದ್ದೇವೆ, ಆತನನ್ನು ಪತ್ತೆ ಹಚ್ಚಿದರೆ 50,000 ರೂಪಾಯಿ ಬಹುಮಾನ, ಅನಿಲ್ ಚೌಧರಿ ಮತ್ತು ಅವರ ಸೋದರ ಮಾವ ನೀರಜ್ ಚೌಧರಿ ಅವರನ್ನು ಪತ್ತೆ ಹಚ್ಚಿದರೆ 25,000 ರೂಪಾಯಿ ಬಹುಮಾನ, ಮುನಿಶ್ ಶರ್ಮಾ (ರಿಷಿ ಶರ್ಮಾ ಅವರ ಸಹೋದರ) ಮತ್ತು ಶಿವ ಕುಮಾರ್ ಪತ್ತೆ ಹಚ್ಚಿದರೆ 25,000 ರೂಪಾಯಿ ಬಹುಮಾನ ಘೋಷಿಸಲಾಗಿತ್ತು” ಎಂದ ಪೊಲೀಸರು ಹೇಳಿದ್ದಾರೆ.

ಇದು ಕಳ್ಳಭಟ್ಟಿ ಎಂದು ಅಧಿಕಾರಿಗಳು ಘೋಷಿಸಿದ ಬೆನ್ನಲ್ಲೇ ಮದ್ಯವನ್ನು ಮಾರುಕಟ್ಟೆಯಿಂದ ತೆಗೆದುಹಾಕಲಾಗಿದೆ. ಅಷ್ಟರಲ್ಲಿ ಅಲಿಗಡದಾದ್ಯಂತ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪೊಲೀಸರು ದಾಳಿ ಪ್ರಾರಂಭಿಸಿದ ನಂತರ ಮದ್ಯವನ್ನು ಕಾಲುವೆಗಳಲ್ಲಿ ಮತ್ತು ದೂರದ ಸ್ಥಳಗಳಲ್ಲಿ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

ಮದ್ಯದ ಬಾಟಲಿಗಳನ್ನು ಹುಡುಕಲು ಗಂಗಾ ಕಾಲುವೆಯಲ್ಲಿ ನೀರಿನ ಹರಿವನ್ನು ನಿಲ್ಲಿಸುವಂತೆ ನೀರಾವರಿ ಇಲಾಖೆಗೆ ತಿಳಿಳಿ, ಹತ್ತಿರದ ಜಿಲ್ಲೆಗಳಾದ ಹತ್ರಾಸ್, ಮಥುರಾ ಮತ್ತು ಇಟಾಗಳ ಪೊಲೀಸರಿಗೂ ಮಾಹಿತಿ ನೀಡಲಾಯಿತು. ಕಳೆದ ಶನಿವಾರ ಹಥಾರಸ್ ಜಿಲ್ಲೆಯ ಕಾಲುವೆಯಿಂದ 530 ಕ್ವಾರ್ಟರ್ ಮದ್ಯ ಪತ್ತೆಯಾಗಿದೆ. ಈ ಸಂಬಂಧ ಕೆಲವು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಅಲಿಗಡ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಪ್ರಕರಣಗಳು ದಾಖಲಾಗಿವೆ ಮತ್ತು 61 ಜನರನ್ನು ಬಂಧಿಸಲಾಗಿದೆ ಎಂದು ನೈಥಾನಿ ಹೇಳಿದರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಕೋಟಿ ಮೌಲ್ಯದ ಆಸ್ತಿಯನ್ನು ಅಲಿಗಡ ಆಡಳಿತವು ನೆಲಸಮಗೊಳಿಸಿದೆ. 100 ಕೋಟಿ ಮೌಲ್ಯದ ಹೆಚ್ಚಿನ ಆಸ್ತಿಗಳನ್ನು ಗುರುತಿಸಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...