Homeಕರ್ನಾಟಕಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

ಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

- Advertisement -
- Advertisement -

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಅಂತಿಮ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ಮುಂಬೈನಲ್ಲಿ ಭಾನುವಾರ ನಡೆಯಿತು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರು ಗೌರವ ಸಲ್ಲಿಸುವಾಗ ಲತಾ ಮಂಗೇಶ್ಕರ್‌ ಅವರ ಮೇಲೆ ಉಗುಳಿದ್ದಾರೆ. ರಾಷ್ಟ್ರಧ್ವಜಕ್ಕೂ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹಾಗೂ ಬಿಜೆಪಿ ಬೆಂಬಲಿಗರು ಸುಳ್ಳು ಹಬ್ಬಿಸಿ ದ್ವೇಷ ಹರಡಲು ಯತ್ನಿಸಿದ್ದಾರೆ.

ಇಸ್ಲಾಮಿಕ್ ಆಚರಣೆಯಂತೆ ಶಾರುಖ್‌ ಗೌರವ ಸಲ್ಲಿಸಿದ್ದಾರೆ. ಆದರೆ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಖಾನ್ ಮಂಗೇಶ್ಕರ್ ಮೇಲೆ “ಉಗುಳುದ್ದಾರೆ” ಎಂದು ಬಿಂಬಿಸುತ್ತಿದ್ದಾರೆ.

ಬಿಜೆಪಿ ಹರಿಯಾಣದ ರಾಜ್ಯ ಉಸ್ತುವಾರಿ ಅರುಣ್ ಯಾದವ್ ಅವರು ಈ ಆರೋಪವನ್ನು ಮಾಡಿದವರಲ್ಲಿ ಮೊದಲಿಗರಾಗಿದ್ದಾರೆ. “ಕ್ಯಾ ಇಸ್ನೆ ತುಕಾ ಹೈ (ಅವರು ಉಗುಳಿದ್ದಾರಾ)?” ಎಂದು ಟ್ವೀಟ್ ಮಾಡಿರುವ ಅವರು ವಿಡಿಯೊ ತುಣಕನ್ನು ಲಗತ್ತಿಸಿದ್ದಾರೆ. ಯಾದವ್ ಅವರು ಸುಳ್ಳು, ಪ್ರಚೋದನಕಾರಿ ಟ್ವೀಟ್‌ ಮಾಡಿದ್ದರೂ ಯಾದವ್‌‌ ಅವರನ್ನು ಬಿಜೆಪಿ ನಾಯಕರ್‍ಯಾರು ಸಮರ್ಥಿಸಿಯೂ ಇಲ್ಲ, ಖಂಡಿಸಿಯೂ ಇಲ್ಲ ಎಂದು ದಿ ವೈರ್‌ ವರದಿ ಮಾಡಿದೆ.

ಮತ್ತೊಬ್ಬ ಬಿಜೆಪಿ ನಾಯಕ, ಪಕ್ಷದ ಉತ್ತರ ಪ್ರದೇಶ ವಕ್ತಾರ ಪ್ರಶಾಂತ್ ಉಮ್ರಾವ್ ಕೂಡ ಇದೇ ರೀತಿ ಆರೋಪ ಮಾಡಿದ್ದಾರೆ.

ಇತರ ಬಲಪಂಥೀಯ ಹಿಂದೂ ಸಾಮಾಜಿಕ ಮಾಧ್ಯಮ ಬಳಕೆದಾರರೂ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ. ಶಾರುಖ್‌ ಖಾನ್‌ ಉಗುಳಿದ್ದಾರೆ ಎಂದು ಬಿಂಬಿಸಿರುವ ವಿಡಿಯೊ ವೈರಲ್ ಆಗುತ್ತಿದೆ.

ಹಲವಾರು ಜನರು ಯಾದವ್ ಮತ್ತು ಇತರರಿಗೆ ಪ್ರತಿಕ್ರಿಯಿಸಿದ್ದಾರೆ. ಖಾನ್ ಅವರ ಕ್ರಮವು ಏನನ್ನು ಸೂಚಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಇಸ್ಲಾಮಿಕ್ ಪದ್ಧತಿಗಳ ಬಗ್ಗೆ ಅರಿವಿಲ್ಲದ ಯಾದವ್‌ ಅವರಿಗೆ ಪಾಠ ಮಾಡಿದ್ದಾರೆ. ಮಂಗೇಶ್ಕರ್ ಅವರ ಅಂತ್ಯಕ್ರಿಯೆಯಲ್ಲಿ ಶಾರುಖ್‌ ಖಾನ್ ಅವರು ಗೌರವ ಸಲ್ಲಿಸಿರುವುದನ್ನು ಖಾನ್‌ ಅಭಿಮಾನಿಗಳು ಶ್ಲಾಘಿಸಿದ್ದಾರೆ. ಜೊತೆಗೆ ‘ಪಿಕ್‌ ಆಫ್‌ ದಿ ಡೇ’ ಎಂದೂ ಅಭಿಮಾನಿಗಳು ಬಣ್ಣಿಸಿದ್ದಾರೆ.

ಬಿಜೆಪಿಯು ಈ ಘಟನೆಯನ್ನು ಕೋಮುವಾದಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಆರೋಪಿಸಿದೆ. ಇದು ಅತ್ಯುನ್ನತ ಮೂರ್ಖತನವಲ್ಲ- ಇದು ಅತ್ಯಂತ ದುಷ್ಟತನವಾಗಿದೆ ಎಂದು ಸಿಪಿಐಎಂ ಟೀಕಿಸಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...