Homeಮುಖಪುಟಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: 'ಲೋಕಶಾಹಿ' ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಕಿರಿತ್ ಸೋಮಯ್ಯ ಅವರ ಕುರಿತಾದ ಸೆಕ್ಸ್ ಟೇಪ್ ಸುದ್ದಿ ಪ್ರಸಾರ ಮಾಡಿದ ನಂತರ, ‘ಲೋಕಶಾಹಿ’ ಮರಾಠಿ ಸುದ್ದಿವಾಹಿನಿಯ ಪರವಾನಗಿಯನ್ನು ಎರಡನೇ ಬಾರಿಗೆ ಕೇಂದ್ರ ಸರ್ಕಾರ 30 ದಿನಗಳವರೆಗೆ ಅಮಾನತುಗೊಳಿಸಿದೆ.

ಜುಲೈ 17, 2023ರಂದು ಪ್ರಸಾರವಾದ ವರದಿಯ ಮೇಲೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಕಳೆದ ವರ್ಷ ಚಾನೆಲ್ ಅಮಾನತು ಸೂಚನೆಯನ್ನು ಸ್ವೀಕರಿಸಿತ್ತು. ಈಗ ಸರ್ಕಾರ ಚಾನೆಲ್‌ನ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಹಿಂದಿನ ಸೂಚನೆಯು 72 ಗಂಟೆಗಳ ಕಾಲ ಇತ್ತು. ಇದರ ವಿರುದ್ಧ ವಾಹಿನಿ ದೆಹಲಿ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಕೇಂದ್ರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿದೆ.

ಚಾನೆಲ್‌ನ ಪ್ರೈಮ್‌ ಟೈಮ್‌ ಸುದ್ದಿಯಲ್ಲಿ ಬಿಜೆಪಿ ನಾಯಕನ ಲೈಂಗಿಕ ವೀಡಿಯೊವನ್ನು ಆಧರಿಸಿದೆ ಎಂಬ ಆರೋಪವಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಎಡಿಟ್ ಮಾಡಿದ ವೀಡಿಯೊದ ವಿಷಯವನ್ನು ಪ್ರಸ್ತುತಪಡಿಸಿ, ‘ಕಿರಿತ್ ಸೋಮಯ್ಯ ಹನಿ ಟ್ರಾಪ್ ಆಗಿದ್ದಾರೆಯೇ’ ಎಂದು ಪ್ರಶ್ನಿಸಿದ್ದರು. ವಿರೋಧ ಪಕ್ಷದ ನಾಯಕರು ಅವರ ಮೇಲೆ ಲೈಂಗಿಕ ದುರ್ನಡತೆ ಮತ್ತು ಸುಲಿಗೆ ಆರೋಪವನ್ನು ಮಾಡಿದರು. ಸುದ್ದಿ ಪ್ರಸಾರವಾದ ನಂತರ ಸೋಮಯ್ಯ ಅವರು, ಮುಂಬೈ ಪೊಲೀಸ್, ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಗೆ ದೂರು ಸಲ್ಲಿಸಿದ್ದರು. ‘ನನ್ನ ಸಾರ್ವಜನಿಕ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ’ ಎಂದು ಆರೋಪಿಸಿ ಬಾಂಬೆ ಹೈಕೋರ್ಟಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ.

ಯಾರ ಹೆಸರಿನಲ್ಲಿ ಪರವಾನಗಿ ನೀಡಲಾಗಿದೆಯೋ ಹಾಗೂ ಚಾನೆಲ್‌ನ ನಿರ್ವಾಹಕರ ಹೆಸರು ಒಂದೇ ಆಗಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರವು ಈಗ ವಾಹಿನಿಯ ಪರವಾನಗಿಯನ್ನು ಅಮಾನತುಗೊಳಿಸಿದೆ ಎಂದು ಸಚಿವಾಲಯದ ಹೆಸರಿಸದ ಮೂಲಗಳು ಪತ್ರಿಕೆಗೆ ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆರು ತಿಂಗಳಲ್ಲಿ ಎರಡನೇ ಬಾರಿಗೆ ಚಾನೆಲ್ ವಿರುದ್ಧ ಕ್ರಮ ಕೈಗೊಂಡ ನಂತರ ಜನಪ್ರಿಯ ಮರಾಠಿ ಸುದ್ದಿ ವಾಹಿನಿ ಲೋಕಶಾಹಿ ಪ್ರಸಾರ ಸ್ಥಗಿತಗೊಳಿಸಲಾಗಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಅಮಾನತಿನ ವಿರುದ್ಧ ಮಾತನಾಡಿ, “ಕಾನೂನು ಬದ್ಧವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

‘ಚಾನೆಲ್ ತನ್ನ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಲ್ಲಿಸಲು ವಿಫಲವಾದ ನಂತರ ಮಂಗಳವಾರ 30 ದಿನಗಳ ಕಾಲ ಪ್ರಸಾರವನ್ನು ಅಮಾನತು ಮಾಡಲಾಗಿದೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ನಮಗೆ ಆದೇಶ ಬಂದಿದ್ದು, ಸಂಜೆ 6 ಗಂಟೆ ವೇಳೆಗೆ ಚಾನೆಲ್ ಪ್ರಸಾರ ಸ್ಥಗಿತಗೊಂಡಿದೆ. ಮಾಹಿ ಮತ್ತು ಪ್ರಸಾರ ಸಚಿವಾಲಯವು ನಮ್ಮ ಪರವಾನಗಿಯನ್ನು ಅಮಾನತುಗೊಳಿಸಿದೆ. ನಾವು ಅದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲಿದ್ದೇವೆ. ಇದು ಇತಿಹಾಸದಲ್ಲಿ 30 ದಿನಗಳ ಕಾಲ ಚಾನೆಲ್ ಅನ್ನು ಮುಚ್ಚುವಂತೆ ಕೇಳಲಾದ ಮೊದಲ ನಿದರ್ಶನವಾಗಿದ್ದು, ನಾವು ಹೆದರುವುದಿಲ್ಲ’ ಎಂದು ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಬುಧವಾರ ತಿಳಿಸಿದ್ದಾರೆ.

ಜುಲೈ 2023 ರಲ್ಲಿ, ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ “ಸೆಕ್ಸ್ ವೀಡಿಯೋ” ದ ಸುದ್ದಿಯನ್ನು ಲೋಕಶಾಹಿಯನ್ನು ಪ್ರಸಾರ ಮಾಡಿತ್ತು. ಆ ನಂತರ, ಕಂಪನಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಸಲ್ಲಿಸದ ಕಾರಣ ಸಚಿವಾಲಯವು ವಾಹಿನಿಗೆ ನೀಡಿದ್ದ ಪರವಾನಗಿಯನ್ನು ಅಮಾನತು ಮಾಡಿದೆ.

‘ಲೋಕಾಹಿ ಯಾವಾಗಲೂ ಸುದ್ದಿ ಮತ್ತು ಸತ್ಯಗಳನ್ನು ನ್ಯಾಯಯುತ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ಪ್ರಸ್ತುತಪಡಿಸಿದೆ. ನಾವು ಸರ್ಕಾರದ ಉತ್ತಮ ಪುಸ್ತಕಗಳಲ್ಲಿ ಇಲ್ಲದಿರಬಹುದು. ಆದರೆ ನಮ್ಮ ವಾಸ್ತವಿಕ ವರದಿಯನ್ನು ಮೆಚ್ಚುವ ಜನರ ಹೃದಯದಲ್ಲಿ ನಾವು ವಾಸಿಸುತ್ತೇವೆ. ಅಧಿಕಾರದಲ್ಲಿ ಇರುವವರ ತಪ್ಪು ಕೆಲಸಗಳ ಬಗ್ಗೆ ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದೇವೆ’ ಸುತಾರ್ ಹೇಳಿದ್ದಾರೆ.

‘ವಾಹಿನಿಯು ಗುಜರಾತ್ ಸಮಾಚಾರ್ ಮತ್ತು ಸ್ವರಾಜ್ ಮರಾಠಿ ಬ್ರಾಡ್‌ಕಾಸ್ಟಿಂಗ್ ಎಲ್ಎಲ್‌ಪಿ ನಡುವಿನ ಪಾಲುದಾರಿಕೆಯ ಉದ್ಯಮವಾಗಿದೆ’ ಎಂದು ಅವರು ಹೇಳಿದರು. ‘ಪರವಾನಗಿಯು ಒಬ್ಬ ಪಾಲುದಾರನ ಹೆಸರಿನಲ್ಲಿದೆ ಮತ್ತು ಇನ್ನೊಬ್ಬರು ಕಾರ್ಯಾಚರಣೆಯನ್ನು ನಡೆಸುತ್ತಾರೆ. ಸಚಿವಾಲಯವು ಇದನ್ನು ಆಕ್ಷೇಪಿಸಿದೆ. ಪರವಾನಗಿಯನ್ನು ನೀಡಿದ ಸಂಸ್ಥೆಯಿಂದ ಎಲ್ಲವನ್ನೂ ಮಾಡುವಂತೆ ನೋಡಿಕೊಳ್ಳಲು ಕೇಳಿದೆ. ನಾವು ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿದ್ದೆವು. ನಾವು ಅದನ್ನು ಮಾಡುವ ಮೊದಲೇ, ಅವರು ಚಾನಲ್ ಅನ್ನು ಮುಚ್ಚಿದ್ದಾರೆ; ಇದು ಕಠಿಣ ನಿರ್ಧಾರ. ನಮ್ಮ ರೀತಿ ಅರವತ್ತು ಸಂಸ್ಥೆಗಳು ಬೇರೆ ಬೇರೆ ಪಾಲುದಾರರನ್ನು ಹೊಂದಿದ್ದರೂ ನಮ್ಮ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ’ ಎಂದು ಸುತಾರ್ ಆರೋಪಿಸಿದ್ದಾರೆ.

‘ಸೋಮಯ್ಯ ವಿಡಿಯೋಗಳನ್ನು ಪ್ರಸಾರ ಮಾಡಿದ ನಂತರ 72 ಗಂಟೆಗಳ ಕಾಲ ಚಾನೆಲ್ ಅನ್ನು ಸ್ಥಗಿತಗೊಳಿಸಲಾಯಿತು. ಆದರೆ, ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಚಾನೆಲ್ ಸ್ಥಗಿತಗೊಂಡಿದ್ದರೂ ಡಿಜಿಟಲ್ ಕಾರ್ಯಾಚರಣೆ ಮುಂದುವರಿಯಲಿದೆ. ಇದಲ್ಲದೆ, ನಾವು ಯೂಟ್ಯೂಬ್ ನಲ್ಲಿ ಸುದ್ದಿಗಳನ್ನು ಪ್ರಸ್ತುತಪಡಿಸುವುದನ್ನು ಮುಂದುವರಿಸುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....