Homeಮುಖಪುಟಪ್ರಿಯಾಂಕ್‌ ಖರ್ಗೆಗೆ ಶೂಟ್ ಮಾಡುವುದಾಗಿ ಬಿಜೆಪಿ ಮುಖಂಡನಿಂದ ಬೆದರಿಕೆ; ಕಾಂಗ್ರೆಸ್ ಆಕ್ರೋಶ

ಪ್ರಿಯಾಂಕ್‌ ಖರ್ಗೆಗೆ ಶೂಟ್ ಮಾಡುವುದಾಗಿ ಬಿಜೆಪಿ ಮುಖಂಡನಿಂದ ಬೆದರಿಕೆ; ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಯುವ ನಾಯಕ ಪ್ರಿಯಾಂಕ್‌ ಖರ್ಗೆಯವರ ಹೇಳಿಕೆಯನ್ನು ಟೀಕಿಸುವ ಭರದಲ್ಲಿ, “ನಿಮಗೆ ಶೂಟ್ ಮಾಡಲು ರೆಡಿ ಇದ್ದೇವೆ” ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ವಿವಾದಾತ್ಮಕ ಹೇಳಿಕೆ ನೀಡಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

“ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ನಾವು ರೆಡಿ ಇದ್ದೀವಿ” ಎಂದು ಮಣಿಕಂಠ ರಾಠೋಡ್‌ ಬೆದರಿಕೆ ಹಾಕಿದ್ದಾರೆ.

ಇತ್ತೀಚೆಗೆ ‘ಪ್ರಿಯಾಂಕ್‌ ಖರ್ಗೆ ನಾಪತ್ತೆ’ ಎಂಬ ಪೋಸ್ಟರ್ ಅಳವಡಿಸಿದ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ, “ನಾವು ಮತ್ತು ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಬಿಜೆಪಿ ಲೀಡರ್‌ಗಳು ತಿರುಗಾಡಲು ಬಿಡುವುದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರು ಸತ್ತೋಗಿಲ್ಲ” ಎಂದು ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿರುವ ಠಾಠೋಡ್‌, “ನೀವು ಎಕೆ-47ನಿಂದ ಶೂಟ್ ಮಾಡುವಿರಾ? ಅಥವಾ ತೋಪ್‌ನಿಂದ ಮಾಡೋದಿದೆಯಾ? ನೀವು ಶೂಟ್ ಮಾಡಿ, ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ” ಎನ್ನುವ ಮೂಲಕ ಬಂದೂಕಿನ ಪ್ರತಿಕ್ರಿಯೆಯನ್ನು ಪ್ರಸ್ತಾಪಿಸಿದ್ದಾರೆ.

“ಪ್ರಿಯಾಂಕ್ ಅವರ ಗೊಡ್ಡು ಬೆರಿಕೆಗಳಿಗೆ ಹೆದರುವ ಆಸಾಮಿಯಲ್ಲ. ನಿಮಗೆ ಕೌಂಟರ್‌ ನೀಡಲು ನಾನೊಬ್ಬನೇ ಸಾಕು” ಎಂದು ತಿಳಿಸಿದ್ದಾರೆ. ಬಂದೂಕು ಬಳಸುವ ಪ್ರಸ್ತಾಪವನ್ನು ಮಾಡಿರುವ ಬಿಜೆಪಿ ಮುಖಂಡನ ಹೇಳಿಕೆಗೆ ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದೆ.

“ಭಯೋತ್ಪಾದಕ ಗೋಡೆ ಸಂತತಿಯವರಾದ ಬಿಜೆಪಿಯ ತಾಲಿಬಾನ್ ಮನಸ್ಥಿತಿ, ಸಂಸ್ಕೃತಿ ಹೊರಬಂದಿದೆ. ಹಿಂದೆ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಬಿಜೆಪಿ ಇಂದು ಪ್ರಿಯಾಂಕ್ ಖರ್ಗೆ ಅವರಿಗೆ ಶೂಟ್ ಮಾಡುವ ಬೆದರಿಕೆ ಹಾಕುತ್ತಿದೆ. ಬ್ರಿಟಿಷರ ಗುಂಡುಗಳಿಗೆ ಹೆದರದ ಕಾಂಗ್ರೆಸ್‌, ಐಸಿಸ್ ಉಗ್ರರಂತಿರುವ ಬಿಜೆಪಿ ಹೇಡಿಗಳಿಗೆ ಹೆದರುವುದೇ” ಎಂದು ಕಾಂಗ್ರೆಸ್ ಹರಿಹಾಯ್ದಿದೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಚಿವ ಶರಣ ಪ್ರಕಾಶ ಪಾಟೀಲ್, “ಪ್ರಿಯಾಂಕ್ ಖರ್ಗೆ ಅವರಿಗೆ ನಾವು ಎಕೆ47 ಗನ್ ನಿಂದು ಶೂಟ್ ಮಾಡತ್ತೇವೆ ಎಂದು ಭಾರತೀಯ ಜನತಾ ಪಾರ್ಟಿ ಸರ್ಕಾರ ತಮ್ಮ ಕಾರ್ಯಕರ್ತರ ಮೂಲಕ ಹೇಳಿಕೆ ಕೊಡಿಸಿದೆ. ಇದನ್ನು ನಾವು ಖಂಡಿಸುತ್ತೇವೆ ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಪ್ರಿಯಾಂಕ ಖರ್ಗೆ ಅವರನ್ನು ಕೊಲೆ ಮಾಡೋದಕ್ಕೆ ಸಂಚು ರೂಪಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಸರ್ಕಾರದ ಅವ್ಯವಹಾರ ಅಕ್ರಮದ ಕುರಿತು ಧ್ವನಿ ಎತ್ತುತ್ತಿದ್ದಾರೆ‌. ಈ ಹೀಗಾಗಿ ಸರ್ಕಾರ ಪ್ರೀಯಾಂಕ್ ಖರ್ಗೆ ಅವರ ಧ್ವನಿ ಹಾಗೂ ಅವರನ್ನು ಸಹ ಮುಗಿಸುವ ಸಂಚು ಹೂಡಿದೆ” ಎಂದಿದ್ದಾರೆ.

“ಸಮಿಶ್ರ ಸರ್ಕಾರದಲ್ಲಿದ್ದಾಗ ಪ್ರಿಯಾಂಕ್ ಖರ್ಗೆ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಭದ್ರತೆಯನ್ನು ಹಿಂಪಡೆದು ಕೊಳ್ಳಲಾಗಿದೆ‌. ಭದ್ರತೆ ಹಿಂಪಡೆಯುವ ಮುಖಾಂತರ ರಾಜ್ಯ ಬಿಜೆಪಿ ಸರ್ಕಾರ ಪಿಎಸ್ಐ ಹಗರಣದ ಸೇಡು ತೀರಿಸಿಕೊಳ್ಳುತ್ತಿದೆ. ಇದೊಂದು ವ್ಯವಸ್ಥಿತ ಸಂಚು” ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಿಪಿಐ(ಎಂ) ನಾಯಕನ ಹತ್ಯೆ: 11 ಮಂದಿ ಆರೆಸ್ಸೆಸ್‌‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ತೀರ್ಪು

2013ರಲ್ಲಿ ಕೇರಳದಲ್ಲಿ ನಡೆದಿದ್ದ ರಾಜಕೀಯ ಕೊಲೆಗೆ ಸಂಬಂಧಿಸಿದಂತೆ 11 ಮಂದಿ ಆರ್‌ಎಸ್‌ಎಸ್‌ ದುಷ್ಕರ್ಮಿಗಳನ್ನು ತಪ್ಪಿತಸ್ಥರೆಂದು ಕೇರಳದ ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ತಿರುವನಂತಪುರಂ ಜಿಲ್ಲೆಯ ಅನವೂರಿನಲ್ಲಿ ನಡೆದ ಸಿಪಿಐ(ಎಂ) ನಾಯಕ ಅನವೂರ್ ನಾರಾಯಣನ್ ನಾಯರ್ ಹತ್ಯೆ ಪ್ರಕರಣದಲ್ಲಿ 11 ಮಂದಿ ಆರೆಸ್ಸೆಸ್‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ಕೋರ್ಟ್ ತೀರ್ಪು ನೀಡಿದ್ದು, ಶಿಕ್ಷೆ‌ಯನ್ನು ಸೋಮವಾರ ಪ್ರಕಟವಾಗಲಿದೆ. ತಪ್ಪಿತಸ್ಥರಲ್ಲಿ ಬಿಜೆಪಿ ಬೆಂಬಲಿತ ಕಾರ್ಮಿಕ ಸಂಘಟನೆ ಬಿಎಂಎಸ್ (ಕೆಎಸ್‌ಆರ್‌ಟಿಸಿ ನೌಕರರ ಸಂಘ)ನ ರಾಜ್ಯ ಮಟ್ಟದ ನಾಯಕ ಕೂಡ ಸೇರಿದ್ದಾನೆ.

ಸಿಪಿಎಂ ಅನವೂರು ಶಾಖೆಯ ಕಾರ್ಯದರ್ಶಿ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಸ್ಟಾಫ್ ಯೂನಿಯನ್ ರಾಜ್ಯ ಸಮಿತಿಯ ಸದಸ್ಯರಾಗಿದ್ದ ನಾರಾಯಣನ್ ಅವರನ್ನು 2013 ರ ನವೆಂಬರ್ 4 ರಂದು ಅವರ ಮನೆಗೆ ನುಗ್ಗಿದ ಶಸ್ತ್ರಧಾರಿ ಆರೆಸ್ಸೆಸ್‌‌ ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿತ್ತು.

ನಾರಾಯಣನ್‌ ಅವರನ್ನು, ಅವರ ಪತ್ನಿ ಮತ್ತು ಇಬ್ಬರು ಪುತ್ರರ ಎದುರೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಘಟನೆಯಲ್ಲಿ ನಾರಾಯಣನ್‌ ಅವರ ಮಕ್ಕಳಾದ ಶಿವಪ್ರಸಾದ್ ಹಾಗೂ ಮತ್ತೊಬ್ಬ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿರಿ: ‘ಗುಜರಾತ್‌ ಮಾದರಿ’ ಅಭ್ಯರ್ಥಿ ಆಯ್ಕೆಗೆ ಸ್ವತಃ ಕರ್ನಾಟಕ ಬಿಜೆಪಿಯೆ ತಯಾರಾಗುವುದಿಲ್ಲ; ಯಾಕೆಂದರೆ…

ದಾಳಿಕೋರರ ಪ್ರಮುಖ ಗುರಿ ನಾರಾಯಣನ್ ಅವರ ಮಗ ಶಿವಪ್ರಸಾದ್ ಆಗಿದ್ದರು. ವಿದ್ಯಾರ್ಥಿ ಸಂಘಟನೆಯಾಗಿದ್ದ ಎಸ್‌ಎಫ್‌ಐನ ವೆಳ್ಳಾರಡ ಪ್ರದೇಶ ಕಾರ್ಯದರ್ಶಿಯಾಗಿದ್ದ ಅವರನ್ನು ಕೊಲ್ಲಲು ಆರೆಸ್ಸೆಸ್‌ನ ದುಷ್ಕರ್ಮಿಗಳು ಅವರ ಮನೆಗೆ ಬಂದಿದ್ದರು.

ತನ್ನ ಮಗನನ್ನು ಉಳಿಸಲು ಯತ್ನಿಸಿದಾಗ ನಾರಾಯಣನ್ ಅವರನ್ನು ಕಡಿದು ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೂ ಮುನ್ನ ಎಸ್‌ಎಫ್‌ಐ ಸದಸ್ಯರು ಬಿಜೆಪಿ ಬೆಂಬಲಿತ ಕಾರ್ಮಿಕ ಸಂಘಟನೆಯ ಬಿಎಂಎಸ್‌‌‌ನ ಕಾರ್ಯಕರ್ತನಾಗಿದ್ದ ಬಸ್ ಚಾಲಕನೊಂದಿಗೆ ಘರ್ಷಣೆ ನಡೆಸಿದ್ದರು.

ಇದರ ಪ್ರತೀಕಾರವಾಗಿ, ಶಿವಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ನಾರಾಯಣನ್ ಮನೆಗೆ ಆರೆಸ್ಸೆಸ್‌ ದುಷ್ಕರ್ಮಿಗಳ ಗುಂಪು ನುಗ್ಗಿತ್ತು. ಆದರೆ ಅವರನ್ನು ನಾರಾಯಣನ್ ತಡೆದಿದ್ದು, ಈ ವೇಳೆ ಹರಿತವಾದ ಆಯುಧಗಳಿಂದ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...