Homeನಿಜವೋ ಸುಳ್ಳೋಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

- Advertisement -
- Advertisement -

ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಂಶೋಧನಾ ವಿದ್ಯಾರ್ಥಿ ಸಫೂರ ಜರ್ಗರ್ ಅವರನ್ನು ಏಪ್ರಿಲ್ 10 ರಂದು ಬಂಧಿಸಲಾಯಿತು. ನಂತರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಜಾಮೀನು ರಹಿತ ಅಪರಾಧಗಳ ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆಕೆಯ ಬಂಧನದ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಮೇಲೆ ಕೆಟ್ಟ ವೈಯಕ್ತಿಕ ದಾಳಿ ನಡೆಯುತ್ತಿದೆ.

ಮುಜಾಫರ್‌ಪುರದ ಬಿಜೆಪಿ ಸದಸ್ಯ ಎಂದು ಗುರುತಿಸಿಕೊಂಡಿರುವ ಮನೋಜ್ ಕುಮಾರ್ ಆಜಾದ್ ಅವರು ಆಕೆಯ ಕುರಿತು ಮೇ 4 ರಂದು ಟ್ವೀಟ್ ಮಾಡಿದ್ದಾರೆ. ಅದರಲ್ಲಿ “ಶಾಹೀನ್‌ ಬಾಗ್‌ನಲ್ಲಿ ದಂಗೆ ಮಾಡಿದ ನಂತರ ಅವಿವಾಹಿತ ಜಾಮಿಯಾ ಕಾನೂನು ವಿದ್ಯಾರ್ಥಿನಿ ಸಫೂರಾ ಜಾರ್ಗರ್ ಗಲಭೆಗಳನ್ನು ಪ್ರಚೋದಿಸಿದ ಆರೋಪದ ಮೇಲೆ ತಿಹಾರ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಆಕೆಯನ್ನು ಕರೋನವೈರಸ್ ಪರೀಕ್ಷೆಗೆ ಒಳಪಡಿಸಿದಾಗ, ಅವಳು ಎರಡು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟನ್ನು 7 ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದಾರೆ. ಅದೇ ರೀತಿಯಾಗಿ ಹತ್ತಾರು ಜನ ಅದೇ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್-ಚೆಕ್

ನಾವು ಈ ವಿಷಯದ ಬಗ್ಗೆ ಸತ್ಯ ಪರಿಶೀಲನೆ ನಡೆಸುವ ಮೊದಲು ಮಹಿಳೆಯರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸೆಕ್ಸಿಸ್ಟ್ ಮತ್ತು ಅಸಹ್ಯಕರ ಕಾಮೆಂಟ್‌ಗಳೊಂದಿಗೆ ಗುರುತಿಸುವುದು ಸಾಮಾನ್ಯ ರೂಢಿಯಾಗಿಬಿಟ್ಟಿರುವುದನ್ನು ಖಂಡಿಸಬೇಕಿದೆ. ಅವರು ಅಲ್ಪಸಂಖ್ಯಾತ ಸಮುದಾಯದವರಾಗಿದ್ದರೆ ಕಿರುಕುಳವು ಇನ್ನೂ ಕೆಟ್ಟದ್ದಾಗಿರುತ್ತದೆ. ಜರ್ಗರ್ ಅವರ ವೈಯಕ್ತಿಕ ಜೀವನವು ಅವಳು ಜೈಲಿನಲ್ಲಿರುವ ಸದರಿ ಪ್ರಕರಣಕ್ಕೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಆದರೂ ಸಹ ಕೆಲವು ಜನರು ಆಕೆಯ ತೇಜೋವಧೆ ಮಾಡಲು ಅದನ್ನು ಬಳಸುತ್ತಿರುವುದು ದುರಾದೃಷ್ಟವಾಗಿದೆ.

ಮೊದಲನೇಯದಾಗಿ ಸಫೂರ ಜರ್ಗರ್ ಮದುವೆಯಾಗಿಲ್ಲ ಎಂಬುದು ದೊಡ್ಡ ಸುಳ್ಳಾಗಿವೆ. ಅವರು 2018 ರಲ್ಲಿ ವಿವಾಹವಾಗಿದ್ದಾರೆ. ಈ ಕುರಿತು ಆಕೆಯ ಪತಿಯೊಂದಿಗೆ ಆಲ್ಟ್‌ ನ್ಯೂಸ್‌ ಮಾತಾಡಿದಾಗ ಅವರು 2018 ರಲ್ಲಿ ಮದುವೆಯಾಗಿರುವುದನ್ನು ತಿಳಿಸಿದ್ದಾರೆ.

ಇದಲ್ಲದೆ, ಆಕೆಯ ಗರ್ಭಧಾರಣೆಯನ್ನು ಇತ್ತೀಚೆಗೆ ಜೈಲಿನಲ್ಲಿ ಕಂಡುಹಿಡಿಯಲಾಯಿತು ಎಂಬ ಹೇಳಿಕೆಯೂ ಸುಳ್ಳು. ಜರ್ಗರ್‌ನನ್ನು ವಶಕ್ಕೆ ತೆಗೆದುಕೊಂಡ ಏಪ್ರಿಲ್ ಆರಂಭದಿಂದಲೂ ಇದು ಈಗಾಗಲೇ ಸುದ್ದಿಯಲ್ಲಿತ್ತು. ಏಪ್ರಿಲ್ 12 ರಿಂದ ಐಎಎನ್‌ಎಸ್ ವರದಿಯ ಸ್ಕ್ರೀನ್‌ಶಾಟ್ ಕೆಳಗೆ ನೀಡಲಾಗಿದೆ. ಅದರಂತೆ ಏಪ್ರಿಲ್ 10 ರಂದು ಬಂಧನಕ್ಕೊಳಗಾದಾಗ ಜರ್ಗರ್ ಮೂರು ತಿಂಗಳ ಗರ್ಭಿಣಿ ಎಂದು ಉಲ್ಲೇಖಿಸಿ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು ಎಂದು ಅದು ವರದಿ ಮಾಡಿದೆ.

ಫೆಬ್ರವರಿ 10 ರಂದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ನಡೆದ ಜಗಳದಲ್ಲಿ ಜರ್ಗರ್ ಮೂರ್ಛೆ ಹೋಗಿದ್ದರು. ಸ್ವಲ್ಪ ಸಮಯದವರೆಗೆ ಅವರು ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು ಎಂದು ಅಲ್ ಜಜೀರಾ ವರದಿ ಮಾಡಿದೆ. “ಅಂದಿನಿಂದ, ಗರ್ಭಧಾರಣೆಯ ಕಾಳಜಿಯೊಂದಿಗೆ, ಅವಳು ಕ್ರಮೇಣ ತನ್ನ ದೈಹಿಕ ಚಲನೆಯನ್ನು ನಿರ್ಬಂಧಿಸಿದ್ದಳು. ಮತ್ತು COVID-19 ಸ್ಫೋಟಗೊಂಡ ನಂತರ, ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಅವಳು ಮನೆಯಿಂದ ಹೊರಗುಳಿಯುವುದನ್ನು ನಿಲ್ಲಿಸಿದ್ದಳು. ಅವಳು ಹೆಚ್ಚಾಗಿ ಮನೆಯಿಂದಲೇ ಕೆಲಸ ಮಾಡುತ್ತಿದ್ದಳು ” ಎಂದು ಆಕೆಯ ಪತಿ ಹೇಳಿದ್ದಾರೆ.

ಜಾಮೀನು ಕೋರಿ ಏಪ್ರಿಲ್ 21 ರಂದು ಸಲ್ಲಿಸಿದ ಮತ್ತೊಂದು ನ್ಯಾಯಾಲಯದ ಅರ್ಜಿಯಲ್ಲಿಯೂ ಸಹ ಆಕೆಯ ವೈದ್ಯಕೀಯ ಸ್ಥಿತಿಯನ್ನು ಸಹ ಸೂಚಿಸುತ್ತದೆ. ಅಂದರೆ ಗರ್ಭಿಣಿಯಾದ ಕಾರಣಕ್ಕೆ ಜಾಮೀನು ನೀಡಬೇಕೆಂದು ಉಲ್ಲೇಖಿಸಿದೆ.

“ಸಫೂರ ವಿವಾಹಿತೆ ಎಂಬುದು ಸಾರ್ವಜನಿಕ ವಲಯದಲ್ಲಿದ್ದರೂ, ಪ್ರೇರಿತ ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳ ಮೂಲಕ ತಪ್ಪು ಅಭಿಪ್ರಾಯವನ್ನು ಸೃಷ್ಟಿಸಲಾಗುತ್ತಿದೆ. ಅವಳನ್ನು ಮತ್ತು ಸಿಎಎ ವಿರೋಧಿ ಶಾಹೀನ್ ಬಾಗ್ ಆಂದೋಲನವನ್ನು ಅಪಚಾರ ಮಾಡುವ ಉದ್ದೇಶದೊಂದಿಗೆ ಈ ಸುಳ್ಳು ಸುದ್ದಿ ಬಿತ್ತರಿಸಲಾಗಿದೆ” ಎಂದು ವೃಂದಾ ಗ್ರೋವರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಮಕ್ಕಳು ದನಿಎತ್ತಿದ್ದರೆ ಅವರು ಸಾಮಾಜಿಕ ಕಾರ್ಯಕರ್ತರು, ಲೇಖಕರು, ಪತ್ರಕರ್ತರು ಅಥವಾ ವಿದ್ಯಾರ್ಥಿ ಕಾರ್ಯಕರ್ತರು ಯಾರೇ ಆಗಲಿ ಅವರ ವಯಕ್ತಿಕ ಜೀವನವನ್ನು ಎಳೆತಂದು ತೇಜೋವಧೆ ಮಾಡುವುದು ಸುಲಭವಾಗಿಬಿಟ್ಟಿದೆ. ಒಬ್ಬ ಮಹಿಳೆ ಅವಳು ಬಯಸಿದ್ದಲ್ಲಿ ಮದುವೆಯಾಗದೆಯೂ ತಾಯಿಯಾಗುವುದರಲ್ಲಿ ತಪ್ಪೇನಿದೆ? ಅದು ಅವಳ ಇಚ್ಚೆಯಲ್ಲವೇ? ಅವರ ಖಾಸಗಿತನವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂಬುದನ್ನು ಅರಿತುಕೊಳ್ಳಬೇಕು.

ಸಫೂರ ಜರ್ಗರ್ ಅವಿವಾಹಿತ ಮಹಿಳೆ ಎಂದು ಸಾಮಾಜಿಕ ಮಾಧ್ಯಮಗಳು ಹೇಳುತ್ತಿರುವುದು ಸುಳ್ಳು. ಆಕೆಯ ಗರ್ಭಧಾರಣೆಯನ್ನು ಜೈಲಿನಲ್ಲಿ ಕಂಡುಹಿಡಿಯಲಾಗಿದೆ ಎಂಬ ವಾದವೂ ಆಧಾರರಹಿತವಾಗಿದೆ.


ಇದನ್ನೂ ಓದಿ: ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...