Homeಕರ್ನಾಟಕಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

ಫಾಸಿಲ್‌ ಕೊಲೆಗೆ ಮೆಚ್ಚುಗೆ ಸೂಚಿಸಿದ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್: ದ್ವೇಷ ಭಾಷಣಕ್ಕೆ ಖಂಡನೆ

- Advertisement -
- Advertisement -

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹಾಗೂ ಬಿಜೆಪಿ ಮುಖಂಡ ಶರಣ್ ಪಂಪ್‌ವೆಲ್ ಅವರು ಮಂಗಳೂರಿನಲ್ಲಿ ನಡೆದ ಫಾಸಿಲ್‌ ಕೊಲೆಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅಮಾಯಕ ಫಾಸಿಲ್‌ನನ್ನು ಹಿಂದೂ ಸಂಘಟನೆಗಳು ಕೊಂದಿರುವುದಾಗಿ ಒಪ್ಪಿಕೊಂಡಿರುವ ಶರಣ್‌, “ಈ ಕೊಲೆಯಲ್ಲಿ ಪರೋಕ್ಷವಾಗಿ ತನ್ನ ಪಾತ್ರವಿದೆ” ಎಂಬ ಸೂಚನೆಯನ್ನು ನೀಡಿದ್ದಾರೆ.

ತುಮಕೂರು ನಗರದಲ್ಲಿ ಭಜರಂಗದಳದ ಶೌರ್ಯ ಯಾತ್ರೆಯಲ್ಲಿ ಮಾತನಾಡಿದ ಅವರು, “ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿರುವ ಮುಸ್ಲಿಂ ಜಿಹಾದಿಗಳಿಗೆ ಪ್ರತ್ಯುತ್ತರ ನೀಡಲು, ಸುರತ್ಕಲ್‌ನ ಬಿಸಿ ರಕ್ತದ ಯುವಕರು ಸೇಡು ತೀರಿಸಿಕೊಂಡರು” ಎಂದು ಹೇಳಿಕೆ ನೀಡಿದ್ದಾರೆ.

“ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಮುಸಲ್ಮಾನ್ ಜಿಹಾದಿಗಳಿದ್ದಾರೆ. ಅವರಿಗೆ ಉತ್ತರವನ್ನು ಕೊಡಬೇಕೆಂಬ ಕಾರಣಕ್ಕಾಗಿ ಸುರತ್ಕಲ್‌ನಲ್ಲಿದ್ದ ಬಿಸಿ ನೆತ್ತರಿನ ಯುವಕರು ಕೊಂದಿದ್ದಾರೆ. ಯಾರು ಇಲ್ಲದ ಸಮಯದಲ್ಲಿ ಅಲ್ಲ. ಮಾರ್ಕೆಟ್‌ನಲ್ಲಿ ಜನ ಇದ್ದಾಗಲೇ, ಅವರ ಎದುರಲ್ಲೇ ನುಗ್ಗಿ ನುಗ್ಗಿ ಅವರಿಗೆ ಹೊಡೆದು ಹತ್ಯೆಗೆ ಪ್ರತಿಕಾರವನ್ನು ತೋರಿಸಿದ್ದು ಹಿಂದೂ ಹುಡುಗರ ತಾಕತ್ತು” ಎಂದು ಪ್ರಚೋದಿಸಿದ್ದಾರೆ. ತುಮಕೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಕಾರ್ಯಕ್ರಮ ನಡೆದಿದೆ.

“ಶರಣ್ ಪಂಪ್‌ವೆಲ್ ಮಾಡಿದ ಆಪಾದಿತ ಪ್ರಚೋದಕ ಹೇಳಿಕೆಗಳ ಮೇಲೆ ಯಾವುದೇ ದೂರುಗಳು ದಾಖಲಾಗಿಲ್ಲ. ಅವರ ಭಾಷಣದಲ್ಲಿ ನಾವು ಸ್ವಯಂಪ್ರೇರಿತ ಪ್ರಕರಣಗಳನ್ನು ತೆಗೆದುಕೊಳ್ಳುವುದಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿರವಾಗಿದೆ” ಎಂದು ತಿಲಕ್ ನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹೇಳಿರುವುದಾಗಿ ವರದಿಯಾಗಿದೆ.

“ನಾನು ಯಾವುದೇ ಸೇಡಿನ ಹತ್ಯೆಗಳನ್ನು ಸಮರ್ಥಿಸಿಕೊಂಡಿಲ್ಲ. ನಾನು ಯುವಕರ ಶಕ್ತಿಯ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಹಿಂದೂಗಳು ಸಹ ಮುಸ್ಲಿಮರ ದೌರ್ಜನ್ಯದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬಹುದು. ಸಮಾರಂಭದಲ್ಲಿ ನಾನು ಸತ್ಯವನ್ನಷ್ಟೇ ಮಾತನಾಡಿದ್ದೇನೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾನು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ ಅಥವಾ ಯಾವುದೇ ನಿರ್ದಿಷ್ಟ ಹತ್ಯೆಗಳನ್ನು ಎತ್ತಿ ತೋರಿಸಿಲ್ಲ” ಎಂದು ಪಂಪ್‌ವೆಲ್‌ ಸಮರ್ಥಿಸಿಕೊಂಡಿದ್ದಾರೆ.

ಶರಣ್ ಪಂಪ್‌ವೆಲ್ ಹೇಳಿಕೆಗೆ ಜನಾಕ್ರೋಶ ವ್ಯಕ್ತವಾಗಿದೆ. “ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯವನ್ನು ಧ್ರುವೀಕರಣಗೊಳಿಸುವ ಪ್ರಯತ್ನ ಇದಾಗಿದೆ. ಇದು ಆರೆಸ್ಸೆಸ್ ಮತ್ತು ಬಿಜೆಪಿಯ ಹಿಡನ್ ಅಜೆಂಡಾ. ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸಿದ ಪಂಪ್‌ವೆಲ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಮನೀರ್‌ ಕಾಟಿಪಳ್ಳ ಪ್ರತಿಕ್ರಿಯಿಸಿ, “ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ” ಎಂದಿದ್ದಾರೆ.

“ಇದು ತೀರಾ ಆತಂಕಕಾರಿ ಬೆಳವಣಿಗೆ. ನಾಗರಿಕ ಸಮಾಜದಲ್ಲಿ ಇದು ಭೀತಿಯನ್ನು ಮೂಡಿಸಿದೆ. ಫಾಝಿಲ್ ಕೊಲೆಗೆ ವಿಎಚ್‌ಪಿ, ಬಿಜೆಪಿ ಮುಖಂಡರ ಬೆಂಬಲ ದೊರಕಿರುವ ಅನುಮಾನ ಕೊಲೆ ನಡೆದ ಸಂದರ್ಭದಲ್ಲೇ ವ್ಯಕ್ತವಾಗಿತ್ತು. ಪೊಲೀಸರು ರಾಜಕೀಯ ಒತ್ತಡದಿಂದ ಕೊಲೆಯ ಪಿತೂರಿದಾರರನ್ನು ರಕ್ಷಿಸುತ್ತಿದ್ದಾರೆ ಎಂದು ಫಾಝಿಲ್ ಕುಟುಂಬ ಆರೋಪಿಸಿತ್ತು. ಶರಣ್ ಪಂಪ್ ವೆಲ್ ಭಾಷಣ ಈ ಅನುಮಾನ, ಆರೋಪವನ್ನು ಅನುಮಾನಕ್ಕೆ ಎಡೆಯಿಲ್ಲದಂತೆ ಪುಷ್ಟೀಕರಿಸಿದೆ” ಎಂದು ತಿಳಿಸಿದ್ದಾರೆ.

“ಶರಣ್ ಪಂಪ್ ವೆಲ್ ಇಂದಿನ ಅತಿರೇಕದ ದ್ವೇಷ ಭಾಷಣ, ಕೊಲೆಗಳ ಸಮರ್ಥನೆ, ಬೆದರಿಕೆ ಜನಾಂಗ ಹತ್ಯೆಗೆ ಪ್ರಚೋದನೆ ನೀಡುವಂತಿದೆ‌. ನಿರುದ್ಯೋಗ, ಬಡತನದಿಂದ ಹತಾಶಗೊಂಡಿರುವ ಯುವಕರ ಕೈಗೆ ತಲವಾರು ನೀಡಿ ಗಲಭೆಗಿಳಿಸುವ, ಇಡೀ ಸಮಾಜವನ್ನು ಕ್ರಿಮಿನಲೀಕರಣಗೊಳಿಸುವ, ಚುನಾವಣೆ ಸನಿಹದಲ್ಲಿರುವ ಸಂದರ್ಭ ಮತೀಯ ಧ್ರುವೀಕರಣ ರಾಜಕೀಯ ದುರುದ್ದೇಶಗಳನ್ನು ಹೊಂದಿದೆ. ಹಾಗೂ ಶರಣ್ ಪಂಪ್ ವೆಲ್‌ಗೆ ಬಿಜೆಪಿ ಸರಕಾರದ ಬೆಂಬಲವೂ ದೊರಕಿರುವುದು ಎದ್ದು ಕಾಣುತ್ತಿದೆ” ಎಂದು ಟೀಕಿಸಿದ್ದಾರೆ.

“ಅಮಾಯಕ ಫಾಝಿಲ್ ಕೊಲೆಯ ಸಂದರ್ಭ ರಾಜ್ಯ ಸರಕಾರ ಸಾಂತ್ವನ, ಪರಿಹಾರ ಒದಗಿಸದೆ ಫಾಝಿಲ್ ಕುಟುಂಬದೊಂದಿಗೆ ತಾರತಮ್ಯದಿಂದ ಕೆಟ್ಟದಾಗಿ ನಡೆದುಕೊಂಡಿತ್ತು. ಪ್ರಕರಣದ ತನಿಖೆಯೂ ದುರ್ಬಲ ನೆಲೆಯಲ್ಲಿ ನಡೆದಿತ್ತು. ಈಗ ಫಾಝಿಲ್ ಕೊಲೆಯನ್ನು ಭಜರಂಗ ದಳದ ಕಾರ್ಯಕರ್ತರ ಶೌರ್ಯದ ಸಂಕೇತ ಎಂದು ಭಾಷಣ ಬಿಗಿಯಲು‌ ಅವಕಾಶ ಒದಗಿಸಿ ಆ ಸಂತ್ರಸ್ತ ಕುಟುಂಬವನ್ನು ಮತ್ತಷ್ಟು ನೋವುಣ್ಣುವಂತೆ ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯದ ವಿರುದ್ದ ಇನ್ನಷ್ಟು ದ್ವೇಷ ಹರಡುವ ಯತ್ನವೂ ಇದರ ಹಿಂದಿದೆ. ಸರಕಾರಿ ಪ್ರಾಯೋಜಿತ ಇಂತಹ ಯೋಜನಾಬದ್ದ ಜನಾಂಗ ದ್ವೇಷದ ಕೆಲಸಗಳು ಮುಸ್ಲಿಂ ಸಮುದಾಯದೊಳಗಡೆ ನಕಾರಾತ್ಮಕ ಶಕ್ತಿಗಳ ಬೆಳವಣಿಗೆಗೂ ಕುಮ್ಮಕ್ಕು‌ ನೀಡುತ್ತದೆ. ಇದು ನಮ್ಮ ಸಮಾಜವನ್ನು ಅಪಾಯಕಾರಿ ವಿಭಜನೆಯೆಡೆಗೆ ಒಯ್ಯುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಕೊಲೆ, ನರಮೇಧದ ಸಮರ್ಥನೆಯ ಭಾಷಣಕ್ಕಾಗಿ ಶರಣ್ ಪಂಪ್ ವೆಲ್ ರನ್ನು ಕಠಿಣ ಕಾಯ್ದೆಯಡಿ ಬಂಧಿಸಬೇಕು, ಫಾಝಿಲ್ ಕೊಲೆಯಲ್ಲಿ ಶರಣ್ ಪಂಪ್ ವೆಲ್ ಮತ್ತಿತರ ನಾಯಕರ ಪಾತ್ರದ ಕುರಿತು ಮರು ತನಿಖೆ ಮಾಡಬೇಕು ಎಂದು ಡಿವೈಎಫ್ಐ ಆಗ್ರಹಿಸುತ್ತದೆ. ನಾಗರಿಕ ಸಮಾಜ ಒಂದಾಗಿ ಶರಣ್ ಪಂಪ್ ವೆಲ್ ಭಾಷಣವನ್ನು ಖಂಡಿಸಬೇಕು ಹಾಗೂ ಕ್ರಮಕ್ಕಾಗಿ ಒತ್ತಾಯಿಸಬೇಕು” ಎಂದಿದ್ದಾರೆ.

ಫಾಜಿಲ್ ಕೊಲೆ ಪ್ರಕರಣ

ಪ್ರವೀಣ್ ನೆಟ್ಟಾರು ಹತ್ಯೆಯ ಎರಡು ದಿನಗಳ ನಂತರ, ಹಿಂದುತ್ವ ಸಂಘಟನೆಗಳೊಂದಿಗೆ ಸೇರಿರುವ ದುಷ್ಕರ್ಮಿಗಳ ಗುಂಪೊಂದು 2022ರ ಜುಲೈ 28 ರಂದು ಮಂಗಳೂರಿನಲ್ಲಿ 23 ವರ್ಷದ ಮೊಹಮ್ಮದ್ ಫಾಜಿಲ್ ಅವರನ್ನು ಕೊಂದಿತು.

ಒಂದು ವಾರದೊಳಗೆ ಮಂಗಳೂರು ನಗರ ಪೊಲೀಸರು ಪ್ರಕರಣವನ್ನು ಭೇದಿಸಿ ಈ ಸಂಬಂಧ ಆರು ಮಂದಿಯನ್ನು ವಶಕ್ಕೆ ಪಡೆದರು. ಆರೋಪಿಗಳೆಲ್ಲರೂ ಹಿಂದುತ್ವವಾದಿಗಳಾಗಿದ್ದಾರೆ.

ಫಾಜಿಲ್ ಹತ್ಯೆಯಾಗಿ ಆರು ತಿಂಗಳಾದರೂ ಆತನ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ. ಯಾವುದೇ ಕ್ಯಾಬಿನೆಟ್ ಮಂತ್ರಿಗಳು ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಲಿಲ್ಲ ಅಥವಾ ಕುಟುಂಬಕ್ಕೆ ಪರಿಹಾರವನ್ನು ನೀಡಲಿಲ್ಲ ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಟೀಕಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...