Homeಕರ್ನಾಟಕಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!

ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!

- Advertisement -
- Advertisement -

ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಬಡ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು ವಿತರಿಸಿದ ಕಿಟ್‌ಗಳು ಬಡವರಿಗೆ ತಲುಪೇ ಇಲ್ಲ. ಬದಲಿಗೆ ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಬಿಜೆಪಿ ಮುಖಂಡರ ಮನೆ ಮತ್ತು ಶಾಲೆಗಳಲ್ಲಿ ನೂರಾರು ಆಹಾರ ಕಿಟ್‌ಗಳು ಶೇಖರಣೆಯಾಗಿದ್ದು, ವಿಷಯದ ರೊಚ್ಚಿಗೆದ್ದು ಜನರು ಅವುಗಳನ್ನು ದೋಚಿದ ಘಟನೆ ಜರುಗಿದೆ.

ಮೇ 24ರಂದು ಬಿಜೆಪಿಯ ಪುರಸಭಾ ಸದಸ್ಯ ಕಲ್ಯಾಣ್ ಕುಮಾರ್‌ರವರ ಮನೆಯಲ್ಲಿ ನೂರಾರು ಕಿಟ್‌ಗಳಿರುವುದು ತಿಳಿದುಬಂದಿದ್ದರಿಂದ ಸ್ಥಳೀಯ ತಹಶಿಲ್ದಾರ್‌ ಮತ್ತು ಪೊಲೀಸ್‌ ಇನ್ಸ್‌ಪೆಕ್ಟರ್‌ರವರ ಬಳಿ ಕೆಲವರು ದೂರಿದ್ದಾರೆ. ಆದರೆ ಯಾವುದೇ ಕ್ರಮ ಜರುಗಿಲ್ಲ. ಅದೇ ರೀತಿ ಮೇ 25 ರಂದು ಪುರಸಭೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತ ಅಭ್ಯರ್ಥಿ ಪ್ರಕಾಶ್ ನಂದಿಕೊಪ್ಪರವರ ಮನೆಯಲ್ಲಿಯೂ ಸಹ ನೂರಾರು ಕಿಟ್‌ಗಳು ಪತ್ತೆಯಾಗಿವೆ. ಇದರಿಂದ ರೊಚ್ಚಿಗೆದ್ದ ಕೆಲವರು ಪ್ರತಿಭಟನೆ ನಡೆಸಿದ್ದಾರೆ.

ಬಡವರ ಆಹಾರದ ಕಿಟ್‌ಗಳನ್ನು ನುಂಗಿದ ಹಾನಗಲ್‌ ಬಿಜೆಪಿ ಮುಖಂಡ

ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳನ್ನು ಹಾನಗಲ್‌ನ ಬಿಜೆಪಿ ಮುಖಂಡರು ಹಂಚದೆ ತಮ್ಮ ಮನೆಯಲ್ಲಿಯೇ ಸಂಗ್ರಹಿಸಿಕೊಂಡಿದ್ದಾರೆ. ಬಿಜೆಪಿಯ ಪುರಸಭಾ ಸದಸ್ಯ ಕಲ್ಯಾಣ್ ಕುಮಾರ್‌ರವರ ಮನೆಯಲ್ಲಿ ನೂರಾರು ಕಿಟ್‌ಗಳನ್ನು ಇಟ್ಟುಕೊಂಡಿದ್ದು ತಿಳಿಯುತ್ತಲೇ ಅಲ್ಲಿನ ಜನರು ಮುಗಿಬಿದ್ದ ಸಿಕ್ಕಷ್ಟು ಕಿಟ್‌ಗಳನ್ನು ಎತ್ತಿಕೊಂಡು ಹೋಗಿದ್ದಾರೆ.

Posted by Naanu Gauri on Monday, May 25, 2020

ಬಡಕಾರ್ಮಿಕರಿಗೆ ಸೇರಬೇಕಾಗಿದ್ದ ಕಿಟ್‌ಗಳನ್ನು ಬಿಜೆಪಿ ಮುಖಂಡರು ಸ್ವಂತಕ್ಕೆ ಬಳಸುತ್ತಿದ್ದಾರೆ, ಆ ಮೂಲಕ ಬಡಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ನಾಯಕರು ಒಂದಷ್ಟು ಕಿಟ್‌ಗಳನ್ನು ರಾತ್ರೋರಾತ್ರಿ ಸಿಕ್ಕ ಸಿಕ್ಕವರಿಗೆಲ್ಲ ಹಂಚಿದ್ದಾರೆ.

ಇನ್ನು ಬಿಜೆಪಿ ಮುಖಂಡರಿಗೆ ಸೇರಿದ ಹಾನಗಲ್ಲದ ಜನತಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದಷ್ಟು ಕಿಟ್‌ಗಳನ್ನು ಸಾಗಿಸಲಾಗಿದೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ವಿಕಾಸ್‌ ನಿಂಗೋಜಿಯವರು ಆರೋಪಿಸಿದ್ದಾರೆ.

Posted by Ravindrav Deshapande on Monday, May 25, 2020

ಇನ್ನು ಕೆಲವಷ್ಟು ಕಿಟ್‌ಗಳು ಬಿಜೆಪಿ ಮುಖಂಡರ ಮನೆಯಲ್ಲಿಯೇ ಸಂಗ್ರಹಿಸಿಟ್ಟ ವಿಷಯ ಬಹಿರಂಗವಾಗಿ ಜನರು ಅವರ ಮನೆಯ ಮುಂದೆ ನೆರೆದು ಸಿಕ್ಕಷ್ಟು ಆಹಾರದ ಕಿಟ್‌ಗಳನ್ನು ದೋಚುತ್ತಿರುವ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Posted by Vikas Ningoji on Friday, May 22, 2020

ಕಾರ್ಮಿಕ ಇಲಾಖೆ ಈ ಕಿಟ್‌ಗಳನ್ನು ಜನರಿಗೆ ಹಂಚಿ ಎಂದು ತಿಂಗಳುಗಳ ಹಿಂದೆಯೇ ಸರಬರಾಜು ಮಾಡಿತ್ತು. ಆದರೆ ಈ ಬಿಜೆಪಿ ಮುಖಂಡರು ಅವುಗಳನ್ನು ಹಂಚದೇ ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ವಿಷಯ ತಿಳಿದು ನಾವು ದೂರು ನೀಡಿದಾಗ ಸಿಕ್ಕ ಸಿಕ್ಕ ಬಿಜೆಪಿ ಕಾರ್ಯಕರ್ತರಿಗೆ ಹಂಚಿದ್ದಾರೆ. ಅಲ್ಲದೇ ಇವರ ಅಕ್ರಮಕ್ಕೆ ಶಾಲೆಯನ್ನು ಸಹ ದುರ್ಬಳಕೆ ಮಾಡಿಕೊಂಡಿದ್ದು ಕಿಟ್‌ಗಳನ್ನು ಶಾಲೆಗಳಲ್ಲಿ ಬಚ್ಚಿಟ್ಟಿದ್ದಾರೆ. ಅತ್ತ ಕಾರ್ಮಿಕರು ಹಸಿವಿನಿಂದ ಸಾಯುತ್ತಿದ್ದರೆ ಇತ್ತ ಈ ಬಿಜೆಪಿ ಮುಖಂಡರು ದುರಾಸೆಗೆ ಬಿದ್ದು ಜನರಿಗೆ ಮೋಸ ಮಾಡಿದ್ದಾರೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿಕಾಸ್‌ ನಿಂಗೋಜಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...