Homeಫ್ಯಾಕ್ಟ್‌ಚೆಕ್ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಭಾರತೀಯ ಅಧಿಕಾರಿಗಳು ತಮ್ಮ ‘ಮೂಲಸೌಕರ್ಯಗಳ ಸಾಧನೆಗಳ’ ಪುರಾವೆಯಾಗಿ ಚೀನಾದ ಚಿತ್ರವನ್ನು ಬಳಸಬೇಕಾಗಿದೆ ಎಂದು ಚೀನಿಗರು ವ್ಯಂಗ್ಯವಾಡಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗುತ್ತಿದೆ. ಚುನಾವಣೆಯ ಪ್ರಚಾರಕ್ಕಾಗಿ ಬೇರೆ ರಾಜ್ಯಗಳು ಮತ್ತು ದೇಶಗಳ ಚಿತ್ರಗಳನ್ನು ಬಳಸಿದ್ದು ಹಲವು ಬಾರಿ ಮಾಧ್ಯಮಗಳಲ್ಲಿ ವರದಿಯಾಗಿದ್ದರೂ, ರಾಜ್ಯದ ಬಿಜೆಪಿ ನಾಯಕರು ಇನ್ನೂ ಈ ಚಾಳಿಯನ್ನು ಬಿಟ್ಟಿಲ್ಲ. ಇದೀಗ ಹೊಸದಾಗಿ ಚೀನಾ ದೇಶದ ವಿಮಾನ ನಿಲ್ದಾಣದ ಚಿತ್ರವನ್ನು ಬಳಸಿ, ಅಂತಾರಾಷ್ಟ್ರೀಯವಾಗಿ ದೇಶವನ್ನು ಮುಜುಗರಕ್ಕೆ ಒಳಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 25 ರ ಗುರುವಾರ ಉತ್ತರ ಪ್ರದೇಶದ ಜೇವರ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಹೊಸದಾಗಿ ನಿರ್ಮಾಣವಾಗುತ್ತಿರುವ ಈ ವಿಮಾನ ನಿಲ್ದಾಣಕ್ಕೆ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಈ ವಿಮಾನ ನಿಲ್ದಾಣವು ಪೂರ್ಣಗೊಂಡ ನಂತರ ಈ ರೀತಿ ಕಾಣಿಸುತ್ತದೆ ಎಂದು ಹೇಳಿಕೊಂಡು ವಿಮಾನ ನಿಲ್ದಾಣದ ಫೋಟೋ ಮತ್ತು ಚಿತ್ರವನ್ನು ಹಲವಾರು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಆದರೆ ವಾಸ್ತವದಲ್ಲಿ ಅವರು ಹಂಚಿಕೊಂಡಿರುವ ವಿಮಾನ ನಿಲ್ದಾಣವು ಚೀನಾದ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಇದರ ವಿನ್ಯಾಸವನ್ನು ಇರಾಕಿನ ವಾಸ್ತುಶಿಲ್ಪಿ ಜಹಾ ಹದಿದ್ ವಿನ್ಯಾಸಗೊಳಿಸಿದ್ದಾರೆ. ಈ ಮೆಗಾ ಯೋಜನೆಗೆ ಚೀನಾವು 17.47 ಶತಕೋಟಿ ಡಾಲರ್‌ ವೆಚ್ಚ ಮಾಡಿದೆ.

ಬಿಜೆಪಿಯ ಮಾಜಿ ಸಂಸದ ಕನ್ವರ್ ಸಿಂಗ್ ತನ್ವಾರ್ ಅವರು ಫೇಸ್‌ಬುಕ್‌ನಲ್ಲಿ ಈ ಫೋಟೋವನ್ನು ಹಂಚಿಕೊಂಡು, “ಪಶ್ಚಿಮ ಉತ್ತರ ಪ್ರದೇಶವು ಇಂದು ‘ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ದ ಶಂಕುಸ್ಥಾಪನೆಯೊಂದಿಗೆ ಅಭಿವೃದ್ಧಿಯ ಹೊಸ ಮಗ್ಗುಲಿಗೆ ಹೊರಳಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಜನಸಾಮಾನ್ಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. #New_UP_Ki_Udaan” ಎಂದು ಬರೆದಿದ್ದರು.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಮಾನ ನಿಲ್ದಾಣದ ಇದೇ ಫೋಟೋವನ್ನು ಹೊಂದಿರುವ 1:58 ನಿಮಿಷಗಳ ವೀಡಿಯೊವನ್ನು ಒಕ್ಕೂಟ ಸರ್ಕಾರದ ಸಚಿವ ಅನುರಾಗ್ ಠಾಕೂರ್ (ಆರ್ಕೈವ್), ಶಿಕ್ಷಣ ರಾಜ್ಯ ಸಚಿವೆ ಅನ್ನಪೂರ್ಣ ದೇವಿ (ಆರ್ಕೈವ್) ಸೇರಿದಂತೆ ಹಲವು ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ. ಒಕ್ಕೂಟ ಸರ್ಕಾದ ಸಚಿವ ಅರ್ಜುನ್ ರಾಮ್ ಮೇಘವಾಲ್ (ಆರ್ಕೈವ್) ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ (ಆರ್ಕೈವ್) ಕೂಡಾ ಇದನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿನ ಹಲವು ಬಳಕೆದಾರರು ಒಂದೇ ರೀತಿಯ ಪ್ರತಿಪಾದನೆಯೊಂದಿಗೆ ಅದೇ ಫೋಟೋವನ್ನು ಹಂಚಿಕೊಂಡಿದ್ದಾರೆ. ಆರ್ಕೈವ್ ಮಾಡಿದ ಲಿಂಕ್‌ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಈ ಚಿತ್ರವು 2015 ರಲ್ಲಿ ಲಂಡನ್ ಮೂಲದ ಆರ್ಕಿಟೆಕ್ಚರ್ ಮ್ಯಾಗಜೀನ್ ‘ಡಿ ಜೀನ್‌’ನಲ್ಲಿ ಪ್ರಕಟವಾಗಿತ್ತು. “ಜಹಾ ಹದಿದ್ ಬೀಜಿಂಗ್‌ನಲ್ಲಿ ‘ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್’ ಗಾಗಿ ವಿನ್ಯಾಸಗಳನ್ನು ಅನಾವರಣಗೊಳಿಸಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ಬೀಜಿಂಗ್ ನ್ಯೂ ಏರ್‌ಪೋರ್ಟ್ ಎಂದೂ ಕರೆಯಲ್ಪಡುವ ಬೀಜಿಂಗ್ ಡ್ಯಾಕ್ಸಿಂಗ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ (PKX), ಮೇಲ್ಮೈ ವಿಸ್ತೀರ್ಣದಿಂದ ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣ ಎಂದು ಹೇಳಲಾಗುತ್ತದೆ. ನಿರ್ಮಾಣವು 2015 ರಲ್ಲಿ ಪ್ರಾರಂಭವಾಯಿತು ಮತ್ತು ಅದರ ಕಾರ್ಯಾಚರಣೆಗಳು ಸೆಪ್ಟೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಈ ವಿಮಾನ ನಿಲ್ದಾಣದ ಚಿತ್ರವನ್ನು ಗೆಟ್ಟಿ ಕೂಡಾ ಕ್ಲಿಕ್ ಮಾಡಿದೆ.

ಇಷ್ಟೇ ಅಲ್ಲದೆ ಗೂಗಲ್ ಅರ್ಥ್‌ ಕೂಡಾ ಬೀಜಿಂಗ್ ಡಾಕ್ಸಿಂಗ್ ವಿಮಾನ ನಿಲ್ದಾಣದ ಚಿತ್ರಗಳನ್ನು ತೆಗೆದಿದೆ.

ನವೆಂಬರ್ 24 ರಂದು ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಹ್ಯಾಂಡಲ್ ವಿಮಾನ ನಿಲ್ದಾಣದ ಚಿತ್ರಾತ್ಮಕ ವಿನ್ಯಾಸವನ್ನು ಹಂಚಿಕೊಂಡಿದೆ. ಆದರೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರು ಹಂಚಿಕೊಂಡ ಚಿತ್ರವನ್ನು ಹೋಲುತ್ತಿಲ್ಲ.

ಚೀನಾ ದೇಶದ ವಿಮಾನ ನಿಲ್ದಾಣವನ್ನು ಉತ್ತರ ಪ್ರದೇಶದ ವಿಮಾನ ನಿಲ್ದಾಣ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿರುವುದ ಬಗ್ಗೆ ಚೀನಾದ ಸಾಗರೋತ್ತರ ವಿಶ್ಲೇಷಕ ಶೇನ್ ಶಿವೈ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅವರು, “ಭಾರತ ಸರ್ಕಾರದ ಸುಳ್ಳು ಸುದ್ದಿಯ ಪ್ರೊಪಗಾಂಡವನ್ನು ಬಹಿರಂಗಪಡಿಸಲಾಗಿದೆ. ಯಪ್ಪೋ….ಭಾರತದ ಸರ್ಕಾರದ ಅಧೀಕೃತರು ಚೀನಾ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಛಾಯಾಚಿತ್ರಗಳನ್ನು ತಮ್ಮ ‘ಮೂಲಸೌಕರ್ಯಗಳ ಸಾಧನೆಗಳ’ ಪುರಾವೆಯಾಗಿ ಬಳಸಬೇಕಾಗಿದೆ ಎಂದು ತಿಳಿದು ಆಘಾತವಾಯಿತು. ಚೀನಾದ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಸ್ವಾಗತ, 17.47 ಶತಕೋಟಿ ಡಾಲರ್‌ ವೆಚ್ಚದ ಮೆಗಾ ಯೋಜನೆ” ಎಂದು ವಿಮಾನ ನಿಲ್ದಾಣದ ಚಿತ್ರವನ್ನು ಮತ್ತು ಬಿಜೆಪಿಯ ನಾಯಕರ ಟ್ವೀಟ್‌ನ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ನೋಯ್ಡಾ ವಿಮಾನ ನಿಲ್ದಾಣದ ಬಗ್ಗೆ ಈ ಹಿಂದೆ ಕೂಡಾ ಸುಳ್ಳು ಸುದ್ದಿ ಹರಡಲಾಗಿತ್ತು. ಆ ಸಮಯದಲ್ಲಿ ದಕ್ಷಿಣ ಕೊರಿಯಾದ ಇಂಚಿಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಫೋಟೋವನ್ನು ಜೆವಾರ್‌ನಲ್ಲಿರುವ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ತಪ್ಪಾಗಿ ಹಂಚಿಕೊಳ್ಳಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...