Homeಮುಖಪುಟರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಮುಖಂಡರು: ಟೀಕೆ ಬಳಿಕ ಎಚ್ಚೆತ್ತ...

ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಮುಖಂಡರು: ಟೀಕೆ ಬಳಿಕ ಎಚ್ಚೆತ್ತ ಬಿಜೆಪಿ

- Advertisement -
- Advertisement -

ಸಿಸಿಬಿ ಪೊಲೀಸರ ದಾಳಿ ವೇಳೆ ನಾಪತ್ತೆಯಾಗಿದ್ದ ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಮುಖಂಡರಿಂದ ವಿವರಣೆ ಪಡೆಯಲಾಗುವುದು, ಸೈಲೆಂಟ್ ಸುನೀಲ್‌ರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಭಾನುವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸೈಲೆಂಟ್ ಸುನೀಲ್ ಆರ್‌ಎಸ್‌ಎಸ್‌ ಹಿನ್ನೆಲೆಯ ರಾಷ್ಟ್ರೋತ್ಥಾನ ಪರಿಷತ್ ಜೊತೆಗೂಡಿ ರಕ್ತದಾನ ಶಿಬಿರ ಏರ್ಪಡಿಸಿದ್ದರು. ಆ ಕಾರ್ಯಕ್ರಮಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿ.ಸಿ ಮೋಹನ್, ಶಾಸಕರುಗಳಾದ ಉದಯ್ ಗರುಡಾಚಾರ್, ಬೆಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ರಮೇಶ್ ಸೇರಿದಂತೆ ಹಲವರು ಅತಿಥಿಗಳಾಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹುಟ್ಟುಹಾಕಿತ್ತು.

ನವೆಂಬರ್ 23ರಂದು ನಡೆದ ರೌಡಿಗಳ ಮನೆ ಮೇಲಿನ ಸಿಸಿಬಿ ದಾಳಿಯಲ್ಲಿ ಸೈಲೆಂಟ್ ಸುನೀಲ್ ತಪ್ಪಿಸಿಕೊಂಡಿದ್ದರು ಎಂದು ಪೊಲೀಸರು ಪತ್ರಿಕಾ ಹೇಳಿಕೆ ನೀಡಿದ್ದರು. ಆದರೆ ಮೂರೇ ದಿನದಲ್ಲಿ ಅವರ ನೇತೃತ್ವದಲ್ಲಿಯೇ ರಕ್ತದಾನ ಕಾರ್ಯಕ್ರಮ ನಡೆಸಲಾಗಿದ್ದು ಬಂಧಿಸಬೇಕಿದ್ದ ಪೊಲೀಸರೆ ಆತನಿಗೆ ರಕ್ಷಣೆ ನೀಡಿದ್ಯಾಕೆ ಎಂಬ ಪ್ರಶ್ನೆಗಳು ಕೇಳಿಬಂದಿದ್ದವು.

“ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು! ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್‌ಗಳು, ಕ್ರೀಮಿನಲ್‌ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಬಿಜೆಪಿ
ಪಕ್ಷ ತವರು ಮನೆ ಇದ್ದಂತೆ” ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿತ್ತು.

ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! ಆರಗ ಜ್ಞಾನೇದ್ರರವರೇ, ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

ರೌಡಿ ಶೀಟರ್ ಫೈಟರ್ ರವಿ ಬಿಜೆಪಿ ಸೇರ್ಪಡೆ

ಸೈಲೆಂಟ್ ಸುನೀಲ್ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಭಾಗಿಯಾಗಿದ್ದು ದೊಡ್ಡ ಟೀಕೆಗೆ ಒಳಗಾದ ಸಂದರ್ಭದಲ್ಲಿಯೇ ಮತ್ತೊರ್ವ ರೌಟಿ ಶೀಟರ್ ಫೈಟರ್ ರವಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸಚಿವರಾದ ಅಶ್ವಥ ನಾರಾಯಣ್, ಗೋಪಾಲಯ್ಯ ಮತ್ತು ಸಿ.ಪಿ ಯೋಗೀಶ್ವರ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

“ವಾಂಟೆಂಡ್ ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್! ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ. ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ” ಎಂದು ಕಾಂಗ್ರೆಸ್ ಟೀಕಿಸಿತ್ತು.

ಸೈಲೆಂಟ್ ಸುನೀಲ್ ಬಿಜೆಪಿ ಸೇರಲು ಅವಕಾಶವಿಲ್ಲ: ನಳೀನ್ ಕುಮಾರ್ ಕಟೀಲ್

ಸಾಲು ಸಾಲು ರೌಟಿ ಶೀಟರ್‌ಗಳು ಬಿಜೆಪಿ ಜೊತೆ ಗುರುತಿಸಿಕೊಳ್ಳುತ್ತಿರುವುದು ಆಡಳಿತ ಪಕ್ಷಕ್ಕೆ ಮುಜುಗರ ತಂದಿದೆದ. ಅಲ್ಲದೆ ಸಾರ್ವಜನಿಕರಿಂದ ಟೀಕೆಗಳು ಕೇಳಿ ಬರುತ್ತಿವೆ. ಪೊಲೀಸರು ಸೈಲೆಂಟ್ ಸುನೀಲ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ಡ್ಯಾಮೇಜ್ ಕಂಟ್ರೋಲ್‌ಗೆ ಇಳಿದಿದೆ. ಸೈಲೆಂಟ್ ಸುನೀಲ್ ಬಿಜೆಪಿ ಸೇರಲು ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಆದರೆ ಈಗಾಗಲೇ ಪಕ್ಷಕ್ಕೆ ಸೇರಿರುವ ಫೈಟರ್ ರವಿ ಬಗ್ಗೆ ಅವರು ಚಕಾರವೆತ್ತಿಲ್ಲ.

ಇದನ್ನೂ ಓದಿ: ತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...