Homeಫ್ಯಾಕ್ಟ್‌ಚೆಕ್ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಭಾರತೀಯ ಅಧಿಕಾರಿಗಳು ತಮ್ಮ ‘ಮೂಲಸೌಕರ್ಯಗಳ ಸಾಧನೆಗಳ’ ಪುರಾವೆಯಾಗಿ ಚೀನಾದ ಚಿತ್ರವನ್ನು ಬಳಸಬೇಕಾಗಿದೆ ಎಂದು ಚೀನಿಗರು ವ್ಯಂಗ್ಯವಾಡಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗುತ್ತಿದೆ. ಚುನಾವಣೆಯ ಪ್ರಚಾರಕ್ಕಾಗಿ ಬೇರೆ ರಾಜ್ಯಗಳು ಮತ್ತು ದೇಶಗಳ ಚಿತ್ರಗಳನ್ನು ಬಳಸಿದ್ದು ಹಲವು ಬಾರಿ ಮಾಧ್ಯಮಗಳಲ್ಲಿ ವರದಿಯಾಗಿದ್ದರೂ, ರಾಜ್ಯದ ಬಿಜೆಪಿ ನಾಯಕರು ಇನ್ನೂ ಈ ಚಾಳಿಯನ್ನು ಬಿಟ್ಟಿಲ್ಲ. ಇದೀಗ ಹೊಸದಾಗಿ ಚೀನಾ ದೇಶದ ವಿಮಾನ ನಿಲ್ದಾಣದ ಚಿತ್ರವನ್ನು ಬಳಸಿ, ಅಂತಾರಾಷ್ಟ್ರೀಯವಾಗಿ ದೇಶವನ್ನು ಮುಜುಗರಕ್ಕೆ ಒಳಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 25 ರ ಗುರುವಾರ ಉತ್ತರ ಪ್ರದೇಶದ ಜೇವರ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಹೊಸದಾಗಿ ನಿರ್ಮಾಣವಾಗುತ್ತಿರುವ ಈ ವಿಮಾನ ನಿಲ್ದಾಣಕ್ಕೆ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಈ ವಿಮಾನ ನಿಲ್ದಾಣವು ಪೂರ್ಣಗೊಂಡ ನಂತರ ಈ ರೀತಿ ಕಾಣಿಸುತ್ತದೆ ಎಂದು ಹೇಳಿಕೊಂಡು ವಿಮಾನ ನಿಲ್ದಾಣದ ಫೋಟೋ ಮತ್ತು ಚಿತ್ರವನ್ನು ಹಲವಾರು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಆದರೆ ವಾಸ್ತವದಲ್ಲಿ ಅವರು ಹಂಚಿಕೊಂಡಿರುವ ವಿಮಾನ ನಿಲ್ದಾಣವು ಚೀನಾದ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಇದರ ವಿನ್ಯಾಸವನ್ನು ಇರಾಕಿನ ವಾಸ್ತುಶಿಲ್ಪಿ ಜಹಾ ಹದಿದ್ ವಿನ್ಯಾಸಗೊಳಿಸಿದ್ದಾರೆ. ಈ ಮೆಗಾ ಯೋಜನೆಗೆ ಚೀನಾವು 17.47 ಶತಕೋಟಿ ಡಾಲರ್‌ ವೆಚ್ಚ ಮಾಡಿದೆ.

ಬಿಜೆಪಿಯ ಮಾಜಿ ಸಂಸದ ಕನ್ವರ್ ಸಿಂಗ್ ತನ್ವಾರ್ ಅವರು ಫೇಸ್‌ಬುಕ್‌ನಲ್ಲಿ ಈ ಫೋಟೋವನ್ನು ಹಂಚಿಕೊಂಡು, “ಪಶ್ಚಿಮ ಉತ್ತರ ಪ್ರದೇಶವು ಇಂದು ‘ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ದ ಶಂಕುಸ್ಥಾಪನೆಯೊಂದಿಗೆ ಅಭಿವೃದ್ಧಿಯ ಹೊಸ ಮಗ್ಗುಲಿಗೆ ಹೊರಳಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಜನಸಾಮಾನ್ಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. #New_UP_Ki_Udaan” ಎಂದು ಬರೆದಿದ್ದರು.

ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಮಾನ ನಿಲ್ದಾಣದ ಇದೇ ಫೋಟೋವನ್ನು ಹೊಂದಿರುವ 1:58 ನಿಮಿಷಗಳ ವೀಡಿಯೊವನ್ನು ಒಕ್ಕೂಟ ಸರ್ಕಾರದ ಸಚಿವ ಅನುರಾಗ್ ಠಾಕೂರ್ (ಆರ್ಕೈವ್), ಶಿಕ್ಷಣ ರಾಜ್ಯ ಸಚಿವೆ ಅನ್ನಪೂರ್ಣ ದೇವಿ (ಆರ್ಕೈವ್) ಸೇರಿದಂತೆ ಹಲವು ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ. ಒಕ್ಕೂಟ ಸರ್ಕಾದ ಸಚಿವ ಅರ್ಜುನ್ ರಾಮ್ ಮೇಘವಾಲ್ (ಆರ್ಕೈವ್) ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ (ಆರ್ಕೈವ್) ಕೂಡಾ ಇದನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿನ ಹಲವು ಬಳಕೆದಾರರು ಒಂದೇ ರೀತಿಯ ಪ್ರತಿಪಾದನೆಯೊಂದಿಗೆ ಅದೇ ಫೋಟೋವನ್ನು ಹಂಚಿಕೊಂಡಿದ್ದಾರೆ. ಆರ್ಕೈವ್ ಮಾಡಿದ ಲಿಂಕ್‌ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಈ ಚಿತ್ರವು 2015 ರಲ್ಲಿ ಲಂಡನ್ ಮೂಲದ ಆರ್ಕಿಟೆಕ್ಚರ್ ಮ್ಯಾಗಜೀನ್ ‘ಡಿ ಜೀನ್‌’ನಲ್ಲಿ ಪ್ರಕಟವಾಗಿತ್ತು. “ಜಹಾ ಹದಿದ್ ಬೀಜಿಂಗ್‌ನಲ್ಲಿ ‘ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣದ ಪ್ರಯಾಣಿಕರ ಟರ್ಮಿನಲ್’ ಗಾಗಿ ವಿನ್ಯಾಸಗಳನ್ನು ಅನಾವರಣಗೊಳಿಸಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ಬೀಜಿಂಗ್ ನ್ಯೂ ಏರ್‌ಪೋರ್ಟ್ ಎಂದೂ ಕರೆಯಲ್ಪಡುವ ಬೀಜಿಂಗ್ ಡ್ಯಾಕ್ಸಿಂಗ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ (PKX), ಮೇಲ್ಮೈ ವಿಸ್ತೀರ್ಣದಿಂದ ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣ ಎಂದು ಹೇಳಲಾಗುತ್ತದೆ. ನಿರ್ಮಾಣವು 2015 ರಲ್ಲಿ ಪ್ರಾರಂಭವಾಯಿತು ಮತ್ತು ಅದರ ಕಾರ್ಯಾಚರಣೆಗಳು ಸೆಪ್ಟೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಈ ವಿಮಾನ ನಿಲ್ದಾಣದ ಚಿತ್ರವನ್ನು ಗೆಟ್ಟಿ ಕೂಡಾ ಕ್ಲಿಕ್ ಮಾಡಿದೆ.

ಇಷ್ಟೇ ಅಲ್ಲದೆ ಗೂಗಲ್ ಅರ್ಥ್‌ ಕೂಡಾ ಬೀಜಿಂಗ್ ಡಾಕ್ಸಿಂಗ್ ವಿಮಾನ ನಿಲ್ದಾಣದ ಚಿತ್ರಗಳನ್ನು ತೆಗೆದಿದೆ.

ನವೆಂಬರ್ 24 ರಂದು ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಹ್ಯಾಂಡಲ್ ವಿಮಾನ ನಿಲ್ದಾಣದ ಚಿತ್ರಾತ್ಮಕ ವಿನ್ಯಾಸವನ್ನು ಹಂಚಿಕೊಂಡಿದೆ. ಆದರೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರು ಹಂಚಿಕೊಂಡ ಚಿತ್ರವನ್ನು ಹೋಲುತ್ತಿಲ್ಲ.

ಚೀನಾ ದೇಶದ ವಿಮಾನ ನಿಲ್ದಾಣವನ್ನು ಉತ್ತರ ಪ್ರದೇಶದ ವಿಮಾನ ನಿಲ್ದಾಣ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿರುವುದ ಬಗ್ಗೆ ಚೀನಾದ ಸಾಗರೋತ್ತರ ವಿಶ್ಲೇಷಕ ಶೇನ್ ಶಿವೈ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅವರು, “ಭಾರತ ಸರ್ಕಾರದ ಸುಳ್ಳು ಸುದ್ದಿಯ ಪ್ರೊಪಗಾಂಡವನ್ನು ಬಹಿರಂಗಪಡಿಸಲಾಗಿದೆ. ಯಪ್ಪೋ….ಭಾರತದ ಸರ್ಕಾರದ ಅಧೀಕೃತರು ಚೀನಾ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಛಾಯಾಚಿತ್ರಗಳನ್ನು ತಮ್ಮ ‘ಮೂಲಸೌಕರ್ಯಗಳ ಸಾಧನೆಗಳ’ ಪುರಾವೆಯಾಗಿ ಬಳಸಬೇಕಾಗಿದೆ ಎಂದು ತಿಳಿದು ಆಘಾತವಾಯಿತು. ಚೀನಾದ ಬೀಜಿಂಗ್ ಡಾಕ್ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಸ್ವಾಗತ, 17.47 ಶತಕೋಟಿ ಡಾಲರ್‌ ವೆಚ್ಚದ ಮೆಗಾ ಯೋಜನೆ” ಎಂದು ವಿಮಾನ ನಿಲ್ದಾಣದ ಚಿತ್ರವನ್ನು ಮತ್ತು ಬಿಜೆಪಿಯ ನಾಯಕರ ಟ್ವೀಟ್‌ನ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ನೋಯ್ಡಾ ವಿಮಾನ ನಿಲ್ದಾಣದ ಬಗ್ಗೆ ಈ ಹಿಂದೆ ಕೂಡಾ ಸುಳ್ಳು ಸುದ್ದಿ ಹರಡಲಾಗಿತ್ತು. ಆ ಸಮಯದಲ್ಲಿ ದಕ್ಷಿಣ ಕೊರಿಯಾದ ಇಂಚಿಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಫೋಟೋವನ್ನು ಜೆವಾರ್‌ನಲ್ಲಿರುವ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ತಪ್ಪಾಗಿ ಹಂಚಿಕೊಳ್ಳಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....