Homeಕರ್ನಾಟಕBJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದ್ದು, ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ ಎಂದು ಅವರು ಘೋಷಿಸಿದ್ದಾರೆ

- Advertisement -
- Advertisement -

ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು “ಸಾಂಸ್ಕೃತಿಕ ಭಯೋತ್ಪಾದನೆ” ಎನ್ನದೆ ಬೇರೇನು ಹೇಳಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, “ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು, ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು ‘ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…’ ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ. ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ. ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

“ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ. ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ. ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ” ಎಂದು ಅವರು ಹೇಳಿದ್ದಾರೆ.

“ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ. ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದ ಬಗ್ಗೆ ನಮ್ಮ ಸಿದ್ದರಾಮಯ್ಯ ಧೈರ್ಯದಿಂದ ಮಾತನಾಡಿದ್ದಾರೆ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....