Homeಮುಖಪುಟದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

- Advertisement -
- Advertisement -

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ಪ್ರಚೋದನಾಕಾರಿ ದ್ವೇಷದ ಬಗ್ಗೆ ಯಾವುದೇ ಉಲ್ಲೇಖ ಮಾಡದೇ, ಆ ಸಮಯದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ಮೇಲೆ ಆಪಾದನೆಯನ್ನು ಹೊರಿಸಲಾಗಿದೆ.

2,000 ಪದಗಳ ಕಾಲಾನಕ್ರಮಣಿಕೆಯಲ್ಲಿ ಡಿಸೆಂಬರ್ 13 ರಿಂದ ಫೆಬ್ರವರಿ 25 ರವರೆಗೆ ನಡೆದ ಘಟನೆಗಳನ್ನು ಪಟ್ಟಿ ಮಾಡಿದ್ದು, ಅದರಲ್ಲಿ ಕಪಿಲ್ ಮಿಶ್ರಾ ಸೇರಿದಂತೆ ಬಿಜೆಪಿ ನಾಯಕರ ದ್ವೇಷದ ಭಾಷಣಗಳನ್ನು ಪೊಲೀಸರು ಎಲ್ಲಿಯೂ ಉಲ್ಲೇಖಿಸಿಲ್ಲ.

ಚಾರ್ಜ್‌ಶೀಟ್‌ನಲ್ಲಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಶಾಹೀನ್ ಬಾಗ್ ಮತ್ತು ಸಿಎಎ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದ ಸ್ಥಳದಲ್ಲಿದ್ದ ಪ್ರತಿಭಟನಾಕಾರರ ಬಗ್ಗೆ ಮಾತ್ರ ಉಲ್ಲೇಖಿಸಲಾಗಿದೆ.

ಕೋಮುವಾದಿ ಮತ್ತು ದ್ವೇಷದ ಟ್ವೀಟ್‌ಗಳಿಗೆ ಹೆಸರುವಾಸಿಯಾದ ಕಪಿಲ್ ಮಿಶ್ರಾ ಫೆಬ್ರವರಿ 23 ರಂದು ಈಶಾನ್ಯ ದೆಹಲಿಯ ಜಾಫ್ರಾಬಾದ್‌ ಬಳಿಯ ಮೌಜ್‌ಪುರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ರ್‍ಯಾಲಿಯನ್ನು ನಡೆಸಿದ್ದರು. ಅಲ್ಲಯೇ ಸಿಎಎ ವಿರೋಧಿ ಹೋರಾಟ ಸಹ ನಡೆಯುತ್ತಿತ್ತು.

“ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ನಾವೇ ಬೀದಿಗಿಳಿಯಬೇಕಾಗುತ್ತದೆ” ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಕಪಿಲ್‌ ಮಿಶ್ರಾ ಆಡಿದ್ದ ಮಾತುಗಳು ವೈರಲ್‌ ಆಗಿದ್ದವು. ಕೆಲವು ಗಂಟೆಗಳ ನಂತರ, ಎರಡು ಗುಂಪುಗಳ ನಡುವೆ ಘರ್ಷಣೆಗಳು ಭುಗಿಲೆದ್ದವು, ಅದು ಮುಂದಿನ ಕೆಲವು ದಿನಗಳಲ್ಲಿ ಹೆಚ್ಚಾಯಿತು. ಹಿಂಸಾಚಾರದಲ್ಲಿ ಸುಮಾರು 50 ಜನರು, ಅವರಲ್ಲಿ ಹೆಚ್ಚಿನವರು ಮುಸ್ಲಿಮರು ಸಾವನ್ನಪ್ಪಿದರು.


ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ


ಕಪಿಲ್ ಮಿಶ್ರಾ ಅವರ ಹೇಳಿಕೆಗಳು ಟೀಕೆಗೆ ಗುರಿಯಾಗಿದ್ದವು. ದೆಹಲಿ ಹೈಕೋರ್ಟ್ ಆತನ ವಿರುದ್ಧದ ನಿಷ್ಕ್ರಿಯತೆಯ ಬಗ್ಗೆ ಪೊಲೀಸರನ್ನು ಪ್ರಶ್ನಿಸಿತು. ಬಿಜೆಪಿಯ ಕಪಿಲ್ ಮಿಶ್ರಾ, ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಆದೇಶಿಸಿತ್ತು. ಆದರೆ ಅದೆಲ್ಲ ಘಟನೆಗಳನ್ನು ಪ್ರಸ್ತುತದ ಚಾರ್ಜ್‌ಶೀಟ್ ಬಿಟ್ಟುಬಿಟ್ಟಿದೆ.

ಆ ವಿಚಾರಣೆಯೊಂದರಲ್ಲಿ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರು ಕೋಪಗೊಂಡು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. “ಕೇಂದ್ರ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ಈ ಮೂರು ಬಿಜೆಪಿ ನಾಯಕರ ವಿರುದ್ಧ ಏಕೆ ಎಫ್ಐಆರ್ ಹಾಕಿಲ್ಲ? ಅವರ ದ್ವೇಷ ಭಾಷಣಗಳಿಗಾಗಿ ನೀವು ಅದನ್ನು ಏಕೆ ನೋಂದಾಯಿಸುತ್ತಿಲ್ಲ? ಅಪರಾಧ ನಡೆದಿದೆ ಎಂಬುದನ್ನು ಅಂಗೀಕರಿಸಲು ಸಹ ನೀವು ಬಯಸುವುದಿಲ್ಲವೇ? ” ಎಂದು ಪ್ರಶ್ನಿಸಿದ್ದರು.

ಆದರೆ ಎರಡೇ ದಿನದಲ್ಲಿ ಆ ನ್ಯಾಯಾಧೀಶರನ್ನು ದೆಹಲಿಯಿಂದ ಹರಿಯಾಣಕ್ಕೆ ವರ್ಗಾಯಿಸಲಾಯಿತು, ಇದು ಮತ್ತೊಂದು ವಿವಾದಕ್ಕೆ ಕಾರಣವಾಗಿತ್ತು.

ಇಲ್ಲಿಯವರೆಗೆ ಪೊಲೀಸರು ದಾಖಲಿಸಿದ ಎಫ್‌ಐಆರ್‌ ಮತ್ತು ಬಂಧನಗಳ ಪ್ರಕಾರ ಗಲಭೆಯ ಸಂಚುಕೋರರು ಸಾಮಾಜಿಕ ಕಾರ್ಯಕರ್ತರು ಅಥವಾ ಸಿಎಎ ವಿರೋಧಿ ಪ್ರತಿಭಟನೆಗೆ ಸಂಬಂಧಿಸಿರುವ ಮುಸ್ಲಿಂ ವಿದ್ಯಾರ್ಥಿ ಮುಖಂಡರೇ ಆಗಿದ್ದಾರೆ.

ಈವರೆಗೆ ಗಲಭೆ ಪ್ರಕರಣಗಳಲ್ಲಿ ಪೊಲೀಸರು 783 ಎಫ್‌ಐಆರ್‌ ಮತ್ತು 70 ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ. 90 ದಿನಗಳ ಗಡುವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರಮವನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...