Homeಮುಖಪುಟಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್‌ ಅವರದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ "ಖರ್ಗೆ ಮತ್ತು ಅವರ ಹೆಂಡ್ತಿನಾ, ಇಡೀ ಕುಟುಂಬವನ್ನು ಸಾಫ್ ಮಾಡ್ತೀನಿ" ಅನ್ನುವುದು ದಾಖಲಾಗಿದೆ.

- Advertisement -
- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರು ಸಂಚು ನಡೆಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್‌ ಅವರದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ “ಖರ್ಗೆ ಮತ್ತು ಅವರ ಹೆಂಡ್ತಿನಾ, ಇಡೀ ಕುಟುಂಬವನ್ನು ಸಾಫ್ ಮಾಡ್ತೀನಿ” ಅನ್ನುವುದು ದಾಖಲಾಗಿದೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸುರ್ಜೇವಾಲ, “ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲು ಬಿಜೆಪಿ ನಾಯಕರು ಸಂಚು ರೂಪಿಸುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿ ಅವರ ನೀಲಿ ಕಣ್ಣಿನ ಹುಡುಗ ಚಿತ್ತಾಪುರದ ಬಿಜೆಪಿ ಅಭ್ಯರ್ಥಿಯ ರೆಕಾರ್ಡಿಂಗ್‌ನಿಂದ ಇದು ಈಗ ಸ್ಪಷ್ಟವಾಗಿದೆ” ಎಂದಿದ್ದಾರೆ.

ರವಿ ಎಂಬ ಬಿಜೆಪಿ ಕಾರ್ಯಕರ್ತನೊಬ್ಬ ಮಣಿಕಂಠ ರಾಥೋಡ್‌ರವರಿಗೆ ಫೋನ್ ಮಾಡಿ ನಿಮ್ಮ ಮೇಲೆ 40  ಕೇಸುಗಳಿವೆ ಅನ್ನುತ್ತಾರೆ. ಈ ಕುರಿತು ಖರ್ಗೆಯವರನ್ನು ಪ್ರಶ್ನೆ ಮಾಡ್ತೀನಿ ಅವರ ನಂಬರ್ ಕೊಡಿ ಅಣ್ಣ ಎಂದು ಕೇಳುತ್ತಾನೆ. ಇದಕ್ಕೆ ಉತ್ತರಿಸುವ ಮಣಿಕಂಠ ರಾಥೋಡ್‌, “ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರ ಹೆಂಡ್ರು ಮಕ್ಕಳು ಎಲ್ಲರನ್ನು ಸಾಫ್ ಮಾಡ್ತೀನಿ. ಅದಕ್ಕೆ ನನ್ನ ಬಳಿ ನಂಬರ್ ಇಲ್ಲ” ಎನ್ನುವುದು ದಾಖಲಾಗಿದೆ.

ಯಾರ ಹೆಂಡ್ರ ಮಕ್ಕಳನ್ನು ಸಾಫ್ ಮಾಡ್ತೀರಿ ಎಂದು ರವಿ ಪ್ರಶ್ನಿಸಿದಾಗ, ಈಗ ನೀನು ಯಾರ ಹೆಸ್ರು ತಗೊಂಡೆ ಎಂದು ಕೇಳಿ ಆನಂತರ ಖರ್ಗೆಯವರ ನಂಬರ್ ಇದ್ರೆ ಅವರಿಗೆ ಬಾಯಿಗೆ ಬಂದಾಂಗೆ ಬೈಯ್ಯುತ್ತಿದ್ದೆ ಎಂದು ಸಮಜಾಯಿಸಿ ಕೊಡುವುದು ಸಹ ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.

ಬಿಜೆಪಿ ಅಭ್ಯರ್ಥಿಯೊಬ್ಬ ಖರ್ಗೆ ಕುಟುಂಬವನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾರೆ. ಆತ ಬಿಜೆಪಿ ಪಕ್ಷದ ನೀಲಿ ಕಣ್ಣಿನ ಹುಡುಗನಾಗಿದ್ದಾನೆ. ಈ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸುವರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಟ್ವೀಟ್ ಮಾಡಿದ್ದಾರೆ.

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಮೇಲೆ 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ ಎಂದು ಅವರೆ ಘೋಷಿಸಿಕೊಂಡಿದ್ದಾರೆ. ಮೂಲತಃ ಯಾದಗಿರಿಯವರಾದ ಅವರ ಮೇಲೆ ಕಳ್ಳತನ, ಅಕ್ಕಿ, ಹಾಲಿನ ಪುಡಿ ಅಕ್ರಮ ಸಾಗಾಣೆ, ಕೊಲೆ ಬೆದರಿಕೆ ಸೇರಿ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಅನ್ನಭಾಗ್ಯ ಅಕ್ಕಿಯನ್ನು ಕದ್ದ ಪ್ರಕರಣದಲ್ಲಿ ಒಂದು ವರ್ಷ ಶಿಕ್ಷೆಯೂ ಆಗಿದ್ದು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ.

ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಥೋಡನನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ ಆದೇಶ ಹೊರಡಿಸಿದ್ದರು. ಇದಕ್ಕೆ ಮಣಿಕಂಠ, ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು.

ಮಣಿಕಂಠ ರಾಠೋಡ ಅವರು ಪಿಸ್ತೂಲ್ ಹಿಡಿದು ಪ್ರದರ್ಶಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚೆಗೆ ವೈರಲ್ ಆಗಿತ್ತು. ಕುರ್ಚಿಯಲ್ಲಿ ಕೂತಿರುವ ಮಣಿಕಂಠ ತಮ್ಮ ಬಲಗೈ ತೋರುಬೆರಳಿನಿಂದ ಪಿಸ್ತೂಲ್ ತಿರುಗಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಇದು ಹಳೆಯ ವಿಡಿಯೊ ಎನ್ನಲಾಗಿದ್ದು, ಮಣಿಕಂಠ ಬಿಜೆಪಿ ಅಭ್ಯರ್ಥಿಯಾಗಿರುವ ಕಾರಣ ಇದು ಚರ್ಚೆಗೆ ಗ್ರಾಸವಾಗಿತ್ತು.

ಇತ್ತೀಚೆಗೆ ಮಣಿಕಂಠ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರೋಡ್ ಷೋ ನಡೆಸಬೇಕಿದ್ದನ್ನು ಇದೇ ಕಾರಣಗಳಿಂದ ರದ್ದುಗೊಳಿಸಿದರು ಎನ್ನಲಾಗಿದೆ.

ಈ ಹಿಂದಿನಿಂದಲೂ ಬಿಜೆಪಿ ಪಕ್ಷ ರೌಡಿಗಳನ್ನು ಪಕ್ಷಕ್ಕೆ ಬರಮಾಡಿಕೊಂಡಿ ಟಿಕೆಟ್ ನೀಡುತ್ತಿದೆ ಎಂಬ ಆರೋಪ ಎದುರಿಸುತ್ತಿದೆ. ಅದರ ಬೆನ್ನಲ್ಲೇ ಈಗ ಮಣಿಕಂಠ ರಾಥೋಡ್ ಬಗ್ಗೆ ಖರ್ಗೆ ಕುಟುಂಬ ಕೊಲೆ ಮಾಡುತ್ತೇನೆ ಎಂಬ ಬೆದರಿಕೆ ಆರೋಪ ಬಂದಿರುವುದರಿಂದ ಅದು ಬಿಜೆಪಿಗೆ ಮತ್ತಷ್ಟು ತಲೆ ನೋವು ಆಗುವ ಸಂಭವವಿದೆ.

ಇದನ್ನೂ ಓದಿ: ಹತಾಶೆಯ ಬಿಜೆಪಿ ಮುಖಂಡರ ಬೆದರಿಕೆಯ ಭಾಷೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...