Homeಕರ್ನಾಟಕBJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದ್ದು, ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ ಎಂದು ಅವರು ಘೋಷಿಸಿದ್ದಾರೆ

- Advertisement -
- Advertisement -

ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು “ಸಾಂಸ್ಕೃತಿಕ ಭಯೋತ್ಪಾದನೆ” ಎನ್ನದೆ ಬೇರೇನು ಹೇಳಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, “ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು, ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು ‘ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…’ ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ. ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ. ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

“ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ. ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ. ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ” ಎಂದು ಅವರು ಹೇಳಿದ್ದಾರೆ.

“ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ. ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದ ಬಗ್ಗೆ ನಮ್ಮ ಸಿದ್ದರಾಮಯ್ಯ ಧೈರ್ಯದಿಂದ ಮಾತನಾಡಿದ್ದಾರೆ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...