Homeಕರ್ನಾಟಕಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

ಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

- Advertisement -
- Advertisement -

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಅಂತಿಮ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ಮುಂಬೈನಲ್ಲಿ ಭಾನುವಾರ ನಡೆಯಿತು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ಗೌರವ ಸಲ್ಲಿಸುವಾಗ ಲತಾ ಮಂಗೇಶ್ಕರ್‌ ಅವರ ಮೇಲೆ ಉಗುಳಿದ್ದಾರೆ. ರಾಷ್ಟ್ರಧ್ವಜಕ್ಕೂ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹಾಗೂ ಬಿಜೆಪಿ ಬೆಂಬಲಿಗರು ಸುಳ್ಳು ಹಬ್ಬಿಸಿ ದ್ವೇಷ ಹರಡಲು ಯತ್ನಿಸಿದ್ದಾರೆ.

ಇಸ್ಲಾಮಿಕ್ ಆಚರಣೆಯಂತೆ ಶಾರುಖ್‌ ಗೌರವ ಸಲ್ಲಿಸಿದ್ದಾರೆ. ಆದರೆ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಖಾನ್ ಮಂಗೇಶ್ಕರ್ ಮೇಲೆ “ಉಗುಳುದ್ದಾರೆ” ಎಂದು ಬಿಂಬಿಸುತ್ತಿದ್ದಾರೆ.

ಬಿಜೆಪಿ ಹರಿಯಾಣದ ರಾಜ್ಯ ಉಸ್ತುವಾರಿ ಅರುಣ್ ಯಾದವ್ ಅವರು ಈ ಆರೋಪವನ್ನು ಮಾಡಿದವರಲ್ಲಿ ಮೊದಲಿಗರಾಗಿದ್ದಾರೆ. “ಕ್ಯಾ ಇಸ್ನೆ ತುಕಾ ಹೈ (ಅವರು ಉಗುಳಿದ್ದಾರಾ)?” ಎಂದು ಟ್ವೀಟ್ ಮಾಡಿರುವ ಅವರು ವಿಡಿಯೊ ತುಣಕನ್ನು ಲಗತ್ತಿಸಿದ್ದಾರೆ. ಯಾದವ್ ಅವರು ಸುಳ್ಳು, ಪ್ರಚೋದನಕಾರಿ ಟ್ವೀಟ್‌ ಮಾಡಿದ್ದರೂ ಯಾದವ್‌‌ ಅವರನ್ನು ಬಿಜೆಪಿ ನಾಯಕರ್‍ಯಾರು ಸಮರ್ಥಿಸಿಯೂ ಇಲ್ಲ, ಖಂಡಿಸಿಯೂ ಇಲ್ಲ ಎಂದು ದಿ ವೈರ್‌ ವರದಿ ಮಾಡಿದೆ.

ಮತ್ತೊಬ್ಬ ಬಿಜೆಪಿ ನಾಯಕ, ಪಕ್ಷದ ಉತ್ತರ ಪ್ರದೇಶ ವಕ್ತಾರ ಪ್ರಶಾಂತ್ ಉಮ್ರಾವ್ ಕೂಡ ಇದೇ ರೀತಿ ಆರೋಪ ಮಾಡಿದ್ದಾರೆ.

ಇತರ ಬಲಪಂಥೀಯ ಹಿಂದೂ ಸಾಮಾಜಿಕ ಮಾಧ್ಯಮ ಬಳಕೆದಾರರೂ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ. ಶಾರುಖ್‌ ಖಾನ್‌ ಉಗುಳಿದ್ದಾರೆ ಎಂದು ಬಿಂಬಿಸಿರುವ ವಿಡಿಯೊ ವೈರಲ್ ಆಗುತ್ತಿದೆ.

ಹಲವಾರು ಜನರು ಯಾದವ್ ಮತ್ತು ಇತರರಿಗೆ ಪ್ರತಿಕ್ರಿಯಿಸಿದ್ದಾರೆ. ಖಾನ್ ಅವರ ಕ್ರಮವು ಏನನ್ನು ಸೂಚಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಇಸ್ಲಾಮಿಕ್ ಪದ್ಧತಿಗಳ ಬಗ್ಗೆ ಅರಿವಿಲ್ಲದ ಯಾದವ್‌ ಅವರಿಗೆ ಪಾಠ ಮಾಡಿದ್ದಾರೆ. ಮಂಗೇಶ್ಕರ್ ಅವರ ಅಂತ್ಯಕ್ರಿಯೆಯಲ್ಲಿ ಶಾರುಖ್‌ ಖಾನ್ ಅವರು ಗೌರವ ಸಲ್ಲಿಸಿರುವುದನ್ನು ಖಾನ್‌ ಅಭಿಮಾನಿಗಳು ಶ್ಲಾಘಿಸಿದ್ದಾರೆ. ಜೊತೆಗೆ ‘ಪಿಕ್‌ ಆಫ್‌ ದಿ ಡೇ’ ಎಂದೂ ಅಭಿಮಾನಿಗಳು ಬಣ್ಣಿಸಿದ್ದಾರೆ.

ಬಿಜೆಪಿಯು ಈ ಘಟನೆಯನ್ನು ಕೋಮುವಾದಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಆರೋಪಿಸಿದೆ. ಇದು ಅತ್ಯುನ್ನತ ಮೂರ್ಖತನವಲ್ಲ- ಇದು ಅತ್ಯಂತ ದುಷ್ಟತನವಾಗಿದೆ ಎಂದು ಸಿಪಿಐಎಂ ಟೀಕಿಸಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...