Homeಮುಖಪುಟಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: 'ಲೋಕಶಾಹಿ' ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಕಿರಿತ್ ಸೋಮಯ್ಯ ಅವರ ಕುರಿತಾದ ಸೆಕ್ಸ್ ಟೇಪ್ ಸುದ್ದಿ ಪ್ರಸಾರ ಮಾಡಿದ ನಂತರ, ‘ಲೋಕಶಾಹಿ’ ಮರಾಠಿ ಸುದ್ದಿವಾಹಿನಿಯ ಪರವಾನಗಿಯನ್ನು ಎರಡನೇ ಬಾರಿಗೆ ಕೇಂದ್ರ ಸರ್ಕಾರ 30 ದಿನಗಳವರೆಗೆ ಅಮಾನತುಗೊಳಿಸಿದೆ.

ಜುಲೈ 17, 2023ರಂದು ಪ್ರಸಾರವಾದ ವರದಿಯ ಮೇಲೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಕಳೆದ ವರ್ಷ ಚಾನೆಲ್ ಅಮಾನತು ಸೂಚನೆಯನ್ನು ಸ್ವೀಕರಿಸಿತ್ತು. ಈಗ ಸರ್ಕಾರ ಚಾನೆಲ್‌ನ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಹಿಂದಿನ ಸೂಚನೆಯು 72 ಗಂಟೆಗಳ ಕಾಲ ಇತ್ತು. ಇದರ ವಿರುದ್ಧ ವಾಹಿನಿ ದೆಹಲಿ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಕೇಂದ್ರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿದೆ.

ಚಾನೆಲ್‌ನ ಪ್ರೈಮ್‌ ಟೈಮ್‌ ಸುದ್ದಿಯಲ್ಲಿ ಬಿಜೆಪಿ ನಾಯಕನ ಲೈಂಗಿಕ ವೀಡಿಯೊವನ್ನು ಆಧರಿಸಿದೆ ಎಂಬ ಆರೋಪವಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಎಡಿಟ್ ಮಾಡಿದ ವೀಡಿಯೊದ ವಿಷಯವನ್ನು ಪ್ರಸ್ತುತಪಡಿಸಿ, ‘ಕಿರಿತ್ ಸೋಮಯ್ಯ ಹನಿ ಟ್ರಾಪ್ ಆಗಿದ್ದಾರೆಯೇ’ ಎಂದು ಪ್ರಶ್ನಿಸಿದ್ದರು. ವಿರೋಧ ಪಕ್ಷದ ನಾಯಕರು ಅವರ ಮೇಲೆ ಲೈಂಗಿಕ ದುರ್ನಡತೆ ಮತ್ತು ಸುಲಿಗೆ ಆರೋಪವನ್ನು ಮಾಡಿದರು. ಸುದ್ದಿ ಪ್ರಸಾರವಾದ ನಂತರ ಸೋಮಯ್ಯ ಅವರು, ಮುಂಬೈ ಪೊಲೀಸ್, ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಗೆ ದೂರು ಸಲ್ಲಿಸಿದ್ದರು. ‘ನನ್ನ ಸಾರ್ವಜನಿಕ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ’ ಎಂದು ಆರೋಪಿಸಿ ಬಾಂಬೆ ಹೈಕೋರ್ಟಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ.

ಯಾರ ಹೆಸರಿನಲ್ಲಿ ಪರವಾನಗಿ ನೀಡಲಾಗಿದೆಯೋ ಹಾಗೂ ಚಾನೆಲ್‌ನ ನಿರ್ವಾಹಕರ ಹೆಸರು ಒಂದೇ ಆಗಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರವು ಈಗ ವಾಹಿನಿಯ ಪರವಾನಗಿಯನ್ನು ಅಮಾನತುಗೊಳಿಸಿದೆ ಎಂದು ಸಚಿವಾಲಯದ ಹೆಸರಿಸದ ಮೂಲಗಳು ಪತ್ರಿಕೆಗೆ ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆರು ತಿಂಗಳಲ್ಲಿ ಎರಡನೇ ಬಾರಿಗೆ ಚಾನೆಲ್ ವಿರುದ್ಧ ಕ್ರಮ ಕೈಗೊಂಡ ನಂತರ ಜನಪ್ರಿಯ ಮರಾಠಿ ಸುದ್ದಿ ವಾಹಿನಿ ಲೋಕಶಾಹಿ ಪ್ರಸಾರ ಸ್ಥಗಿತಗೊಳಿಸಲಾಗಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಅಮಾನತಿನ ವಿರುದ್ಧ ಮಾತನಾಡಿ, “ಕಾನೂನು ಬದ್ಧವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

‘ಚಾನೆಲ್ ತನ್ನ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಲ್ಲಿಸಲು ವಿಫಲವಾದ ನಂತರ ಮಂಗಳವಾರ 30 ದಿನಗಳ ಕಾಲ ಪ್ರಸಾರವನ್ನು ಅಮಾನತು ಮಾಡಲಾಗಿದೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ನಮಗೆ ಆದೇಶ ಬಂದಿದ್ದು, ಸಂಜೆ 6 ಗಂಟೆ ವೇಳೆಗೆ ಚಾನೆಲ್ ಪ್ರಸಾರ ಸ್ಥಗಿತಗೊಂಡಿದೆ. ಮಾಹಿ ಮತ್ತು ಪ್ರಸಾರ ಸಚಿವಾಲಯವು ನಮ್ಮ ಪರವಾನಗಿಯನ್ನು ಅಮಾನತುಗೊಳಿಸಿದೆ. ನಾವು ಅದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲಿದ್ದೇವೆ. ಇದು ಇತಿಹಾಸದಲ್ಲಿ 30 ದಿನಗಳ ಕಾಲ ಚಾನೆಲ್ ಅನ್ನು ಮುಚ್ಚುವಂತೆ ಕೇಳಲಾದ ಮೊದಲ ನಿದರ್ಶನವಾಗಿದ್ದು, ನಾವು ಹೆದರುವುದಿಲ್ಲ’ ಎಂದು ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಬುಧವಾರ ತಿಳಿಸಿದ್ದಾರೆ.

ಜುಲೈ 2023 ರಲ್ಲಿ, ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ “ಸೆಕ್ಸ್ ವೀಡಿಯೋ” ದ ಸುದ್ದಿಯನ್ನು ಲೋಕಶಾಹಿಯನ್ನು ಪ್ರಸಾರ ಮಾಡಿತ್ತು. ಆ ನಂತರ, ಕಂಪನಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಸಲ್ಲಿಸದ ಕಾರಣ ಸಚಿವಾಲಯವು ವಾಹಿನಿಗೆ ನೀಡಿದ್ದ ಪರವಾನಗಿಯನ್ನು ಅಮಾನತು ಮಾಡಿದೆ.

‘ಲೋಕಾಹಿ ಯಾವಾಗಲೂ ಸುದ್ದಿ ಮತ್ತು ಸತ್ಯಗಳನ್ನು ನ್ಯಾಯಯುತ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ಪ್ರಸ್ತುತಪಡಿಸಿದೆ. ನಾವು ಸರ್ಕಾರದ ಉತ್ತಮ ಪುಸ್ತಕಗಳಲ್ಲಿ ಇಲ್ಲದಿರಬಹುದು. ಆದರೆ ನಮ್ಮ ವಾಸ್ತವಿಕ ವರದಿಯನ್ನು ಮೆಚ್ಚುವ ಜನರ ಹೃದಯದಲ್ಲಿ ನಾವು ವಾಸಿಸುತ್ತೇವೆ. ಅಧಿಕಾರದಲ್ಲಿ ಇರುವವರ ತಪ್ಪು ಕೆಲಸಗಳ ಬಗ್ಗೆ ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದೇವೆ’ ಸುತಾರ್ ಹೇಳಿದ್ದಾರೆ.

‘ವಾಹಿನಿಯು ಗುಜರಾತ್ ಸಮಾಚಾರ್ ಮತ್ತು ಸ್ವರಾಜ್ ಮರಾಠಿ ಬ್ರಾಡ್‌ಕಾಸ್ಟಿಂಗ್ ಎಲ್ಎಲ್‌ಪಿ ನಡುವಿನ ಪಾಲುದಾರಿಕೆಯ ಉದ್ಯಮವಾಗಿದೆ’ ಎಂದು ಅವರು ಹೇಳಿದರು. ‘ಪರವಾನಗಿಯು ಒಬ್ಬ ಪಾಲುದಾರನ ಹೆಸರಿನಲ್ಲಿದೆ ಮತ್ತು ಇನ್ನೊಬ್ಬರು ಕಾರ್ಯಾಚರಣೆಯನ್ನು ನಡೆಸುತ್ತಾರೆ. ಸಚಿವಾಲಯವು ಇದನ್ನು ಆಕ್ಷೇಪಿಸಿದೆ. ಪರವಾನಗಿಯನ್ನು ನೀಡಿದ ಸಂಸ್ಥೆಯಿಂದ ಎಲ್ಲವನ್ನೂ ಮಾಡುವಂತೆ ನೋಡಿಕೊಳ್ಳಲು ಕೇಳಿದೆ. ನಾವು ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿದ್ದೆವು. ನಾವು ಅದನ್ನು ಮಾಡುವ ಮೊದಲೇ, ಅವರು ಚಾನಲ್ ಅನ್ನು ಮುಚ್ಚಿದ್ದಾರೆ; ಇದು ಕಠಿಣ ನಿರ್ಧಾರ. ನಮ್ಮ ರೀತಿ ಅರವತ್ತು ಸಂಸ್ಥೆಗಳು ಬೇರೆ ಬೇರೆ ಪಾಲುದಾರರನ್ನು ಹೊಂದಿದ್ದರೂ ನಮ್ಮ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ’ ಎಂದು ಸುತಾರ್ ಆರೋಪಿಸಿದ್ದಾರೆ.

‘ಸೋಮಯ್ಯ ವಿಡಿಯೋಗಳನ್ನು ಪ್ರಸಾರ ಮಾಡಿದ ನಂತರ 72 ಗಂಟೆಗಳ ಕಾಲ ಚಾನೆಲ್ ಅನ್ನು ಸ್ಥಗಿತಗೊಳಿಸಲಾಯಿತು. ಆದರೆ, ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಚಾನೆಲ್ ಸ್ಥಗಿತಗೊಂಡಿದ್ದರೂ ಡಿಜಿಟಲ್ ಕಾರ್ಯಾಚರಣೆ ಮುಂದುವರಿಯಲಿದೆ. ಇದಲ್ಲದೆ, ನಾವು ಯೂಟ್ಯೂಬ್ ನಲ್ಲಿ ಸುದ್ದಿಗಳನ್ನು ಪ್ರಸ್ತುತಪಡಿಸುವುದನ್ನು ಮುಂದುವರಿಸುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...