Homeಮುಖಪುಟರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಮುಖಂಡರು: ಟೀಕೆ ಬಳಿಕ ಎಚ್ಚೆತ್ತ...

ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಮುಖಂಡರು: ಟೀಕೆ ಬಳಿಕ ಎಚ್ಚೆತ್ತ ಬಿಜೆಪಿ

- Advertisement -
- Advertisement -

ಸಿಸಿಬಿ ಪೊಲೀಸರ ದಾಳಿ ವೇಳೆ ನಾಪತ್ತೆಯಾಗಿದ್ದ ರೌಡಿ ಶೀಟರ್ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಮುಖಂಡರಿಂದ ವಿವರಣೆ ಪಡೆಯಲಾಗುವುದು, ಸೈಲೆಂಟ್ ಸುನೀಲ್‌ರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಭಾನುವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸೈಲೆಂಟ್ ಸುನೀಲ್ ಆರ್‌ಎಸ್‌ಎಸ್‌ ಹಿನ್ನೆಲೆಯ ರಾಷ್ಟ್ರೋತ್ಥಾನ ಪರಿಷತ್ ಜೊತೆಗೂಡಿ ರಕ್ತದಾನ ಶಿಬಿರ ಏರ್ಪಡಿಸಿದ್ದರು. ಆ ಕಾರ್ಯಕ್ರಮಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯರಾದ ಪಿ.ಸಿ ಮೋಹನ್, ಶಾಸಕರುಗಳಾದ ಉದಯ್ ಗರುಡಾಚಾರ್, ಬೆಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ರಮೇಶ್ ಸೇರಿದಂತೆ ಹಲವರು ಅತಿಥಿಗಳಾಗಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹುಟ್ಟುಹಾಕಿತ್ತು.

ನವೆಂಬರ್ 23ರಂದು ನಡೆದ ರೌಡಿಗಳ ಮನೆ ಮೇಲಿನ ಸಿಸಿಬಿ ದಾಳಿಯಲ್ಲಿ ಸೈಲೆಂಟ್ ಸುನೀಲ್ ತಪ್ಪಿಸಿಕೊಂಡಿದ್ದರು ಎಂದು ಪೊಲೀಸರು ಪತ್ರಿಕಾ ಹೇಳಿಕೆ ನೀಡಿದ್ದರು. ಆದರೆ ಮೂರೇ ದಿನದಲ್ಲಿ ಅವರ ನೇತೃತ್ವದಲ್ಲಿಯೇ ರಕ್ತದಾನ ಕಾರ್ಯಕ್ರಮ ನಡೆಸಲಾಗಿದ್ದು ಬಂಧಿಸಬೇಕಿದ್ದ ಪೊಲೀಸರೆ ಆತನಿಗೆ ರಕ್ಷಣೆ ನೀಡಿದ್ಯಾಕೆ ಎಂಬ ಪ್ರಶ್ನೆಗಳು ಕೇಳಿಬಂದಿದ್ದವು.

“ಬಿಜೆಪಿಯಲ್ಲಿ ಈ ಮೊದಲು ವೈಟ್ ಕಾಲರ್ ರೌಡಿಗಳಿದ್ದರು, ಈಗ ರಿಯಲ್ ರೌಡಿಗಳು ಸೇರಿದ್ದಾರೆ. ಮುಂದೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡ ಬಿಜೆಪಿ ಸೇರಿ ಪಾವನನಾಗಬಹುದು! ಪಾತಕಿಗಳು, ದರೋಡೆಕೋರರು, ಡ್ರಗ್ ಪೆಡ್ಲರ್‌ಗಳು, ಕ್ರೀಮಿನಲ್‌ಗಳು, ಭ್ರಷ್ಟರು, ರೇಪಿಸ್ಟರು ಎಲ್ಲರಿಗೂ ಬಿಜೆಪಿ
ಪಕ್ಷ ತವರು ಮನೆ ಇದ್ದಂತೆ” ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿತ್ತು.

ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್! ಆರಗ ಜ್ಞಾನೇದ್ರರವರೇ, ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕಾಂಗ್ರೆಸ್ ಪ್ರಶ್ನಿಸಿತ್ತು.

ರೌಡಿ ಶೀಟರ್ ಫೈಟರ್ ರವಿ ಬಿಜೆಪಿ ಸೇರ್ಪಡೆ

ಸೈಲೆಂಟ್ ಸುನೀಲ್ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಭಾಗಿಯಾಗಿದ್ದು ದೊಡ್ಡ ಟೀಕೆಗೆ ಒಳಗಾದ ಸಂದರ್ಭದಲ್ಲಿಯೇ ಮತ್ತೊರ್ವ ರೌಟಿ ಶೀಟರ್ ಫೈಟರ್ ರವಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಸಚಿವರಾದ ಅಶ್ವಥ ನಾರಾಯಣ್, ಗೋಪಾಲಯ್ಯ ಮತ್ತು ಸಿ.ಪಿ ಯೋಗೀಶ್ವರ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

“ವಾಂಟೆಂಡ್ ಕ್ರಿಮಿನಲ್‌ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್! ರೌಡಿ ಶೀಟರ್‌ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ. ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ” ಎಂದು ಕಾಂಗ್ರೆಸ್ ಟೀಕಿಸಿತ್ತು.

ಸೈಲೆಂಟ್ ಸುನೀಲ್ ಬಿಜೆಪಿ ಸೇರಲು ಅವಕಾಶವಿಲ್ಲ: ನಳೀನ್ ಕುಮಾರ್ ಕಟೀಲ್

ಸಾಲು ಸಾಲು ರೌಟಿ ಶೀಟರ್‌ಗಳು ಬಿಜೆಪಿ ಜೊತೆ ಗುರುತಿಸಿಕೊಳ್ಳುತ್ತಿರುವುದು ಆಡಳಿತ ಪಕ್ಷಕ್ಕೆ ಮುಜುಗರ ತಂದಿದೆದ. ಅಲ್ಲದೆ ಸಾರ್ವಜನಿಕರಿಂದ ಟೀಕೆಗಳು ಕೇಳಿ ಬರುತ್ತಿವೆ. ಪೊಲೀಸರು ಸೈಲೆಂಟ್ ಸುನೀಲ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ಡ್ಯಾಮೇಜ್ ಕಂಟ್ರೋಲ್‌ಗೆ ಇಳಿದಿದೆ. ಸೈಲೆಂಟ್ ಸುನೀಲ್ ಬಿಜೆಪಿ ಸೇರಲು ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಆದರೆ ಈಗಾಗಲೇ ಪಕ್ಷಕ್ಕೆ ಸೇರಿರುವ ಫೈಟರ್ ರವಿ ಬಗ್ಗೆ ಅವರು ಚಕಾರವೆತ್ತಿಲ್ಲ.

ಇದನ್ನೂ ಓದಿ: ತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...