Homeಅಂತರಾಷ್ಟ್ರೀಯಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

- Advertisement -
- Advertisement -

“ಯಾವುದೆ ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ದ್ವೇಷ ಭಾಷಣದ ಕುರಿತು ತನ್ನ ನೀತಿಗಳನ್ನು ಜಾರಿಗೊಳಿಸುತ್ತದೆ ಎಂದು ಫೇಸ್‌ಬುಕ್ ಹೇಳಿದೆ. ಆಡಳಿತಾರೂಢ ಬಿಜೆಪಿಯ ನಾಯಕರು ಮತ್ತು ಕಾರ್ಯಕರ್ತರ ಆಕ್ಷೇಪಾರ್ಹ ವಿಷಯವನ್ನು ಫೇಸ್‌ಬುಕ್ ನಿರ್ಲಕ್ಷಿಸಿದೆ ಎಂದು ನಿನ್ನೆ ಅಮೆರಿಕದ ಮಾಧ್ಯಮವೊಂದು ಹೇಳಿದ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ಬಂದಿದೆ.

“ಯಾರೊಬ್ಬರ ರಾಜಕೀಯ ಸ್ಥಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ನಾವು ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸುತ್ತೇವೆ. ಹಿಂಸಾಚಾರವನ್ನು ಪ್ರಚೋದಿಸುವ ದ್ವೇಷದ ಮಾತು ಮತ್ತು ವಿಷಯವನ್ನು ನಾವು ನಿಷೇಧಿಸುತ್ತೇವೆ. ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ನಮಗೆ ತಿಳಿದಿದ್ದರೂ, ನಾವು ಜಾರಿಗೊಳಿಸುವಲ್ಲಿ ಪ್ರಗತಿ ಸಾಧಿಸುತ್ತಿದ್ದೇವೆ. ನ್ಯಾಯ ಮತ್ತು ನಿಖರತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಪ್ರಕ್ರಿಯೆಯ ನಿಯಮಿತ ಲೆಕ್ಕಪರಿಶೋಧನೆಯನ್ನು ನಡೆಸುತ್ತೇವೆ” ಎಂದು ಫೇಸ್‌ಬುಕ್ ವಕ್ತಾರರು ತಿಳಿಸಿದ್ದಾರೆ.

“ಭಾರತೀಯ ರಾಜಕೀಯದೊಂದಿಗೆ ಫೇಸ್‌ಬುಕ್ ದ್ವೇಷ-ಭಾಷಣ ನಿಯಮಗಳಲ್ಲಿ ಘರ್ಷಣೆ – ವಿವಾದಾತ್ಮಕ ರಾಜಕಾರಣಿಯನ್ನು ನಿಷೇಧಿಸುವ ಕ್ರಮವನ್ನು ಕಂಪನಿಯ ಕಾರ್ಯನಿರ್ವಾಹಕ ವಿರೋಧಿಸಿದ್ದಾರೆ” ಎಂಬ ಶೀರ್ಷಿಕೆಯಲ್ಲಿ ಅಮೆರಿಕಾ ಮೂಲದ ವಾಲ್ ಸ್ಟ್ರೀಟ್ ಜರ್ನಲ್ ವಿಶೇಷ ವರದಿ ಮಾಡಿತ್ತು. ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ದ್ವೇಷದ ಮಾತು ಮತ್ತು ಆಕ್ಷೇಪಾರ್ಹ ವಿಷಯಗಳನ್ನು ನಿರ್ಬಂಧಿಸಲು ಫೇಸ್‌ ಹೆದರುತ್ತಿದೆ ಎಂದು ವರದಿಯಲ್ಲಿ ಉದಾಹರಣೆಯೊಂದಿಗೆ ವಿವರಿಸಲಾಗಿತ್ತು.

ಬಿಜೆಪಿ ಕಾರ್ಯಕರ್ತರ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಭಾತದಲ್ಲಿ ಕಂಪನಿಯ ವ್ಯವಹಾರದ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಫೇಸ್‌ಬುಕ್ ಕಾರ್ಯನಿರ್ವಾಹಕರೊಬ್ಬರು ಹೇಳಿದ್ದಾರೆ ಎಂದು ಜರ್ನಲ್ ತನ್ನ ವರದಿಯಲ್ಲಿ ಹೇಳಿದೆ. ಪ್ರಸ್ತುತ ಮತ್ತು ಮಾಜಿ ಉದ್ಯೋಗಿಗಳನ್ನು ಉಲ್ಲೇಖಿಸಿರುವ ವರದಿಯು, ಫೇಸ್‌ಬುಕ್ ಬಿಜೆಪಿಯ ಕಡೆಗೆ ವಿಶಾಲವಾದ ಒಲವು ಹೊಂದಿದೆ ಎಂದು ಹೇಳಿದೆ.

ಜರ್ನಲ್‌ ಈ ವರದಿ ಪ್ರಕಟಿಸಿದ ನಂತರ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ದಾಳಿಗಳು ನಡೆದಿವೆ. ಈ ವರದಿಯು ಬಿಜೆಪಿ ಸಾಮಾಜಿಕ ಮಾಧ್ಯಮ ಕುಶಲತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಉಲ್ಲೇಖಿಸಿದೆ. ವರದಿಯನ್ನು ಉಲ್ಲೇಖಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಮತದಾರರ ಮೇಲೆ ಪ್ರಭಾವ ಬೀರಲು ಫೇಸ್‌ಬುಕ್ ಮತ್ತು ವಾಟ್ಸಾಪ್ ಬಳಸಿ ನಕಲಿ ಸುದ್ದಿ ಹರಡಿದ್ದಾರೆ ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಕೇಂಬ್ರಿಡ್ಜ್ ಅನಾಲಿಟಿಕಾ ವಿಷಯದ ಬಗ್ಗೆ ಕಾಂಗ್ರೆಸ್ ಅನ್ನು ನೆನಪಿಸಿದ್ದರು.

ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ವರದಿಯ ಬಗ್ಗೆ ಸಮಿತಿ ಫೇಸ್‌ಬುಕ್‌ನಿಂದ ವರದಿ ಬಯಸಿದೆ ಎಂದು ಹೇಳಿದರು.

ಮಾರ್ಚ್ 2018 ರಲ್ಲಿ ಅಂದರೆ ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗೂ ಒಂದು ವರ್ಷದ ಮೊದಲು, ಯುಕೆ ಮೂಲದ ಸಂಸ್ಥೆ ಕೇಂಬ್ರಿಡ್ಜ್ ಅನಾಲಿಟಿಕಾ, 2016 ರ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಆಯ್ಕೆಗೆ ಸಹಾಯ ಮಾಡಲು ಫೇಸ್‌ಬುಕ್ ಲಕ್ಷಾಂತರ ಬಳಕೆದಾರರ ಡೇಟಾವನ್ನು ಕದ್ದಿದೆ ಎಂದು ಆರೋಪಿಸಿತ್ತು. ಇದರ ನಂತರ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಭಾರತದಲ್ಲಿ ಚುನಾವಣೆಗಳಿಗೆ ಸಂಪರ್ಕವಿದೆ ಎಂದು ಆರೋಪ ಪ್ರತ್ಯಾರೋಪಗಳನ್ನು ಮಾಡಿದ್ದವು.

2010ರ ಬಿಹಾರ ಚುನಾವಣೆಯ ಸಂದರ್ಭದಲ್ಲಿ ಕಂಪನಿಯು ತನ್ನ ಸೇವೆಗಳನ್ನು ಭಾರತದ ರಾಜಕೀಯ ಪಕ್ಷವೊಂದಕ್ಕೆ ಒದಗಿಸಿದೆ ಎಂದು ಕೇಂಬ್ರಿಡ್ಜ್ ಅನಾಲಿಟಿಕಾ ವೆಬ್‌ಸೈಟ್ ತಿಳಿಸಿತ್ತು. ಕೇಂಬ್ರಿಡ್ಜ್ ಅನಾಲಿಟಿಕಾದ ಭಾರತೀಯ ಅಂಗಸಂಸ್ಥೆ, ಒವ್ಲೆನೊ ಬ್ಯುಸಿನೆಸ್ ಇಂಟೆಲಿಜೆನ್ಸ್ (ಒಬಿಐ), ಬಿಜೆಪಿ, ಕಾಂಗ್ರೆಸ್ ಮತ್ತು ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ಅನ್ನು ಗ್ರಾಹಕರಾಗಿ ಉಲ್ಲೇಖಿಸಿದೆ. ಆದರೆ ಕಾಂಗ್ರೆಸ್ ಆರೋಪಗಳನ್ನು ತಿರಸ್ಕರಿಸಿತ್ತು.


ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...