Homeಮುಖಪುಟಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: 'ಲೋಕಶಾಹಿ' ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಕಿರಿತ್ ಸೋಮಯ್ಯ ಅವರ ಕುರಿತಾದ ಸೆಕ್ಸ್ ಟೇಪ್ ಸುದ್ದಿ ಪ್ರಸಾರ ಮಾಡಿದ ನಂತರ, ‘ಲೋಕಶಾಹಿ’ ಮರಾಠಿ ಸುದ್ದಿವಾಹಿನಿಯ ಪರವಾನಗಿಯನ್ನು ಎರಡನೇ ಬಾರಿಗೆ ಕೇಂದ್ರ ಸರ್ಕಾರ 30 ದಿನಗಳವರೆಗೆ ಅಮಾನತುಗೊಳಿಸಿದೆ.

ಜುಲೈ 17, 2023ರಂದು ಪ್ರಸಾರವಾದ ವರದಿಯ ಮೇಲೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಕಳೆದ ವರ್ಷ ಚಾನೆಲ್ ಅಮಾನತು ಸೂಚನೆಯನ್ನು ಸ್ವೀಕರಿಸಿತ್ತು. ಈಗ ಸರ್ಕಾರ ಚಾನೆಲ್‌ನ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಹಿಂದಿನ ಸೂಚನೆಯು 72 ಗಂಟೆಗಳ ಕಾಲ ಇತ್ತು. ಇದರ ವಿರುದ್ಧ ವಾಹಿನಿ ದೆಹಲಿ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಕೇಂದ್ರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿದೆ.

ಚಾನೆಲ್‌ನ ಪ್ರೈಮ್‌ ಟೈಮ್‌ ಸುದ್ದಿಯಲ್ಲಿ ಬಿಜೆಪಿ ನಾಯಕನ ಲೈಂಗಿಕ ವೀಡಿಯೊವನ್ನು ಆಧರಿಸಿದೆ ಎಂಬ ಆರೋಪವಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಎಡಿಟ್ ಮಾಡಿದ ವೀಡಿಯೊದ ವಿಷಯವನ್ನು ಪ್ರಸ್ತುತಪಡಿಸಿ, ‘ಕಿರಿತ್ ಸೋಮಯ್ಯ ಹನಿ ಟ್ರಾಪ್ ಆಗಿದ್ದಾರೆಯೇ’ ಎಂದು ಪ್ರಶ್ನಿಸಿದ್ದರು. ವಿರೋಧ ಪಕ್ಷದ ನಾಯಕರು ಅವರ ಮೇಲೆ ಲೈಂಗಿಕ ದುರ್ನಡತೆ ಮತ್ತು ಸುಲಿಗೆ ಆರೋಪವನ್ನು ಮಾಡಿದರು. ಸುದ್ದಿ ಪ್ರಸಾರವಾದ ನಂತರ ಸೋಮಯ್ಯ ಅವರು, ಮುಂಬೈ ಪೊಲೀಸ್, ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಗೆ ದೂರು ಸಲ್ಲಿಸಿದ್ದರು. ‘ನನ್ನ ಸಾರ್ವಜನಿಕ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ’ ಎಂದು ಆರೋಪಿಸಿ ಬಾಂಬೆ ಹೈಕೋರ್ಟಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ.

ಯಾರ ಹೆಸರಿನಲ್ಲಿ ಪರವಾನಗಿ ನೀಡಲಾಗಿದೆಯೋ ಹಾಗೂ ಚಾನೆಲ್‌ನ ನಿರ್ವಾಹಕರ ಹೆಸರು ಒಂದೇ ಆಗಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರವು ಈಗ ವಾಹಿನಿಯ ಪರವಾನಗಿಯನ್ನು ಅಮಾನತುಗೊಳಿಸಿದೆ ಎಂದು ಸಚಿವಾಲಯದ ಹೆಸರಿಸದ ಮೂಲಗಳು ಪತ್ರಿಕೆಗೆ ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆರು ತಿಂಗಳಲ್ಲಿ ಎರಡನೇ ಬಾರಿಗೆ ಚಾನೆಲ್ ವಿರುದ್ಧ ಕ್ರಮ ಕೈಗೊಂಡ ನಂತರ ಜನಪ್ರಿಯ ಮರಾಠಿ ಸುದ್ದಿ ವಾಹಿನಿ ಲೋಕಶಾಹಿ ಪ್ರಸಾರ ಸ್ಥಗಿತಗೊಳಿಸಲಾಗಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಅಮಾನತಿನ ವಿರುದ್ಧ ಮಾತನಾಡಿ, “ಕಾನೂನು ಬದ್ಧವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

‘ಚಾನೆಲ್ ತನ್ನ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಲ್ಲಿಸಲು ವಿಫಲವಾದ ನಂತರ ಮಂಗಳವಾರ 30 ದಿನಗಳ ಕಾಲ ಪ್ರಸಾರವನ್ನು ಅಮಾನತು ಮಾಡಲಾಗಿದೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ನಮಗೆ ಆದೇಶ ಬಂದಿದ್ದು, ಸಂಜೆ 6 ಗಂಟೆ ವೇಳೆಗೆ ಚಾನೆಲ್ ಪ್ರಸಾರ ಸ್ಥಗಿತಗೊಂಡಿದೆ. ಮಾಹಿ ಮತ್ತು ಪ್ರಸಾರ ಸಚಿವಾಲಯವು ನಮ್ಮ ಪರವಾನಗಿಯನ್ನು ಅಮಾನತುಗೊಳಿಸಿದೆ. ನಾವು ಅದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲಿದ್ದೇವೆ. ಇದು ಇತಿಹಾಸದಲ್ಲಿ 30 ದಿನಗಳ ಕಾಲ ಚಾನೆಲ್ ಅನ್ನು ಮುಚ್ಚುವಂತೆ ಕೇಳಲಾದ ಮೊದಲ ನಿದರ್ಶನವಾಗಿದ್ದು, ನಾವು ಹೆದರುವುದಿಲ್ಲ’ ಎಂದು ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಬುಧವಾರ ತಿಳಿಸಿದ್ದಾರೆ.

ಜುಲೈ 2023 ರಲ್ಲಿ, ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ “ಸೆಕ್ಸ್ ವೀಡಿಯೋ” ದ ಸುದ್ದಿಯನ್ನು ಲೋಕಶಾಹಿಯನ್ನು ಪ್ರಸಾರ ಮಾಡಿತ್ತು. ಆ ನಂತರ, ಕಂಪನಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಸಲ್ಲಿಸದ ಕಾರಣ ಸಚಿವಾಲಯವು ವಾಹಿನಿಗೆ ನೀಡಿದ್ದ ಪರವಾನಗಿಯನ್ನು ಅಮಾನತು ಮಾಡಿದೆ.

‘ಲೋಕಾಹಿ ಯಾವಾಗಲೂ ಸುದ್ದಿ ಮತ್ತು ಸತ್ಯಗಳನ್ನು ನ್ಯಾಯಯುತ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ಪ್ರಸ್ತುತಪಡಿಸಿದೆ. ನಾವು ಸರ್ಕಾರದ ಉತ್ತಮ ಪುಸ್ತಕಗಳಲ್ಲಿ ಇಲ್ಲದಿರಬಹುದು. ಆದರೆ ನಮ್ಮ ವಾಸ್ತವಿಕ ವರದಿಯನ್ನು ಮೆಚ್ಚುವ ಜನರ ಹೃದಯದಲ್ಲಿ ನಾವು ವಾಸಿಸುತ್ತೇವೆ. ಅಧಿಕಾರದಲ್ಲಿ ಇರುವವರ ತಪ್ಪು ಕೆಲಸಗಳ ಬಗ್ಗೆ ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದೇವೆ’ ಸುತಾರ್ ಹೇಳಿದ್ದಾರೆ.

‘ವಾಹಿನಿಯು ಗುಜರಾತ್ ಸಮಾಚಾರ್ ಮತ್ತು ಸ್ವರಾಜ್ ಮರಾಠಿ ಬ್ರಾಡ್‌ಕಾಸ್ಟಿಂಗ್ ಎಲ್ಎಲ್‌ಪಿ ನಡುವಿನ ಪಾಲುದಾರಿಕೆಯ ಉದ್ಯಮವಾಗಿದೆ’ ಎಂದು ಅವರು ಹೇಳಿದರು. ‘ಪರವಾನಗಿಯು ಒಬ್ಬ ಪಾಲುದಾರನ ಹೆಸರಿನಲ್ಲಿದೆ ಮತ್ತು ಇನ್ನೊಬ್ಬರು ಕಾರ್ಯಾಚರಣೆಯನ್ನು ನಡೆಸುತ್ತಾರೆ. ಸಚಿವಾಲಯವು ಇದನ್ನು ಆಕ್ಷೇಪಿಸಿದೆ. ಪರವಾನಗಿಯನ್ನು ನೀಡಿದ ಸಂಸ್ಥೆಯಿಂದ ಎಲ್ಲವನ್ನೂ ಮಾಡುವಂತೆ ನೋಡಿಕೊಳ್ಳಲು ಕೇಳಿದೆ. ನಾವು ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿದ್ದೆವು. ನಾವು ಅದನ್ನು ಮಾಡುವ ಮೊದಲೇ, ಅವರು ಚಾನಲ್ ಅನ್ನು ಮುಚ್ಚಿದ್ದಾರೆ; ಇದು ಕಠಿಣ ನಿರ್ಧಾರ. ನಮ್ಮ ರೀತಿ ಅರವತ್ತು ಸಂಸ್ಥೆಗಳು ಬೇರೆ ಬೇರೆ ಪಾಲುದಾರರನ್ನು ಹೊಂದಿದ್ದರೂ ನಮ್ಮ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ’ ಎಂದು ಸುತಾರ್ ಆರೋಪಿಸಿದ್ದಾರೆ.

‘ಸೋಮಯ್ಯ ವಿಡಿಯೋಗಳನ್ನು ಪ್ರಸಾರ ಮಾಡಿದ ನಂತರ 72 ಗಂಟೆಗಳ ಕಾಲ ಚಾನೆಲ್ ಅನ್ನು ಸ್ಥಗಿತಗೊಳಿಸಲಾಯಿತು. ಆದರೆ, ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಚಾನೆಲ್ ಸ್ಥಗಿತಗೊಂಡಿದ್ದರೂ ಡಿಜಿಟಲ್ ಕಾರ್ಯಾಚರಣೆ ಮುಂದುವರಿಯಲಿದೆ. ಇದಲ್ಲದೆ, ನಾವು ಯೂಟ್ಯೂಬ್ ನಲ್ಲಿ ಸುದ್ದಿಗಳನ್ನು ಪ್ರಸ್ತುತಪಡಿಸುವುದನ್ನು ಮುಂದುವರಿಸುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...