Homeಮುಖಪುಟಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: 'ಲೋಕಶಾಹಿ' ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

ಬಿಜೆಪಿ ಮುಖಂಡನ ಸೆಕ್ಸ್ ಟೇಪ್ ಸುದ್ದಿ ಪ್ರಸಾರ: ‘ಲೋಕಶಾಹಿ’ ಮರಾಠಿ ಚಾನೆಲ್‌ ಲೈಸೆನ್ಸ್ ಅಮಾನತು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಕಿರಿತ್ ಸೋಮಯ್ಯ ಅವರ ಕುರಿತಾದ ಸೆಕ್ಸ್ ಟೇಪ್ ಸುದ್ದಿ ಪ್ರಸಾರ ಮಾಡಿದ ನಂತರ, ‘ಲೋಕಶಾಹಿ’ ಮರಾಠಿ ಸುದ್ದಿವಾಹಿನಿಯ ಪರವಾನಗಿಯನ್ನು ಎರಡನೇ ಬಾರಿಗೆ ಕೇಂದ್ರ ಸರ್ಕಾರ 30 ದಿನಗಳವರೆಗೆ ಅಮಾನತುಗೊಳಿಸಿದೆ.

ಜುಲೈ 17, 2023ರಂದು ಪ್ರಸಾರವಾದ ವರದಿಯ ಮೇಲೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಕಳೆದ ವರ್ಷ ಚಾನೆಲ್ ಅಮಾನತು ಸೂಚನೆಯನ್ನು ಸ್ವೀಕರಿಸಿತ್ತು. ಈಗ ಸರ್ಕಾರ ಚಾನೆಲ್‌ನ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಹಿಂದಿನ ಸೂಚನೆಯು 72 ಗಂಟೆಗಳ ಕಾಲ ಇತ್ತು. ಇದರ ವಿರುದ್ಧ ವಾಹಿನಿ ದೆಹಲಿ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಕೇಂದ್ರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿದೆ.

ಚಾನೆಲ್‌ನ ಪ್ರೈಮ್‌ ಟೈಮ್‌ ಸುದ್ದಿಯಲ್ಲಿ ಬಿಜೆಪಿ ನಾಯಕನ ಲೈಂಗಿಕ ವೀಡಿಯೊವನ್ನು ಆಧರಿಸಿದೆ ಎಂಬ ಆರೋಪವಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಎಡಿಟ್ ಮಾಡಿದ ವೀಡಿಯೊದ ವಿಷಯವನ್ನು ಪ್ರಸ್ತುತಪಡಿಸಿ, ‘ಕಿರಿತ್ ಸೋಮಯ್ಯ ಹನಿ ಟ್ರಾಪ್ ಆಗಿದ್ದಾರೆಯೇ’ ಎಂದು ಪ್ರಶ್ನಿಸಿದ್ದರು. ವಿರೋಧ ಪಕ್ಷದ ನಾಯಕರು ಅವರ ಮೇಲೆ ಲೈಂಗಿಕ ದುರ್ನಡತೆ ಮತ್ತು ಸುಲಿಗೆ ಆರೋಪವನ್ನು ಮಾಡಿದರು. ಸುದ್ದಿ ಪ್ರಸಾರವಾದ ನಂತರ ಸೋಮಯ್ಯ ಅವರು, ಮುಂಬೈ ಪೊಲೀಸ್, ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಗೆ ದೂರು ಸಲ್ಲಿಸಿದ್ದರು. ‘ನನ್ನ ಸಾರ್ವಜನಿಕ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ’ ಎಂದು ಆರೋಪಿಸಿ ಬಾಂಬೆ ಹೈಕೋರ್ಟಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ.

ಯಾರ ಹೆಸರಿನಲ್ಲಿ ಪರವಾನಗಿ ನೀಡಲಾಗಿದೆಯೋ ಹಾಗೂ ಚಾನೆಲ್‌ನ ನಿರ್ವಾಹಕರ ಹೆಸರು ಒಂದೇ ಆಗಿಲ್ಲ ಎಂಬ ಕಾರಣಕ್ಕಾಗಿ ಸರ್ಕಾರವು ಈಗ ವಾಹಿನಿಯ ಪರವಾನಗಿಯನ್ನು ಅಮಾನತುಗೊಳಿಸಿದೆ ಎಂದು ಸಚಿವಾಲಯದ ಹೆಸರಿಸದ ಮೂಲಗಳು ಪತ್ರಿಕೆಗೆ ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆರು ತಿಂಗಳಲ್ಲಿ ಎರಡನೇ ಬಾರಿಗೆ ಚಾನೆಲ್ ವಿರುದ್ಧ ಕ್ರಮ ಕೈಗೊಂಡ ನಂತರ ಜನಪ್ರಿಯ ಮರಾಠಿ ಸುದ್ದಿ ವಾಹಿನಿ ಲೋಕಶಾಹಿ ಪ್ರಸಾರ ಸ್ಥಗಿತಗೊಳಿಸಲಾಗಿದೆ. ಚಾನೆಲ್‌ನ ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಅವರು ಅಮಾನತಿನ ವಿರುದ್ಧ ಮಾತನಾಡಿ, “ಕಾನೂನು ಬದ್ಧವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

‘ಚಾನೆಲ್ ತನ್ನ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಲ್ಲಿಸಲು ವಿಫಲವಾದ ನಂತರ ಮಂಗಳವಾರ 30 ದಿನಗಳ ಕಾಲ ಪ್ರಸಾರವನ್ನು ಅಮಾನತು ಮಾಡಲಾಗಿದೆ. ಮಂಗಳವಾರ ಸಂಜೆ 5.30ರ ಸುಮಾರಿಗೆ ನಮಗೆ ಆದೇಶ ಬಂದಿದ್ದು, ಸಂಜೆ 6 ಗಂಟೆ ವೇಳೆಗೆ ಚಾನೆಲ್ ಪ್ರಸಾರ ಸ್ಥಗಿತಗೊಂಡಿದೆ. ಮಾಹಿ ಮತ್ತು ಪ್ರಸಾರ ಸಚಿವಾಲಯವು ನಮ್ಮ ಪರವಾನಗಿಯನ್ನು ಅಮಾನತುಗೊಳಿಸಿದೆ. ನಾವು ಅದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲಿದ್ದೇವೆ. ಇದು ಇತಿಹಾಸದಲ್ಲಿ 30 ದಿನಗಳ ಕಾಲ ಚಾನೆಲ್ ಅನ್ನು ಮುಚ್ಚುವಂತೆ ಕೇಳಲಾದ ಮೊದಲ ನಿದರ್ಶನವಾಗಿದ್ದು, ನಾವು ಹೆದರುವುದಿಲ್ಲ’ ಎಂದು ಮುಖ್ಯ ಸಂಪಾದಕ ಕಮಲೇಶ್ ಸುತಾರ್ ಬುಧವಾರ ತಿಳಿಸಿದ್ದಾರೆ.

ಜುಲೈ 2023 ರಲ್ಲಿ, ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ “ಸೆಕ್ಸ್ ವೀಡಿಯೋ” ದ ಸುದ್ದಿಯನ್ನು ಲೋಕಶಾಹಿಯನ್ನು ಪ್ರಸಾರ ಮಾಡಿತ್ತು. ಆ ನಂತರ, ಕಂಪನಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಸಲ್ಲಿಸದ ಕಾರಣ ಸಚಿವಾಲಯವು ವಾಹಿನಿಗೆ ನೀಡಿದ್ದ ಪರವಾನಗಿಯನ್ನು ಅಮಾನತು ಮಾಡಿದೆ.

‘ಲೋಕಾಹಿ ಯಾವಾಗಲೂ ಸುದ್ದಿ ಮತ್ತು ಸತ್ಯಗಳನ್ನು ನ್ಯಾಯಯುತ, ಸ್ವತಂತ್ರ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ಪ್ರಸ್ತುತಪಡಿಸಿದೆ. ನಾವು ಸರ್ಕಾರದ ಉತ್ತಮ ಪುಸ್ತಕಗಳಲ್ಲಿ ಇಲ್ಲದಿರಬಹುದು. ಆದರೆ ನಮ್ಮ ವಾಸ್ತವಿಕ ವರದಿಯನ್ನು ಮೆಚ್ಚುವ ಜನರ ಹೃದಯದಲ್ಲಿ ನಾವು ವಾಸಿಸುತ್ತೇವೆ. ಅಧಿಕಾರದಲ್ಲಿ ಇರುವವರ ತಪ್ಪು ಕೆಲಸಗಳ ಬಗ್ಗೆ ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದೇವೆ’ ಸುತಾರ್ ಹೇಳಿದ್ದಾರೆ.

‘ವಾಹಿನಿಯು ಗುಜರಾತ್ ಸಮಾಚಾರ್ ಮತ್ತು ಸ್ವರಾಜ್ ಮರಾಠಿ ಬ್ರಾಡ್‌ಕಾಸ್ಟಿಂಗ್ ಎಲ್ಎಲ್‌ಪಿ ನಡುವಿನ ಪಾಲುದಾರಿಕೆಯ ಉದ್ಯಮವಾಗಿದೆ’ ಎಂದು ಅವರು ಹೇಳಿದರು. ‘ಪರವಾನಗಿಯು ಒಬ್ಬ ಪಾಲುದಾರನ ಹೆಸರಿನಲ್ಲಿದೆ ಮತ್ತು ಇನ್ನೊಬ್ಬರು ಕಾರ್ಯಾಚರಣೆಯನ್ನು ನಡೆಸುತ್ತಾರೆ. ಸಚಿವಾಲಯವು ಇದನ್ನು ಆಕ್ಷೇಪಿಸಿದೆ. ಪರವಾನಗಿಯನ್ನು ನೀಡಿದ ಸಂಸ್ಥೆಯಿಂದ ಎಲ್ಲವನ್ನೂ ಮಾಡುವಂತೆ ನೋಡಿಕೊಳ್ಳಲು ಕೇಳಿದೆ. ನಾವು ತಿದ್ದುಪಡಿ ಮಾಡುತ್ತೇವೆ ಎಂದು ಹೇಳಿದ್ದೆವು. ನಾವು ಅದನ್ನು ಮಾಡುವ ಮೊದಲೇ, ಅವರು ಚಾನಲ್ ಅನ್ನು ಮುಚ್ಚಿದ್ದಾರೆ; ಇದು ಕಠಿಣ ನಿರ್ಧಾರ. ನಮ್ಮ ರೀತಿ ಅರವತ್ತು ಸಂಸ್ಥೆಗಳು ಬೇರೆ ಬೇರೆ ಪಾಲುದಾರರನ್ನು ಹೊಂದಿದ್ದರೂ ನಮ್ಮ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ’ ಎಂದು ಸುತಾರ್ ಆರೋಪಿಸಿದ್ದಾರೆ.

‘ಸೋಮಯ್ಯ ವಿಡಿಯೋಗಳನ್ನು ಪ್ರಸಾರ ಮಾಡಿದ ನಂತರ 72 ಗಂಟೆಗಳ ಕಾಲ ಚಾನೆಲ್ ಅನ್ನು ಸ್ಥಗಿತಗೊಳಿಸಲಾಯಿತು. ಆದರೆ, ದೆಹಲಿ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಚಾನೆಲ್ ಸ್ಥಗಿತಗೊಂಡಿದ್ದರೂ ಡಿಜಿಟಲ್ ಕಾರ್ಯಾಚರಣೆ ಮುಂದುವರಿಯಲಿದೆ. ಇದಲ್ಲದೆ, ನಾವು ಯೂಟ್ಯೂಬ್ ನಲ್ಲಿ ಸುದ್ದಿಗಳನ್ನು ಪ್ರಸ್ತುತಪಡಿಸುವುದನ್ನು ಮುಂದುವರಿಸುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...