Homeಮುಖಪುಟಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರಿಂದ ಸಂಚು: ಕಾಂಗ್ರೆಸ್ ಆರೋಪ

ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್‌ ಅವರದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ "ಖರ್ಗೆ ಮತ್ತು ಅವರ ಹೆಂಡ್ತಿನಾ, ಇಡೀ ಕುಟುಂಬವನ್ನು ಸಾಫ್ ಮಾಡ್ತೀನಿ" ಅನ್ನುವುದು ದಾಖಲಾಗಿದೆ.

- Advertisement -
- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರು ಸಂಚು ನಡೆಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಹಲವು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್‌ ಅವರದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ “ಖರ್ಗೆ ಮತ್ತು ಅವರ ಹೆಂಡ್ತಿನಾ, ಇಡೀ ಕುಟುಂಬವನ್ನು ಸಾಫ್ ಮಾಡ್ತೀನಿ” ಅನ್ನುವುದು ದಾಖಲಾಗಿದೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸುರ್ಜೇವಾಲ, “ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲು ಬಿಜೆಪಿ ನಾಯಕರು ಸಂಚು ರೂಪಿಸುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿ ಅವರ ನೀಲಿ ಕಣ್ಣಿನ ಹುಡುಗ ಚಿತ್ತಾಪುರದ ಬಿಜೆಪಿ ಅಭ್ಯರ್ಥಿಯ ರೆಕಾರ್ಡಿಂಗ್‌ನಿಂದ ಇದು ಈಗ ಸ್ಪಷ್ಟವಾಗಿದೆ” ಎಂದಿದ್ದಾರೆ.

ರವಿ ಎಂಬ ಬಿಜೆಪಿ ಕಾರ್ಯಕರ್ತನೊಬ್ಬ ಮಣಿಕಂಠ ರಾಥೋಡ್‌ರವರಿಗೆ ಫೋನ್ ಮಾಡಿ ನಿಮ್ಮ ಮೇಲೆ 40  ಕೇಸುಗಳಿವೆ ಅನ್ನುತ್ತಾರೆ. ಈ ಕುರಿತು ಖರ್ಗೆಯವರನ್ನು ಪ್ರಶ್ನೆ ಮಾಡ್ತೀನಿ ಅವರ ನಂಬರ್ ಕೊಡಿ ಅಣ್ಣ ಎಂದು ಕೇಳುತ್ತಾನೆ. ಇದಕ್ಕೆ ಉತ್ತರಿಸುವ ಮಣಿಕಂಠ ರಾಥೋಡ್‌, “ನನ್ನ ಬಳಿ ಅವರ ಫೋನ್ ನಂಬರ್ ಇದ್ರೆ ಅವರ ಹೆಂಡ್ರು ಮಕ್ಕಳು ಎಲ್ಲರನ್ನು ಸಾಫ್ ಮಾಡ್ತೀನಿ. ಅದಕ್ಕೆ ನನ್ನ ಬಳಿ ನಂಬರ್ ಇಲ್ಲ” ಎನ್ನುವುದು ದಾಖಲಾಗಿದೆ.

ಯಾರ ಹೆಂಡ್ರ ಮಕ್ಕಳನ್ನು ಸಾಫ್ ಮಾಡ್ತೀರಿ ಎಂದು ರವಿ ಪ್ರಶ್ನಿಸಿದಾಗ, ಈಗ ನೀನು ಯಾರ ಹೆಸ್ರು ತಗೊಂಡೆ ಎಂದು ಕೇಳಿ ಆನಂತರ ಖರ್ಗೆಯವರ ನಂಬರ್ ಇದ್ರೆ ಅವರಿಗೆ ಬಾಯಿಗೆ ಬಂದಾಂಗೆ ಬೈಯ್ಯುತ್ತಿದ್ದೆ ಎಂದು ಸಮಜಾಯಿಸಿ ಕೊಡುವುದು ಸಹ ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.

ಬಿಜೆಪಿ ಅಭ್ಯರ್ಥಿಯೊಬ್ಬ ಖರ್ಗೆ ಕುಟುಂಬವನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದಾರೆ. ಆತ ಬಿಜೆಪಿ ಪಕ್ಷದ ನೀಲಿ ಕಣ್ಣಿನ ಹುಡುಗನಾಗಿದ್ದಾನೆ. ಈ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸುವರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಟ್ವೀಟ್ ಮಾಡಿದ್ದಾರೆ.

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಮೇಲೆ 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ ಎಂದು ಅವರೆ ಘೋಷಿಸಿಕೊಂಡಿದ್ದಾರೆ. ಮೂಲತಃ ಯಾದಗಿರಿಯವರಾದ ಅವರ ಮೇಲೆ ಕಳ್ಳತನ, ಅಕ್ಕಿ, ಹಾಲಿನ ಪುಡಿ ಅಕ್ರಮ ಸಾಗಾಣೆ, ಕೊಲೆ ಬೆದರಿಕೆ ಸೇರಿ ಹಲವಾರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಅನ್ನಭಾಗ್ಯ ಅಕ್ಕಿಯನ್ನು ಕದ್ದ ಪ್ರಕರಣದಲ್ಲಿ ಒಂದು ವರ್ಷ ಶಿಕ್ಷೆಯೂ ಆಗಿದ್ದು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ.

ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಥೋಡನನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್. ರವಿಕುಮಾರ ಆದೇಶ ಹೊರಡಿಸಿದ್ದರು. ಇದಕ್ಕೆ ಮಣಿಕಂಠ, ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು.

ಮಣಿಕಂಠ ರಾಠೋಡ ಅವರು ಪಿಸ್ತೂಲ್ ಹಿಡಿದು ಪ್ರದರ್ಶಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚೆಗೆ ವೈರಲ್ ಆಗಿತ್ತು. ಕುರ್ಚಿಯಲ್ಲಿ ಕೂತಿರುವ ಮಣಿಕಂಠ ತಮ್ಮ ಬಲಗೈ ತೋರುಬೆರಳಿನಿಂದ ಪಿಸ್ತೂಲ್ ತಿರುಗಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಇದು ಹಳೆಯ ವಿಡಿಯೊ ಎನ್ನಲಾಗಿದ್ದು, ಮಣಿಕಂಠ ಬಿಜೆಪಿ ಅಭ್ಯರ್ಥಿಯಾಗಿರುವ ಕಾರಣ ಇದು ಚರ್ಚೆಗೆ ಗ್ರಾಸವಾಗಿತ್ತು.

ಇತ್ತೀಚೆಗೆ ಮಣಿಕಂಠ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರೋಡ್ ಷೋ ನಡೆಸಬೇಕಿದ್ದನ್ನು ಇದೇ ಕಾರಣಗಳಿಂದ ರದ್ದುಗೊಳಿಸಿದರು ಎನ್ನಲಾಗಿದೆ.

ಈ ಹಿಂದಿನಿಂದಲೂ ಬಿಜೆಪಿ ಪಕ್ಷ ರೌಡಿಗಳನ್ನು ಪಕ್ಷಕ್ಕೆ ಬರಮಾಡಿಕೊಂಡಿ ಟಿಕೆಟ್ ನೀಡುತ್ತಿದೆ ಎಂಬ ಆರೋಪ ಎದುರಿಸುತ್ತಿದೆ. ಅದರ ಬೆನ್ನಲ್ಲೇ ಈಗ ಮಣಿಕಂಠ ರಾಥೋಡ್ ಬಗ್ಗೆ ಖರ್ಗೆ ಕುಟುಂಬ ಕೊಲೆ ಮಾಡುತ್ತೇನೆ ಎಂಬ ಬೆದರಿಕೆ ಆರೋಪ ಬಂದಿರುವುದರಿಂದ ಅದು ಬಿಜೆಪಿಗೆ ಮತ್ತಷ್ಟು ತಲೆ ನೋವು ಆಗುವ ಸಂಭವವಿದೆ.

ಇದನ್ನೂ ಓದಿ: ಹತಾಶೆಯ ಬಿಜೆಪಿ ಮುಖಂಡರ ಬೆದರಿಕೆಯ ಭಾಷೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...