Homeಫ್ಯಾಕ್ಟ್‌ಚೆಕ್ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಭಾರತೀಯ ಅಧಿಕಾರಿಗಳು ತಮ್ಮ ‘ಮೂಲಸೌಕರ್ಯಗಳ ಸಾಧನೆಗಳ’ ಪುರಾವೆಯಾಗಿ ಚೀನಾದ ಚಿತ್ರವನ್ನು ಬಳಸಬೇಕಾಗಿದೆ ಎಂದು ಚೀನಿಗರು ವ್ಯಂಗ್ಯವಾಡಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗುತ್ತಿದೆ. ಚುನಾವಣೆಯ ಪ್ರಚಾರಕ್ಕಾಗಿ ಬೇರೆ ರಾಜ್ಯಗಳು ಮತ್ತು ದೇಶಗಳ ಚಿತ್ರಗಳನ್ನು ಬಳಸಿದ್ದು ಹಲವು ಬಾರಿ ಮಾಧ್ಯಮಗಳಲ್ಲಿ ವರದಿಯಾಗಿದ್ದರೂ, ರಾಜ್ಯದ ಬಿಜೆಪಿ ನಾಯಕರು ಇನ್ನೂ ಈ ಚಾಳಿಯನ್ನು ಬಿಟ್ಟಿಲ್ಲ. ಇದೀಗ ಹೊಸದಾಗಿ ಚೀನಾ ದೇಶದ ವಿಮಾನ ನಿಲ್ದಾಣದ ಚಿತ್ರವನ್ನು ಬಳಸಿ, ಅಂತಾರಾಷ್ಟ್ರೀಯವಾಗಿ ದೇಶವನ್ನು ಮುಜುಗರಕ್ಕೆ ಒಳಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 25 ರ ಗುರುವಾರ ಉತ್ತರ ಪ್ರದೇಶದ ಜೇವರ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಹೊಸದಾಗಿ ನಿರ್ಮಾಣವಾಗುತ್ತಿರುವ ಈ ವಿಮಾನ ನಿಲ್ದಾಣಕ್ಕೆ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಈ ವಿಮಾನ ನಿಲ್ದಾಣವು ಪೂರ್ಣಗೊಂಡ ನಂತರ ಈ ರೀತಿ ಕಾಣಿಸುತ್ತದೆ ಎಂದು ಹೇಳಿಕೊಂಡು ವಿಮಾನ ನಿಲ್ದಾಣದ ಫೋಟೋ ಮತ್ತು ಚಿತ್ರವನ್ನು ಹಲವಾರು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಆದರೆ ವಾಸ್ತವದಲ್ಲಿ ಅವರು ಹಂಚಿಕೊಂಡಿರುವ ವಿಮಾನ ನಿಲ್ದಾಣವು ಚೀನಾದ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಇದರ ವಿನ್ಯಾಸವನ್ನು ಇರಾಕಿನ ವಾಸ್ತುಶಿಲ್ಪಿ ಜಹಾ ಹದಿದ್ ವಿನ್ಯಾಸಗೊಳಿಸಿದ್ದಾರೆ. ಈ ಮೆಗಾ ಯೋಜನೆಗೆ ಚೀನಾವು 17.47 ಶತಕೋಟಿ ಡಾಲರ್‌ ವೆಚ್ಚ ಮಾಡಿದೆ.

ಬಿಜೆಪಿಯ ಮಾಜಿ ಸಂಸದ ಕನ್ವರ್ ಸಿಂಗ್ ತನ್ವಾರ್ ಅವರು ಫೇಸ್‌ಬುಕ್‌ನಲ್ಲಿ ಈ ಫೋಟೋವನ್ನು ಹಂಚಿಕೊಂಡು, “ಪಶ್ಚಿಮ ಉತ್ತರ ಪ್ರದೇಶವು ಇಂದು ‘ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ದ ಶಂಕುಸ್ಥಾಪನೆಯೊಂದಿಗೆ ಅಭಿವೃದ್ಧಿಯ ಹೊಸ ಮಗ್ಗುಲಿಗೆ ಹೊರಳಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಜನಸಾಮಾನ್ಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. #New_UP_Ki_Udaan” ಎಂದು ಬರೆದಿದ್ದರು.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಮಾನ ನಿಲ್ದಾಣದ ಇದೇ ಫೋಟೋವನ್ನು ಹೊಂದಿರುವ 1:58 ನಿಮಿಷಗಳ ವೀಡಿಯೊವನ್ನು ಒಕ್ಕೂಟ ಸರ್ಕಾರದ ಸಚಿವ ಅನುರಾಗ್ ಠಾಕೂರ್ (ಆರ್ಕೈವ್), ಶಿಕ್ಷಣ ರಾಜ್ಯ ಸಚಿವೆ ಅನ್ನಪೂರ್ಣ ದೇವಿ (ಆರ್ಕೈವ್) ಸೇರಿದಂತೆ ಹಲವು ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ. ಒಕ್ಕೂಟ ಸರ್ಕಾದ ಸಚಿವ ಅರ್ಜುನ್ ರಾಮ್ ಮೇಘವಾಲ್ (ಆರ್ಕೈವ್) ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ (ಆರ್ಕೈವ್) ಕೂಡಾ ಇದನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿನ ಹಲವು ಬಳಕೆದಾರರು ಒಂದೇ ರೀತಿಯ ಪ್ರತಿಪಾದನೆಯೊಂದಿಗೆ ಅದೇ ಫೋಟೋವನ್ನು ಹಂಚಿಕೊಂಡಿದ್ದಾರೆ. ಆರ್ಕೈವ್ ಮಾಡಿದ ಲಿಂಕ್‌ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಈ ಚಿತ್ರವು 2015 ರಲ್ಲಿ ಲಂಡನ್ ಮೂಲದ ಆರ್ಕಿಟೆಕ್ಚರ್ ಮ್ಯಾಗಜೀನ್ ‘ಡಿ ಜೀನ್‌’ನಲ್ಲಿ ಪ್ರಕಟವಾಗಿತ್ತು. “ಜಹಾ ಹದಿದ್ ಬೀಜಿಂಗ್‌ನಲ್ಲಿ ‘ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್’ ಗಾಗಿ ವಿನ್ಯಾಸಗಳನ್ನು ಅನಾವರಣಗೊಳಿಸಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ಬೀಜಿಂಗ್ ನ್ಯೂ ಏರ್‌ಪೋರ್ಟ್ ಎಂದೂ ಕರೆಯಲ್ಪಡುವ ಬೀಜಿಂಗ್ ಡ್ಯಾಕ್ಸಿಂಗ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ (PKX), ಮೇಲ್ಮೈ ವಿಸ್ತೀರ್ಣದಿಂದ ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣ ಎಂದು ಹೇಳಲಾಗುತ್ತದೆ. ನಿರ್ಮಾಣವು 2015 ರಲ್ಲಿ ಪ್ರಾರಂಭವಾಯಿತು ಮತ್ತು ಅದರ ಕಾರ್ಯಾಚರಣೆಗಳು ಸೆಪ್ಟೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಈ ವಿಮಾನ ನಿಲ್ದಾಣದ ಚಿತ್ರವನ್ನು ಗೆಟ್ಟಿ ಕೂಡಾ ಕ್ಲಿಕ್ ಮಾಡಿದೆ.

ಇಷ್ಟೇ ಅಲ್ಲದೆ ಗೂಗಲ್ ಅರ್ಥ್‌ ಕೂಡಾ ಬೀಜಿಂಗ್ ಡಾಕ್ಸಿಂಗ್ ವಿಮಾನ ನಿಲ್ದಾಣದ ಚಿತ್ರಗಳನ್ನು ತೆಗೆದಿದೆ.

ನವೆಂಬರ್ 24 ರಂದು ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಹ್ಯಾಂಡಲ್ ವಿಮಾನ ನಿಲ್ದಾಣದ ಚಿತ್ರಾತ್ಮಕ ವಿನ್ಯಾಸವನ್ನು ಹಂಚಿಕೊಂಡಿದೆ. ಆದರೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರು ಹಂಚಿಕೊಂಡ ಚಿತ್ರವನ್ನು ಹೋಲುತ್ತಿಲ್ಲ.

ಚೀನಾ ದೇಶದ ವಿಮಾನ ನಿಲ್ದಾಣವನ್ನು ಉತ್ತರ ಪ್ರದೇಶದ ವಿಮಾನ ನಿಲ್ದಾಣ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿರುವುದ ಬಗ್ಗೆ ಚೀನಾದ ಸಾಗರೋತ್ತರ ವಿಶ್ಲೇಷಕ ಶೇನ್ ಶಿವೈ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅವರು, “ಭಾರತ ಸರ್ಕಾರದ ಸುಳ್ಳು ಸುದ್ದಿಯ ಪ್ರೊಪಗಾಂಡವನ್ನು ಬಹಿರಂಗಪಡಿಸಲಾಗಿದೆ. ಯಪ್ಪೋ….ಭಾರತದ ಸರ್ಕಾರದ ಅಧೀಕೃತರು ಚೀನಾ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಛಾಯಾಚಿತ್ರಗಳನ್ನು ತಮ್ಮ ‘ಮೂಲಸೌಕರ್ಯಗಳ ಸಾಧನೆಗಳ’ ಪುರಾವೆಯಾಗಿ ಬಳಸಬೇಕಾಗಿದೆ ಎಂದು ತಿಳಿದು ಆಘಾತವಾಯಿತು. ಚೀನಾದ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಸ್ವಾಗತ, 17.47 ಶತಕೋಟಿ ಡಾಲರ್‌ ವೆಚ್ಚದ ಮೆಗಾ ಯೋಜನೆ” ಎಂದು ವಿಮಾನ ನಿಲ್ದಾಣದ ಚಿತ್ರವನ್ನು ಮತ್ತು ಬಿಜೆಪಿಯ ನಾಯಕರ ಟ್ವೀಟ್‌ನ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ನೋಯ್ಡಾ ವಿಮಾನ ನಿಲ್ದಾಣದ ಬಗ್ಗೆ ಈ ಹಿಂದೆ ಕೂಡಾ ಸುಳ್ಳು ಸುದ್ದಿ ಹರಡಲಾಗಿತ್ತು. ಆ ಸಮಯದಲ್ಲಿ ದಕ್ಷಿಣ ಕೊರಿಯಾದ ಇಂಚಿಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಫೋಟೋವನ್ನು ಜೆವಾರ್‌ನಲ್ಲಿರುವ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ತಪ್ಪಾಗಿ ಹಂಚಿಕೊಳ್ಳಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...