Homeಕರ್ನಾಟಕಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

ಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್ ಅವರು ಮಂಗಳೂರಿನಲ್ಲಿ ನಡೆದ ಫಾಸಿಲ್‌ ಕೊಲೆಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನು ನೀಡಿದ್ದಾರೆ.

ತುಮಕೂರು ನಗರದಲ್ಲಿ ಭಜರಂಗದಳದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು” ಎಂದು ಪ್ರಚೋದಿಸಿದ್ದಾರೆ. ತುಮಕೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಕಾರ್ಯಕ್ರಮ ನಡೆದಿದೆ.

“ಶರಣ್ ಪಂಪ್‌ವೆಲ್ ಮಾಡಿದ ಆಪಾದಿತ ಪ್ರಚೋದಕ ಹೇಳಿಕೆಗಳ ಮೇಲೆ ಯಾವುದೇ ದೂರುಗಳು ದಾಖಲಾಗಿಲ್ಲ. ಅವರ ಭಾಷಣದಲ್ಲಿ ನಾವು ಸ್ವಯಂಪ್ರೇರಿತ ಪ್ರಕರಣಗಳನ್ನು ತೆಗೆದುಕೊಳ್ಳುವುದಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿರವಾಗಿದೆ” ಎಂದು ತಿಲಕ್ ನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹೇಳಿರುವುದಾಗಿ ವರದಿಯಾಗಿದೆ.

“ನಾನು ಯಾವುದೇ ಸೇಡಿನ ಹತ್ಯೆಗಳನ್ನು ಸಮರ್ಥಿಸಿಕೊಂಡಿಲ್ಲ. ನಾನು ಯುವಕರ ಶಕ್ತಿಯ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಹಿಂದೂಗಳು ಸಹ ಮುಸ್ಲಿಮರ ದೌರ್ಜನ್ಯದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬಹುದು. ಸಮಾರಂಭದಲ್ಲಿ ನಾನು ಸತ್ಯವನ್ನಷ್ಟೇ ಮಾತನಾಡಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾನು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ ಅಥವಾ ಯಾವುದೇ ನಿರ್ದಿಷ್ಟ ಹತ್ಯೆಗಳನ್ನು ಎತ್ತಿ ತೋರಿಸಿಲ್ಲ” ಎಂದು ಪಂಪ್‌ವೆಲ್‌ ಸಮರ್ಥಿಸಿಕೊಂಡಿದ್ದಾರೆ.

ಶರಣ್ ಪಂಪ್‌ವೆಲ್ ಹೇಳಿಕೆಗೆ ಜನಾಕ್ರೋಶ ವ್ಯಕ್ತವಾಗಿದೆ. “ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯವನ್ನು ಧ್ರುವೀಕರಣಗೊಳಿಸುವ ಪ್ರಯತ್ನ ಇದಾಗಿದೆ. ಇದು ಆರೆಸ್ಸೆಸ್ ಮತ್ತು ಬಿಜೆಪಿಯ ಹಿಡನ್ ಅಜೆಂಡಾ. ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸಿದ ಪಂಪ್‌ವೆಲ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಮನೀರ್‌ ಕಾಟಿಪಳ್ಳ ಪ್ರತಿಕ್ರಿಯಿಸಿ, “ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ” ಎಂದಿದ್ದಾರೆ.

“ಇದು ತೀರಾ ಆತಂಕಕಾರಿ ಬೆಳವಣಿಗೆ. ನಾಗರಿಕ ಸಮಾಜದಲ್ಲಿ ಇದು ಭೀತಿಯನ್ನು ಮೂಡಿಸಿದೆ. ಫಾಝಿಲ್ ಕೊಲೆಗೆ ವಿಎಚ್‌ಪಿ, ಬಿಜೆಪಿ ಮುಖಂಡರ ಬೆಂಬಲ ದೊರಕಿರುವ ಅನುಮಾನ ಕೊಲೆ ನಡೆದ ಸಂದರ್ಭದಲ್ಲೇ ವ್ಯಕ್ತವಾಗಿತ್ತು. ಪೊಲೀಸರು ರಾಜಕೀಯ ಒತ್ತಡದಿಂದ ಕೊಲೆಯ ಪಿತೂರಿದಾರರನ್ನು ರಕ್ಷಿಸುತ್ತಿದ್ದಾರೆ ಎಂದು ಫಾಝಿಲ್ ಕುಟುಂಬ ಆರೋಪಿಸಿತ್ತು. ಶರಣ್ ಪಂಪ್ ವೆಲ್ ಭಾಷಣ ಈ ಅನುಮಾನ, ಆರೋಪವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಪುಷ್ಟೀಕರಿಸಿದೆ” ಎಂದು ತಿಳಿಸಿದ್ದಾರೆ.

“ಶರಣ್ ಪಂಪ್ ವೆಲ್ ಇಂದಿನ ಅತಿರೇಕದ ದ್ವೇಷ ಭಾಷಣ, ಕೊಲೆಗಳ ಸಮರ್ಥನೆ, ಬೆದರಿಕೆ ಜನಾಂಗ ಹತ್ಯೆಗೆ ಪ್ರಚೋದನೆ ನೀಡುವಂತಿದೆ‌. ನಿರುದ್ಯೋಗ, ಬಡತನದಿಂದ ಹತಾಶಗೊಂಡಿರುವ ಯುವಕರ ಕೈಗೆ ತಲವಾರು ನೀಡಿ ಗಲಭೆಗಿಳಿಸುವ, ಇಡೀ ಸಮಾಜವನ್ನು ಕ್ರಿಮಿನಲೀಕರಣಗೊಳಿಸುವ, ಚುನಾವಣೆ ಸನಿಹದಲ್ಲಿರುವ ಸಂದರ್ಭ ಮತೀಯ ಧ್ರುವೀಕರಣ ರಾಜಕೀಯ ದುರುದ್ದೇಶಗಳನ್ನು ಹೊಂದಿದೆ. ಹಾಗೂ ಶರಣ್ ಪಂಪ್ ವೆಲ್‌ಗೆ ಬಿಜೆಪಿ ಸರಕಾರದ ಬೆಂಬಲವೂ ದೊರಕಿರುವುದು ಎದ್ದು ಕಾಣುತ್ತಿದೆ” ಎಂದು ಟೀಕಿಸಿದ್ದಾರೆ.

“ಅಮಾಯಕ ಫಾಝಿಲ್ ಕೊಲೆಯ ಸಂದರ್ಭ ರಾಜ್ಯ ಸರಕಾರ ಸಾಂತ್ವನ, ಪರಿಹಾರ ಒದಗಿಸದೆ ಫಾಝಿಲ್ ಕುಟುಂಬದೊಂದಿಗೆ ತಾರತಮ್ಯದಿಂದ ಕೆಟ್ಟದಾಗಿ ನಡೆದುಕೊಂಡಿತ್ತು. ಪ್ರಕರಣದ ತನಿಖೆಯೂ ದುರ್ಬಲ ನೆಲೆಯಲ್ಲಿ ನಡೆದಿತ್ತು. ಈಗ ಫಾಝಿಲ್ ಕೊಲೆಯನ್ನು ಭಜರಂಗ ದಳದ ಕಾರ್ಯಕರ್ತರ ಶೌರ್ಯದ ಸಂಕೇತ ಎಂದು ಭಾಷಣ ಬಿಗಿಯಲು‌ ಅವಕಾಶ ಒದಗಿಸಿ ಆ ಸಂತ್ರಸ್ತ ಕುಟುಂಬವನ್ನು ಮತ್ತಷ್ಟು ನೋವುಣ್ಣುವಂತೆ ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯದ ವಿರುದ್ದ ಇನ್ನಷ್ಟು ದ್ವೇಷ ಹರಡುವ ಯತ್ನವೂ ಇದರ ಹಿಂದಿದೆ. ಸರಕಾರಿ ಪ್ರಾಯೋಜಿತ ಇಂತಹ ಯೋಜನಾಬದ್ದ ಜನಾಂಗ ದ್ವೇಷದ ಕೆಲಸಗಳು ಮುಸ್ಲಿಂ ಸಮುದಾಯದೊಳಗಡೆ ನಕಾರಾತ್ಮಕ ಶಕ್ತಿಗಳ ಬೆಳವಣಿಗೆಗೂ ಕುಮ್ಮಕ್ಕು‌ ನೀಡುತ್ತದೆ. ಇದು ನಮ್ಮ ಸಮಾಜವನ್ನು ಅಪಾಯಕಾರಿ ವಿಭಜನೆಯೆಡೆಗೆ ಒಯ್ಯುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಕೊಲೆ, ನರಮೇಧದ ಸಮರ್ಥನೆಯ ಭಾಷಣಕ್ಕಾಗಿ ಶರಣ್ ಪಂಪ್ ವೆಲ್ ರನ್ನು ಕಠಿಣ ಕಾಯ್ದೆಯಡಿ ಬಂಧಿಸಬೇಕು, ಫಾಝಿಲ್ ಕೊಲೆಯಲ್ಲಿ ಶರಣ್ ಪಂಪ್ ವೆಲ್ ಮತ್ತಿತರ ನಾಯಕರ ಪಾತ್ರದ ಕುರಿತು ಮರು ತನಿಖೆ ಮಾಡಬೇಕು ಎಂದು ಡಿವೈಎಫ್ಐ ಆಗ್ರಹಿಸುತ್ತದೆ. ನಾಗರಿಕ ಸಮಾಜ ಒಂದಾಗಿ ಶರಣ್ ಪಂಪ್ ವೆಲ್ ಭಾಷಣವನ್ನು ಖಂಡಿಸಬೇಕು ಹಾಗೂ ಕ್ರಮಕ್ಕಾಗಿ ಒತ್ತಾಯಿಸಬೇಕು” ಎಂದಿದ್ದಾರೆ.

ಫಾಜಿಲ್ ಕೊಲೆ ಪ್ರಕರಣ

ಪ್ರವೀಣ್ ನೆಟ್ಟಾರು ಹತ್ಯೆಯ ಎರಡು ದಿನಗಳ ನಂತರ, ಹಿಂದುತ್ವ ಸಂಘಟನೆಗಳೊಂದಿಗೆ ಸೇರಿರುವ ದುಷ್ಕರ್ಮಿಗಳ ಗುಂಪೊಂದು 2022ರ ಜುಲೈ 28 ರಂದು ಮಂಗಳೂರಿನಲ್ಲಿ 23 ವರ್ಷದ ಮೊಹಮ್ಮದ್ ಫಾಜಿಲ್ ಅವರನ್ನು ಕೊಂದಿತು.

ಒಂದು ವಾರದೊಳಗೆ ಮಂಗಳೂರು ನಗರ ಪೊಲೀಸರು ಪ್ರಕರಣವನ್ನು ಭೇದಿಸಿ ಈ ಸಂಬಂಧ ಆರು ಮಂದಿಯನ್ನು ವಶಕ್ಕೆ ಪಡೆದರು. ಆರೋಪಿಗಳೆಲ್ಲರೂ ಹಿಂದುತ್ವವಾದಿಗಳಾಗಿದ್ದಾರೆ.

ಫಾಜಿಲ್ ಹತ್ಯೆಯಾಗಿ ಆರು ತಿಂಗಳಾದರೂ ಆತನ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ಯಾವುದೇ ಕ್ಯಾಬಿನೆಟ್ ಮಂತ್ರಿಗಳು ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಲಿಲ್ಲ ಅಥವಾ ಕುಟುಂಬಕ್ಕೆ ಪರಿಹಾರವನ್ನು ನೀಡಲಿಲ್ಲ ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಟೀಕಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...