Homeಅಂತರಾಷ್ಟ್ರೀಯಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

- Advertisement -
- Advertisement -

“ಯಾವುದೆ ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ದ್ವೇಷ ಭಾಷಣದ ಕುರಿತು ತನ್ನ ನೀತಿಗಳನ್ನು ಜಾರಿಗೊಳಿಸುತ್ತದೆ ಎಂದು ಫೇಸ್‌ಬುಕ್ ಹೇಳಿದೆ. ಆಡಳಿತಾರೂಢ ಬಿಜೆಪಿಯ ನಾಯಕರು ಮತ್ತು ಕಾರ್ಯಕರ್ತರ ಆಕ್ಷೇಪಾರ್ಹ ವಿಷಯವನ್ನು ಫೇಸ್‌ಬುಕ್ ನಿರ್ಲಕ್ಷಿಸಿದೆ ಎಂದು ನಿನ್ನೆ ಅಮೆರಿಕದ ಮಾಧ್ಯಮವೊಂದು ಹೇಳಿದ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ಬಂದಿದೆ.

“ಯಾರೊಬ್ಬರ ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ನಾವು ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸುತ್ತೇವೆ. ಹಿಂಸಾಚಾರವನ್ನು ಪ್ರಚೋದಿಸುವ ದ್ವೇಷದ ಮಾತು ಮತ್ತು ವಿಷಯವನ್ನು ನಾವು ನಿಷೇಧಿಸುತ್ತೇವೆ. ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ನಮಗೆ ತಿಳಿದಿದ್ದರೂ, ನಾವು ಜಾರಿಗೊಳಿಸುವಲ್ಲಿ ಪ್ರಗತಿ ಸಾಧಿಸುತ್ತಿದ್ದೇವೆ. ನ್ಯಾಯ ಮತ್ತು ನಿಖರತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಪ್ರಕ್ರಿಯೆಯ ನಿಯಮಿತ ಲೆಕ್ಕಪರಿಶೋಧನೆಯನ್ನು ನಡೆಸುತ್ತೇವೆ” ಎಂದು ಫೇಸ್‌ಬುಕ್ ವಕ್ತಾರರು ತಿಳಿಸಿದ್ದಾರೆ.

“ಭಾರತೀಯ ರಾಜಕೀಯದೊಂದಿಗೆ ಫೇಸ್‌ಬುಕ್ ದ್ವೇಷ-ಭಾಷಣ ನಿಯಮಗಳಲ್ಲಿ ಘರ್ಷಣೆ – ವಿವಾದಾತ್ಮಕ ರಾಜಕಾರಣಿಯನ್ನು ನಿಷೇಧಿಸುವ ಕ್ರಮವನ್ನು ಕಂಪನಿಯ ಕಾರ್ಯನಿರ್ವಾಹಕ ವಿರೋಧಿಸಿದ್ದಾರೆ” ಎಂಬ ಶೀರ್ಷಿಕೆಯಲ್ಲಿ ಅಮೆರಿಕಾ ಮೂಲದ ವಾಲ್ ಸ್ಟ್ರೀಟ್ ಜರ್ನಲ್ ವಿಶೇಷ ವರದಿ ಮಾಡಿತ್ತು. ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ದ್ವೇಷದ ಮಾತು ಮತ್ತು ಆಕ್ಷೇಪಾರ್ಹ ವಿಷಯಗಳನ್ನು ನಿರ್ಬಂಧಿಸಲು ಫೇಸ್‌ ಹೆದರುತ್ತಿದೆ ಎಂದು ವರದಿಯಲ್ಲಿ ಉದಾಹರಣೆಯೊಂದಿಗೆ ವಿವರಿಸಲಾಗಿತ್ತು.

ಬಿಜೆಪಿ ಕಾರ್ಯಕರ್ತರ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಭಾತದಲ್ಲಿ ಕಂಪನಿಯ ವ್ಯವಹಾರದ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಫೇಸ್‌ಬುಕ್ ಕಾರ್ಯನಿರ್ವಾಹಕರೊಬ್ಬರು ಹೇಳಿದ್ದಾರೆ ಎಂದು ಜರ್ನಲ್ ತನ್ನ ವರದಿಯಲ್ಲಿ ಹೇಳಿದೆ. ಪ್ರಸ್ತುತ ಮತ್ತು ಮಾಜಿ ಉದ್ಯೋಗಿಗಳನ್ನು ಉಲ್ಲೇಖಿಸಿರುವ ವರದಿಯು, ಫೇಸ್‌ಬುಕ್ ಬಿಜೆಪಿಯ ಕಡೆಗೆ ವಿಶಾಲವಾದ ಒಲವು ಹೊಂದಿದೆ ಎಂದು ಹೇಳಿದೆ.

ಜರ್ನಲ್‌ ಈ ವರದಿ ಪ್ರಕಟಿಸಿದ ನಂತರ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ದಾಳಿಗಳು ನಡೆದಿವೆ. ಈ ವರದಿಯು ಬಿಜೆಪಿ ಸಾಮಾಜಿಕ ಮಾಧ್ಯಮ ಕುಶಲತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಉಲ್ಲೇಖಿಸಿದೆ. ವರದಿಯನ್ನು ಉಲ್ಲೇಖಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಮತದಾರರ ಮೇಲೆ ಪ್ರಭಾವ ಬೀರಲು ಫೇಸ್‌ಬುಕ್ ಮತ್ತು ವಾಟ್ಸಾಪ್ ಬಳಸಿ ನಕಲಿ ಸುದ್ದಿ ಹರಡಿದ್ದಾರೆ ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಕೇಂಬ್ರಿಡ್ಜ್ ಅನಾಲಿಟಿಕಾ ವಿಷಯದ ಬಗ್ಗೆ ಕಾಂಗ್ರೆಸ್ ಅನ್ನು ನೆನಪಿಸಿದ್ದರು.

ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ವರದಿಯ ಬಗ್ಗೆ ಸಮಿತಿ ಫೇಸ್‌ಬುಕ್‌ನಿಂದ ವರದಿ ಬಯಸಿದೆ ಎಂದು ಹೇಳಿದರು.

ಮಾರ್ಚ್ 2018 ರಲ್ಲಿ ಅಂದರೆ ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗೂ ಒಂದು ವರ್ಷದ ಮೊದಲು, ಯುಕೆ ಮೂಲದ ಸಂಸ್ಥೆ ಕೇಂಬ್ರಿಡ್ಜ್ ಅನಾಲಿಟಿಕಾ, 2016 ರ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಆಯ್ಕೆಗೆ ಸಹಾಯ ಮಾಡಲು ಫೇಸ್‌ಬುಕ್ ಲಕ್ಷಾಂತರ ಬಳಕೆದಾರರ ಡೇಟಾವನ್ನು ಕದ್ದಿದೆ ಎಂದು ಆರೋಪಿಸಿತ್ತು. ಇದರ ನಂತರ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಭಾರತದಲ್ಲಿ ಚುನಾವಣೆಗಳಿಗೆ ಸಂಪರ್ಕವಿದೆ ಎಂದು ಆರೋಪ ಪ್ರತ್ಯಾರೋಪಗಳನ್ನು ಮಾಡಿದ್ದವು.

2010ರ ಬಿಹಾರ ಚುನಾವಣೆಯ ಸಂದರ್ಭದಲ್ಲಿ ಕಂಪನಿಯು ತನ್ನ ಸೇವೆಗಳನ್ನು ಭಾರತದ ರಾಜಕೀಯ ಪಕ್ಷವೊಂದಕ್ಕೆ ಒದಗಿಸಿದೆ ಎಂದು ಕೇಂಬ್ರಿಡ್ಜ್ ಅನಾಲಿಟಿಕಾ ವೆಬ್‌ಸೈಟ್ ತಿಳಿಸಿತ್ತು. ಕೇಂಬ್ರಿಡ್ಜ್ ಅನಾಲಿಟಿಕಾದ ಭಾರತೀಯ ಅಂಗಸಂಸ್ಥೆ, ಒವ್ಲೆನೊ ಬ್ಯುಸಿನೆಸ್ ಇಂಟೆಲಿಜೆನ್ಸ್ (ಒಬಿಐ), ಬಿಜೆಪಿ, ಕಾಂಗ್ರೆಸ್ ಮತ್ತು ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ಅನ್ನು ಗ್ರಾಹಕರಾಗಿ ಉಲ್ಲೇಖಿಸಿದೆ. ಆದರೆ ಕಾಂಗ್ರೆಸ್ ಆರೋಪಗಳನ್ನು ತಿರಸ್ಕರಿಸಿತ್ತು.


ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...