Homeಮುಖಪುಟಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: 'ಲೋಕಶಾಹಿ' ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಕಿರಿತ್ ಸೋಮಯ್ಯ ಅವರ ಕುರಿತಾದ ಸೆಕ್ಸ್ ಟೇಪ್ ಸುದ್ದಿ ಪ್ರಸಾರ ಮಾಡಿದ ನಂತರ, ‘ಲೋಕಶಾಹಿ’ ಮರಾಠಿ ಸುದ್ದಿವಾಹಿನಿಯ ಪರವಾನಗಿಯನ್ನು ಎರಡನೇ ಬಾರಿಗೆ ಕೇಂದ್ರ ಸರ್ಕಾರ 30 ದಿನಗಳವರೆಗೆ ಅಮಾನತುಗೊಳಿಸಿದೆ.

ಜುಲೈ 17, 2023ರಂದು ಪ್ರಸಾರವಾದ ವರದಿಯ ಮೇಲೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಕಳೆದ ವರ್ಷ ಚಾನೆಲ್ ಅಮಾನತು ಸೂಚನೆಯನ್ನು ಸ್ವೀಕರಿಸಿತ್ತು. ಈಗ ಸರ್ಕಾರ ಚಾನೆಲ್‌ನ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಹಿಂದಿನ ಸೂಚನೆಯು 72 ಗಂಟೆಗಳ ಕಾಲ ಇತ್ತು. ಇದರ ವಿರುದ್ಧ ವಾಹಿನಿ ದೆಹಲಿ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಕೇಂದ್ರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿದೆ.

ಚಾನೆಲ್‌ನ ಪ್ರೈಮ್‌ ಟೈಮ್‌ ಸುದ್ದಿಯಲ್ಲಿ ಬಿಜೆಪಿ ನಾಯಕನ ಲೈಂಗಿಕ ವೀಡಿಯೊವನ್ನು ಆಧರಿಸಿದೆ ಎಂಬ ಆರೋಪವಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಎಡಿಟ್ ಮಾಡಿದ ವೀಡಿಯೊದ ವಿಷಯವನ್ನು ಪ್ರಸ್ತುತಪಡಿಸಿ, ‘ಕಿರಿತ್ ಸೋಮಯ್ಯ ಹನಿ ಟ್ರಾಪ್ ಆಗಿದ್ದಾರೆಯೇ’ ಎಂದು ಪ್ರಶ್ನಿಸಿದ್ದರು. ವಿರೋಧ ಪಕ್ಷದ ನಾಯಕರು ಅವರ ಮೇಲೆ ಲೈಂಗಿಕ ದುರ್ನಡತೆ ಮತ್ತು ಸುಲಿಗೆ ಆರೋಪವನ್ನು ಮಾಡಿದರು. ಸುದ್ದಿ ಪ್ರಸಾರವಾದ ನಂತರ ಸೋಮಯ್ಯ ಅವರು, ಮುಂಬೈ ಪೊಲೀಸ್, ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಗೆ ದೂರು ಸಲ್ಲಿಸಿದ್ದರು. ‘ನನ್ನ ಸಾರ್ವಜನಿಕ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ’ ಎಂದು ಆರೋಪಿಸಿ ಬಾಂಬೆ ಹೈಕೋರ್ಟಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ.

ಯಾರ ಹೆಸರಿನಲ್ಲಿ ಪರವಾನಗಿ ನೀಡಲಾಗಿದೆಯೋ ಹಾಗೂ ಚಾನೆಲ್‌ನ ನಿರ್ವಾಹಕರ ಹೆಸರು ಒಂದೇ ಆಗಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರವು ಈಗ ವಾಹಿನಿಯ ಪರವಾನಗಿಯನ್ನು ಅಮಾನತುಗೊಳಿಸಿದೆ ಎಂದು ಸಚಿವಾಲಯದ ಹೆಸರಿಸದ ಮೂಲಗಳು ಪತ್ರಿಕೆಗೆ ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆರು ತಿಂಗಳಲ್ಲಿ ಎರಡನೇ ಬಾರಿಗೆ ಚಾನೆಲ್ ವಿರುದ್ಧ ಕ್ರಮ ಕೈಗೊಂಡ ನಂತರ ಜನಪ್ರಿಯ ಮರಾಠಿ ಸುದ್ದಿ ವಾಹಿನಿ ಲೋಕಶಾಹಿ ಪ್ರಸಾರ ಸ್ಥಗಿತಗೊಳಿಸಲಾಗಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಅಮಾನತಿನ ವಿರುದ್ಧ ಮಾತನಾಡಿ, “ಕಾನೂನು ಬದ್ಧವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

‘ಚಾನೆಲ್ ತನ್ನ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಲ್ಲಿಸಲು ವಿಫಲವಾದ ನಂತರ ಮಂಗಳವಾರ 30 ದಿನಗಳ ಕಾಲ ಪ್ರಸಾರವನ್ನು ಅಮಾನತು ಮಾಡಲಾಗಿದೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ನಮಗೆ ಆದೇಶ ಬಂದಿದ್ದು, ಸಂಜೆ 6 ಗಂಟೆ ವೇಳೆಗೆ ಚಾನೆಲ್ ಪ್ರಸಾರ ಸ್ಥಗಿತಗೊಂಡಿದೆ. ಮಾಹಿ ಮತ್ತು ಪ್ರಸಾರ ಸಚಿವಾಲಯವು ನಮ್ಮ ಪರವಾನಗಿಯನ್ನು ಅಮಾನತುಗೊಳಿಸಿದೆ. ನಾವು ಅದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲಿದ್ದೇವೆ. ಇದು ಇತಿಹಾಸದಲ್ಲಿ 30 ದಿನಗಳ ಕಾಲ ಚಾನೆಲ್ ಅನ್ನು ಮುಚ್ಚುವಂತೆ ಕೇಳಲಾದ ಮೊದಲ ನಿದರ್ಶನವಾಗಿದ್ದು, ನಾವು ಹೆದರುವುದಿಲ್ಲ’ ಎಂದು ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಬುಧವಾರ ತಿಳಿಸಿದ್ದಾರೆ.

ಜುಲೈ 2023 ರಲ್ಲಿ, ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ “ಸೆಕ್ಸ್ ವೀಡಿಯೋ” ದ ಸುದ್ದಿಯನ್ನು ಲೋಕಶಾಹಿಯನ್ನು ಪ್ರಸಾರ ಮಾಡಿತ್ತು. ಆ ನಂತರ, ಕಂಪನಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಸಲ್ಲಿಸದ ಕಾರಣ ಸಚಿವಾಲಯವು ವಾಹಿನಿಗೆ ನೀಡಿದ್ದ ಪರವಾನಗಿಯನ್ನು ಅಮಾನತು ಮಾಡಿದೆ.

‘ಲೋಕಾಹಿ ಯಾವಾಗಲೂ ಸುದ್ದಿ ಮತ್ತು ಸತ್ಯಗಳನ್ನು ನ್ಯಾಯಯುತ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ಪ್ರಸ್ತುತಪಡಿಸಿದೆ. ನಾವು ಸರ್ಕಾರದ ಉತ್ತಮ ಪುಸ್ತಕಗಳಲ್ಲಿ ಇಲ್ಲದಿರಬಹುದು. ಆದರೆ ನಮ್ಮ ವಾಸ್ತವಿಕ ವರದಿಯನ್ನು ಮೆಚ್ಚುವ ಜನರ ಹೃದಯದಲ್ಲಿ ನಾವು ವಾಸಿಸುತ್ತೇವೆ. ಅಧಿಕಾರದಲ್ಲಿ ಇರುವವರ ತಪ್ಪು ಕೆಲಸಗಳ ಬಗ್ಗೆ ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದೇವೆ’ ಸುತಾರ್ ಹೇಳಿದ್ದಾರೆ.

‘ವಾಹಿನಿಯು ಗುಜರಾತ್ ಸಮಾಚಾರ್ ಮತ್ತು ಸ್ವರಾಜ್ ಮರಾಠಿ ಬ್ರಾಡ್‌ಕಾಸ್ಟಿಂಗ್ ಎಲ್ಎಲ್‌ಪಿ ನಡುವಿನ ಪಾಲುದಾರಿಕೆಯ ಉದ್ಯಮವಾಗಿದೆ’ ಎಂದು ಅವರು ಹೇಳಿದರು. ‘ಪರವಾನಗಿಯು ಒಬ್ಬ ಪಾಲುದಾರನ ಹೆಸರಿನಲ್ಲಿದೆ ಮತ್ತು ಇನ್ನೊಬ್ಬರು ಕಾರ್ಯಾಚರಣೆಯನ್ನು ನಡೆಸುತ್ತಾರೆ. ಸಚಿವಾಲಯವು ಇದನ್ನು ಆಕ್ಷೇಪಿಸಿದೆ. ಪರವಾನಗಿಯನ್ನು ನೀಡಿದ ಸಂಸ್ಥೆಯಿಂದ ಎಲ್ಲವನ್ನೂ ಮಾಡುವಂತೆ ನೋಡಿಕೊಳ್ಳಲು ಕೇಳಿದೆ. ನಾವು ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿದ್ದೆವು. ನಾವು ಅದನ್ನು ಮಾಡುವ ಮೊದಲೇ, ಅವರು ಚಾನಲ್ ಅನ್ನು ಮುಚ್ಚಿದ್ದಾರೆ; ಇದು ಕಠಿಣ ನಿರ್ಧಾರ. ನಮ್ಮ ರೀತಿ ಅರವತ್ತು ಸಂಸ್ಥೆಗಳು ಬೇರೆ ಬೇರೆ ಪಾಲುದಾರರನ್ನು ಹೊಂದಿದ್ದರೂ ನಮ್ಮ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ’ ಎಂದು ಸುತಾರ್ ಆರೋಪಿಸಿದ್ದಾರೆ.

‘ಸೋಮಯ್ಯ ವಿಡಿಯೋಗಳನ್ನು ಪ್ರಸಾರ ಮಾಡಿದ ನಂತರ 72 ಗಂಟೆಗಳ ಕಾಲ ಚಾನೆಲ್ ಅನ್ನು ಸ್ಥಗಿತಗೊಳಿಸಲಾಯಿತು. ಆದರೆ, ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಚಾನೆಲ್ ಸ್ಥಗಿತಗೊಂಡಿದ್ದರೂ ಡಿಜಿಟಲ್ ಕಾರ್ಯಾಚರಣೆ ಮುಂದುವರಿಯಲಿದೆ. ಇದಲ್ಲದೆ, ನಾವು ಯೂಟ್ಯೂಬ್ ನಲ್ಲಿ ಸುದ್ದಿಗಳನ್ನು ಪ್ರಸ್ತುತಪಡಿಸುವುದನ್ನು ಮುಂದುವರಿಸುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...