Homeನಿಜವೋ ಸುಳ್ಳೋಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

- Advertisement -
- Advertisement -

ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಂಶೋಧನಾ ವಿದ್ಯಾರ್ಥಿ ಸಫೂರ ಜರ್ಗರ್ ಅವರನ್ನು ಏಪ್ರಿಲ್ 10 ರಂದು ಬಂಧಿಸಲಾಯಿತು. ನಂತರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಜಾಮೀನು ರಹಿತ ಅಪರಾಧಗಳ ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆಕೆಯ ಬಂಧನದ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಮೇಲೆ ಕೆಟ್ಟ ವೈಯಕ್ತಿಕ ದಾಳಿ ನಡೆಯುತ್ತಿದೆ.

ಮುಜಾಫರ್‌ಪುರದ ಬಿಜೆಪಿ ಸದಸ್ಯ ಎಂದು ಗುರುತಿಸಿಕೊಂಡಿರುವ ಮನೋಜ್ ಕುಮಾರ್ ಆಜಾದ್ ಅವರು ಆಕೆಯ ಕುರಿತು ಮೇ 4 ರಂದು ಟ್ವೀಟ್ ಮಾಡಿದ್ದಾರೆ. ಅದರಲ್ಲಿ “ಶಾಹೀನ್‌ ಬಾಗ್‌ನಲ್ಲಿ ದಂಗೆ ಮಾಡಿದ ನಂತರ ಅವಿವಾಹಿತ ಜಾಮಿಯಾ ಕಾನೂನು ವಿದ್ಯಾರ್ಥಿನಿ ಸಫೂರಾ ಜಾರ್ಗರ್ ಗಲಭೆಗಳನ್ನು ಪ್ರಚೋದಿಸಿದ ಆರೋಪದ ಮೇಲೆ ತಿಹಾರ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಆಕೆಯನ್ನು ಕರೋನವೈರಸ್ ಪರೀಕ್ಷೆಗೆ ಒಳಪಡಿಸಿದಾಗ, ಅವಳು ಎರಡು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟನ್ನು 7 ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದಾರೆ. ಅದೇ ರೀತಿಯಾಗಿ ಹತ್ತಾರು ಜನ ಅದೇ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್-ಚೆಕ್

ನಾವು ಈ ವಿಷಯದ ಬಗ್ಗೆ ಸತ್ಯ ಪರಿಶೀಲನೆ ನಡೆಸುವ ಮೊದಲು ಮಹಿಳೆಯರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸೆಕ್ಸಿಸ್ಟ್ ಮತ್ತು ಅಸಹ್ಯಕರ ಕಾಮೆಂಟ್‌ಗಳೊಂದಿಗೆ ಗುರುತಿಸುವುದು ಸಾಮಾನ್ಯ ರೂಢಿಯಾಗಿಬಿಟ್ಟಿರುವುದನ್ನು ಖಂಡಿಸಬೇಕಿದೆ. ಅವರು ಅಲ್ಪಸಂಖ್ಯಾತ ಸಮುದಾಯದವರಾಗಿದ್ದರೆ ಕಿರುಕುಳವು ಇನ್ನೂ ಕೆಟ್ಟದ್ದಾಗಿರುತ್ತದೆ. ಜರ್ಗರ್ ಅವರ ವೈಯಕ್ತಿಕ ಜೀವನವು ಅವಳು ಜೈಲಿನಲ್ಲಿರುವ ಸದರಿ ಪ್ರಕರಣಕ್ಕೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಆದರೂ ಸಹ ಕೆಲವು ಜನರು ಆಕೆಯ ತೇಜೋವಧೆ ಮಾಡಲು ಅದನ್ನು ಬಳಸುತ್ತಿರುವುದು ದುರಾದೃಷ್ಟವಾಗಿದೆ.

ಮೊದಲನೇಯದಾಗಿ ಸಫೂರ ಜರ್ಗರ್ ಮದುವೆಯಾಗಿಲ್ಲ ಎಂಬುದು ದೊಡ್ಡ ಸುಳ್ಳಾಗಿವೆ. ಅವರು 2018 ರಲ್ಲಿ ವಿವಾಹವಾಗಿದ್ದಾರೆ. ಈ ಕುರಿತು ಆಕೆಯ ಪತಿಯೊಂದಿಗೆ ಆಲ್ಟ್‌ ನ್ಯೂಸ್‌ ಮಾತಾಡಿದಾಗ ಅವರು 2018 ರಲ್ಲಿ ಮದುವೆಯಾಗಿರುವುದನ್ನು ತಿಳಿಸಿದ್ದಾರೆ.

ಇದಲ್ಲದೆ, ಆಕೆಯ ಗರ್ಭಧಾರಣೆಯನ್ನು ಇತ್ತೀಚೆಗೆ ಜೈಲಿನಲ್ಲಿ ಕಂಡುಹಿಡಿಯಲಾಯಿತು ಎಂಬ ಹೇಳಿಕೆಯೂ ಸುಳ್ಳು. ಜರ್ಗರ್‌ನನ್ನು ವಶಕ್ಕೆ ತೆಗೆದುಕೊಂಡ ಏಪ್ರಿಲ್ ಆರಂಭದಿಂದಲೂ ಇದು ಈಗಾಗಲೇ ಸುದ್ದಿಯಲ್ಲಿತ್ತು. ಏಪ್ರಿಲ್ 12 ರಿಂದ ಐಎಎನ್‌ಎಸ್ ವರದಿಯ ಸ್ಕ್ರೀನ್‌ಶಾಟ್ ಕೆಳಗೆ ನೀಡಲಾಗಿದೆ. ಅದರಂತೆ ಏಪ್ರಿಲ್ 10 ರಂದು ಬಂಧನಕ್ಕೊಳಗಾದಾಗ ಜರ್ಗರ್ ಮೂರು ತಿಂಗಳ ಗರ್ಭಿಣಿ ಎಂದು ಉಲ್ಲೇಖಿಸಿ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು ಎಂದು ಅದು ವರದಿ ಮಾಡಿದೆ.

ಫೆಬ್ರವರಿ 10 ರಂದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ನಡೆದ ಜಗಳದಲ್ಲಿ ಜರ್ಗರ್ ಮೂರ್ಛೆ ಹೋಗಿದ್ದರು. ಸ್ವಲ್ಪ ಸಮಯದವರೆಗೆ ಅವರು ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು ಎಂದು ಅಲ್ ಜಜೀರಾ ವರದಿ ಮಾಡಿದೆ. “ಅಂದಿನಿಂದ, ಗರ್ಭಧಾರಣೆಯ ಕಾಳಜಿಯೊಂದಿಗೆ, ಅವಳು ಕ್ರಮೇಣ ತನ್ನ ದೈಹಿಕ ಚಲನೆಯನ್ನು ನಿರ್ಬಂಧಿಸಿದ್ದಳು. ಮತ್ತು COVID-19 ಸ್ಫೋಟಗೊಂಡ ನಂತರ, ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಅವಳು ಮನೆಯಿಂದ ಹೊರಗುಳಿಯುವುದನ್ನು ನಿಲ್ಲಿಸಿದ್ದಳು. ಅವಳು ಹೆಚ್ಚಾಗಿ ಮನೆಯಿಂದಲೇ ಕೆಲಸ ಮಾಡುತ್ತಿದ್ದಳು ” ಎಂದು ಆಕೆಯ ಪತಿ ಹೇಳಿದ್ದಾರೆ.

ಜಾಮೀನು ಕೋರಿ ಏಪ್ರಿಲ್ 21 ರಂದು ಸಲ್ಲಿಸಿದ ಮತ್ತೊಂದು ನ್ಯಾಯಾಲಯದ ಅರ್ಜಿಯಲ್ಲಿಯೂ ಸಹ ಆಕೆಯ ವೈದ್ಯಕೀಯ ಸ್ಥಿತಿಯನ್ನು ಸಹ ಸೂಚಿಸುತ್ತದೆ. ಅಂದರೆ ಗರ್ಭಿಣಿಯಾದ ಕಾರಣಕ್ಕೆ ಜಾಮೀನು ನೀಡಬೇಕೆಂದು ಉಲ್ಲೇಖಿಸಿದೆ.

“ಸಫೂರ ವಿವಾಹಿತೆ ಎಂಬುದು ಸಾರ್ವಜನಿಕ ವಲಯದಲ್ಲಿದ್ದರೂ, ಪ್ರೇರಿತ ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳ ಮೂಲಕ ತಪ್ಪು ಅಭಿಪ್ರಾಯವನ್ನು ಸೃಷ್ಟಿಸಲಾಗುತ್ತಿದೆ. ಅವಳನ್ನು ಮತ್ತು ಸಿಎಎ ವಿರೋಧಿ ಶಾಹೀನ್ ಬಾಗ್ ಆಂದೋಲನವನ್ನು ಅಪಚಾರ ಮಾಡುವ ಉದ್ದೇಶದೊಂದಿಗೆ ಈ ಸುಳ್ಳು ಸುದ್ದಿ ಬಿತ್ತರಿಸಲಾಗಿದೆ” ಎಂದು ವೃಂದಾ ಗ್ರೋವರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಮಕ್ಕಳು ದನಿಎತ್ತಿದ್ದರೆ ಅವರು ಸಾಮಾಜಿಕ ಕಾರ್ಯಕರ್ತರು, ಲೇಖಕರು, ಪತ್ರಕರ್ತರು ಅಥವಾ ವಿದ್ಯಾರ್ಥಿ ಕಾರ್ಯಕರ್ತರು ಯಾರೇ ಆಗಲಿ ಅವರ ವಯಕ್ತಿಕ ಜೀವನವನ್ನು ಎಳೆತಂದು ತೇಜೋವಧೆ ಮಾಡುವುದು ಸುಲಭವಾಗಿಬಿಟ್ಟಿದೆ. ಒಬ್ಬ ಮಹಿಳೆ ಅವಳು ಬಯಸಿದ್ದಲ್ಲಿ ಮದುವೆಯಾಗದೆಯೂ ತಾಯಿಯಾಗುವುದರಲ್ಲಿ ತಪ್ಪೇನಿದೆ? ಅದು ಅವಳ ಇಚ್ಚೆಯಲ್ಲವೇ? ಅವರ ಖಾಸಗಿತನವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂಬುದನ್ನು ಅರಿತುಕೊಳ್ಳಬೇಕು.

ಸಫೂರ ಜರ್ಗರ್ ಅವಿವಾಹಿತ ಮಹಿಳೆ ಎಂದು ಸಾಮಾಜಿಕ ಮಾಧ್ಯಮಗಳು ಹೇಳುತ್ತಿರುವುದು ಸುಳ್ಳು. ಆಕೆಯ ಗರ್ಭಧಾರಣೆಯನ್ನು ಜೈಲಿನಲ್ಲಿ ಕಂಡುಹಿಡಿಯಲಾಗಿದೆ ಎಂಬ ವಾದವೂ ಆಧಾರರಹಿತವಾಗಿದೆ.


ಇದನ್ನೂ ಓದಿ: ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...