Homeಮುಖಪುಟಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: 'ಲೋಕಶಾಹಿ' ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಕಿರಿತ್ ಸೋಮಯ್ಯ ಅವರ ಕುರಿತಾದ ಸೆಕ್ಸ್ ಟೇಪ್ ಸುದ್ದಿ ಪ್ರಸಾರ ಮಾಡಿದ ನಂತರ, ‘ಲೋಕಶಾಹಿ’ ಮರಾಠಿ ಸುದ್ದಿವಾಹಿನಿಯ ಪರವಾನಗಿಯನ್ನು ಎರಡನೇ ಬಾರಿಗೆ ಕೇಂದ್ರ ಸರ್ಕಾರ 30 ದಿನಗಳವರೆಗೆ ಅಮಾನತುಗೊಳಿಸಿದೆ.

ಜುಲೈ 17, 2023ರಂದು ಪ್ರಸಾರವಾದ ವರದಿಯ ಮೇಲೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಕಳೆದ ವರ್ಷ ಚಾನೆಲ್ ಅಮಾನತು ಸೂಚನೆಯನ್ನು ಸ್ವೀಕರಿಸಿತ್ತು. ಈಗ ಸರ್ಕಾರ ಚಾನೆಲ್‌ನ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಹಿಂದಿನ ಸೂಚನೆಯು 72 ಗಂಟೆಗಳ ಕಾಲ ಇತ್ತು. ಇದರ ವಿರುದ್ಧ ವಾಹಿನಿ ದೆಹಲಿ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಕೇಂದ್ರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿದೆ.

ಚಾನೆಲ್‌ನ ಪ್ರೈಮ್‌ ಟೈಮ್‌ ಸುದ್ದಿಯಲ್ಲಿ ಬಿಜೆಪಿ ನಾಯಕನ ಲೈಂಗಿಕ ವೀಡಿಯೊವನ್ನು ಆಧರಿಸಿದೆ ಎಂಬ ಆರೋಪವಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಎಡಿಟ್ ಮಾಡಿದ ವೀಡಿಯೊದ ವಿಷಯವನ್ನು ಪ್ರಸ್ತುತಪಡಿಸಿ, ‘ಕಿರಿತ್ ಸೋಮಯ್ಯ ಹನಿ ಟ್ರಾಪ್ ಆಗಿದ್ದಾರೆಯೇ’ ಎಂದು ಪ್ರಶ್ನಿಸಿದ್ದರು. ವಿರೋಧ ಪಕ್ಷದ ನಾಯಕರು ಅವರ ಮೇಲೆ ಲೈಂಗಿಕ ದುರ್ನಡತೆ ಮತ್ತು ಸುಲಿಗೆ ಆರೋಪವನ್ನು ಮಾಡಿದರು. ಸುದ್ದಿ ಪ್ರಸಾರವಾದ ನಂತರ ಸೋಮಯ್ಯ ಅವರು, ಮುಂಬೈ ಪೊಲೀಸ್, ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಗೆ ದೂರು ಸಲ್ಲಿಸಿದ್ದರು. ‘ನನ್ನ ಸಾರ್ವಜನಿಕ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ’ ಎಂದು ಆರೋಪಿಸಿ ಬಾಂಬೆ ಹೈಕೋರ್ಟಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ.

ಯಾರ ಹೆಸರಿನಲ್ಲಿ ಪರವಾನಗಿ ನೀಡಲಾಗಿದೆಯೋ ಹಾಗೂ ಚಾನೆಲ್‌ನ ನಿರ್ವಾಹಕರ ಹೆಸರು ಒಂದೇ ಆಗಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರವು ಈಗ ವಾಹಿನಿಯ ಪರವಾನಗಿಯನ್ನು ಅಮಾನತುಗೊಳಿಸಿದೆ ಎಂದು ಸಚಿವಾಲಯದ ಹೆಸರಿಸದ ಮೂಲಗಳು ಪತ್ರಿಕೆಗೆ ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆರು ತಿಂಗಳಲ್ಲಿ ಎರಡನೇ ಬಾರಿಗೆ ಚಾನೆಲ್ ವಿರುದ್ಧ ಕ್ರಮ ಕೈಗೊಂಡ ನಂತರ ಜನಪ್ರಿಯ ಮರಾಠಿ ಸುದ್ದಿ ವಾಹಿನಿ ಲೋಕಶಾಹಿ ಪ್ರಸಾರ ಸ್ಥಗಿತಗೊಳಿಸಲಾಗಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಅಮಾನತಿನ ವಿರುದ್ಧ ಮಾತನಾಡಿ, “ಕಾನೂನು ಬದ್ಧವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

‘ಚಾನೆಲ್ ತನ್ನ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಲ್ಲಿಸಲು ವಿಫಲವಾದ ನಂತರ ಮಂಗಳವಾರ 30 ದಿನಗಳ ಕಾಲ ಪ್ರಸಾರವನ್ನು ಅಮಾನತು ಮಾಡಲಾಗಿದೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ನಮಗೆ ಆದೇಶ ಬಂದಿದ್ದು, ಸಂಜೆ 6 ಗಂಟೆ ವೇಳೆಗೆ ಚಾನೆಲ್ ಪ್ರಸಾರ ಸ್ಥಗಿತಗೊಂಡಿದೆ. ಮಾಹಿ ಮತ್ತು ಪ್ರಸಾರ ಸಚಿವಾಲಯವು ನಮ್ಮ ಪರವಾನಗಿಯನ್ನು ಅಮಾನತುಗೊಳಿಸಿದೆ. ನಾವು ಅದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲಿದ್ದೇವೆ. ಇದು ಇತಿಹಾಸದಲ್ಲಿ 30 ದಿನಗಳ ಕಾಲ ಚಾನೆಲ್ ಅನ್ನು ಮುಚ್ಚುವಂತೆ ಕೇಳಲಾದ ಮೊದಲ ನಿದರ್ಶನವಾಗಿದ್ದು, ನಾವು ಹೆದರುವುದಿಲ್ಲ’ ಎಂದು ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಬುಧವಾರ ತಿಳಿಸಿದ್ದಾರೆ.

ಜುಲೈ 2023 ರಲ್ಲಿ, ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ “ಸೆಕ್ಸ್ ವೀಡಿಯೋ” ದ ಸುದ್ದಿಯನ್ನು ಲೋಕಶಾಹಿಯನ್ನು ಪ್ರಸಾರ ಮಾಡಿತ್ತು. ಆ ನಂತರ, ಕಂಪನಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಸಲ್ಲಿಸದ ಕಾರಣ ಸಚಿವಾಲಯವು ವಾಹಿನಿಗೆ ನೀಡಿದ್ದ ಪರವಾನಗಿಯನ್ನು ಅಮಾನತು ಮಾಡಿದೆ.

‘ಲೋಕಾಹಿ ಯಾವಾಗಲೂ ಸುದ್ದಿ ಮತ್ತು ಸತ್ಯಗಳನ್ನು ನ್ಯಾಯಯುತ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ಪ್ರಸ್ತುತಪಡಿಸಿದೆ. ನಾವು ಸರ್ಕಾರದ ಉತ್ತಮ ಪುಸ್ತಕಗಳಲ್ಲಿ ಇಲ್ಲದಿರಬಹುದು. ಆದರೆ ನಮ್ಮ ವಾಸ್ತವಿಕ ವರದಿಯನ್ನು ಮೆಚ್ಚುವ ಜನರ ಹೃದಯದಲ್ಲಿ ನಾವು ವಾಸಿಸುತ್ತೇವೆ. ಅಧಿಕಾರದಲ್ಲಿ ಇರುವವರ ತಪ್ಪು ಕೆಲಸಗಳ ಬಗ್ಗೆ ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದೇವೆ’ ಸುತಾರ್ ಹೇಳಿದ್ದಾರೆ.

‘ವಾಹಿನಿಯು ಗುಜರಾತ್ ಸಮಾಚಾರ್ ಮತ್ತು ಸ್ವರಾಜ್ ಮರಾಠಿ ಬ್ರಾಡ್‌ಕಾಸ್ಟಿಂಗ್ ಎಲ್ಎಲ್‌ಪಿ ನಡುವಿನ ಪಾಲುದಾರಿಕೆಯ ಉದ್ಯಮವಾಗಿದೆ’ ಎಂದು ಅವರು ಹೇಳಿದರು. ‘ಪರವಾನಗಿಯು ಒಬ್ಬ ಪಾಲುದಾರನ ಹೆಸರಿನಲ್ಲಿದೆ ಮತ್ತು ಇನ್ನೊಬ್ಬರು ಕಾರ್ಯಾಚರಣೆಯನ್ನು ನಡೆಸುತ್ತಾರೆ. ಸಚಿವಾಲಯವು ಇದನ್ನು ಆಕ್ಷೇಪಿಸಿದೆ. ಪರವಾನಗಿಯನ್ನು ನೀಡಿದ ಸಂಸ್ಥೆಯಿಂದ ಎಲ್ಲವನ್ನೂ ಮಾಡುವಂತೆ ನೋಡಿಕೊಳ್ಳಲು ಕೇಳಿದೆ. ನಾವು ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿದ್ದೆವು. ನಾವು ಅದನ್ನು ಮಾಡುವ ಮೊದಲೇ, ಅವರು ಚಾನಲ್ ಅನ್ನು ಮುಚ್ಚಿದ್ದಾರೆ; ಇದು ಕಠಿಣ ನಿರ್ಧಾರ. ನಮ್ಮ ರೀತಿ ಅರವತ್ತು ಸಂಸ್ಥೆಗಳು ಬೇರೆ ಬೇರೆ ಪಾಲುದಾರರನ್ನು ಹೊಂದಿದ್ದರೂ ನಮ್ಮ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ’ ಎಂದು ಸುತಾರ್ ಆರೋಪಿಸಿದ್ದಾರೆ.

‘ಸೋಮಯ್ಯ ವಿಡಿಯೋಗಳನ್ನು ಪ್ರಸಾರ ಮಾಡಿದ ನಂತರ 72 ಗಂಟೆಗಳ ಕಾಲ ಚಾನೆಲ್ ಅನ್ನು ಸ್ಥಗಿತಗೊಳಿಸಲಾಯಿತು. ಆದರೆ, ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಚಾನೆಲ್ ಸ್ಥಗಿತಗೊಂಡಿದ್ದರೂ ಡಿಜಿಟಲ್ ಕಾರ್ಯಾಚರಣೆ ಮುಂದುವರಿಯಲಿದೆ. ಇದಲ್ಲದೆ, ನಾವು ಯೂಟ್ಯೂಬ್ ನಲ್ಲಿ ಸುದ್ದಿಗಳನ್ನು ಪ್ರಸ್ತುತಪಡಿಸುವುದನ್ನು ಮುಂದುವರಿಸುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...