Homeಕರ್ನಾಟಕಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

ಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

- Advertisement -
- Advertisement -

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಅಂತಿಮ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ಮುಂಬೈನಲ್ಲಿ ಭಾನುವಾರ ನಡೆಯಿತು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ಗೌರವ ಸಲ್ಲಿಸುವಾಗ ಲತಾ ಮಂಗೇಶ್ಕರ್‌ ಅವರ ಮೇಲೆ ಉಗುಳಿದ್ದಾರೆ. ರಾಷ್ಟ್ರಧ್ವಜಕ್ಕೂ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹಾಗೂ ಬಿಜೆಪಿ ಬೆಂಬಲಿಗರು ಸುಳ್ಳು ಹಬ್ಬಿಸಿ ದ್ವೇಷ ಹರಡಲು ಯತ್ನಿಸಿದ್ದಾರೆ.

ಇಸ್ಲಾಮಿಕ್ ಆಚರಣೆಯಂತೆ ಶಾರುಖ್‌ ಗೌರವ ಸಲ್ಲಿಸಿದ್ದಾರೆ. ಆದರೆ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಖಾನ್ ಮಂಗೇಶ್ಕರ್ ಮೇಲೆ “ಉಗುಳುದ್ದಾರೆ” ಎಂದು ಬಿಂಬಿಸುತ್ತಿದ್ದಾರೆ.

ಬಿಜೆಪಿ ಹರಿಯಾಣದ ರಾಜ್ಯ ಉಸ್ತುವಾರಿ ಅರುಣ್ ಯಾದವ್ ಅವರು ಈ ಆರೋಪವನ್ನು ಮಾಡಿದವರಲ್ಲಿ ಮೊದಲಿಗರಾಗಿದ್ದಾರೆ. “ಕ್ಯಾ ಇಸ್ನೆ ತುಕಾ ಹೈ (ಅವರು ಉಗುಳಿದ್ದಾರಾ)?” ಎಂದು ಟ್ವೀಟ್ ಮಾಡಿರುವ ಅವರು ವಿಡಿಯೊ ತುಣಕನ್ನು ಲಗತ್ತಿಸಿದ್ದಾರೆ. ಯಾದವ್ ಅವರು ಸುಳ್ಳು, ಪ್ರಚೋದನಕಾರಿ ಟ್ವೀಟ್‌ ಮಾಡಿದ್ದರೂ ಯಾದವ್‌‌ ಅವರನ್ನು ಬಿಜೆಪಿ ನಾಯಕರ್‍ಯಾರು ಸಮರ್ಥಿಸಿಯೂ ಇಲ್ಲ, ಖಂಡಿಸಿಯೂ ಇಲ್ಲ ಎಂದು ದಿ ವೈರ್‌ ವರದಿ ಮಾಡಿದೆ.

ಮತ್ತೊಬ್ಬ ಬಿಜೆಪಿ ನಾಯಕ, ಪಕ್ಷದ ಉತ್ತರ ಪ್ರದೇಶ ವಕ್ತಾರ ಪ್ರಶಾಂತ್ ಉಮ್ರಾವ್ ಕೂಡ ಇದೇ ರೀತಿ ಆರೋಪ ಮಾಡಿದ್ದಾರೆ.

ಇತರ ಬಲಪಂಥೀಯ ಹಿಂದೂ ಸಾಮಾಜಿಕ ಮಾಧ್ಯಮ ಬಳಕೆದಾರರೂ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ. ಶಾರುಖ್‌ ಖಾನ್‌ ಉಗುಳಿದ್ದಾರೆ ಎಂದು ಬಿಂಬಿಸಿರುವ ವಿಡಿಯೊ ವೈರಲ್ ಆಗುತ್ತಿದೆ.

ಹಲವಾರು ಜನರು ಯಾದವ್ ಮತ್ತು ಇತರರಿಗೆ ಪ್ರತಿಕ್ರಿಯಿಸಿದ್ದಾರೆ. ಖಾನ್ ಅವರ ಕ್ರಮವು ಏನನ್ನು ಸೂಚಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಇಸ್ಲಾಮಿಕ್ ಪದ್ಧತಿಗಳ ಬಗ್ಗೆ ಅರಿವಿಲ್ಲದ ಯಾದವ್‌ ಅವರಿಗೆ ಪಾಠ ಮಾಡಿದ್ದಾರೆ. ಮಂಗೇಶ್ಕರ್ ಅವರ ಅಂತ್ಯಕ್ರಿಯೆಯಲ್ಲಿ ಶಾರುಖ್‌ ಖಾನ್ ಅವರು ಗೌರವ ಸಲ್ಲಿಸಿರುವುದನ್ನು ಖಾನ್‌ ಅಭಿಮಾನಿಗಳು ಶ್ಲಾಘಿಸಿದ್ದಾರೆ. ಜೊತೆಗೆ ‘ಪಿಕ್‌ ಆಫ್‌ ದಿ ಡೇ’ ಎಂದೂ ಅಭಿಮಾನಿಗಳು ಬಣ್ಣಿಸಿದ್ದಾರೆ.

ಬಿಜೆಪಿಯು ಈ ಘಟನೆಯನ್ನು ಕೋಮುವಾದಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಆರೋಪಿಸಿದೆ. ಇದು ಅತ್ಯುನ್ನತ ಮೂರ್ಖತನವಲ್ಲ- ಇದು ಅತ್ಯಂತ ದುಷ್ಟತನವಾಗಿದೆ ಎಂದು ಸಿಪಿಐಎಂ ಟೀಕಿಸಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...