Homeಕರ್ನಾಟಕಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

ಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್ ಅವರು ಮಂಗಳೂರಿನಲ್ಲಿ ನಡೆದ ಫಾಸಿಲ್‌ ಕೊಲೆಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನು ನೀಡಿದ್ದಾರೆ.

ತುಮಕೂರು ನಗರದಲ್ಲಿ ಭಜರಂಗದಳದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು” ಎಂದು ಪ್ರಚೋದಿಸಿದ್ದಾರೆ. ತುಮಕೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಕಾರ್ಯಕ್ರಮ ನಡೆದಿದೆ.

“ಶರಣ್ ಪಂಪ್‌ವೆಲ್ ಮಾಡಿದ ಆಪಾದಿತ ಪ್ರಚೋದಕ ಹೇಳಿಕೆಗಳ ಮೇಲೆ ಯಾವುದೇ ದೂರುಗಳು ದಾಖಲಾಗಿಲ್ಲ. ಅವರ ಭಾಷಣದಲ್ಲಿ ನಾವು ಸ್ವಯಂಪ್ರೇರಿತ ಪ್ರಕರಣಗಳನ್ನು ತೆಗೆದುಕೊಳ್ಳುವುದಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿರವಾಗಿದೆ” ಎಂದು ತಿಲಕ್ ನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹೇಳಿರುವುದಾಗಿ ವರದಿಯಾಗಿದೆ.

“ನಾನು ಯಾವುದೇ ಸೇಡಿನ ಹತ್ಯೆಗಳನ್ನು ಸಮರ್ಥಿಸಿಕೊಂಡಿಲ್ಲ. ನಾನು ಯುವಕರ ಶಕ್ತಿಯ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಹಿಂದೂಗಳು ಸಹ ಮುಸ್ಲಿಮರ ದೌರ್ಜನ್ಯದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬಹುದು. ಸಮಾರಂಭದಲ್ಲಿ ನಾನು ಸತ್ಯವನ್ನಷ್ಟೇ ಮಾತನಾಡಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾನು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ ಅಥವಾ ಯಾವುದೇ ನಿರ್ದಿಷ್ಟ ಹತ್ಯೆಗಳನ್ನು ಎತ್ತಿ ತೋರಿಸಿಲ್ಲ” ಎಂದು ಪಂಪ್‌ವೆಲ್‌ ಸಮರ್ಥಿಸಿಕೊಂಡಿದ್ದಾರೆ.

ಶರಣ್ ಪಂಪ್‌ವೆಲ್ ಹೇಳಿಕೆಗೆ ಜನಾಕ್ರೋಶ ವ್ಯಕ್ತವಾಗಿದೆ. “ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯವನ್ನು ಧ್ರುವೀಕರಣಗೊಳಿಸುವ ಪ್ರಯತ್ನ ಇದಾಗಿದೆ. ಇದು ಆರೆಸ್ಸೆಸ್ ಮತ್ತು ಬಿಜೆಪಿಯ ಹಿಡನ್ ಅಜೆಂಡಾ. ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸಿದ ಪಂಪ್‌ವೆಲ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಮನೀರ್‌ ಕಾಟಿಪಳ್ಳ ಪ್ರತಿಕ್ರಿಯಿಸಿ, “ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ” ಎಂದಿದ್ದಾರೆ.

“ಇದು ತೀರಾ ಆತಂಕಕಾರಿ ಬೆಳವಣಿಗೆ. ನಾಗರಿಕ ಸಮಾಜದಲ್ಲಿ ಇದು ಭೀತಿಯನ್ನು ಮೂಡಿಸಿದೆ. ಫಾಝಿಲ್ ಕೊಲೆಗೆ ವಿಎಚ್‌ಪಿ, ಬಿಜೆಪಿ ಮುಖಂಡರ ಬೆಂಬಲ ದೊರಕಿರುವ ಅನುಮಾನ ಕೊಲೆ ನಡೆದ ಸಂದರ್ಭದಲ್ಲೇ ವ್ಯಕ್ತವಾಗಿತ್ತು. ಪೊಲೀಸರು ರಾಜಕೀಯ ಒತ್ತಡದಿಂದ ಕೊಲೆಯ ಪಿತೂರಿದಾರರನ್ನು ರಕ್ಷಿಸುತ್ತಿದ್ದಾರೆ ಎಂದು ಫಾಝಿಲ್ ಕುಟುಂಬ ಆರೋಪಿಸಿತ್ತು. ಶರಣ್ ಪಂಪ್ ವೆಲ್ ಭಾಷಣ ಈ ಅನುಮಾನ, ಆರೋಪವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಪುಷ್ಟೀಕರಿಸಿದೆ” ಎಂದು ತಿಳಿಸಿದ್ದಾರೆ.

“ಶರಣ್ ಪಂಪ್ ವೆಲ್ ಇಂದಿನ ಅತಿರೇಕದ ದ್ವೇಷ ಭಾಷಣ, ಕೊಲೆಗಳ ಸಮರ್ಥನೆ, ಬೆದರಿಕೆ ಜನಾಂಗ ಹತ್ಯೆಗೆ ಪ್ರಚೋದನೆ ನೀಡುವಂತಿದೆ‌. ನಿರುದ್ಯೋಗ, ಬಡತನದಿಂದ ಹತಾಶಗೊಂಡಿರುವ ಯುವಕರ ಕೈಗೆ ತಲವಾರು ನೀಡಿ ಗಲಭೆಗಿಳಿಸುವ, ಇಡೀ ಸಮಾಜವನ್ನು ಕ್ರಿಮಿನಲೀಕರಣಗೊಳಿಸುವ, ಚುನಾವಣೆ ಸನಿಹದಲ್ಲಿರುವ ಸಂದರ್ಭ ಮತೀಯ ಧ್ರುವೀಕರಣ ರಾಜಕೀಯ ದುರುದ್ದೇಶಗಳನ್ನು ಹೊಂದಿದೆ. ಹಾಗೂ ಶರಣ್ ಪಂಪ್ ವೆಲ್‌ಗೆ ಬಿಜೆಪಿ ಸರಕಾರದ ಬೆಂಬಲವೂ ದೊರಕಿರುವುದು ಎದ್ದು ಕಾಣುತ್ತಿದೆ” ಎಂದು ಟೀಕಿಸಿದ್ದಾರೆ.

“ಅಮಾಯಕ ಫಾಝಿಲ್ ಕೊಲೆಯ ಸಂದರ್ಭ ರಾಜ್ಯ ಸರಕಾರ ಸಾಂತ್ವನ, ಪರಿಹಾರ ಒದಗಿಸದೆ ಫಾಝಿಲ್ ಕುಟುಂಬದೊಂದಿಗೆ ತಾರತಮ್ಯದಿಂದ ಕೆಟ್ಟದಾಗಿ ನಡೆದುಕೊಂಡಿತ್ತು. ಪ್ರಕರಣದ ತನಿಖೆಯೂ ದುರ್ಬಲ ನೆಲೆಯಲ್ಲಿ ನಡೆದಿತ್ತು. ಈಗ ಫಾಝಿಲ್ ಕೊಲೆಯನ್ನು ಭಜರಂಗ ದಳದ ಕಾರ್ಯಕರ್ತರ ಶೌರ್ಯದ ಸಂಕೇತ ಎಂದು ಭಾಷಣ ಬಿಗಿಯಲು‌ ಅವಕಾಶ ಒದಗಿಸಿ ಆ ಸಂತ್ರಸ್ತ ಕುಟುಂಬವನ್ನು ಮತ್ತಷ್ಟು ನೋವುಣ್ಣುವಂತೆ ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯದ ವಿರುದ್ದ ಇನ್ನಷ್ಟು ದ್ವೇಷ ಹರಡುವ ಯತ್ನವೂ ಇದರ ಹಿಂದಿದೆ. ಸರಕಾರಿ ಪ್ರಾಯೋಜಿತ ಇಂತಹ ಯೋಜನಾಬದ್ದ ಜನಾಂಗ ದ್ವೇಷದ ಕೆಲಸಗಳು ಮುಸ್ಲಿಂ ಸಮುದಾಯದೊಳಗಡೆ ನಕಾರಾತ್ಮಕ ಶಕ್ತಿಗಳ ಬೆಳವಣಿಗೆಗೂ ಕುಮ್ಮಕ್ಕು‌ ನೀಡುತ್ತದೆ. ಇದು ನಮ್ಮ ಸಮಾಜವನ್ನು ಅಪಾಯಕಾರಿ ವಿಭಜನೆಯೆಡೆಗೆ ಒಯ್ಯುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಕೊಲೆ, ನರಮೇಧದ ಸಮರ್ಥನೆಯ ಭಾಷಣಕ್ಕಾಗಿ ಶರಣ್ ಪಂಪ್ ವೆಲ್ ರನ್ನು ಕಠಿಣ ಕಾಯ್ದೆಯಡಿ ಬಂಧಿಸಬೇಕು, ಫಾಝಿಲ್ ಕೊಲೆಯಲ್ಲಿ ಶರಣ್ ಪಂಪ್ ವೆಲ್ ಮತ್ತಿತರ ನಾಯಕರ ಪಾತ್ರದ ಕುರಿತು ಮರು ತನಿಖೆ ಮಾಡಬೇಕು ಎಂದು ಡಿವೈಎಫ್ಐ ಆಗ್ರಹಿಸುತ್ತದೆ. ನಾಗರಿಕ ಸಮಾಜ ಒಂದಾಗಿ ಶರಣ್ ಪಂಪ್ ವೆಲ್ ಭಾಷಣವನ್ನು ಖಂಡಿಸಬೇಕು ಹಾಗೂ ಕ್ರಮಕ್ಕಾಗಿ ಒತ್ತಾಯಿಸಬೇಕು” ಎಂದಿದ್ದಾರೆ.

ಫಾಜಿಲ್ ಕೊಲೆ ಪ್ರಕರಣ

ಪ್ರವೀಣ್ ನೆಟ್ಟಾರು ಹತ್ಯೆಯ ಎರಡು ದಿನಗಳ ನಂತರ, ಹಿಂದುತ್ವ ಸಂಘಟನೆಗಳೊಂದಿಗೆ ಸೇರಿರುವ ದುಷ್ಕರ್ಮಿಗಳ ಗುಂಪೊಂದು 2022ರ ಜುಲೈ 28 ರಂದು ಮಂಗಳೂರಿನಲ್ಲಿ 23 ವರ್ಷದ ಮೊಹಮ್ಮದ್ ಫಾಜಿಲ್ ಅವರನ್ನು ಕೊಂದಿತು.

ಒಂದು ವಾರದೊಳಗೆ ಮಂಗಳೂರು ನಗರ ಪೊಲೀಸರು ಪ್ರಕರಣವನ್ನು ಭೇದಿಸಿ ಈ ಸಂಬಂಧ ಆರು ಮಂದಿಯನ್ನು ವಶಕ್ಕೆ ಪಡೆದರು. ಆರೋಪಿಗಳೆಲ್ಲರೂ ಹಿಂದುತ್ವವಾದಿಗಳಾಗಿದ್ದಾರೆ.

ಫಾಜಿಲ್ ಹತ್ಯೆಯಾಗಿ ಆರು ತಿಂಗಳಾದರೂ ಆತನ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ಯಾವುದೇ ಕ್ಯಾಬಿನೆಟ್ ಮಂತ್ರಿಗಳು ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಲಿಲ್ಲ ಅಥವಾ ಕುಟುಂಬಕ್ಕೆ ಪರಿಹಾರವನ್ನು ನೀಡಲಿಲ್ಲ ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಟೀಕಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...