Homeಕರ್ನಾಟಕBJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದ್ದು, ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ ಎಂದು ಅವರು ಘೋಷಿಸಿದ್ದಾರೆ

- Advertisement -
- Advertisement -

ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು “ಸಾಂಸ್ಕೃತಿಕ ಭಯೋತ್ಪಾದನೆ” ಎನ್ನದೆ ಬೇರೇನು ಹೇಳಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, “ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು, ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು ‘ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…’ ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ. ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ. ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

“ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ. ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ. ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ” ಎಂದು ಅವರು ಹೇಳಿದ್ದಾರೆ.

“ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ. ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದ ಬಗ್ಗೆ ನಮ್ಮ ಸಿದ್ದರಾಮಯ್ಯ ಧೈರ್ಯದಿಂದ ಮಾತನಾಡಿದ್ದಾರೆ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...