Homeನಿಜವೋ ಸುಳ್ಳೋಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

- Advertisement -
- Advertisement -

ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಂಶೋಧನಾ ವಿದ್ಯಾರ್ಥಿ ಸಫೂರ ಜರ್ಗರ್ ಅವರನ್ನು ಏಪ್ರಿಲ್ 10 ರಂದು ಬಂಧಿಸಲಾಯಿತು. ನಂತರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಜಾಮೀನು ರಹಿತ ಅಪರಾಧಗಳ ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆಕೆಯ ಬಂಧನದ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಮೇಲೆ ಕೆಟ್ಟ ವೈಯಕ್ತಿಕ ದಾಳಿ ನಡೆಯುತ್ತಿದೆ.

ಮುಜಾಫರ್‌ಪುರದ ಬಿಜೆಪಿ ಸದಸ್ಯ ಎಂದು ಗುರುತಿಸಿಕೊಂಡಿರುವ ಮನೋಜ್ ಕುಮಾರ್ ಆಜಾದ್ ಅವರು ಆಕೆಯ ಕುರಿತು ಮೇ 4 ರಂದು ಟ್ವೀಟ್ ಮಾಡಿದ್ದಾರೆ. ಅದರಲ್ಲಿ “ಶಾಹೀನ್‌ ಬಾಗ್‌ನಲ್ಲಿ ದಂಗೆ ಮಾಡಿದ ನಂತರ ಅವಿವಾಹಿತ ಜಾಮಿಯಾ ಕಾನೂನು ವಿದ್ಯಾರ್ಥಿನಿ ಸಫೂರಾ ಜಾರ್ಗರ್ ಗಲಭೆಗಳನ್ನು ಪ್ರಚೋದಿಸಿದ ಆರೋಪದ ಮೇಲೆ ತಿಹಾರ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಆಕೆಯನ್ನು ಕರೋನವೈರಸ್ ಪರೀಕ್ಷೆಗೆ ಒಳಪಡಿಸಿದಾಗ, ಅವಳು ಎರಡು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟನ್ನು 7 ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದಾರೆ. ಅದೇ ರೀತಿಯಾಗಿ ಹತ್ತಾರು ಜನ ಅದೇ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್-ಚೆಕ್

ನಾವು ಈ ವಿಷಯದ ಬಗ್ಗೆ ಸತ್ಯ ಪರಿಶೀಲನೆ ನಡೆಸುವ ಮೊದಲು ಮಹಿಳೆಯರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸೆಕ್ಸಿಸ್ಟ್ ಮತ್ತು ಅಸಹ್ಯಕರ ಕಾಮೆಂಟ್‌ಗಳೊಂದಿಗೆ ಗುರುತಿಸುವುದು ಸಾಮಾನ್ಯ ರೂಢಿಯಾಗಿಬಿಟ್ಟಿರುವುದನ್ನು ಖಂಡಿಸಬೇಕಿದೆ. ಅವರು ಅಲ್ಪಸಂಖ್ಯಾತ ಸಮುದಾಯದವರಾಗಿದ್ದರೆ ಕಿರುಕುಳವು ಇನ್ನೂ ಕೆಟ್ಟದ್ದಾಗಿರುತ್ತದೆ. ಜರ್ಗರ್ ಅವರ ವೈಯಕ್ತಿಕ ಜೀವನವು ಅವಳು ಜೈಲಿನಲ್ಲಿರುವ ಸದರಿ ಪ್ರಕರಣಕ್ಕೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಆದರೂ ಸಹ ಕೆಲವು ಜನರು ಆಕೆಯ ತೇಜೋವಧೆ ಮಾಡಲು ಅದನ್ನು ಬಳಸುತ್ತಿರುವುದು ದುರಾದೃಷ್ಟವಾಗಿದೆ.

ಮೊದಲನೇಯದಾಗಿ ಸಫೂರ ಜರ್ಗರ್ ಮದುವೆಯಾಗಿಲ್ಲ ಎಂಬುದು ದೊಡ್ಡ ಸುಳ್ಳಾಗಿವೆ. ಅವರು 2018 ರಲ್ಲಿ ವಿವಾಹವಾಗಿದ್ದಾರೆ. ಈ ಕುರಿತು ಆಕೆಯ ಪತಿಯೊಂದಿಗೆ ಆಲ್ಟ್‌ ನ್ಯೂಸ್‌ ಮಾತಾಡಿದಾಗ ಅವರು 2018 ರಲ್ಲಿ ಮದುವೆಯಾಗಿರುವುದನ್ನು ತಿಳಿಸಿದ್ದಾರೆ.

ಇದಲ್ಲದೆ, ಆಕೆಯ ಗರ್ಭಧಾರಣೆಯನ್ನು ಇತ್ತೀಚೆಗೆ ಜೈಲಿನಲ್ಲಿ ಕಂಡುಹಿಡಿಯಲಾಯಿತು ಎಂಬ ಹೇಳಿಕೆಯೂ ಸುಳ್ಳು. ಜರ್ಗರ್‌ನನ್ನು ವಶಕ್ಕೆ ತೆಗೆದುಕೊಂಡ ಏಪ್ರಿಲ್ ಆರಂಭದಿಂದಲೂ ಇದು ಈಗಾಗಲೇ ಸುದ್ದಿಯಲ್ಲಿತ್ತು. ಏಪ್ರಿಲ್ 12 ರಿಂದ ಐಎಎನ್‌ಎಸ್ ವರದಿಯ ಸ್ಕ್ರೀನ್‌ಶಾಟ್ ಕೆಳಗೆ ನೀಡಲಾಗಿದೆ. ಅದರಂತೆ ಏಪ್ರಿಲ್ 10 ರಂದು ಬಂಧನಕ್ಕೊಳಗಾದಾಗ ಜರ್ಗರ್ ಮೂರು ತಿಂಗಳ ಗರ್ಭಿಣಿ ಎಂದು ಉಲ್ಲೇಖಿಸಿ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು ಎಂದು ಅದು ವರದಿ ಮಾಡಿದೆ.

ಫೆಬ್ರವರಿ 10 ರಂದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ನಡೆದ ಜಗಳದಲ್ಲಿ ಜರ್ಗರ್ ಮೂರ್ಛೆ ಹೋಗಿದ್ದರು. ಸ್ವಲ್ಪ ಸಮಯದವರೆಗೆ ಅವರು ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು ಎಂದು ಅಲ್ ಜಜೀರಾ ವರದಿ ಮಾಡಿದೆ. “ಅಂದಿನಿಂದ, ಗರ್ಭಧಾರಣೆಯ ಕಾಳಜಿಯೊಂದಿಗೆ, ಅವಳು ಕ್ರಮೇಣ ತನ್ನ ದೈಹಿಕ ಚಲನೆಯನ್ನು ನಿರ್ಬಂಧಿಸಿದ್ದಳು. ಮತ್ತು COVID-19 ಸ್ಫೋಟಗೊಂಡ ನಂತರ, ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಅವಳು ಮನೆಯಿಂದ ಹೊರಗುಳಿಯುವುದನ್ನು ನಿಲ್ಲಿಸಿದ್ದಳು. ಅವಳು ಹೆಚ್ಚಾಗಿ ಮನೆಯಿಂದಲೇ ಕೆಲಸ ಮಾಡುತ್ತಿದ್ದಳು ” ಎಂದು ಆಕೆಯ ಪತಿ ಹೇಳಿದ್ದಾರೆ.

ಜಾಮೀನು ಕೋರಿ ಏಪ್ರಿಲ್ 21 ರಂದು ಸಲ್ಲಿಸಿದ ಮತ್ತೊಂದು ನ್ಯಾಯಾಲಯದ ಅರ್ಜಿಯಲ್ಲಿಯೂ ಸಹ ಆಕೆಯ ವೈದ್ಯಕೀಯ ಸ್ಥಿತಿಯನ್ನು ಸಹ ಸೂಚಿಸುತ್ತದೆ. ಅಂದರೆ ಗರ್ಭಿಣಿಯಾದ ಕಾರಣಕ್ಕೆ ಜಾಮೀನು ನೀಡಬೇಕೆಂದು ಉಲ್ಲೇಖಿಸಿದೆ.

“ಸಫೂರ ವಿವಾಹಿತೆ ಎಂಬುದು ಸಾರ್ವಜನಿಕ ವಲಯದಲ್ಲಿದ್ದರೂ, ಪ್ರೇರಿತ ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳ ಮೂಲಕ ತಪ್ಪು ಅಭಿಪ್ರಾಯವನ್ನು ಸೃಷ್ಟಿಸಲಾಗುತ್ತಿದೆ. ಅವಳನ್ನು ಮತ್ತು ಸಿಎಎ ವಿರೋಧಿ ಶಾಹೀನ್ ಬಾಗ್ ಆಂದೋಲನವನ್ನು ಅಪಚಾರ ಮಾಡುವ ಉದ್ದೇಶದೊಂದಿಗೆ ಈ ಸುಳ್ಳು ಸುದ್ದಿ ಬಿತ್ತರಿಸಲಾಗಿದೆ” ಎಂದು ವೃಂದಾ ಗ್ರೋವರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಮಕ್ಕಳು ದನಿಎತ್ತಿದ್ದರೆ ಅವರು ಸಾಮಾಜಿಕ ಕಾರ್ಯಕರ್ತರು, ಲೇಖಕರು, ಪತ್ರಕರ್ತರು ಅಥವಾ ವಿದ್ಯಾರ್ಥಿ ಕಾರ್ಯಕರ್ತರು ಯಾರೇ ಆಗಲಿ ಅವರ ವಯಕ್ತಿಕ ಜೀವನವನ್ನು ಎಳೆತಂದು ತೇಜೋವಧೆ ಮಾಡುವುದು ಸುಲಭವಾಗಿಬಿಟ್ಟಿದೆ. ಒಬ್ಬ ಮಹಿಳೆ ಅವಳು ಬಯಸಿದ್ದಲ್ಲಿ ಮದುವೆಯಾಗದೆಯೂ ತಾಯಿಯಾಗುವುದರಲ್ಲಿ ತಪ್ಪೇನಿದೆ? ಅದು ಅವಳ ಇಚ್ಚೆಯಲ್ಲವೇ? ಅವರ ಖಾಸಗಿತನವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂಬುದನ್ನು ಅರಿತುಕೊಳ್ಳಬೇಕು.

ಸಫೂರ ಜರ್ಗರ್ ಅವಿವಾಹಿತ ಮಹಿಳೆ ಎಂದು ಸಾಮಾಜಿಕ ಮಾಧ್ಯಮಗಳು ಹೇಳುತ್ತಿರುವುದು ಸುಳ್ಳು. ಆಕೆಯ ಗರ್ಭಧಾರಣೆಯನ್ನು ಜೈಲಿನಲ್ಲಿ ಕಂಡುಹಿಡಿಯಲಾಗಿದೆ ಎಂಬ ವಾದವೂ ಆಧಾರರಹಿತವಾಗಿದೆ.


ಇದನ್ನೂ ಓದಿ: ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....