Homeಮುಖಪುಟದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

- Advertisement -
- Advertisement -

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ಪ್ರಚೋದನಾಕಾರಿ ದ್ವೇಷದ ಬಗ್ಗೆ ಯಾವುದೇ ಉಲ್ಲೇಖ ಮಾಡದೇ, ಆ ಸಮಯದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ಮೇಲೆ ಆಪಾದನೆಯನ್ನು ಹೊರಿಸಲಾಗಿದೆ.

2,000 ಪದಗಳ ಕಾಲಾನಕ್ರಮಣಿಕೆಯಲ್ಲಿ ಡಿಸೆಂಬರ್ 13 ರಿಂದ ಫೆಬ್ರವರಿ 25 ರವರೆಗೆ ನಡೆದ ಘಟನೆಗಳನ್ನು ಪಟ್ಟಿ ಮಾಡಿದ್ದು, ಅದರಲ್ಲಿ ಕಪಿಲ್ ಮಿಶ್ರಾ ಸೇರಿದಂತೆ ಬಿಜೆಪಿ ನಾಯಕರ ದ್ವೇಷದ ಭಾಷಣಗಳನ್ನು ಪೊಲೀಸರು ಎಲ್ಲಿಯೂ ಉಲ್ಲೇಖಿಸಿಲ್ಲ.

ಚಾರ್ಜ್‌ಶೀಟ್‌ನಲ್ಲಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಶಾಹೀನ್ ಬಾಗ್ ಮತ್ತು ಸಿಎಎ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದ ಸ್ಥಳದಲ್ಲಿದ್ದ ಪ್ರತಿಭಟನಾಕಾರರ ಬಗ್ಗೆ ಮಾತ್ರ ಉಲ್ಲೇಖಿಸಲಾಗಿದೆ.

ಕೋಮುವಾದಿ ಮತ್ತು ದ್ವೇಷದ ಟ್ವೀಟ್‌ಗಳಿಗೆ ಹೆಸರುವಾಸಿಯಾದ ಕಪಿಲ್ ಮಿಶ್ರಾ ಫೆಬ್ರವರಿ 23 ರಂದು ಈಶಾನ್ಯ ದೆಹಲಿಯ ಜಾಫ್ರಾಬಾದ್‌ ಬಳಿಯ ಮೌಜ್‌ಪುರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ರ್‍ಯಾಲಿಯನ್ನು ನಡೆಸಿದ್ದರು. ಅಲ್ಲಯೇ ಸಿಎಎ ವಿರೋಧಿ ಹೋರಾಟ ಸಹ ನಡೆಯುತ್ತಿತ್ತು.

“ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ನಾವೇ ಬೀದಿಗಿಳಿಯಬೇಕಾಗುತ್ತದೆ” ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಕಪಿಲ್‌ ಮಿಶ್ರಾ ಆಡಿದ್ದ ಮಾತುಗಳು ವೈರಲ್‌ ಆಗಿದ್ದವು. ಕೆಲವು ಗಂಟೆಗಳ ನಂತರ, ಎರಡು ಗುಂಪುಗಳ ನಡುವೆ ಘರ್ಷಣೆಗಳು ಭುಗಿಲೆದ್ದವು, ಅದು ಮುಂದಿನ ಕೆಲವು ದಿನಗಳಲ್ಲಿ ಹೆಚ್ಚಾಯಿತು. ಹಿಂಸಾಚಾರದಲ್ಲಿ ಸುಮಾರು 50 ಜನರು, ಅವರಲ್ಲಿ ಹೆಚ್ಚಿನವರು ಮುಸ್ಲಿಮರು ಸಾವನ್ನಪ್ಪಿದರು.


ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ


ಕಪಿಲ್ ಮಿಶ್ರಾ ಅವರ ಹೇಳಿಕೆಗಳು ಟೀಕೆಗೆ ಗುರಿಯಾಗಿದ್ದವು. ದೆಹಲಿ ಹೈಕೋರ್ಟ್ ಆತನ ವಿರುದ್ಧದ ನಿಷ್ಕ್ರಿಯತೆಯ ಬಗ್ಗೆ ಪೊಲೀಸರನ್ನು ಪ್ರಶ್ನಿಸಿತು. ಬಿಜೆಪಿಯ ಕಪಿಲ್ ಮಿಶ್ರಾ, ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಆದೇಶಿಸಿತ್ತು. ಆದರೆ ಅದೆಲ್ಲ ಘಟನೆಗಳನ್ನು ಪ್ರಸ್ತುತದ ಚಾರ್ಜ್‌ಶೀಟ್ ಬಿಟ್ಟುಬಿಟ್ಟಿದೆ.

ಆ ವಿಚಾರಣೆಯೊಂದರಲ್ಲಿ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರು ಕೋಪಗೊಂಡು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. “ಕೇಂದ್ರ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ಈ ಮೂರು ಬಿಜೆಪಿ ನಾಯಕರ ವಿರುದ್ಧ ಏಕೆ ಎಫ್ಐಆರ್ ಹಾಕಿಲ್ಲ? ಅವರ ದ್ವೇಷ ಭಾಷಣಗಳಿಗಾಗಿ ನೀವು ಅದನ್ನು ಏಕೆ ನೋಂದಾಯಿಸುತ್ತಿಲ್ಲ? ಅಪರಾಧ ನಡೆದಿದೆ ಎಂಬುದನ್ನು ಅಂಗೀಕರಿಸಲು ಸಹ ನೀವು ಬಯಸುವುದಿಲ್ಲವೇ? ” ಎಂದು ಪ್ರಶ್ನಿಸಿದ್ದರು.

ಆದರೆ ಎರಡೇ ದಿನದಲ್ಲಿ ಆ ನ್ಯಾಯಾಧೀಶರನ್ನು ದೆಹಲಿಯಿಂದ ಹರಿಯಾಣಕ್ಕೆ ವರ್ಗಾಯಿಸಲಾಯಿತು, ಇದು ಮತ್ತೊಂದು ವಿವಾದಕ್ಕೆ ಕಾರಣವಾಗಿತ್ತು.

ಇಲ್ಲಿಯವರೆಗೆ ಪೊಲೀಸರು ದಾಖಲಿಸಿದ ಎಫ್‌ಐಆರ್‌ ಮತ್ತು ಬಂಧನಗಳ ಪ್ರಕಾರ ಗಲಭೆಯ ಸಂಚುಕೋರರು ಸಾಮಾಜಿಕ ಕಾರ್ಯಕರ್ತರು ಅಥವಾ ಸಿಎಎ ವಿರೋಧಿ ಪ್ರತಿಭಟನೆಗೆ ಸಂಬಂಧಿಸಿರುವ ಮುಸ್ಲಿಂ ವಿದ್ಯಾರ್ಥಿ ಮುಖಂಡರೇ ಆಗಿದ್ದಾರೆ.

ಈವರೆಗೆ ಗಲಭೆ ಪ್ರಕರಣಗಳಲ್ಲಿ ಪೊಲೀಸರು 783 ಎಫ್‌ಐಆರ್‌ ಮತ್ತು 70 ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ. 90 ದಿನಗಳ ಗಡುವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರಮವನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...