Homeಕರ್ನಾಟಕಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

ಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್ ಅವರು ಮಂಗಳೂರಿನಲ್ಲಿ ನಡೆದ ಫಾಸಿಲ್‌ ಕೊಲೆಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನು ನೀಡಿದ್ದಾರೆ.

ತುಮಕೂರು ನಗರದಲ್ಲಿ ಭಜರಂಗದಳದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು” ಎಂದು ಪ್ರಚೋದಿಸಿದ್ದಾರೆ. ತುಮಕೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಕಾರ್ಯಕ್ರಮ ನಡೆದಿದೆ.

“ಶರಣ್ ಪಂಪ್‌ವೆಲ್ ಮಾಡಿದ ಆಪಾದಿತ ಪ್ರಚೋದಕ ಹೇಳಿಕೆಗಳ ಮೇಲೆ ಯಾವುದೇ ದೂರುಗಳು ದಾಖಲಾಗಿಲ್ಲ. ಅವರ ಭಾಷಣದಲ್ಲಿ ನಾವು ಸ್ವಯಂಪ್ರೇರಿತ ಪ್ರಕರಣಗಳನ್ನು ತೆಗೆದುಕೊಳ್ಳುವುದಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿರವಾಗಿದೆ” ಎಂದು ತಿಲಕ್ ನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹೇಳಿರುವುದಾಗಿ ವರದಿಯಾಗಿದೆ.

“ನಾನು ಯಾವುದೇ ಸೇಡಿನ ಹತ್ಯೆಗಳನ್ನು ಸಮರ್ಥಿಸಿಕೊಂಡಿಲ್ಲ. ನಾನು ಯುವಕರ ಶಕ್ತಿಯ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಹಿಂದೂಗಳು ಸಹ ಮುಸ್ಲಿಮರ ದೌರ್ಜನ್ಯದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬಹುದು. ಸಮಾರಂಭದಲ್ಲಿ ನಾನು ಸತ್ಯವನ್ನಷ್ಟೇ ಮಾತನಾಡಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾನು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ ಅಥವಾ ಯಾವುದೇ ನಿರ್ದಿಷ್ಟ ಹತ್ಯೆಗಳನ್ನು ಎತ್ತಿ ತೋರಿಸಿಲ್ಲ” ಎಂದು ಪಂಪ್‌ವೆಲ್‌ ಸಮರ್ಥಿಸಿಕೊಂಡಿದ್ದಾರೆ.

ಶರಣ್ ಪಂಪ್‌ವೆಲ್ ಹೇಳಿಕೆಗೆ ಜನಾಕ್ರೋಶ ವ್ಯಕ್ತವಾಗಿದೆ. “ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯವನ್ನು ಧ್ರುವೀಕರಣಗೊಳಿಸುವ ಪ್ರಯತ್ನ ಇದಾಗಿದೆ. ಇದು ಆರೆಸ್ಸೆಸ್ ಮತ್ತು ಬಿಜೆಪಿಯ ಹಿಡನ್ ಅಜೆಂಡಾ. ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸಿದ ಪಂಪ್‌ವೆಲ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಮನೀರ್‌ ಕಾಟಿಪಳ್ಳ ಪ್ರತಿಕ್ರಿಯಿಸಿ, “ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ” ಎಂದಿದ್ದಾರೆ.

“ಇದು ತೀರಾ ಆತಂಕಕಾರಿ ಬೆಳವಣಿಗೆ. ನಾಗರಿಕ ಸಮಾಜದಲ್ಲಿ ಇದು ಭೀತಿಯನ್ನು ಮೂಡಿಸಿದೆ. ಫಾಝಿಲ್ ಕೊಲೆಗೆ ವಿಎಚ್‌ಪಿ, ಬಿಜೆಪಿ ಮುಖಂಡರ ಬೆಂಬಲ ದೊರಕಿರುವ ಅನುಮಾನ ಕೊಲೆ ನಡೆದ ಸಂದರ್ಭದಲ್ಲೇ ವ್ಯಕ್ತವಾಗಿತ್ತು. ಪೊಲೀಸರು ರಾಜಕೀಯ ಒತ್ತಡದಿಂದ ಕೊಲೆಯ ಪಿತೂರಿದಾರರನ್ನು ರಕ್ಷಿಸುತ್ತಿದ್ದಾರೆ ಎಂದು ಫಾಝಿಲ್ ಕುಟುಂಬ ಆರೋಪಿಸಿತ್ತು. ಶರಣ್ ಪಂಪ್ ವೆಲ್ ಭಾಷಣ ಈ ಅನುಮಾನ, ಆರೋಪವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಪುಷ್ಟೀಕರಿಸಿದೆ” ಎಂದು ತಿಳಿಸಿದ್ದಾರೆ.

“ಶರಣ್ ಪಂಪ್ ವೆಲ್ ಇಂದಿನ ಅತಿರೇಕದ ದ್ವೇಷ ಭಾಷಣ, ಕೊಲೆಗಳ ಸಮರ್ಥನೆ, ಬೆದರಿಕೆ ಜನಾಂಗ ಹತ್ಯೆಗೆ ಪ್ರಚೋದನೆ ನೀಡುವಂತಿದೆ‌. ನಿರುದ್ಯೋಗ, ಬಡತನದಿಂದ ಹತಾಶಗೊಂಡಿರುವ ಯುವಕರ ಕೈಗೆ ತಲವಾರು ನೀಡಿ ಗಲಭೆಗಿಳಿಸುವ, ಇಡೀ ಸಮಾಜವನ್ನು ಕ್ರಿಮಿನಲೀಕರಣಗೊಳಿಸುವ, ಚುನಾವಣೆ ಸನಿಹದಲ್ಲಿರುವ ಸಂದರ್ಭ ಮತೀಯ ಧ್ರುವೀಕರಣ ರಾಜಕೀಯ ದುರುದ್ದೇಶಗಳನ್ನು ಹೊಂದಿದೆ. ಹಾಗೂ ಶರಣ್ ಪಂಪ್ ವೆಲ್‌ಗೆ ಬಿಜೆಪಿ ಸರಕಾರದ ಬೆಂಬಲವೂ ದೊರಕಿರುವುದು ಎದ್ದು ಕಾಣುತ್ತಿದೆ” ಎಂದು ಟೀಕಿಸಿದ್ದಾರೆ.

“ಅಮಾಯಕ ಫಾಝಿಲ್ ಕೊಲೆಯ ಸಂದರ್ಭ ರಾಜ್ಯ ಸರಕಾರ ಸಾಂತ್ವನ, ಪರಿಹಾರ ಒದಗಿಸದೆ ಫಾಝಿಲ್ ಕುಟುಂಬದೊಂದಿಗೆ ತಾರತಮ್ಯದಿಂದ ಕೆಟ್ಟದಾಗಿ ನಡೆದುಕೊಂಡಿತ್ತು. ಪ್ರಕರಣದ ತನಿಖೆಯೂ ದುರ್ಬಲ ನೆಲೆಯಲ್ಲಿ ನಡೆದಿತ್ತು. ಈಗ ಫಾಝಿಲ್ ಕೊಲೆಯನ್ನು ಭಜರಂಗ ದಳದ ಕಾರ್ಯಕರ್ತರ ಶೌರ್ಯದ ಸಂಕೇತ ಎಂದು ಭಾಷಣ ಬಿಗಿಯಲು‌ ಅವಕಾಶ ಒದಗಿಸಿ ಆ ಸಂತ್ರಸ್ತ ಕುಟುಂಬವನ್ನು ಮತ್ತಷ್ಟು ನೋವುಣ್ಣುವಂತೆ ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯದ ವಿರುದ್ದ ಇನ್ನಷ್ಟು ದ್ವೇಷ ಹರಡುವ ಯತ್ನವೂ ಇದರ ಹಿಂದಿದೆ. ಸರಕಾರಿ ಪ್ರಾಯೋಜಿತ ಇಂತಹ ಯೋಜನಾಬದ್ದ ಜನಾಂಗ ದ್ವೇಷದ ಕೆಲಸಗಳು ಮುಸ್ಲಿಂ ಸಮುದಾಯದೊಳಗಡೆ ನಕಾರಾತ್ಮಕ ಶಕ್ತಿಗಳ ಬೆಳವಣಿಗೆಗೂ ಕುಮ್ಮಕ್ಕು‌ ನೀಡುತ್ತದೆ. ಇದು ನಮ್ಮ ಸಮಾಜವನ್ನು ಅಪಾಯಕಾರಿ ವಿಭಜನೆಯೆಡೆಗೆ ಒಯ್ಯುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಕೊಲೆ, ನರಮೇಧದ ಸಮರ್ಥನೆಯ ಭಾಷಣಕ್ಕಾಗಿ ಶರಣ್ ಪಂಪ್ ವೆಲ್ ರನ್ನು ಕಠಿಣ ಕಾಯ್ದೆಯಡಿ ಬಂಧಿಸಬೇಕು, ಫಾಝಿಲ್ ಕೊಲೆಯಲ್ಲಿ ಶರಣ್ ಪಂಪ್ ವೆಲ್ ಮತ್ತಿತರ ನಾಯಕರ ಪಾತ್ರದ ಕುರಿತು ಮರು ತನಿಖೆ ಮಾಡಬೇಕು ಎಂದು ಡಿವೈಎಫ್ಐ ಆಗ್ರಹಿಸುತ್ತದೆ. ನಾಗರಿಕ ಸಮಾಜ ಒಂದಾಗಿ ಶರಣ್ ಪಂಪ್ ವೆಲ್ ಭಾಷಣವನ್ನು ಖಂಡಿಸಬೇಕು ಹಾಗೂ ಕ್ರಮಕ್ಕಾಗಿ ಒತ್ತಾಯಿಸಬೇಕು” ಎಂದಿದ್ದಾರೆ.

ಫಾಜಿಲ್ ಕೊಲೆ ಪ್ರಕರಣ

ಪ್ರವೀಣ್ ನೆಟ್ಟಾರು ಹತ್ಯೆಯ ಎರಡು ದಿನಗಳ ನಂತರ, ಹಿಂದುತ್ವ ಸಂಘಟನೆಗಳೊಂದಿಗೆ ಸೇರಿರುವ ದುಷ್ಕರ್ಮಿಗಳ ಗುಂಪೊಂದು 2022ರ ಜುಲೈ 28 ರಂದು ಮಂಗಳೂರಿನಲ್ಲಿ 23 ವರ್ಷದ ಮೊಹಮ್ಮದ್ ಫಾಜಿಲ್ ಅವರನ್ನು ಕೊಂದಿತು.

ಒಂದು ವಾರದೊಳಗೆ ಮಂಗಳೂರು ನಗರ ಪೊಲೀಸರು ಪ್ರಕರಣವನ್ನು ಭೇದಿಸಿ ಈ ಸಂಬಂಧ ಆರು ಮಂದಿಯನ್ನು ವಶಕ್ಕೆ ಪಡೆದರು. ಆರೋಪಿಗಳೆಲ್ಲರೂ ಹಿಂದುತ್ವವಾದಿಗಳಾಗಿದ್ದಾರೆ.

ಫಾಜಿಲ್ ಹತ್ಯೆಯಾಗಿ ಆರು ತಿಂಗಳಾದರೂ ಆತನ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ಯಾವುದೇ ಕ್ಯಾಬಿನೆಟ್ ಮಂತ್ರಿಗಳು ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಲಿಲ್ಲ ಅಥವಾ ಕುಟುಂಬಕ್ಕೆ ಪರಿಹಾರವನ್ನು ನೀಡಲಿಲ್ಲ ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಟೀಕಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...