Homeಮುಖಪುಟದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣಗಳು ನಾಪತ್ತೆ!

- Advertisement -
- Advertisement -

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ಬಿಜೆಪಿ ನಾಯಕರ ಪ್ರಚೋದನಾಕಾರಿ ದ್ವೇಷದ ಬಗ್ಗೆ ಯಾವುದೇ ಉಲ್ಲೇಖ ಮಾಡದೇ, ಆ ಸಮಯದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ಮೇಲೆ ಆಪಾದನೆಯನ್ನು ಹೊರಿಸಲಾಗಿದೆ.

2,000 ಪದಗಳ ಕಾಲಾನಕ್ರಮಣಿಕೆಯಲ್ಲಿ ಡಿಸೆಂಬರ್ 13 ರಿಂದ ಫೆಬ್ರವರಿ 25 ರವರೆಗೆ ನಡೆದ ಘಟನೆಗಳನ್ನು ಪಟ್ಟಿ ಮಾಡಿದ್ದು, ಅದರಲ್ಲಿ ಕಪಿಲ್ ಮಿಶ್ರಾ ಸೇರಿದಂತೆ ಬಿಜೆಪಿ ನಾಯಕರ ದ್ವೇಷದ ಭಾಷಣಗಳನ್ನು ಪೊಲೀಸರು ಎಲ್ಲಿಯೂ ಉಲ್ಲೇಖಿಸಿಲ್ಲ.

ಚಾರ್ಜ್‌ಶೀಟ್‌ನಲ್ಲಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಶಾಹೀನ್ ಬಾಗ್ ಮತ್ತು ಸಿಎಎ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದ ಸ್ಥಳದಲ್ಲಿದ್ದ ಪ್ರತಿಭಟನಾಕಾರರ ಬಗ್ಗೆ ಮಾತ್ರ ಉಲ್ಲೇಖಿಸಲಾಗಿದೆ.

ಕೋಮುವಾದಿ ಮತ್ತು ದ್ವೇಷದ ಟ್ವೀಟ್‌ಗಳಿಗೆ ಹೆಸರುವಾಸಿಯಾದ ಕಪಿಲ್ ಮಿಶ್ರಾ ಫೆಬ್ರವರಿ 23 ರಂದು ಈಶಾನ್ಯ ದೆಹಲಿಯ ಜಾಫ್ರಾಬಾದ್‌ ಬಳಿಯ ಮೌಜ್‌ಪುರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ರ್‍ಯಾಲಿಯನ್ನು ನಡೆಸಿದ್ದರು. ಅಲ್ಲಯೇ ಸಿಎಎ ವಿರೋಧಿ ಹೋರಾಟ ಸಹ ನಡೆಯುತ್ತಿತ್ತು.

“ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ನಾವೇ ಬೀದಿಗಿಳಿಯಬೇಕಾಗುತ್ತದೆ” ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಕಪಿಲ್‌ ಮಿಶ್ರಾ ಆಡಿದ್ದ ಮಾತುಗಳು ವೈರಲ್‌ ಆಗಿದ್ದವು. ಕೆಲವು ಗಂಟೆಗಳ ನಂತರ, ಎರಡು ಗುಂಪುಗಳ ನಡುವೆ ಘರ್ಷಣೆಗಳು ಭುಗಿಲೆದ್ದವು, ಅದು ಮುಂದಿನ ಕೆಲವು ದಿನಗಳಲ್ಲಿ ಹೆಚ್ಚಾಯಿತು. ಹಿಂಸಾಚಾರದಲ್ಲಿ ಸುಮಾರು 50 ಜನರು, ಅವರಲ್ಲಿ ಹೆಚ್ಚಿನವರು ಮುಸ್ಲಿಮರು ಸಾವನ್ನಪ್ಪಿದರು.


ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಶಾಹೀನ್ ಬಾಗ್ ಆಗಲು ಬಿಡುವುದಿಲ್ಲ: ಬಿಜೆಪಿ ಮುಖಂಡ ಕಪಿಲ್ ಮಿಶ್ರಾ


ಕಪಿಲ್ ಮಿಶ್ರಾ ಅವರ ಹೇಳಿಕೆಗಳು ಟೀಕೆಗೆ ಗುರಿಯಾಗಿದ್ದವು. ದೆಹಲಿ ಹೈಕೋರ್ಟ್ ಆತನ ವಿರುದ್ಧದ ನಿಷ್ಕ್ರಿಯತೆಯ ಬಗ್ಗೆ ಪೊಲೀಸರನ್ನು ಪ್ರಶ್ನಿಸಿತು. ಬಿಜೆಪಿಯ ಕಪಿಲ್ ಮಿಶ್ರಾ, ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಆದೇಶಿಸಿತ್ತು. ಆದರೆ ಅದೆಲ್ಲ ಘಟನೆಗಳನ್ನು ಪ್ರಸ್ತುತದ ಚಾರ್ಜ್‌ಶೀಟ್ ಬಿಟ್ಟುಬಿಟ್ಟಿದೆ.

ಆ ವಿಚಾರಣೆಯೊಂದರಲ್ಲಿ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರು ಕೋಪಗೊಂಡು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. “ಕೇಂದ್ರ ಸಚಿವರು, ಸಂಸದರು ಮತ್ತು ಶಾಸಕರು ಸೇರಿದಂತೆ ಈ ಮೂರು ಬಿಜೆಪಿ ನಾಯಕರ ವಿರುದ್ಧ ಏಕೆ ಎಫ್ಐಆರ್ ಹಾಕಿಲ್ಲ? ಅವರ ದ್ವೇಷ ಭಾಷಣಗಳಿಗಾಗಿ ನೀವು ಅದನ್ನು ಏಕೆ ನೋಂದಾಯಿಸುತ್ತಿಲ್ಲ? ಅಪರಾಧ ನಡೆದಿದೆ ಎಂಬುದನ್ನು ಅಂಗೀಕರಿಸಲು ಸಹ ನೀವು ಬಯಸುವುದಿಲ್ಲವೇ? ” ಎಂದು ಪ್ರಶ್ನಿಸಿದ್ದರು.

ಆದರೆ ಎರಡೇ ದಿನದಲ್ಲಿ ಆ ನ್ಯಾಯಾಧೀಶರನ್ನು ದೆಹಲಿಯಿಂದ ಹರಿಯಾಣಕ್ಕೆ ವರ್ಗಾಯಿಸಲಾಯಿತು, ಇದು ಮತ್ತೊಂದು ವಿವಾದಕ್ಕೆ ಕಾರಣವಾಗಿತ್ತು.

ಇಲ್ಲಿಯವರೆಗೆ ಪೊಲೀಸರು ದಾಖಲಿಸಿದ ಎಫ್‌ಐಆರ್‌ ಮತ್ತು ಬಂಧನಗಳ ಪ್ರಕಾರ ಗಲಭೆಯ ಸಂಚುಕೋರರು ಸಾಮಾಜಿಕ ಕಾರ್ಯಕರ್ತರು ಅಥವಾ ಸಿಎಎ ವಿರೋಧಿ ಪ್ರತಿಭಟನೆಗೆ ಸಂಬಂಧಿಸಿರುವ ಮುಸ್ಲಿಂ ವಿದ್ಯಾರ್ಥಿ ಮುಖಂಡರೇ ಆಗಿದ್ದಾರೆ.

ಈವರೆಗೆ ಗಲಭೆ ಪ್ರಕರಣಗಳಲ್ಲಿ ಪೊಲೀಸರು 783 ಎಫ್‌ಐಆರ್‌ ಮತ್ತು 70 ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ. 90 ದಿನಗಳ ಗಡುವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರಮವನ್ನು ನಿರೀಕ್ಷಿಸಲಾಗಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...