Homeಮುಖಪುಟಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: 'ಲೋಕಶಾಹಿ' ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಕಿರಿತ್ ಸೋಮಯ್ಯ ಅವರ ಕುರಿತಾದ ಸೆಕ್ಸ್ ಟೇಪ್ ಸುದ್ದಿ ಪ್ರಸಾರ ಮಾಡಿದ ನಂತರ, ‘ಲೋಕಶಾಹಿ’ ಮರಾಠಿ ಸುದ್ದಿವಾಹಿನಿಯ ಪರವಾನಗಿಯನ್ನು ಎರಡನೇ ಬಾರಿಗೆ ಕೇಂದ್ರ ಸರ್ಕಾರ 30 ದಿನಗಳವರೆಗೆ ಅಮಾನತುಗೊಳಿಸಿದೆ.

ಜುಲೈ 17, 2023ರಂದು ಪ್ರಸಾರವಾದ ವರದಿಯ ಮೇಲೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಕಳೆದ ವರ್ಷ ಚಾನೆಲ್ ಅಮಾನತು ಸೂಚನೆಯನ್ನು ಸ್ವೀಕರಿಸಿತ್ತು. ಈಗ ಸರ್ಕಾರ ಚಾನೆಲ್‌ನ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಹಿಂದಿನ ಸೂಚನೆಯು 72 ಗಂಟೆಗಳ ಕಾಲ ಇತ್ತು. ಇದರ ವಿರುದ್ಧ ವಾಹಿನಿ ದೆಹಲಿ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಕೇಂದ್ರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿದೆ.

ಚಾನೆಲ್‌ನ ಪ್ರೈಮ್‌ ಟೈಮ್‌ ಸುದ್ದಿಯಲ್ಲಿ ಬಿಜೆಪಿ ನಾಯಕನ ಲೈಂಗಿಕ ವೀಡಿಯೊವನ್ನು ಆಧರಿಸಿದೆ ಎಂಬ ಆರೋಪವಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಎಡಿಟ್ ಮಾಡಿದ ವೀಡಿಯೊದ ವಿಷಯವನ್ನು ಪ್ರಸ್ತುತಪಡಿಸಿ, ‘ಕಿರಿತ್ ಸೋಮಯ್ಯ ಹನಿ ಟ್ರಾಪ್ ಆಗಿದ್ದಾರೆಯೇ’ ಎಂದು ಪ್ರಶ್ನಿಸಿದ್ದರು. ವಿರೋಧ ಪಕ್ಷದ ನಾಯಕರು ಅವರ ಮೇಲೆ ಲೈಂಗಿಕ ದುರ್ನಡತೆ ಮತ್ತು ಸುಲಿಗೆ ಆರೋಪವನ್ನು ಮಾಡಿದರು. ಸುದ್ದಿ ಪ್ರಸಾರವಾದ ನಂತರ ಸೋಮಯ್ಯ ಅವರು, ಮುಂಬೈ ಪೊಲೀಸ್, ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಗೆ ದೂರು ಸಲ್ಲಿಸಿದ್ದರು. ‘ನನ್ನ ಸಾರ್ವಜನಿಕ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ’ ಎಂದು ಆರೋಪಿಸಿ ಬಾಂಬೆ ಹೈಕೋರ್ಟಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ.

ಯಾರ ಹೆಸರಿನಲ್ಲಿ ಪರವಾನಗಿ ನೀಡಲಾಗಿದೆಯೋ ಹಾಗೂ ಚಾನೆಲ್‌ನ ನಿರ್ವಾಹಕರ ಹೆಸರು ಒಂದೇ ಆಗಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರವು ಈಗ ವಾಹಿನಿಯ ಪರವಾನಗಿಯನ್ನು ಅಮಾನತುಗೊಳಿಸಿದೆ ಎಂದು ಸಚಿವಾಲಯದ ಹೆಸರಿಸದ ಮೂಲಗಳು ಪತ್ರಿಕೆಗೆ ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆರು ತಿಂಗಳಲ್ಲಿ ಎರಡನೇ ಬಾರಿಗೆ ಚಾನೆಲ್ ವಿರುದ್ಧ ಕ್ರಮ ಕೈಗೊಂಡ ನಂತರ ಜನಪ್ರಿಯ ಮರಾಠಿ ಸುದ್ದಿ ವಾಹಿನಿ ಲೋಕಶಾಹಿ ಪ್ರಸಾರ ಸ್ಥಗಿತಗೊಳಿಸಲಾಗಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಅಮಾನತಿನ ವಿರುದ್ಧ ಮಾತನಾಡಿ, “ಕಾನೂನು ಬದ್ಧವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

‘ಚಾನೆಲ್ ತನ್ನ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಲ್ಲಿಸಲು ವಿಫಲವಾದ ನಂತರ ಮಂಗಳವಾರ 30 ದಿನಗಳ ಕಾಲ ಪ್ರಸಾರವನ್ನು ಅಮಾನತು ಮಾಡಲಾಗಿದೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ನಮಗೆ ಆದೇಶ ಬಂದಿದ್ದು, ಸಂಜೆ 6 ಗಂಟೆ ವೇಳೆಗೆ ಚಾನೆಲ್ ಪ್ರಸಾರ ಸ್ಥಗಿತಗೊಂಡಿದೆ. ಮಾಹಿ ಮತ್ತು ಪ್ರಸಾರ ಸಚಿವಾಲಯವು ನಮ್ಮ ಪರವಾನಗಿಯನ್ನು ಅಮಾನತುಗೊಳಿಸಿದೆ. ನಾವು ಅದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲಿದ್ದೇವೆ. ಇದು ಇತಿಹಾಸದಲ್ಲಿ 30 ದಿನಗಳ ಕಾಲ ಚಾನೆಲ್ ಅನ್ನು ಮುಚ್ಚುವಂತೆ ಕೇಳಲಾದ ಮೊದಲ ನಿದರ್ಶನವಾಗಿದ್ದು, ನಾವು ಹೆದರುವುದಿಲ್ಲ’ ಎಂದು ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಬುಧವಾರ ತಿಳಿಸಿದ್ದಾರೆ.

ಜುಲೈ 2023 ರಲ್ಲಿ, ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ “ಸೆಕ್ಸ್ ವೀಡಿಯೋ” ದ ಸುದ್ದಿಯನ್ನು ಲೋಕಶಾಹಿಯನ್ನು ಪ್ರಸಾರ ಮಾಡಿತ್ತು. ಆ ನಂತರ, ಕಂಪನಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಸಲ್ಲಿಸದ ಕಾರಣ ಸಚಿವಾಲಯವು ವಾಹಿನಿಗೆ ನೀಡಿದ್ದ ಪರವಾನಗಿಯನ್ನು ಅಮಾನತು ಮಾಡಿದೆ.

‘ಲೋಕಾಹಿ ಯಾವಾಗಲೂ ಸುದ್ದಿ ಮತ್ತು ಸತ್ಯಗಳನ್ನು ನ್ಯಾಯಯುತ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ಪ್ರಸ್ತುತಪಡಿಸಿದೆ. ನಾವು ಸರ್ಕಾರದ ಉತ್ತಮ ಪುಸ್ತಕಗಳಲ್ಲಿ ಇಲ್ಲದಿರಬಹುದು. ಆದರೆ ನಮ್ಮ ವಾಸ್ತವಿಕ ವರದಿಯನ್ನು ಮೆಚ್ಚುವ ಜನರ ಹೃದಯದಲ್ಲಿ ನಾವು ವಾಸಿಸುತ್ತೇವೆ. ಅಧಿಕಾರದಲ್ಲಿ ಇರುವವರ ತಪ್ಪು ಕೆಲಸಗಳ ಬಗ್ಗೆ ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದೇವೆ’ ಸುತಾರ್ ಹೇಳಿದ್ದಾರೆ.

‘ವಾಹಿನಿಯು ಗುಜರಾತ್ ಸಮಾಚಾರ್ ಮತ್ತು ಸ್ವರಾಜ್ ಮರಾಠಿ ಬ್ರಾಡ್‌ಕಾಸ್ಟಿಂಗ್ ಎಲ್ಎಲ್‌ಪಿ ನಡುವಿನ ಪಾಲುದಾರಿಕೆಯ ಉದ್ಯಮವಾಗಿದೆ’ ಎಂದು ಅವರು ಹೇಳಿದರು. ‘ಪರವಾನಗಿಯು ಒಬ್ಬ ಪಾಲುದಾರನ ಹೆಸರಿನಲ್ಲಿದೆ ಮತ್ತು ಇನ್ನೊಬ್ಬರು ಕಾರ್ಯಾಚರಣೆಯನ್ನು ನಡೆಸುತ್ತಾರೆ. ಸಚಿವಾಲಯವು ಇದನ್ನು ಆಕ್ಷೇಪಿಸಿದೆ. ಪರವಾನಗಿಯನ್ನು ನೀಡಿದ ಸಂಸ್ಥೆಯಿಂದ ಎಲ್ಲವನ್ನೂ ಮಾಡುವಂತೆ ನೋಡಿಕೊಳ್ಳಲು ಕೇಳಿದೆ. ನಾವು ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿದ್ದೆವು. ನಾವು ಅದನ್ನು ಮಾಡುವ ಮೊದಲೇ, ಅವರು ಚಾನಲ್ ಅನ್ನು ಮುಚ್ಚಿದ್ದಾರೆ; ಇದು ಕಠಿಣ ನಿರ್ಧಾರ. ನಮ್ಮ ರೀತಿ ಅರವತ್ತು ಸಂಸ್ಥೆಗಳು ಬೇರೆ ಬೇರೆ ಪಾಲುದಾರರನ್ನು ಹೊಂದಿದ್ದರೂ ನಮ್ಮ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ’ ಎಂದು ಸುತಾರ್ ಆರೋಪಿಸಿದ್ದಾರೆ.

‘ಸೋಮಯ್ಯ ವಿಡಿಯೋಗಳನ್ನು ಪ್ರಸಾರ ಮಾಡಿದ ನಂತರ 72 ಗಂಟೆಗಳ ಕಾಲ ಚಾನೆಲ್ ಅನ್ನು ಸ್ಥಗಿತಗೊಳಿಸಲಾಯಿತು. ಆದರೆ, ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಚಾನೆಲ್ ಸ್ಥಗಿತಗೊಂಡಿದ್ದರೂ ಡಿಜಿಟಲ್ ಕಾರ್ಯಾಚರಣೆ ಮುಂದುವರಿಯಲಿದೆ. ಇದಲ್ಲದೆ, ನಾವು ಯೂಟ್ಯೂಬ್ ನಲ್ಲಿ ಸುದ್ದಿಗಳನ್ನು ಪ್ರಸ್ತುತಪಡಿಸುವುದನ್ನು ಮುಂದುವರಿಸುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...