Homeಮುಖಪುಟಪ್ರಿಯಾಂಕ್‌ ಖರ್ಗೆಗೆ ಶೂಟ್ ಮಾಡುವುದಾಗಿ ಬಿಜೆಪಿ ಮುಖಂಡನಿಂದ ಬೆದರಿಕೆ; ಕಾಂಗ್ರೆಸ್ ಆಕ್ರೋಶ

ಪ್ರಿಯಾಂಕ್‌ ಖರ್ಗೆಗೆ ಶೂಟ್ ಮಾಡುವುದಾಗಿ ಬಿಜೆಪಿ ಮುಖಂಡನಿಂದ ಬೆದರಿಕೆ; ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ಕಾಂಗ್ರೆಸ್ ಯುವ ನಾಯಕ ಪ್ರಿಯಾಂಕ್‌ ಖರ್ಗೆಯವರ ಹೇಳಿಕೆಯನ್ನು ಟೀಕಿಸುವ ಭರದಲ್ಲಿ, “ನಿಮಗೆ ಶೂಟ್ ಮಾಡಲು ರೆಡಿ ಇದ್ದೇವೆ” ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ವಿವಾದಾತ್ಮಕ ಹೇಳಿಕೆ ನೀಡಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

“ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ನಾವು ರೆಡಿ ಇದ್ದೀವಿ” ಎಂದು ಮಣಿಕಂಠ ರಾಠೋಡ್‌ ಬೆದರಿಕೆ ಹಾಕಿದ್ದಾರೆ.

ಇತ್ತೀಚೆಗೆ ‘ಪ್ರಿಯಾಂಕ್‌ ಖರ್ಗೆ ನಾಪತ್ತೆ’ ಎಂಬ ಪೋಸ್ಟರ್ ಅಳವಡಿಸಿದ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ, “ನಾವು ಮತ್ತು ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಬಿಜೆಪಿ ಲೀಡರ್‌ಗಳು ತಿರುಗಾಡಲು ಬಿಡುವುದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರು ಸತ್ತೋಗಿಲ್ಲ” ಎಂದು ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿರುವ ಠಾಠೋಡ್‌, “ನೀವು ಎಕೆ-47ನಿಂದ ಶೂಟ್ ಮಾಡುವಿರಾ? ಅಥವಾ ತೋಪ್‌ನಿಂದ ಮಾಡೋದಿದೆಯಾ? ನೀವು ಶೂಟ್ ಮಾಡಿ, ನಾವು ಸಾಯೋಕು ರೆಡಿ ಇದ್ದೀವಿ. ನಾವೂ ನಿಮಗೆ ಶೂಟ್ ಮಾಡೋಕೂ ರೆಡಿ ಇದ್ದೀವಿ” ಎನ್ನುವ ಮೂಲಕ ಬಂದೂಕಿನ ಪ್ರತಿಕ್ರಿಯೆಯನ್ನು ಪ್ರಸ್ತಾಪಿಸಿದ್ದಾರೆ.

“ಪ್ರಿಯಾಂಕ್ ಅವರ ಗೊಡ್ಡು ಬೆರಿಕೆಗಳಿಗೆ ಹೆದರುವ ಆಸಾಮಿಯಲ್ಲ. ನಿಮಗೆ ಕೌಂಟರ್‌ ನೀಡಲು ನಾನೊಬ್ಬನೇ ಸಾಕು” ಎಂದು ತಿಳಿಸಿದ್ದಾರೆ. ಬಂದೂಕು ಬಳಸುವ ಪ್ರಸ್ತಾಪವನ್ನು ಮಾಡಿರುವ ಬಿಜೆಪಿ ಮುಖಂಡನ ಹೇಳಿಕೆಗೆ ಕಾಂಗ್ರೆಸ್‌ ಪ್ರತಿಕ್ರಿಯೆ ನೀಡಿದೆ.

“ಭಯೋತ್ಪಾದಕ ಗೋಡೆ ಸಂತತಿಯವರಾದ ಬಿಜೆಪಿಯ ತಾಲಿಬಾನ್ ಮನಸ್ಥಿತಿ, ಸಂಸ್ಕೃತಿ ಹೊರಬಂದಿದೆ. ಹಿಂದೆ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಬಿಜೆಪಿ ಇಂದು ಪ್ರಿಯಾಂಕ್ ಖರ್ಗೆ ಅವರಿಗೆ ಶೂಟ್ ಮಾಡುವ ಬೆದರಿಕೆ ಹಾಕುತ್ತಿದೆ. ಬ್ರಿಟಿಷರ ಗುಂಡುಗಳಿಗೆ ಹೆದರದ ಕಾಂಗ್ರೆಸ್‌, ಐಸಿಸ್ ಉಗ್ರರಂತಿರುವ ಬಿಜೆಪಿ ಹೇಡಿಗಳಿಗೆ ಹೆದರುವುದೇ” ಎಂದು ಕಾಂಗ್ರೆಸ್ ಹರಿಹಾಯ್ದಿದೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಚಿವ ಶರಣ ಪ್ರಕಾಶ ಪಾಟೀಲ್, “ಪ್ರಿಯಾಂಕ್ ಖರ್ಗೆ ಅವರಿಗೆ ನಾವು ಎಕೆ47 ಗನ್ ನಿಂದು ಶೂಟ್ ಮಾಡತ್ತೇವೆ ಎಂದು ಭಾರತೀಯ ಜನತಾ ಪಾರ್ಟಿ ಸರ್ಕಾರ ತಮ್ಮ ಕಾರ್ಯಕರ್ತರ ಮೂಲಕ ಹೇಳಿಕೆ ಕೊಡಿಸಿದೆ. ಇದನ್ನು ನಾವು ಖಂಡಿಸುತ್ತೇವೆ ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಪ್ರಿಯಾಂಕ ಖರ್ಗೆ ಅವರನ್ನು ಕೊಲೆ ಮಾಡೋದಕ್ಕೆ ಸಂಚು ರೂಪಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಸರ್ಕಾರದ ಅವ್ಯವಹಾರ ಅಕ್ರಮದ ಕುರಿತು ಧ್ವನಿ ಎತ್ತುತ್ತಿದ್ದಾರೆ‌. ಈ ಹೀಗಾಗಿ ಸರ್ಕಾರ ಪ್ರೀಯಾಂಕ್ ಖರ್ಗೆ ಅವರ ಧ್ವನಿ ಹಾಗೂ ಅವರನ್ನು ಸಹ ಮುಗಿಸುವ ಸಂಚು ಹೂಡಿದೆ” ಎಂದಿದ್ದಾರೆ.

“ಸಮಿಶ್ರ ಸರ್ಕಾರದಲ್ಲಿದ್ದಾಗ ಪ್ರಿಯಾಂಕ್ ಖರ್ಗೆ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಭದ್ರತೆಯನ್ನು ಹಿಂಪಡೆದು ಕೊಳ್ಳಲಾಗಿದೆ‌. ಭದ್ರತೆ ಹಿಂಪಡೆಯುವ ಮುಖಾಂತರ ರಾಜ್ಯ ಬಿಜೆಪಿ ಸರ್ಕಾರ ಪಿಎಸ್ಐ ಹಗರಣದ ಸೇಡು ತೀರಿಸಿಕೊಳ್ಳುತ್ತಿದೆ. ಇದೊಂದು ವ್ಯವಸ್ಥಿತ ಸಂಚು” ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಿಪಿಐ(ಎಂ) ನಾಯಕನ ಹತ್ಯೆ: 11 ಮಂದಿ ಆರೆಸ್ಸೆಸ್‌‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ತೀರ್ಪು

2013ರಲ್ಲಿ ಕೇರಳದಲ್ಲಿ ನಡೆದಿದ್ದ ರಾಜಕೀಯ ಕೊಲೆಗೆ ಸಂಬಂಧಿಸಿದಂತೆ 11 ಮಂದಿ ಆರ್‌ಎಸ್‌ಎಸ್‌ ದುಷ್ಕರ್ಮಿಗಳನ್ನು ತಪ್ಪಿತಸ್ಥರೆಂದು ಕೇರಳದ ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ತಿರುವನಂತಪುರಂ ಜಿಲ್ಲೆಯ ಅನವೂರಿನಲ್ಲಿ ನಡೆದ ಸಿಪಿಐ(ಎಂ) ನಾಯಕ ಅನವೂರ್ ನಾರಾಯಣನ್ ನಾಯರ್ ಹತ್ಯೆ ಪ್ರಕರಣದಲ್ಲಿ 11 ಮಂದಿ ಆರೆಸ್ಸೆಸ್‌ ದುಷ್ಕರ್ಮಿಗಳು ತಪ್ಪಿತಸ್ಥರೆಂದು ಕೋರ್ಟ್ ತೀರ್ಪು ನೀಡಿದ್ದು, ಶಿಕ್ಷೆ‌ಯನ್ನು ಸೋಮವಾರ ಪ್ರಕಟವಾಗಲಿದೆ. ತಪ್ಪಿತಸ್ಥರಲ್ಲಿ ಬಿಜೆಪಿ ಬೆಂಬಲಿತ ಕಾರ್ಮಿಕ ಸಂಘಟನೆ ಬಿಎಂಎಸ್ (ಕೆಎಸ್‌ಆರ್‌ಟಿಸಿ ನೌಕರರ ಸಂಘ)ನ ರಾಜ್ಯ ಮಟ್ಟದ ನಾಯಕ ಕೂಡ ಸೇರಿದ್ದಾನೆ.

ಸಿಪಿಎಂ ಅನವೂರು ಶಾಖೆಯ ಕಾರ್ಯದರ್ಶಿ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಸ್ಟಾಫ್ ಯೂನಿಯನ್ ರಾಜ್ಯ ಸಮಿತಿಯ ಸದಸ್ಯರಾಗಿದ್ದ ನಾರಾಯಣನ್ ಅವರನ್ನು 2013 ರ ನವೆಂಬರ್ 4 ರಂದು ಅವರ ಮನೆಗೆ ನುಗ್ಗಿದ ಶಸ್ತ್ರಧಾರಿ ಆರೆಸ್ಸೆಸ್‌‌ ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿತ್ತು.

ನಾರಾಯಣನ್‌ ಅವರನ್ನು, ಅವರ ಪತ್ನಿ ಮತ್ತು ಇಬ್ಬರು ಪುತ್ರರ ಎದುರೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಘಟನೆಯಲ್ಲಿ ನಾರಾಯಣನ್‌ ಅವರ ಮಕ್ಕಳಾದ ಶಿವಪ್ರಸಾದ್ ಹಾಗೂ ಮತ್ತೊಬ್ಬ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿರಿ: ‘ಗುಜರಾತ್‌ ಮಾದರಿ’ ಅಭ್ಯರ್ಥಿ ಆಯ್ಕೆಗೆ ಸ್ವತಃ ಕರ್ನಾಟಕ ಬಿಜೆಪಿಯೆ ತಯಾರಾಗುವುದಿಲ್ಲ; ಯಾಕೆಂದರೆ…

ದಾಳಿಕೋರರ ಪ್ರಮುಖ ಗುರಿ ನಾರಾಯಣನ್ ಅವರ ಮಗ ಶಿವಪ್ರಸಾದ್ ಆಗಿದ್ದರು. ವಿದ್ಯಾರ್ಥಿ ಸಂಘಟನೆಯಾಗಿದ್ದ ಎಸ್‌ಎಫ್‌ಐನ ವೆಳ್ಳಾರಡ ಪ್ರದೇಶ ಕಾರ್ಯದರ್ಶಿಯಾಗಿದ್ದ ಅವರನ್ನು ಕೊಲ್ಲಲು ಆರೆಸ್ಸೆಸ್‌ನ ದುಷ್ಕರ್ಮಿಗಳು ಅವರ ಮನೆಗೆ ಬಂದಿದ್ದರು.

ತನ್ನ ಮಗನನ್ನು ಉಳಿಸಲು ಯತ್ನಿಸಿದಾಗ ನಾರಾಯಣನ್ ಅವರನ್ನು ಕಡಿದು ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೂ ಮುನ್ನ ಎಸ್‌ಎಫ್‌ಐ ಸದಸ್ಯರು ಬಿಜೆಪಿ ಬೆಂಬಲಿತ ಕಾರ್ಮಿಕ ಸಂಘಟನೆಯ ಬಿಎಂಎಸ್‌‌‌ನ ಕಾರ್ಯಕರ್ತನಾಗಿದ್ದ ಬಸ್ ಚಾಲಕನೊಂದಿಗೆ ಘರ್ಷಣೆ ನಡೆಸಿದ್ದರು.

ಇದರ ಪ್ರತೀಕಾರವಾಗಿ, ಶಿವಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ನಾರಾಯಣನ್ ಮನೆಗೆ ಆರೆಸ್ಸೆಸ್‌ ದುಷ್ಕರ್ಮಿಗಳ ಗುಂಪು ನುಗ್ಗಿತ್ತು. ಆದರೆ ಅವರನ್ನು ನಾರಾಯಣನ್ ತಡೆದಿದ್ದು, ಈ ವೇಳೆ ಹರಿತವಾದ ಆಯುಧಗಳಿಂದ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...