Homeಕರ್ನಾಟಕಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!

ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!

- Advertisement -
- Advertisement -

ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಬಡ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು ವಿತರಿಸಿದ ಕಿಟ್‌ಗಳು ಬಡವರಿಗೆ ತಲುಪೇ ಇಲ್ಲ. ಬದಲಿಗೆ ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಬಿಜೆಪಿ ಮುಖಂಡರ ಮನೆ ಮತ್ತು ಶಾಲೆಗಳಲ್ಲಿ ನೂರಾರು ಆಹಾರ ಕಿಟ್‌ಗಳು ಶೇಖರಣೆಯಾಗಿದ್ದು, ವಿಷಯದ ರೊಚ್ಚಿಗೆದ್ದು ಜನರು ಅವುಗಳನ್ನು ದೋಚಿದ ಘಟನೆ ಜರುಗಿದೆ.

ಮೇ 24ರಂದು ಬಿಜೆಪಿಯ ಪುರಸಭಾ ಸದಸ್ಯ ಕಲ್ಯಾಣ್ ಕುಮಾರ್‌ರವರ ಮನೆಯಲ್ಲಿ ನೂರಾರು ಕಿಟ್‌ಗಳಿರುವುದು ತಿಳಿದುಬಂದಿದ್ದರಿಂದ ಸ್ಥಳೀಯ ತಹಶಿಲ್ದಾರ್‌ ಮತ್ತು ಪೊಲೀಸ್‌ ಇನ್ಸ್‌ಪೆಕ್ಟರ್‌ರವರ ಬಳಿ ಕೆಲವರು ದೂರಿದ್ದಾರೆ. ಆದರೆ ಯಾವುದೇ ಕ್ರಮ ಜರುಗಿಲ್ಲ. ಅದೇ ರೀತಿ ಮೇ 25 ರಂದು ಪುರಸಭೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತ ಅಭ್ಯರ್ಥಿ ಪ್ರಕಾಶ್ ನಂದಿಕೊಪ್ಪರವರ ಮನೆಯಲ್ಲಿಯೂ ಸಹ ನೂರಾರು ಕಿಟ್‌ಗಳು ಪತ್ತೆಯಾಗಿವೆ. ಇದರಿಂದ ರೊಚ್ಚಿಗೆದ್ದ ಕೆಲವರು ಪ್ರತಿಭಟನೆ ನಡೆಸಿದ್ದಾರೆ.

ಬಡವರ ಆಹಾರದ ಕಿಟ್‌ಗಳನ್ನು ನುಂಗಿದ ಹಾನಗಲ್‌ ಬಿಜೆಪಿ ಮುಖಂಡ

ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳನ್ನು ಹಾನಗಲ್‌ನ ಬಿಜೆಪಿ ಮುಖಂಡರು ಹಂಚದೆ ತಮ್ಮ ಮನೆಯಲ್ಲಿಯೇ ಸಂಗ್ರಹಿಸಿಕೊಂಡಿದ್ದಾರೆ. ಬಿಜೆಪಿಯ ಪುರಸಭಾ ಸದಸ್ಯ ಕಲ್ಯಾಣ್ ಕುಮಾರ್‌ರವರ ಮನೆಯಲ್ಲಿ ನೂರಾರು ಕಿಟ್‌ಗಳನ್ನು ಇಟ್ಟುಕೊಂಡಿದ್ದು ತಿಳಿಯುತ್ತಲೇ ಅಲ್ಲಿನ ಜನರು ಮುಗಿಬಿದ್ದ ಸಿಕ್ಕಷ್ಟು ಕಿಟ್‌ಗಳನ್ನು ಎತ್ತಿಕೊಂಡು ಹೋಗಿದ್ದಾರೆ.

Posted by Naanu Gauri on Monday, May 25, 2020

ಬಡಕಾರ್ಮಿಕರಿಗೆ ಸೇರಬೇಕಾಗಿದ್ದ ಕಿಟ್‌ಗಳನ್ನು ಬಿಜೆಪಿ ಮುಖಂಡರು ಸ್ವಂತಕ್ಕೆ ಬಳಸುತ್ತಿದ್ದಾರೆ, ಆ ಮೂಲಕ ಬಡಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ನಾಯಕರು ಒಂದಷ್ಟು ಕಿಟ್‌ಗಳನ್ನು ರಾತ್ರೋರಾತ್ರಿ ಸಿಕ್ಕ ಸಿಕ್ಕವರಿಗೆಲ್ಲ ಹಂಚಿದ್ದಾರೆ.

ಇನ್ನು ಬಿಜೆಪಿ ಮುಖಂಡರಿಗೆ ಸೇರಿದ ಹಾನಗಲ್ಲದ ಜನತಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದಷ್ಟು ಕಿಟ್‌ಗಳನ್ನು ಸಾಗಿಸಲಾಗಿದೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ವಿಕಾಸ್‌ ನಿಂಗೋಜಿಯವರು ಆರೋಪಿಸಿದ್ದಾರೆ.

Posted by Ravindrav Deshapande on Monday, May 25, 2020

ಇನ್ನು ಕೆಲವಷ್ಟು ಕಿಟ್‌ಗಳು ಬಿಜೆಪಿ ಮುಖಂಡರ ಮನೆಯಲ್ಲಿಯೇ ಸಂಗ್ರಹಿಸಿಟ್ಟ ವಿಷಯ ಬಹಿರಂಗವಾಗಿ ಜನರು ಅವರ ಮನೆಯ ಮುಂದೆ ನೆರೆದು ಸಿಕ್ಕಷ್ಟು ಆಹಾರದ ಕಿಟ್‌ಗಳನ್ನು ದೋಚುತ್ತಿರುವ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Posted by Vikas Ningoji on Friday, May 22, 2020

ಕಾರ್ಮಿಕ ಇಲಾಖೆ ಈ ಕಿಟ್‌ಗಳನ್ನು ಜನರಿಗೆ ಹಂಚಿ ಎಂದು ತಿಂಗಳುಗಳ ಹಿಂದೆಯೇ ಸರಬರಾಜು ಮಾಡಿತ್ತು. ಆದರೆ ಈ ಬಿಜೆಪಿ ಮುಖಂಡರು ಅವುಗಳನ್ನು ಹಂಚದೇ ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ವಿಷಯ ತಿಳಿದು ನಾವು ದೂರು ನೀಡಿದಾಗ ಸಿಕ್ಕ ಸಿಕ್ಕ ಬಿಜೆಪಿ ಕಾರ್ಯಕರ್ತರಿಗೆ ಹಂಚಿದ್ದಾರೆ. ಅಲ್ಲದೇ ಇವರ ಅಕ್ರಮಕ್ಕೆ ಶಾಲೆಯನ್ನು ಸಹ ದುರ್ಬಳಕೆ ಮಾಡಿಕೊಂಡಿದ್ದು ಕಿಟ್‌ಗಳನ್ನು ಶಾಲೆಗಳಲ್ಲಿ ಬಚ್ಚಿಟ್ಟಿದ್ದಾರೆ. ಅತ್ತ ಕಾರ್ಮಿಕರು ಹಸಿವಿನಿಂದ ಸಾಯುತ್ತಿದ್ದರೆ ಇತ್ತ ಈ ಬಿಜೆಪಿ ಮುಖಂಡರು ದುರಾಸೆಗೆ ಬಿದ್ದು ಜನರಿಗೆ ಮೋಸ ಮಾಡಿದ್ದಾರೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿಕಾಸ್‌ ನಿಂಗೋಜಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...