Homeಕರ್ನಾಟಕವಚನಗಳನ್ನು ತಿರುಚುವ ಸಾಹಸ ಬೇಡ : ಬಿಎಲ್‌ ಸಂತೋಷ್‌ಗೆ ಎಂ.ಬಿ. ಪಾಟೀಲ್ ಎಚ್ಚರಿಕೆ

ವಚನಗಳನ್ನು ತಿರುಚುವ ಸಾಹಸ ಬೇಡ : ಬಿಎಲ್‌ ಸಂತೋಷ್‌ಗೆ ಎಂ.ಬಿ. ಪಾಟೀಲ್ ಎಚ್ಚರಿಕೆ

ಸಂಘ ಪರಿವಾರದ 'ವಚನ ದರ್ಶನ' ವಿರುದ್ದ ಕಿಡಿಕಾರಿದ ಸಚಿವ

- Advertisement -
- Advertisement -

“ಸಂಘ ಪರಿವಾರದವರು ‘ವಚನ ದರ್ಶನ’ ಪುಸ್ತಕದ ಮೂಲಕ ನಮ್ಮ ವಚನಗಳನ್ನು ತಿದ್ದಲು ಹೊರಟಿದ್ದಾರೆ. ವಚನಗಳು ನಮ್ಮ (ಲಿಂಗಾಯತ) ಅಸ್ಮಿತೆ. ನಮ್ಮ ಅಸ್ಮಿತೆ ಜೊತೆ ಆಟ ಬೇಡ” ಎಂದು ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಗುರುವಾರ (ನ.8) ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,”ಬಿಜೆಪಿಯ ಬಿ.ಎಲ್. ಸಂತೋಷ್ ಅವರೇ, ನಿಮ್ಮ ಅಸ್ಮಿತೆಯಾದ ವೇದ, ಉಪನಿಷತ್ ಎಲ್ಲವನ್ನೂ ನಾವು ಗೌರವಿಸುತ್ತೇವೆ. ಅವುಗಳ ಕುರಿತು ನೀವು ಪ್ರಚಾರ ಮಾಡಿ. ನಮ್ಮ ಬಸವಾದಿ ಶರಣರ ವಚನಗಳು ನಮ್ಮ ಅಸ್ಮಿತೆಯಾಗಿದ್ದು, ಅವು ನಮಗೆ ತಾಯಿಯಿದ್ದಂತೆ. ಅದನ್ನು ತಿದ್ದಿಸುವುದು, ಅದರಲ್ಲಿ ಹಸ್ತಕ್ಷೇಪ ಮಾಡುವಂತಹ ಕೆಟ್ಟ ಕೆಲಸಕ್ಕೆ ನೀವು ಕೈ ಹಾಕಿದರೆ ಅದನ್ನು ನಾವು ಸಹಿಸುವುದಿಲ್ಲ!” ಎಂದಿದ್ದಾರೆ.

ಬಿಜೆಪಿ ಮತ್ತು ಬಿ.ಎಲ್ ಸಂತೋಷ್ ನಮ್ಮ ಕೆಲವು ಸ್ವಾಮಿಗಳನ್ನು ಬುಟ್ಟಿಗೆ ಹಾಕಿಕೊಂಡು ಇಂತ ಕೆಟ್ಟ ಕೆಲಸಕ್ಕೆ ಕೈ ಹಾಕಿದ್ದಾರೆ. ಬಿ.ಎಲ್ ಸಂತೋಷ್ ನಿಮ್ಮ ಅಸ್ಮಿತೆ ನಿಮಗೆ ಮುಖ್ಯ. ನಮ್ಮ ಅಸ್ಮಿತೆ ನಮಗೂ ಮುಖ್ಯ. ವೇದ, ಭಗವದ್ಗೀತೆ ನಿಮ್ಮ ಅಸ್ಮಿತೆ. ಅದನ್ನು ಹೇಗೆ ಬೇಕಾದರೂ ಪ್ರಚಾರ ಮಾಡಿ. ಆದರೆ, ನಮ್ಮ ಅಸ್ಮಿತೆಗೆ ಕೈ ಹಾಕಿದರೆ ಅದು ನಿಮಗೆ ತಿರುಗು ಬಾಣ ಅಗಲಿದೆ ಎಂದು ಕಿಡಿಕಾಡಿದ್ದಾರೆ.

ನಮ್ಮ ಅಸ್ಮಿತೆಯ ಬಗ್ಗೆ ತಪ್ಪಾಗಿ ಪ್ರಚಾರ ಮಾಡಿದರೆ, ನಿಮ್ಮ ಮನುವಾದ, ಮನುಸ್ಮೃತಿಗಳ ಬಗ್ಗೆ ನಾವೂ ಪುಸ್ತಕ ಪ್ರಿಂಟ್ ಮಾಡಿ ಜನರ ಮುಂದೆ ಇಡಬೇಕಾಗುತ್ತದೆ. ನಿಮ್ಮದು ಸುಳ್ಳಿನ ಅಸ್ಮಿತೆಯಾದರೆ, ನಮ್ಮದು ಸತ್ಯ ಎಂದಿದ್ದಾರೆ. ವಚನ ದರ್ಶನದ ಪುಸ್ತಕದ ಬಗ್ಗೆ ಚುನಾವಣೆ ಮುಗಿದ ಬಳಿಕ ನಾನೇ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತನಾಡುತ್ತೇನೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆಯುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಐಐಎಂನಲ್ಲಿ ಜಾತಿ ತಾರತಮ್ಯ ಆರೋಪ : ನ.20ರಂದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Vachana o Basaveshwarar are there since centuries and everybody is is following these.It is above any political verses and every one should respect and follow it

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...